ಬೆಂಗಳೂರು: ಬಿಟಿಎಂ ಲೇಔಟ್, ಜಯನಗರದಲ್ಲಿ ಅಪ್ಪ- ಮಗಳ ರಾಜಕಾರಣ ನಿಲ್ಲಿಸಿ ಇಲ್ಲಿಂದ ಕಮಲ ಅರಳುವಂತೆ ಮಾಡಲು ಕಾರ್ಯಕರ್ತರು ಸಂಕಲ್ಪ ಮಾಡಬೇಕು ಎಂದು ನಳಿನ್ ಕುಮಾರ್ ಕಟೀಲ್ (Nalin Kumar Kateel) ಕರೆ ನೀಡಿದರು.
ಬೆಂಗಳೂರಿನ (Bengaluru) ಬಿಟಿಎಂ ಲೇಔಟ್ ಮತ್ತು ಜಯನಗರದಲ್ಲಿ ಇಂದು ಬೂತ್ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಮಲಿಂಗಾರೆಡ್ಡಿ, ಸೌಮ್ಯ ರೆಡ್ಡಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.
ಇದೇ ವೇಳೆ ಪಕ್ಷ ಸಂಘಟನೆ ಬಗ್ಗೆ ಮಾತನಾಡಿದ ಕಟೀಲ್, ಬೆಂಗಳೂರಲ್ಲಿ ಇವತ್ತು ಬಿಜೆಪಿಯ (BJP) ಬೂತ್ ವಿಜಯ ಸಂಕಲ್ಪ ಅಭಿಯಾನ ಆರಂಭವಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಇವತ್ತು ವಿಜಯಪುರದಲ್ಲಿ ಕರ್ನಾಟಕದ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ಕೊಟ್ಟಿದ್ದಾರೆ. ನಮ್ಮೆಲ್ಲರ ಸರ್ವೋಚ್ಚ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ವಿಜಯಪುರದಲ್ಲಿ ರಾಷ್ಟ್ರೀಯ ಅಧ್ಯಕ್ಷರ ಜೊತೆಗೂಡಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತುಮಕೂರಿನಲ್ಲಿ ಉದ್ಘಾಟನೆ ನೆರವೇರಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಕೋಲಾರದಲ್ಲಿ ಸಿದ್ದು ಸ್ಪರ್ಧೆ ಖಚಿತವಾದ ಬೆನ್ನಲ್ಲೇ ದಲಿತ ಸಿಎಂ ಕೂಗು – ಸಿದ್ದು ಸೋಲಿಸಿ, ದಲಿತ CM ಹಾದಿ ಸುಗಮಗೊಳಿಸಿ ಅಭಿಯಾನ
ಇದೇ ವೇಳೆ ಸಂಸದ ತೇಜಸ್ವಿ ಸೂರ್ಯ, ಶಾಸಕ ರವಿಸುಬ್ರಹ್ಮಣ್ಯ, ಜಿಲ್ಲಾ ಅಧ್ಯಕ್ಷ ಎನ್.ಆರ್.ರಮೇಶ್, ಮಾಜಿ ಮಹಾಪೌರ ಎಸ್.ಕೆ.ನಟರಾಜ್, ಸ್ಥಳೀಯ ಮುಖಂಡರು ಭಾಗವಹಿಸಿದ್ದರು. ಇದನ್ನೂ ಓದಿ: ಕಾರು ಮರಕ್ಕೆ ಡಿಕ್ಕಿ- ಮದುವೆ ನಿಶ್ಚಯವಾಗಿದ್ದ ಮೆಸ್ಕಾಂ ಜೆ.ಇ ಸಾವು
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k