ಬೆಂಗಳೂರು: ಮೈಸೂರಿನಲ್ಲಿ ಫ್ರೀ ಕಾಶ್ಮೀರ ಎಂದು ಫಲಕ ಹಿಡಿದಿದ್ದು ಹೇಗೆ ದೇಶದ್ರೋಹ ಆಗುತ್ತೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈಗಲೂ ಕಾಶ್ಮೀರದಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ, ಹಲವು ನಾಯಕರನ್ನು ಗೃಹಬಂಧನದಲ್ಲಿ ಇಡಲಾಗಿದೆ, ಅಘೋಷಿತ ತುರ್ತುಪರಿಸ್ಥಿತಿ ಹೇರಿ ಜನರ ಸ್ವಾತಂತ್ರ್ಯ ಕಿತ್ತುಕೊಳ್ಳಲಾಗಿದೆ. ಹಾಗಾಗಿ ಕಾಶ್ಮೀರಿಗರಿಗೆ ಬದುಕಲು ಬಿಡಿ ಎಂದು ಹುಡುಗಿಯೊಬ್ಬಳು ‘ಫ್ರೀ ಕಾಶ್ಮೀರ’ ಎಂಬ ಫಲಕ ಹಿಡಿದು ನಿಂತಿದ್ದಳು. ಇದು ಹೇಗೆ ದೇಶದ್ರೋಹ ಆಗುತ್ತೆ? ‘ಫ್ರೀ ಕಾಶ್ಮೀರ’ ಫಲಕ ಹಿಡಿದಿದ್ದ ನಳಿನ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘ ಹೊರಡಿಸಿರುವ ಆದೇಶ ಅಸಂವಿಧಾನಿಕ. ನಳಿನಿ ಪರವಾಗಿ ವಕಾಲತ್ತು ವಹಿಸಲು ಅರ್ಜಿ ಸಲ್ಲಿಸಿರುವ ವಕೀಲರ ನಿರ್ಧಾರವನ್ನು ಸ್ವಾಗತಿಸುತ್ತೇನೆ ಜೊತೆಗೆ ಆ ಹೆಣ್ಣುಮಗುವಿಗೆ ಶೀಘ್ರ ನ್ಯಾಯ ಸಿಗಲಿ ಎಂದು ಆಶಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
'Free Kashmir' ಫಲಕ ಹಿಡಿದಿದ್ದ ನಳಿನ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘ ಹೊರಡಿಸಿರುವ ಆದೇಶ ಅಸಂವಿಧಾನಿಕ. ನಳಿನಿ ಪರವಾಗಿ ವಕಾಲತ್ತು ವಹಿಸಲು ಅರ್ಜಿ ಸಲ್ಲಿಸಿರುವ ವಕೀಲರ ನಿರ್ಧಾರವನ್ನು ಸ್ವಾಗತ್ತಿಸುತ್ತೇನೆ ಜೊತೆಗೆ ಆ ಹೆಣ್ಣುಮಗುವಿಗೆ ಶ್ರೀಘ್ರ ನ್ಯಾಯ ಸಿಗಲಿ ಎಂದು ಆಶಿಸುತ್ತೇನೆ. 2/4 #Mysuru
— Siddaramaiah (@siddaramaiah) January 22, 2020
ನಳಿನಿ ಪರವಾಗಿ ಏಕೆ ವಕಾಲತ್ತು ವಹಿಸಬಾರದು? ಎಂದು ಮೈಸೂರು ಜಿಲ್ಲಾ ವಕೀಲರ ಸಂಘದ ಸಾಮಾನ್ಯ ಸಭೆಯಲ್ಲಿ ಪ್ರಶ್ನಿಸಿದ ರಾಜ್ಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷರಾದ ಮಂಜುಳಾ ಮಾನಸ ಅವರ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ. ಹಲ್ಲೆಗೆ ಯತ್ನಿಸಿದವರ ಮೇಲೆ ಅಗತ್ಯ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸುತ್ತೇನೆ. ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವ ಹೆಸರಿನಲ್ಲಿ ನಮ್ಮದೇ ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಬಂದ ಕೂಲಿ ಕಾರ್ಮಿಕರ ಗುಡಿಸಲುಗಳನ್ನು ನೆಲಸಮ ಮಾಡಲಾಗುತ್ತಿದೆ. ಈ ಸರ್ಕಾರಕ್ಕೇನಾದರೂ ಮಾನವೀಯತೆ ಇದೆಯೇ? ಅಷ್ಟು ಸ್ಪಷ್ಟವಾಗಿ ಉತ್ತರ ಕರ್ನಾಟಕದ ಭಾಷೆ ಮಾತನಾಡುವ ಅವರು ಬಾಂಗ್ಲಾ ಪ್ರಜೆಗಳಾಗಿರಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.
ಈಗಲೂ ಕಾಶ್ಮೀರದಲ್ಲಿ144 ಸೆಕ್ಷನ್ ಜಾರಿಯಲ್ಲಿದೆ, ಹಲವು ನಾಯಕರನ್ನು ಗೃಹಬಂಧನದಲ್ಲಿ ಇಡಲಾಗಿದೆ, ಅಘೋಷಿತ ತುರ್ತುಪರಿಸ್ಥಿತಿ ಹೇರಿ ಜನರ ಸ್ವಾತಂತ್ರ್ಯ ಕಿತ್ತುಕೊಳ್ಳಲಾಗಿದೆ. ಹಾಗಾಗಿ ಕಾಶ್ಮೀರಿಗರಿಗೆ ಬದುಕಲು ಬಿಡಿ ಎಂದು ಹುಡುಗಿಯೊಬ್ಬಳು 'Free Kashmir' ಎಂಬ ಫಲಕ ಹಿಡಿದು ನಿಂತಿದ್ದಳು. ಇದು ಹೇಗೆ ದೇಶದ್ರೋಹ ಆಗುತ್ತೆ? 1/4#Mysuru
— Siddaramaiah (@siddaramaiah) January 22, 2020