Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನಿಂದ ಕಲ್ಲು ಬಂಡೆಗೆ ಬಾಣ, ಕಾಣಿಸಿಕೊಂಡಿತು ನೀರು – ‘ನಾಮದ ಚಿಲುಮೆ’ ಸ್ಥಳವೊಂದು, ವಿಶೇಷತೆ ಹಲವು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ರಾಮನಿಂದ ಕಲ್ಲು ಬಂಡೆಗೆ ಬಾಣ, ಕಾಣಿಸಿಕೊಂಡಿತು ನೀರು – ‘ನಾಮದ ಚಿಲುಮೆ’ ಸ್ಥಳವೊಂದು, ವಿಶೇಷತೆ ಹಲವು!

Karnataka

ರಾಮನಿಂದ ಕಲ್ಲು ಬಂಡೆಗೆ ಬಾಣ, ಕಾಣಿಸಿಕೊಂಡಿತು ನೀರು – ‘ನಾಮದ ಚಿಲುಮೆ’ ಸ್ಥಳವೊಂದು, ವಿಶೇಷತೆ ಹಲವು!

Public TV
Last updated: February 14, 2020 4:36 pm
Public TV
Share
3 Min Read
Namada Chilume Devarayanadurga
SHARE

ಅಯ್ಯೋ ಸಾಕಪ್ಪ ಸಾಕು ಸ್ವಲ್ಪ ರಿಲ್ಯಾಕ್ಸ್ ಆಗೋಣ, ಎಲ್ಲಾದ್ರೂ ಕೂಲ್ ಆಗಿರೋ ಜಾಗಕ್ಕೆ, ಒಳ್ಳೆಯ ಗಾಳಿ ಸಿಗೋ ಜಾಗಕ್ಕೆ ಹೋಗೋಣ ಅಂತಾ ಬೆಂಗಳೂರಿನಲ್ಲಿ ಕೆಲಸ ಮಾಡೋ ಪ್ರತಿಯೊಬ್ಬರಿಗೆ ಗ್ಯಾರೆಂಟಿ ಅನ್ನಿಸಿರುತ್ತೆ. ವೀಕೆಂಡ್ ಬಂದ್ರೆ ಸಾಕು, ಈ ವಿಚಾರ ಒಂದ್ಸಲ್ ತಲೇಲಿ ಸುಯ್ ಅಂತಾ ಹಾದು ಹೋಗಿರುತ್ತೆ. ಆದ್ರೆ, ಕೆಲವು ಟೈಂ ಅಯ್ಯೋ ನೂರಾರು ಕಿಮೀ ಎಲ್ಲಿ ಹೋಗೋದು ಬೀಡು ಅಂದುಕೊಂಡು ಸುಮ್ಮನಾಗಿರ್ತಾರೆ. ಅಂಥವರಿಗೆ ತುಮಕೂರು ಬಳಿ ಉತ್ತಮ ಸ್ಥಳವಿದೆ.

PUBLIC TOUR KARNATAKA TRAVEL GUIDE

ಬಹಳ ದೂರ ಇಲ್ಲ, ಬೆಂಗಳೂರಿನಿಂದ ಜಸ್ಟ್ 70 ಕಿಮೀ, ತುಮಕೂರಿನಿಂದ 15 ಕಿಮೀ ದೂರ. ಇಲ್ಲಿ ನಿಮಗೆ ಶುದ್ಧ ಗಾಳಿ, ರಿಲ್ಯಾಕ್ಸ್ ಮಾಡುವ ವೆದರ್, ದಟ್ಟ ಕಾನನದ ನಡುವಿನ ನಿಶ್ಯಬ್ಧ ವಾತಾವರಣ, ಜಿಂಕೆ, ಕಡವೆ, ವಿವಿಧ ಜಾತಿಯ ಪಕ್ಷಿಗಳು, ಶುದ್ಧ ನೀರು, ಶುದ್ಧ ಜೇನುತುಪ್ಪ, ಧ್ಯಾನ ಕೇಂದ್ರ, ಪಕ್ಷಿ ಪ್ರೀಯ ಸಲೀಂ ಅಲಿಯ ಅಚ್ಚುಮೆಚ್ಚಿನ ತಾಣ, ಹೀಗೆ ಹತ್ತು ಹಲವು ವಿಶೇಷತೆಗಳು ನಿಮಗೆ ಸಿಗಬೇಕು ಅಂದ್ರೆ ನೀವು ನಾಮದ ಚಿಲುಮೆಗೆ ಹೋಗಲೇಬೇಕು.

 

ಪೌರಾಣಿಕ ಹಿನ್ನೆಲೆ ಏನು?
ಈಡೀ ವಾರ ದಣಿದ ದೆಹಕ್ಕೆ ರಿಲ್ಯಾಕ್ಸ್ ಕೊಡೋ ಈ ಜಾಗಕ್ಕೆ ಒಂದು ಪೌರಾಣಿಕ ಕಥೆ ಇದೆ. ರಾಮ ತನ್ನ ವನವಾಸದ ಸಂದರ್ಭದಲ್ಲಿ ಈ ಜಾಗದಲ್ಲಿ ಕೆಲವು ದಿನ ಉಳಿದುಕೊಂಡಿದ್ದನಂತೆ. ಈ ಸಂದರ್ಭದಲ್ಲಿ ಹಣೆಗೆ ನಾಮವನ್ನಿಟ್ಟುಕೊಳ್ಳಲು ನೀರನ್ನು ಹುಡುಕಿದನಂತೆ. ಎಲ್ಲೆಡೆ ಬರೀ ಕಲ್ಲು ಬಂಡೆಗಳೆ ಇದ್ದಿದ್ದರಿಂದ ಎಲ್ಲೂ ನೀರು ಸಿಗಲಿಲ್ಲವಂತೆ. ಆಗ ಈ ಕಲ್ಲುಬಂಡೆಗೆ ತನ್ನ ಬಾಣ ಬಿಟ್ಟಾಗ ನೀರಿನ ಚಿಲುಮೆ ಕಾಣಿಸಿಕೊಂಡಿದೆ. ಹಾಗಾಗಿ ಇದಕ್ಕೆ ನಾಮದ ಚಿಲುಮೆ ಅಂತಾನೆ ಕರೆಯುತ್ತಾರೆ. ಇದರ ವಿಶೇಷತೆ ಏನೂ ಅಂದ್ರೆ, ಈ ಚಿಲುಮೆ ಯಾವತ್ತು ಬತ್ತಿಲ್ಲ. ಬೇಸಿಗೆಯಲ್ಲೂ ಸದಾ ನೀರು ಇದ್ದೆ ಇರುತ್ತೆ.

ಜಿಂಕೆ ವನವಿದೆ:
ಮಕ್ಕಳನ್ನ ಕರೆದುಕೊಂಡು ಹೋದ್ರಂತೂ ಮಕ್ಕಳು ಸಖತ್ ಆಗಿ ಎಂಜಾಯ್ ಮಾಡ್ತಾರೆ. ಕಾರಣ ಇಲ್ಲಿರೋ ಜಿಂಕೆಗಳು, ಕಡವೆಗಳು ನಿಮ್ಮನ್ನ ಆಕರ್ಷಿಸುತ್ವೆ. ಅವುಗಳಿಗೆ ತಿನ್ನಲು ಹುಲ್ಲನ್ನ ಸಹ ನೀವು ಕೊಡಬಹುದು. ಇಲ್ಲಿರೋ ಜಿಂಕೆಗಳಿಗೆ, ಕಡವೆಗಳಿಗೆ ಭಯ ಇಲ್ಲ. ನಿಮ್ಮ ಹತ್ತಿರ ಬರುತ್ವೆ. ಅವುಗಳಿಗೆ ಹುಲ್ಲನ್ನ ಕೊಟ್ಟು ನೀವು ಮುಟ್ಟಬಹುದು. ಈ ಜಿಂಕೆಗಳೊಂದಿಗೆ ಸ್ವಲ್ಪ ಟೈಂ ಸ್ಪೆಂಡ್ ಮಾಡಿದ್ರೆ ನಿಮ್ಮ ಮನಸ್ಸು ಹಗುರವಾಗೋದಂತೂ ಗ್ಯಾರಂಟಿ, ಟೆನ್ಷನ್ ಎಲ್ಲ ಮಂಗಮಾಯವಾಗೋಗುತ್ತೆ.

Namada Chilume Devarayanadurga 2

ಸಲೀಂ ಅಲಿ ಅಚ್ಚುಮೆಚ್ಚಿನ ಜಾಗ:
ಈ ಜಾಗ ಪಕ್ಷಿ ಪ್ರೇಮಿ ಸಲೀಂ ಅಲಿ ಅವರಿಗೆ ಅಚ್ಚುಮೆಚ್ಚಿನದ್ದಾಗಿತ್ತು. ಒಮ್ಮೆ ಈ ಜಾಗಕ್ಕೆ ಬಂದಾಗ ಇಲ್ಲಿನ ಪಕ್ಷಿಗಳನ್ನ, ಇಲ್ಲಿರುವ ಸಸ್ಯಸಂಕುಲಗಳನ್ನ ನೋಡಿ ಕಾಡಿನಲ್ಲೇ ಮೂರು ದಿನ ಉಳಿದುಕೊಂಡಿದ್ದರಂತೆ. ಇದಾದ ಬಳಿ ಮೂರು ಬಾರಿ ಇಲ್ಲಿಗೆ ಬಂದು ಹೋಗಿದ್ದರಂತೆ. ಅವರು ಉಳಿದುಕೊಳ್ತಿದ್ದ ಚಿಕ್ಕ ಕೊಠಡಿ ಕೂಡ ಇಲ್ಲೇ ಇದೆ. ಆದ್ರೆ ಸದ್ಯ ಅದು ಪಾಳು ಬಿದ್ದಿದೆ.

ರಾಮನ ಬಂಟನ ತುಂಟಾಟ.
ಈ ಜಾಗದಲ್ಲಿ ಸ್ವಲ್ಪ ಮಂಗಗಳಿಂದ ಎಚ್ಚರವಾಗಿರಿ. ನೀವೇನಾದ್ರು ಸೌತೆಕಾಯಿ, ಬ್ಯಾಗ್, ತಿಂಡಿ ಒಯ್ಯೋದಾದ್ರೆ, ಹೆಗಲಿಗೆ ಹಾಕಿಕೊಳ್ಳೊ ಬ್ಯಾಗ್‍ನಲ್ಲಿಟ್ಟುಕೊಂಡು ಹೋಗಿ. ಕೈಯಲ್ಲಿ ಹಿಡಿದುಕೊಂಡು ಹೋದ್ರೆ, ಅಷ್ಟೇ ಕಥೆ. ಎಗರಿಸಿಕೊಂಡು ಹೋಗೋದು ಪಕ್ಕ. ಸೋ ಮಂಗಗಳಿಂದ ನಿಮ್ಮ ಬ್ಯಾಗ್‍ಗಳ ಬಗ್ಗೆ ಎಚ್ಚರ.

Namada Chilume Devarayanadurga 3

ಶುದ್ಧ ಕಾಡು ಜೇನುತುಪ್ಪ.
ಇಲ್ಲಿ ನಿಮಗೆ ಶುದ್ಧವಾದ ಕಾಡುಜೇನುತುಪ್ಪ ಸಿಗುತ್ತೆ. ಜೇನುತುಪ್ಪ ಇಷ್ಟಪಡೋರು ಮಿಸ್ ಮಾಡ್ದೆ ತಗೊಳ್ಳಿ. ನಾಮದ ಚಿಲುಮೆಯ ಎದುರುಗಡೆ ಸಿದ್ಧ ಸಜೀವಿನಿ ಔಷಧಿ ಸಸ್ಯ ವನವಿದೆ. ಇಲ್ಲಿ ನಿಮಗೆ ಈ ಜೇನುತುಪ್ಪ ಲಭ್ಯವಿರುತ್ತೆ. ಅಷ್ಟೇ ಅಲ್ಲ ಇಲ್ಲಿ ಕಾಡಿನಲ್ಲಿ ಸಿಗುವ ನೈಸರ್ಗಿಕ ಔಷಧಿಗಳು ಲಭ್ಯವಿದೆ. ಇದಲ್ಲದೆ, ಇಲ್ಲೊಂದು ಪಿರಾಮಿಡ್ ಧ್ಯಾನಮಂದಿರ ಕೂಡ ಇದೆ. ಆದ್ರೆ, ಸದ್ಯ ಇದರ ಬಳಕೆ ಯಾರು ಮಾಡದೇ ಇರೋದ್ರಿಂದ, ಅದಕ್ಕೆ ಬೀಗ ಹಾಕಿರುತ್ತಾರೆ.

ದೇವರಾಯನದುರ್ಗ:
ನಾಮದ ಚಿಲುಮೆ ಬರೋದೆ ಈ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ. ನಾಮದ ಚಿಲುಮೆಯಿಂದ 3 ಕಿಮೀ ದೂರದಲ್ಲಿ ಈ ದೇವರಾಯನದುರ್ಗ ಬರುತ್ತೆ. ತುಮಕೂರಿನಿಂದ 10 ಕಿ.ಮೀ. ದಾಟಿದರೆ ಸಾಕು ದೇವರಾಯನದುರ್ಗ ಅರಣ್ಯಪ್ರದೇಶ ಆರಂಭವಾಗುತ್ತದೆ. ಒಂದು ದಿನದ ಪ್ರವಾಸಕ್ಕೆ ಅತ್ಯಂತ ಯೋಗ್ಯವಾದ ಸ್ಥಳ ಇದಾಗಿದೆ. ಹತ್ತಿರದಲ್ಲೆ ದುರ್ಗದಹಳ್ಳಿ ಎಂಬ ಹಳ್ಳಿಯಲ್ಲಿ 8ನೇ ಶತಮಾನದ ಶಂಕರಾಚಾರ್ಯರು ಕಟ್ಟಿರುವ ಸುಂದರವಾದ ದೇವಾಲಯವಿದೆ. ಸಮೀಪದಲ್ಲಿ ‘ನಾಯಕನ ಕೆರೆ’ ಎಂಬ ಮನೋಹರವಾದ ಕೆರೆ ಇದೆ. ಇಲ್ಲಿನ ಬೆಟ್ಟದ ಮೇಲೆ ಯೋಗ ನರಸಿಂಹ ಮತ್ತು ಭೋಗ ನರಸಿಂಹರ ದೇವಾಲಯಗಳಿವೆ, ಹಳೆಯ ಕೋಟೆ, ಸೂರ್ಯಾಸ್ತ ನೋಡಲು ಅತ್ಯಂತ ಸುಂದರಾವಾದ ಜಾಗ ಇದು.

Namada Chilume Devarayanadurga 4

ದೇವರಾಯನ ದುರ್ಗದ ಕಾಡಿನಲ್ಲಿ ಚಿರತೆ, ಕಾಡು ಹಂದಿ, ಮುಳ್ಳು ಹಂದಿ, ಜಿಂಕೆ ಮುಂತಾದ ಪ್ರಾಣಿಗಳು ಕಂಡು ಬರುತ್ತವೆ. ಆದರೆ ಇದು ಅಭಯಾರಣ್ಯವಲ್ಲದಿದ್ದರಿಂದ ಕಾಣಲು ಸಿಗುವುದು ಅಪರೂಪ. ಇತ್ತೀಚಿನ ವರದಿ ಪ್ರಕಾರ ದೇವರಾಯನದುರ್ಗದಲ್ಲಿ ಹುಲಿ ಕೂಡ ಪತ್ತೆಯಾಗಿದೆ. ಉಳಿದುಕೊಳ್ಳೋಕೆ ಸರ್ಕಾರಿ ಗೆಸ್ಟ್ ಹೌಸ್ ಬಿಟ್ಟರೇ ಬೇರೆ ಹೋಟೆಲ್‍ಗಳಿಲ್ಲ. ಹಾಗಾಗಿ ಏನಾದ್ರು ತಿನ್ನಲು, ಕುಡಿಯಲು ನೀರನ್ನ ತುಮಕೂರಿನಿಂದಲೇ ತೆಗೆದುಕೊಂಡು ಹೋದರೆ ಒಳ್ಳೆಯದು.
– ಅರುಣ್ ಬಡಿಗೇರ್

TAGGED:Devarayan DurgaNamada chilumeramaSalim Alisri ramatumkurತುಮಕೂರುದೇವರಾಯನದುರ್ಗನಾಮದ ಚಿಲುಮೆರಾಮಶ್ರೀರಾಮಸಲೀಂ ಅಲಿ
Share This Article
Facebook Whatsapp Whatsapp Telegram

Cinema news

jayamala
ಹಿರಿಯ ನಟಿ ಜಯಮಾಲಾಗೆ ಡಾ. ರಾಜ್‌ಕುಮಾರ್‌ ಪ್ರಶಸ್ತಿ
Cinema Latest Main Post Sandalwood
Kichcha Sudeep Rocking Star Yash
ಈ ಹೊಸ ಹೆಜ್ಜೆ ನಿಮಗೆ ಅದೃಷ್ಟ ತರಲಿ – ಯಶ್‍ಗೆ ಕಿಚ್ಚನ ಹಾರೈಕೆ
Cinema Latest Sandalwood Top Stories
Toxic Teaser RGV
ಟಾಕ್ಸಿಕ್ ಟೀಸರ್ ನೋಡಿ ಆರ್‌ಜಿವಿ ಹೇಳಿದ್ದೇನು ಗೊತ್ತಾ..?
Cinema Latest Top Stories
Toxic Movie Yash
ಟಾಕ್ಸಿಕ್ ರಾಯ ಹೆಸರಿನ ಗುಟ್ಟು ಇದೇನಾ..?
Cinema Latest Sandalwood Top Stories

You Might Also Like

Siddaramaiah Pinarayi Vijayan
Bengaluru City

ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯ – ಕೇರಳ ಸರ್ಕಾರದ ನಡೆಗೆ ಸಿಎಂ ಸಿದ್ದರಾಮಯ್ಯ ಖಂಡನೆ

Public TV
By Public TV
4 hours ago
rent house
Bengaluru City

ಕರ್ನಾಟಕ ಬಾಡಿಗೆ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರಿಂದ ಅಂಕಿತ

Public TV
By Public TV
5 hours ago
school student karwar
Latest

Karwar: ಭಾರವಾದ ಶಾಲಾ ಬ್ಯಾಗ್ ಹೊತ್ತು ವಿದ್ಯಾರ್ಥಿಗೆ ಕೈ ಮುರಿತ

Public TV
By Public TV
5 hours ago
Renee Nicole Good
Crime

ಮಹಿಳೆಗೆ ಗುಂಡಿಕ್ಕಿ ಹತ್ಯೆಗೈದ ಅಧಿಕಾರಿ – ಆಕೆ ಭಯಾನಕವಾಗಿ ವರ್ತಿಸಿದ್ದೇ ಕಾರಣ ಎಂದ ಟ್ರಂಪ್‌

Public TV
By Public TV
5 hours ago
BJP DKSHI
Bengaluru City

ಕರ್ನಾಟಕದ ಖಜಾನೆಯಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಕೋಟಿಗಟ್ಟಲೆ ಜಾಹೀರಾತು: ಬಿಜೆಪಿ ಆರೋಪ, ಡಿಸಿಎಂ ಸಮರ್ಥನೆ

Public TV
By Public TV
6 hours ago
siddaramaiah KREDL
Bengaluru City

ಸಿಎಂಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ.

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?