ದಸರಾ ಕವಿಗೋಷ್ಠಿಯಲ್ಲಿ ಮೃತಪಟ್ಟ ಕವಿಯ ಹೆಸರು – ಆಮಂತ್ರಣ ಪತ್ರಿಕೆಯಲ್ಲಿ ಎಡವಟ್ಟು

Public TV
1 Min Read
Dasara Invitation

ಮೈಸೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು (Kannada And Culture Department) ಈ ಬಾರಿಯ ದಸರಾ (Mysuru Dasara) ಮುಖ್ಯ ಕವಿಗೋಷ್ಠಿಯಲ್ಲಿ (Literary Fest) ಮೃತಪಟ್ಟ ಕವಿಯ ಹೆಸರು ಸೇರಿಸಿ ಯಡವಟ್ಟು ಮಾಡಿಕೊಂಡಿದೆ.

3 ವರ್ಷಗಳ ಹಿಂದೆಯೇ ಮೃತಪಟ್ಟಿರುವ ಹಿರಿಯ ಕವಿ ಹಾಗೂ ಮೈಸೂರು ಆಕಾಶವಾಣಿ (Mysuru Akashvani) ನಿರ್ವಾಹಕರಾಗಿದ್ದ ಜಿ.ಕೆ.ರವೀಂದ್ರ ಕುಮಾರ್ ಅವರ ಹೆಸರನ್ನು ಮುಖ್ಯಕವಿಗೋಷ್ಠಿಯ ಪಟ್ಟಿಯಲ್ಲಿ ಸೇರಿಸಲಾಗಿದೆ. ಈ ಆಮಂತ್ರಣ ಪತ್ರಿಕೆ ಜಾಲತಾಣಗಳಲ್ಲಿ (Social Media) ಹರಿದಾಡುತ್ತಿದ್ದು, ವ್ಯಾಪಕ ಟೀಕೆಗೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಖ್ಯಾತ ನಟಿ ಆಶಾ ಪರೇಖ್ ಗೆ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

Kannada and Culture Department

ಅಷ್ಟೇ ಅಲ್ಲದೇ ಮೈಸೂರು-ಕೊಡಗು (Mysuru Kodagu) ಕ್ಷೇತ್ರದ ಸಂಸದ ಪ್ರತಾಪ್ ಸಿಂಹ (Pratap Simha) ಅವರನ್ನ ಕವಿಗೋಷ್ಠಿ ಸಮಿತಿಯವರು ಚಾಮರಾಜನಗರ ಲೋಕಸಭಾ ಕ್ಷೇತ್ರ ಎಂದು ಹೆಸರಿಸಿದ್ದಾರೆ. ಸದ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಡಿದ ಯಡವಟ್ಟಿಗೆ ಸಾಹಿತಿಗಳ ವಲಯದಲ್ಲೂ ಆಕ್ಷೇಪ ವ್ಯಕ್ತವಾಗಿದೆ. ಇದನ್ನೂ ಓದಿ: ಪ್ರಮೋದಾ ದೇವಿ ಮುಂದೆ ಮಂಡಿಯೂರಿ ನಮಸ್ಕರಿಸಿದ ಸುಧಾಮೂರ್ತಿ – ಫೋಟೋ ವೈರಲ್

PRATAP SIMHA 1

ಈ ವಿಷಯ ತಿಳಿಯುತ್ತಿದ್ದಂತೆ ದಸರಾ ಕವಿಗೋಷ್ಠಿ ಉಪಸಮಿತಿ ಕಾರ್ಯಾಧ್ಯಕ್ಷ ಪ್ರೊ.ಎಂ.ಜಿ. ಮಂಜುನಾಥ್ (MG Manjunath) ಅವರನ್ನು ವಿಚಾರಿಸಿದರೆ, ಅದು ಅಧಿಕೃತ ಆಹ್ವಾನ ಪತ್ರಿಕೆಯಲ್ಲ. ಮೊದಲು ಆ ಹೆಸರಿತ್ತು ನಂತರ ಸರಿಪಡಿಸಲಾಗಿದೆ ಎಂದು ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *