Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಪಿಗೆರಸ್ತೆ-ಯಲೇಚನಹಳ್ಳಿ ನಡುವೆ ಮೆಟ್ರೋ ರೈಲು- ರಾಷ್ಟ್ರಪತಿಗಳಿಂದ ಇಂದು ಉದ್ಘಾಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂಪಿಗೆರಸ್ತೆ-ಯಲೇಚನಹಳ್ಳಿ ನಡುವೆ ಮೆಟ್ರೋ ರೈಲು- ರಾಷ್ಟ್ರಪತಿಗಳಿಂದ ಇಂದು ಉದ್ಘಾಟನೆ

Bengaluru City

ಸಂಪಿಗೆರಸ್ತೆ-ಯಲೇಚನಹಳ್ಳಿ ನಡುವೆ ಮೆಟ್ರೋ ರೈಲು- ರಾಷ್ಟ್ರಪತಿಗಳಿಂದ ಇಂದು ಉದ್ಘಾಟನೆ

Public TV
Last updated: June 17, 2017 9:33 am
Public TV
Share
3 Min Read
metro 4
SHARE

– ಮೆಟ್ರೋ ಓಡಾಟದ ಸಮಯ ಬದಲಾವಣೆ

ಬೆಂಗಳೂರು: ಸಿಲಿಕಾನ್ ಸಿಟಿ ಜನರ 10 ವರ್ಷಗಳ ಕನಸು ನನಸಾಗಿದೆ. ಬೆಂಗಳೂರಿನ ಹೆಮ್ಮೆಯ ಪ್ರತೀಕವಾದ ನಮ್ಮ ಮೆಟ್ರೋ ಇಂದು ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ.

ಹೀಗೊಂದು ಸಿಟಿ ಮಧ್ಯನೇ ರೈಲು ಓಡಾಡುತ್ತೆ, ನಾವು ಒಂದು ಜಾಗದಿಂದ ಇನ್ನೊಂದು ಜಾಗಕ್ಕೆ ಕೇವಲ 30 ನಿಮಿಷದಲ್ಲಿ ಪ್ರಯಾಣ ಮಾಡಬಹುದು ಅನ್ನೋ ಕಲ್ಪನೆಯೂ ಕೂಡ ಬೆಂಗಳೂರಿನ ಜನ ಮಾಡಿರಲಿಲ್ಲ. ಆದ್ರೆ ಆ ಎಲ್ಲಾ ಕಲ್ಪನೆ ಈಗ ವಾಸ್ತವಕ್ಕೆ ಬಂದಿದೆ. ಇಂದು ದಕ್ಷಿಣ ಭಾರತದ ಮೊದಲ ಹಂತದ ನಮ್ಮ ಮೆಟ್ರೋವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಂಜೆ 6 ಗಂಟೆಗೆ ಉದ್ಘಾಟನೆ ಮಾಡಲಿದ್ದು, ನಾಳೆ ಬೆಳೆಗ್ಗೆ 6 ಗಂಟೆಯಿಂದ ಸಾರ್ವಜನಿಕರ ಓಡಾಟಕ್ಕೆ ಮೊದಲ ಹಂತದ ನಮ್ಮ ಮೆಟ್ರೋ ಮಾರ್ಗ ಮುಕ್ತವಾಗಲಿದೆ.

ಸಮಯ ಬದಲಾವಣೆ: ಮಹತ್ವದ ನಿರ್ಧಾರವೊಂದರಲ್ಲಿ ಮೆಟ್ರೋ ನಿಗಮ ರೈಲುಗಳ ಓಡಾಟದ ಸಮಯದಲ್ಲಿ ಬದಲಾವಣೆ ಮಾಡಿದೆ. ಸೋಮವಾರದಿಂದ ಹೊಸ ವೇಳಾಪಟ್ಟಿ ಅನ್ವಯವಾಗಲಿದೆ. ಈಗಿರುವ 6 ಗಂಟೆಗೆ ಬದಲು ಬೆಳಗ್ಗೆ 5 ಗಂಟೆಯಿಂದ ಮೆಟ್ರೋ ರೈಲು ತನ್ನ ಸಂಚಾರ ಆರಂಭಿಸಲಿದೆ. ರಾತ್ರಿ 10 ಗಂಟೆ ಬದಲು 11 ಗಂಟೆಯವರೆಗೂ ಸಂಚಾರ ಇರಲಿದೆ. ಕೆಂಪೇಗೌಡ ರೈಲು ನಿಲ್ದಾಣದಿಂದ ನಾಲ್ಕು ಟರ್ಮಿನಲ್ ನಿಲ್ದಾಣಗಳ ಕಡೆಗೆ ರಾತ್ರಿ 11.25ಕ್ಕೆ ಕಡೆಯ ರೈಲು ಸಂಚರಿಸಲಿದೆ. ನಾಗಸಂದ್ರ ಟರ್ಮಿನಲ್‍ಗೆ ರಾತ್ರಿ 10.50ಕ್ಕೆ ಕೊನೆಯ ರೈಲು, ಯಲೇಚಲನಹಳ್ಳಿ ಟರ್ಮಿನಲ್‍ಗೆ 11 ಗಂಟೆಗೆ, ಮೈಸೂರು ರಸ್ತೆಗೆ 11.05ಕ್ಕೆ ಕೊನೆಯ ರೈಲು ಹೊರಡಲಿದೆ.

namma metro 7

ಭಾನುವಾರ ಒಂದು ದಿನ ಮಾತ್ರ ಬೆಳಗ್ಗೆ 5.30ಕ್ಕೆ ರೈಲುಗಳ ಓಡಾಟ ಆರಂಭವಾಗಲಿದೆ. ಇನ್ನು ಪ್ರಯಾಣಿಕರ ದಟ್ಟಣೆ ಹೆಚ್ಚಿರುವ ಅವಧಿಯಲ್ಲಿ ಪ್ರತಿ ನಾಲ್ಕು ನಿಮಿಷಕ್ಕೊಮ್ಮೆ ರೈಲುಗಳ ಓಡಾಟ ಇರಲಿದೆ. ಕಡಿಮೆ ಇರುವ ಅವಧಿಯಲ್ಲಿ ಪ್ರತಿ 20 ನಿಮಿಷಕ್ಕೊಮ್ಮೆ ರೈಲುಗಳು ಓಡಲಿವೆ. ಸಾಮಾನ್ಯ ಅವಧಿಯಲ್ಲಿ ಪ್ರತಿ 10 ನಿಮಿಷಕ್ಕೊಮ್ಮೆ ಸಂಚರಿಸಲಿವೆ ಎಂದು ಬಿಎಂಆರ್‍ಸಿಎಲ್ ತಿಳಿಸಿದೆ.

ಮೆಟ್ರೋ ರೈಲಿನ ಅಧಿಕೃತ ಕೆಲಸ ಆರಂಭವಾಗಿದ್ದು ಏಪ್ರಿಲ್ 15 2007 ರಂದು. ಅಂದಿನ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಈ ಯೋಜನೆಗೆ ಚಾಲನೆ ನೀಡಿದ್ರು. ಬಿಎಂಆರ್‍ಸಿಎಲ್ ಈ ಯೋಜನೆಯನ್ನ 2005 ರಲ್ಲೆ ಆರಂಭ ಮಾಡಲು ಯೋಜನೆ ರೂಪಿಸಿಕೊಂಡಿತ್ತು. ಆದ್ರೆ ಸರ್ಕಾರದಲ್ಲಿ ಆದ ಬದಲಾವಣೆಯಿಂದ ಮೆಟ್ರೋ ಕಾಮಗಾರಿಗೆ ಒಪ್ಪಿಗೆ ದೊರೆಯಲು ನಿಧಾನವಾಯ್ತು. ಆದ್ರೆ 2006 ರಲ್ಲಿ ಕೇಂದ್ರ ಸಂಪುಟ ಸಭೆಯಲ್ಲಿ ಅಧಿಕೃತವಾಗಿ ಅನುಮೋದನೆ ಪಡೆದು ಆ ನಂತರ ಬಿಎಂಆರ್‍ಸಿಎಲ್ ತನ್ನ ಕೆಲಸ ಆರಂಭಿಸಿತು.

namma metro 6

ನಮ್ಮ ಮೆಟ್ರೋ ಮೊದಲ ಹಂತ ಎಲ್ಲಿಂದ ಎಲ್ಲಿಗೆ ಓಡುತ್ತೆ, ಎಷ್ಟು ಕಿಲೋಮೀಟರ್ ವ್ಯಾಪ್ತಿಯಲ್ಲಿ ಮೆಟ್ರೋ ಸಂಚಾರ ಮಾಡುತ್ತೆ ಅನ್ನೋದನ್ನ ನೊಡೋದಾದ್ರೆ: 
* ಬೈಯಪ್ಪನಹಳ್ಳಿ ಟು ನಾಯಂಡಹಳ್ಳಿ
* ಯಲೇಚನಹಳ್ಳಿ ಟು ನಾಗಸಂದ್ರ
* ಮೆಟ್ರೋ ಸಂಚಾರದ ಒಟ್ಟು ದೂರ: 42.3 ಕಿ.ಮೀ
* ಸುರಂಗ ಮಾರ್ಗದ ಒಟ್ಟು ದೂರ: 8.8 ಕಿ.ಮೀ
* ಎತ್ತರಿಸಿದ ಮಾರ್ಗದ ಒಟ್ಟು ದೂರ: 33.42 ಕಿ.ಮೀ
* ಒಟ್ಟು ನಿಲ್ದಾಣ: 40
* ಒಟ್ಟು ವೆಚ್ಚ: 14,291 ಕೋಟಿ ರೂಪಾಯಿ

namma metro 4

ಒಟ್ಟು 42.3 ಕೀಲೋ ಮೀಟರ್ ದೂರ ಮೆಟ್ರೋ ಸಂಚರಿಸಲಿದೆ. ಇದ್ರಲ್ಲಿ 8.8 ಕಿಲೋ ಮೀಟರ್ ದೂರದವರೆಗೆ ಸುರಂಗ ಮಾರ್ಗವಿದ್ರೆ, 33.42 ಕಿಲೋ ಮೀಟರ್ ದೂರದವರೆಗೆ ಎತ್ತರಿಸಿದ ಮಾರ್ಗದಲ್ಲಿ ಮೆಟ್ರೋ ಸಂಚರಿಸಲಿದೆ. ಒಟ್ಟು 40 ಮೆಟ್ರೋ ನಿಲ್ದಾಣಗಳಿದ್ದು, ಈ ಎಲ್ಲಾ ಪ್ರಾಜೆಕ್ಟ್ ಗೆ ಇದೂವರೆಗೂ ತಗುಲಿದ ಒಟ್ಟು ವೆಚ್ಚ 14,291 ಕೋಟಿ ರೂಪಾಯಿ.

ಇನ್ನು ನಮ್ಮ ಮೆಟ್ರೋನ ಪ್ರಮುಖ ಆಕರ್ಷಣೆ ಅಂದ್ರೆ ಅದು ಮೆಜೆಸ್ಟಿಕ್ ನಿಲ್ದಾಣ. ಸುಮಾರು 6 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರೋ ಈ ನಿಲ್ದಾಣದಲ್ಲಿ ಒಂದೇ ಸಮಯದಲ್ಲಿ 70 ಸಾವಿರ ಪ್ರಯಾಣಿಕರು ಬರಬಹುದು. ಸಿಟಿ ರೈಲ್ವೇ ನಿಲ್ದಾಣ, ಬಿಎಂಟಿಸಿ ನಿಲ್ದಾಣ ಮತ್ತು ಕೆಎಸ್‍ಆರ್‍ಟಿಸಿ ನಿಲ್ದಾಣ ದಿಂದ ನೇರವಾಗಿ ಮೆಜೆಸ್ಟಿಕ್‍ನ ಈ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಕರು ಬರಬಹುದಾದಂತಹ ಸೌಲಭ್ಯವನ್ನು ಇಲ್ಲಿ ಕಲ್ಪಿಸಲಾಗಿದೆ.

namma metro 3

ನಮ್ಮ ಮೆಟ್ರೋ ಮೊದಲ ಹಂತ ಮುಗಿಸಲು 10 ವರ್ಷಗಳ ಸುದೀರ್ಘ ಅವಧಿಯನ್ನು ತಗೆದುಕೊಂಡ ಅಧಿಕಾರಿಗಳು ಎರಡನೇ ಹಂತ ಮತ್ತು 3 ನೇ ಹಂತವನ್ನು 2022ರ ಒಳಗೆ ಮುಗಿಸುತ್ತೇವೆ ಅನ್ನೋ ಭರವಸೆ ನೀಡಿದ್ದಾರೆ.

namma metro

namma metro 1

namma metro 2

namma metro 5

metro 3

metro 2

metro 7

metro 6

metro

metro 1

TAGGED:bengalurunamma metroPublic TVsampigeroadyelachenahalliನಮ್ಮ ಮೆಟ್ರೋಪಬ್ಲಿಕ್ ಟಿವಿಬಿಎಂಆರ್‍ಸಿಎಲ್ಬೆಂಗಳೂರುಯಲಚೇನಹಳ್ಳಿಸಂಪಿಗೆ ರಸ್ತೆ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
22 minutes ago
Bommai
Districts

ರಾಜ್ಯದಲ್ಲಿ ತಮಿಳುನಾಡು ಮಾದರಿ ಶಿಕ್ಷಕರ ನೇಮಕ ವ್ಯವಸ್ಥೆ ಬರಲಿ: ಬಸವರಾಜ ಬೊಮ್ಮಾಯಿ

Public TV
By Public TV
57 minutes ago
Police lathicharge on farmers Sringeri bandh on Monday
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌- ಸೋಮವಾರ ಶೃಂಗೇರಿ ಬಂದ್‌

Public TV
By Public TV
1 hour ago
Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋದ ಯುವಕ ಸಾವು

Public TV
By Public TV
1 hour ago
HC Balakrishna
Districts

ಡಿಕೆಶಿ ಬಿಜೆಪಿ ಜೊತೆ ರಾಜಿ ಆಗಿದ್ರೆ ಎಲ್ಲೋ ಇರ್ತಿದ್ರು – ಹೆಚ್‌.ಸಿ ಬಾಲಕೃಷ್ಣ

Public TV
By Public TV
2 hours ago
Bagalkote stone pelting Case 7 innocent people arrested Muslims appeal for their release
Bagalkot

ಬಾಗಲಕೋಟೆ ಕಲ್ಲುತೂರಾಟ| ಬಂಧನಕ್ಕೆ ಒಳಗಾದ 7 ಮಂದಿ ಅಮಾಯಕರು: ಬಿಡುಗಡೆ ಮಾಡುವಂತೆ ಮುಸ್ಲಿಮರ ಮನವಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?