Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಂಪಿಗೆರಸ್ತೆ-ಯಲೇಚನಹಳ್ಳಿ ನಡುವೆ ಮೆಟ್ರೋ ರೈಲು- ರಾಷ್ಟ್ರಪತಿಗಳಿಂದ ಉದ್ಘಾಟನೆ

Public TV
Last updated: June 17, 2017 7:34 pm
Public TV
Share
3 Min Read
METRO 1
SHARE

ಬೆಂಗಳೂರು: ಸಿಲಿಕಾನ್ ಸಿಟಿ ಜನರ 10 ವರ್ಷಗಳ ಕನಸು ನನಸಾಗಿದೆ. ಬೆಂಗಳೂರಿನ ಹೆಮ್ಮೆಯ ಪ್ರತೀಕವಾದ ನಮ್ಮ ಮೆಟ್ರೋ ಇಂದು ಅಧಿಕೃತವಾಗಿ ಉದ್ಘಾಟನೆಗೊಂಡಿತು.
ಇಂದು ದಕ್ಷಿಣ ಭಾರತದ ಮೊದಲ ಹಂತದ ನಮ್ಮ ಮೆಟ್ರೋವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಂಜೆ 6 ಗಂಟೆಗೆ ಉದ್ಘಾಟನೆ ಮಾಡಿದ್ದಾರೆ. ನಾಳೆ ಬೆಳೆಗ್ಗೆ 6 ಗಂಟೆಯಿಂದ ಸಾರ್ವಜನಿಕರ ಓಡಾಟಕ್ಕೆ ಮೊದಲ ಹಂತದ ನಮ್ಮ ಮೆಟ್ರೋ ಮಾರ್ಗ ಮುಕ್ತವಾಗಲಿದೆ.

NAMMA METRO

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ವಜುಬಾಯಿ ವಾಲಾ, ಕೇಂದ್ರ ಸಚಿವ ಎಂ.ವೆಂಕಯ್ಯ ನಾಯ್ಡು, ಕೆ.ಬಿ. ಕೋಳಿವಾಡ, ಬಿ.ಕೆ. ಶಂಕರಮೂರ್ತಿ, ಮೇಯರ ಪದ್ಮಾವತಿ, ಕೇಂದ್ರ ಸಚಿವರಾದ ಅನಂತಕುಮಾರ ಮತ್ತು ಸದಾನಂದ ಗೌಡ ಸೇರಿದಂತೆ ಅನೇಕ ಗಣ್ಯವ್ಯಕ್ತಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

namma metro 2

ಸಮಯ ಬದಲಾವಣೆ: ಮಹತ್ವದ ನಿರ್ಧಾರವೊಂದರಲ್ಲಿ ಮೆಟ್ರೋ ನಿಗಮ ರೈಲುಗಳ ಓಡಾಟದ ಸಮಯದಲ್ಲಿ ಬದಲಾವಣೆ ಮಾಡಿದೆ. ಸೋಮವಾರದಿಂದ ಹೊಸ ವೇಳಾಪಟ್ಟಿ ಅನ್ವಯವಾಗಲಿದೆ. ಈಗಿರುವ 6 ಗಂಟೆಗೆ ಬದಲು ಬೆಳಗ್ಗೆ 5 ಗಂಟೆಯಿಂದ ಮೆಟ್ರೋ ರೈಲು ತನ್ನ ಸಂಚಾರ ಆರಂಭಿಸಲಿದೆ. ರಾತ್ರಿ 10 ಗಂಟೆ ಬದಲು 11 ಗಂಟೆಯವರೆಗೂ ಸಂಚಾರ ಇರಲಿದೆ. ಕೆಂಪೇಗೌಡ ರೈಲು ನಿಲ್ದಾಣದಿಂದ ನಾಲ್ಕು ಟರ್ಮಿನಲ್ ನಿಲ್ದಾಣಗಳ ಕಡೆಗೆ ರಾತ್ರಿ 11.25ಕ್ಕೆ ಕಡೆಯ ರೈಲು ಸಂಚರಿಸಲಿದೆ. ನಾಗಸಂದ್ರ ಟರ್ಮಿನಲ್‍ಗೆ ರಾತ್ರಿ 10.50ಕ್ಕೆ ಕೊನೆಯ ರೈಲು, ಯಲೇಚಲನಹಳ್ಳಿ ಟರ್ಮಿನಲ್‍ಗೆ 11 ಗಂಟೆಗೆ, ಮೈಸೂರು ರಸ್ತೆಗೆ 11.05ಕ್ಕೆ ಕೊನೆಯ ರೈಲು ಹೊರಡಲಿದೆ.

namma metro 3

ಭಾನುವಾರ ಒಂದು ದಿನ ಮಾತ್ರ ಬೆಳಗ್ಗೆ 5.30ಕ್ಕೆ ರೈಲುಗಳ ಓಡಾಟ ಆರಂಭವಾಗಲಿದೆ. ಇನ್ನು ಪ್ರಯಾಣಿಕರ ದಟ್ಟಣೆ ಹೆಚ್ಚಿರುವ ಅವಧಿಯಲ್ಲಿ ಪ್ರತಿ ನಾಲ್ಕು ನಿಮಿಷಕ್ಕೊಮ್ಮೆ ರೈಲುಗಳ ಓಡಾಟ ಇರಲಿದೆ. ಕಡಿಮೆ ಇರುವ ಅವಧಿಯಲ್ಲಿ ಪ್ರತಿ 20 ನಿಮಿಷಕ್ಕೊಮ್ಮೆ ರೈಲುಗಳು ಓಡಲಿವೆ. ಸಾಮಾನ್ಯ ಅವಧಿಯಲ್ಲಿ ಪ್ರತಿ 10 ನಿಮಿಷಕ್ಕೊಮ್ಮೆ ಸಂಚರಿಸಲಿವೆ ಎಂದು ಬಿಎಂಆರ್‍ಸಿಎಲ್ ತಿಳಿಸಿದೆ.

namma metro 7

ಮೆಟ್ರೋ ರೈಲಿನ ಅಧಿಕೃತ ಕೆಲಸ ಆರಂಭವಾಗಿದ್ದು ಏಪ್ರಿಲ್ 15 2007 ರಂದು. ಅಂದಿನ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಈ ಯೋಜನೆಗೆ ಚಾಲನೆ ನೀಡಿದ್ರು. ಬಿಎಂಆರ್‍ಸಿಎಲ್ ಈ ಯೋಜನೆಯನ್ನ 2005 ರಲ್ಲೆ ಆರಂಭ ಮಾಡಲು ಯೋಜನೆ ರೂಪಿಸಿಕೊಂಡಿತ್ತು. ಆದ್ರೆ ಸರ್ಕಾರದಲ್ಲಿ ಆದ ಬದಲಾವಣೆಯಿಂದ ಮೆಟ್ರೋ ಕಾಮಗಾರಿಗೆ ಒಪ್ಪಿಗೆ ದೊರೆಯಲು ನಿಧಾನವಾಯ್ತು. ಆದ್ರೆ 2006 ರಲ್ಲಿ ಕೇಂದ್ರ ಸಂಪುಟ ಸಭೆಯಲ್ಲಿ ಅಧಿಕೃತವಾಗಿ ಅನುಮೋದನೆ ಪಡೆದು ಆ ನಂತರ ಬಿಎಂಆರ್‍ಸಿಎಲ್ ತನ್ನ ಕೆಲಸ ಆರಂಭಿಸಿತು.

namma metro 6

ನಮ್ಮ ಮೆಟ್ರೋ ಮೊದಲ ಹಂತ ಎಲ್ಲಿಂದ ಎಲ್ಲಿಗೆ ಓಡುತ್ತೆ ಎಷ್ಟು ಕಿಲೋಮೀಟರ್ ವ್ಯಾಪ್ತಿಯಲ್ಲಿ ಮೆಟ್ರೋ ಸಂಚಾರ ಮಾಡುತ್ತೆ ಅನ್ನೋದನ್ನ ನೊಡೋದಾದ್ರೆ
* ಬೈಯಪ್ಪನಹಳ್ಳಿ ಟು ನಾಯಂಡಹಳ್ಳಿ
* ಯಲೇಚನಹಳ್ಳಿ ಟು ನಾಗಸಂದ್ರ
* ಮೆಟ್ರೋ ಸಂಚಾರದ ಒಟ್ಟು ದೂರ: 42.3 ಕಿ.ಮೀ
* ಸುರಂಗ ಮಾರ್ಗದ ಒಟ್ಟು ದೂರ: 8.8 ಕಿ.ಮೀ
* ಎತ್ತರಿಸಿದ ಮಾರ್ಗದ ಒಟ್ಟು ದೂರ: 33.42 ಕಿ.ಮೀ
* ಒಟ್ಟು ನಿಲ್ದಾಣ: 40
* ಒಟ್ಟು ವೆಚ್ಚ: 14,291 ಕೋಟಿ ರೂಪಾಯಿ

ಒಟ್ಟು 42.3 ಕೀಲೋ ಮೀಟರ್ ದೂರ ಮೆಟ್ರೋ ಸಂಚರಿಸಲಿದೆ. ಇದ್ರಲ್ಲಿ 8.8 ಕಿಲೋ ಮೀಟರ್ ದೂರದವರೆಗೆ ಸುರಂಗ ಮಾರ್ಗವಿದ್ರೆ, 33.42 ಕಿಲೋ ಮೀಟರ್ ದೂರದವರೆಗೆ ಎತ್ತರಿಸಿದ ಮಾರ್ಗದಲ್ಲಿ ಮೆಟ್ರೋ ಸಂಚರಿಸಲಿದೆ. ಒಟ್ಟು 40 ಮೆಟ್ರೋ ನಿಲ್ದಾಣಗಳಿದ್ದು, ಈ ಎಲ್ಲಾ ಪ್ರಾಜೆಕ್ಟ್‍ಗೆ ಇದೂವರೆಗೂ ತಗುಲಿದ ಒಟ್ಟು ವೆಚ್ಚ 14,291 ಕೋಟಿ ರೂಪಾಯಿ.

namma metro 4

ಇನ್ನು ನಮ್ಮ ಮೆಟ್ರೋನ ಪ್ರಮುಖ ಆಕರ್ಷಣೆ ಅಂದ್ರೆ ಅದು ಮೆಜೆಸ್ಟಿಕ್ ನಿಲ್ದಾಣ. ಸುಮಾರು 6 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರೋ ಈ ನಿಲ್ದಾಣದಲ್ಲಿ ಒಂದೇ ಸಮಯದಲ್ಲಿ 70 ಸಾವಿರ ಪ್ರಯಾಣಿಕರು ಬರಬಹುದು. ಸಿಟಿ ರೈಲ್ವೇ ನಿಲ್ದಾಣ, ಬಿಎಂಟಿಸಿ ನಿಲ್ದಾಣ. ಮತ್ತು ಕೆಎಸ್‍ಆರ್‍ಟಿಸಿ ನಿಲ್ದಾಣ ದಿಂದ ನೇರವಾಗಿ ಮೆಜೆಸ್ಟಿಕ್‍ನ ಈ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಕರು ಬರಬಹುದಾದಂತಹ ಸೌಲಭ್ಯವನ್ನು ಇಲ್ಲಿ ಕಲ್ಪಿಸಲಾಗಿದೆ.

ನಮ್ಮ ಮೆಟ್ರೋ ಮೊದಲ ಹಂತ ಮುಗಿಸಲು 10 ವರ್ಷಗಳ ಸುದೀರ್ಘ ಅವಧಿಯನ್ನು ತಗೆದುಕೊಂಡ ಅಧಿಕಾರಿಗಳು ಎರಡನೇ ಹಂತ ಮತ್ತು 3 ನೇ ಹಂತವನ್ನು 2022ರ ಒಳಗೆ ಮುಗಿಸುತ್ತೇವೆ ಅನ್ನೋ ಭರವಸೆ ನೀಡಿದ್ದಾರೆ.

 

ನಾವೀನ್ಯತೆಯ ಸೊಬಗಿಗೆ ಆಧುನಿಕತೆಯ ಮೆರುಗು, ಜಾಗತಿಕ ನಗರಿಗೆ ವಿಶ್ವದರ್ಜೆಯ ಸಾರಿಗೆ. ‘ನಮ್ಮ ಮೆಟ್ರೋ, ನಮ್ಮ ಹೆಮ್ಮೆ’ #NammaMetro pic.twitter.com/A7ETU1sS2F

— CM of Karnataka (@CMofKarnataka) June 17, 2017

 

 

ಹಲವು ವೈಶಿಷ್ಟ್ಯಗಳನ್ನೊಳಗೊಂಡ #NammaMetro ಮೊದಲ ಹಂತ ಇಂದು ಲೋಕಾರ್ಪಣೆಗೊಳ್ಳಲಿದೆ, ಸಂಚಾರ ದಟ್ಟಣೆ ನಿಯಂತ್ರಣದಲ್ಲಿ ಇದು ಮಹತ್ತರ ಬದಲಾವಣೆಗೆ ಕಾರಣವಾಗಲಿದೆ. pic.twitter.com/GyHzktMzNi

— CM of Karnataka (@CMofKarnataka) June 17, 2017

TAGGED:BangaloreBMRCLOur MetroPublic TVsampige roadYalachenahalliನಮ್ಮ ಮೆಟ್ರೋಪಬ್ಲಿಕ್ ಟಿವಿಬಿಎಂಆರ್‍ಸಿಎಲ್ಬೆಂಗಳೂರುಯಲಚೇನಹಳ್ಳಿಸಂಪಿಗೆ ರಸ್ತೆ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

DARSHAN 5
ದರ್ಶನ್‌ ಶಿಫ್ಟ್‌ಗೆ ಹೆಚ್ಚಿದ ಒತ್ತಡ – ಪರಪ್ಪನ ಅಗ್ರಹಾರದಲ್ಲೇ ಉಳಿಸಿಕೊಳ್ಳಲು ವಕೀಲರ ಹರಸಾಹಸ
Bengaluru City Cinema Karnataka Latest Main Post Sandalwood States
Vasishta Simha 1
`ಸಿಂಹಪ್ರಿಯ’ ಜೋಡಿಯ ಪುತ್ರನ ಹೆಸರು ವಿಪ್ರಾ – ಅರ್ಥವೇನು ಗೊತ್ತಾ?
Cinema Latest Sandalwood Top Stories
ramya 1
ಸಿನಿಮಾ ಗೆಲ್ಲಲು ಸ್ಟಾರ್ ನಟರೇ ಬೇಕಿಲ್ಲ: ರಮ್ಯಾ
Cinema Latest Sandalwood Top Stories
Aniruddha
ಜಮೀನು ಖರೀದಿಸ್ತೀನಿ ಅಂದವರು ಯಾಕೆ ಖರೀದಿಸಿಲ್ಲ : ಅನಿರುದ್ಧ ಪ್ರಶ್ನೆ ಮಾಡಿದ್ದು ಯಾರಿಗೆ?
Cinema Latest Main Post Sandalwood
Ajay Rao 2
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ಮತ್ತೆ ಒಂದಾಗೋಕೆ ಬಯಸಿದ ಪತ್ನಿ ಸಪ್ನ
Cinema Latest Main Post Sandalwood

You Might Also Like

Bomb Threat
Crime

ದೆಹಲಿಯಲ್ಲಿ ಮತ್ತೆ ಶಾಲೆಗಳಿಗೆ ಬಾಂಬ್‌ ಬೆದರಿಕೆ – ತೀವ್ರ ಶೋಧ

Public TV
By Public TV
22 minutes ago
Five electrocuted
Latest

ಕೃಷ್ಣಾಷ್ಟಮಿ ಮೆರವಣಿಗೆ ವೇಳೆ ರಥಕ್ಕೆ ವಿದ್ಯುತ್‌ ತಂತಿ ತಗುಲಿ ಅವಘಡ – ಐವರು ಸಾವು

Public TV
By Public TV
44 minutes ago
AI ಚಿತ್ರ
Davanagere

ದಾವಣಗೆರೆ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ – ಇಂದು ಶಾಲೆಗಳಿಗೆ ರಜೆ ಘೋಷಣೆ

Public TV
By Public TV
1 hour ago
Hebbal Flyover 3
Bengaluru City

ಟ್ರಾಫಿಕ್‌ ಸಮಸ್ಯೆಗೆ ಕೊನೆಗೂ ಮುಕ್ತಿ – 700 ಮೀಟರ್ ಉದ್ದದ ಹೆಬ್ಬಾಳ ಮೇಲ್ಸೇತುವೆ ಇಂದು ಉದ್ಘಾಟನೆ

Public TV
By Public TV
1 hour ago
weather
Bagalkot

Rain Alert | ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ – ಮಲೆನಾಡು ಭಾಗದಲ್ಲಿ ರೆಡ್‌ ಅಲರ್ಟ್‌

Public TV
By Public TV
1 hour ago
Mysuru
Crime

ಮೈಸೂರು | ಕುಡಿತಕ್ಕೆ ಹಣ ನೀಡದ ಪತ್ನಿಯನ್ನ ಕೊಂದೇಬಿಟ್ಟ ಪತಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?