ಜ್ಯೂ.ಎನ್ಟಿಆರ್ (Jr.Ntr)ಸಹೋದರ ತೆಲುಗು ನಟ- ರಾಜಕಾರಣಿ ನಂದಮೂರಿ ತಾರಕ ರತ್ನ (Nandamuri Tarak Ratna) ಅವರು ಬೆಂಗಳೂರಿನಲ್ಲಿ ಶನಿವಾರ (ಫೆ.18) ಕೊನೆಯುಸಿರೆಳೆದಿದ್ದಾರೆ. ತಾರಕ ರತ್ನ ನಿಧನ ನಂದಮೂರಿ ಕುಟುಂಬಕ್ಕೆ (Nandamuri Family) ಆಘಾತ ನೀಡಿದೆ. ತೆಲುಗು ಫಿಲ್ಮ್ ಚೇಂಬರ್ ಆವರಣದಲ್ಲಿ ಫೆ.20ರ ಬೆಳಗ್ಗೆ ತಾರಕ ರತ್ನ ಅವರ ಪಾರ್ಥಿವ ಶರೀರವನ್ನ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ.
ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಅವರ ಪುತ್ರ ನರಾ ಲೋಕೇಶ್ ಅವರು ಏರ್ಪಡಿಸಿದ್ದ ಪಾದಯಾತ್ರೆಯಲ್ಲಿ ಜ.27ರಂದು ನಂದಮೂರಿ ತಾರಕ ರತ್ನ ಭಾಗಿ ಆಗಿದ್ದರು. ಪಾದಯಾತ್ರೆ ಆರಂಭವಾದ ಕೆಲವೇ ನಿಮಿಷಗಳಲ್ಲಿ ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಕೂಡಲೇ ಅವರನ್ನು ಕುಪ್ಪಂ ಬಳಿ ಇರುವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದನ್ನೂ ಓದಿ:ನಟ ನಂದಮೂರಿ ತಾರಕ ರತ್ನ ಇನ್ನಿಲ್ಲ
ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯ (Narayana Hrudayalaya) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ. ಭಾನುವಾರ (ಫೆ.19) ನಂದಮೂರಿ ತಾರಕ ರತ್ನ ಅವರ ಪಾರ್ಥಿವ ಶರೀರವನ್ನು ರಂಗಾ ರೆಡ್ಡಿ ಜಿಲ್ಲೆಯ ಮೋಕಿಲಾಗೆ ರವಾನೆ ಮಾಡಲಾಗಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಸೋಮವಾರ (ಫೆ.20) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ನಂದಮೂರಿ ತಾರಕ ರತ್ನ ಅಂತ್ಯಕ್ರಿಯೆ ನಡೆಯಲಿದೆ.
ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿಯ (Telagu Film Chamber) ಆವರಣದಲ್ಲಿ ನಂದಮೂರಿ ತಾರಕ ರತ್ನ ಅವರ ಪಾರ್ಥೀವ ಶರೀರ ಇರಿಸಲಾಗುವುದು. ಅಲ್ಲಿ ಸಾರ್ವಜನಿಕರು ಅಂತಿಮ ದರ್ಶನ ಪಡೆಯಬಹುದು. ಬೆಳಗ್ಗೆ 7 ಗಂಟೆಯಿಂದಲೇ ಅಂತಿಮ ದರ್ಶನಕ್ಕೆ ಅವಕಾಶ ಇರಲಿದೆ. ಅಂದು ಸಂಜೆ 5 ಗಂಟೆ ಸುಮಾರಿಗೆ ಹೈದರಾಬಾದ್ನ ಮಹಾಪ್ರಸ್ತಾನಂನಲ್ಲಿ ಅಂತ್ಯಕ್ರಿಯೆ ಮಾಡಲಾಗುವುದು.
ಇನ್ನೂ ನಂದಮೂರಿ ತಾರಕ ರತ್ನ ಅವರ ನಿಧನಕ್ಕೆ ಟಾಲಿವುಡ್ ಜೊತೆ ಇಡೀ ಚಿತ್ರರಂಗ ಕಂಬನಿ ಮಿಡಿದಿದೆ. ತಾರಕ ರತ್ನ ಅವರ ನಿಧನ ಚಿತ್ರರಂಗಕ್ಕೆ ಮತ್ತು ರಾಜಕೀಯಕ್ಕೆ ತುಂಬಲಾರದ ನಷ್ಟವಾಗಿದೆ.
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k
Thank you for your sharing. I am worried that I lack creative ideas. It is your article that makes me full of hope. Thank you. But, I have a question, can you help me?