ಮೈಸೂರು: ಸರ್ಕಾರದ ಅಭಿವೃದ್ಧಿ ಕೆಲಸಗಳನ್ನ ನೋಡಿ ಜನರು ನನಗೆ ಮತ ಹಾಕಿದ್ದಾರೆ ಅಂತಾ ನಂಜನಗೂಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶ ಮೂರ್ತಿ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಮತ ಎಣಿಕೆ ಕೇಂದ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಶವ ಮೂರ್ತಿ, ಇದು ಹಣದಿಂದ ಆಗಿರುವ ಚುನಾವಣೆಯಲ್ಲ ಅಭಿವೃದ್ಧಿ ನೋಡಿ ಮತ ಹಾಕಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಮತದಾರರು ಆಶೀರ್ವಾದಿಸಿದ್ದಾರೆ ಅಂತಾ ಹೇಳಿದ್ದಾರೆ.
ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಆರಂಭಿಕ ಹಂತದಿಂದಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿಕೊಂಡು ಬಂದಿದೆ.
ಮೂರನೇ ಸುತ್ತಿನಲ್ಲೂ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು, ಕಳಲೆ ಕೇಶವಮೂರ್ತಿ 18,477 ಮತಗಳನ್ನು ಪಡೆದರೆ, ಶ್ರೀನಿವಾಸ ಪ್ರಸಾದ್ 9,244 ಮತಗಳಿಂದ ಹಿನ್ನಡೆ ಸಾಧಿಸಿದ್ದಾರೆ.
#Karnataka #bypolls: #Congress lead on #Nanjanagudu seats after third round of counting @raveeshmysore @kp_nagaraj @KPCCofficial pic.twitter.com/IaL7J2lVYv
— PublicTV (@publictvnews) April 13, 2017