Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಬಿಜೆಪಿ ನಾಯಕರ ಅಸಮಾಧಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಬಿಜೆಪಿ ನಾಯಕರ ಅಸಮಾಧಾನ

Bengaluru City

ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಬಿಜೆಪಿ ನಾಯಕರ ಅಸಮಾಧಾನ

Public TV
Last updated: April 23, 2017 7:44 pm
Public TV
Share
3 Min Read
bjp pratap simha
SHARE

ಬೆಂಗಳೂರು: ನಂಜನಗೂಡು, ಗುಂಡ್ಲುಪೇಟೆ ಉಪ ಚುನಾವಣೆ ಸೋಲಿನ ಬಗ್ಗೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯರೂಪ್ಪ ನೇತೃತ್ವದಲ್ಲಿ ನಡೆದ ಆತ್ಮಾವಲೋಕನ ಸಭೆಯಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಅಸಮಾಧಾನ ಹೊರ ಹೊಮ್ಮಿದೆ.

ಗುಂಡ್ಲಪೇಟೆ ಚುನಾವಣೆಯಲ್ಲಿ ಬಿಜೆಪಿಗೆ ಒಳ್ಳೆಯ ವಾತಾವರಣ ಇತ್ತು. ಆದರೆ ಗೀತಾ ಮಹದೇವ್ ಪ್ರಸಾದ್ ವಿರುದ್ಧ ಪ್ರತಾಪ್ ಸಿಂಹ ಹೇಳಿಕೆ ಚುನಾವಣೆ ಮೇಲೆ ಸಾಕಷ್ಟು ಪರಿಣಾಮ ಬೀರಿದೆ. ಗೀತಾ ಅವರ ಪರ ಅನುಕಂಪ ಇರುವಾಗ ಇಂಥಹ ಹೇಳಿಕೆ ಬಿಜೆಪಿಗೆ ಸಾಕಷ್ಟು ಹಿನ್ನೆಡೆ ಉಂಟುಮಾಡಿತು. ಅಷ್ಟೇ ಅಲ್ಲದೇ ಪ್ರತಾಪ್ ಸಿಂಹ ಹೇಳಿಕೆಗೆ ಬಿಜೆಪಿ ಮುಖಂಡರಿಂದಲೇ ಖಂಡನೆ ವ್ಯಕ್ತವಾಯಿತು ಎಂದು ಪಬ್ಲಿಕ್ ಟಿವಿಗೆ ಮೂಲಗಳು ಮಾಹಿತಿ ನೀಡಿವೆ.

ಅಧಿಕಾರ ದುರುಪಯೋಗ: ಆತ್ಮಾವಲೋಕನ ಸಭೆ ಬಳಿಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಮಾತನಾಡಿ, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಹಣದ ಹೊಳೆ ಹರಿಸಿದ ನಾಯಕರು ಮತದಾರರ ಖರೀದಿ ಮಾಡುವ ಮೂಲಕ ಅಕ್ರಮ ನಡೆಸಿದ್ದಾರೆ. ಕಾಂಗ್ರೆಸ್ ಜೆಡಿಎಸ್ ಒಳ ಒಪ್ಪಂದ ಬಿಜೆಪಿ ಸೋಲಿಗೆ ಕಾರಣವಾಗಿದೆ ಎಂದು ತಿಳಿಸಿದರು.

ಮುಂದಿನ ಚುನಾವಣೆಗೆ ಮಿಷನ್ 150 ಗುರಿ ಇಟ್ಟುಕೊಂಡು ಮುನ್ನಡೆಯುತ್ತೇವೆ. ಕೇಂದ್ರ ಬಿಜೆಪಿ ಸಾಧನೆಗಳನ್ನು ಮುಂದಿಟ್ಟುಕೊಂಡು ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ಲಿಂಬಾವಳಿ ಹೇಳಿದರು.

ಸಭೆಯಲ್ಲಿ ಯಾರಿದ್ದರು: ಆತ್ಮಾವಲೋಕನ ಸಭೆಯಲ್ಲಿ ಅಭ್ಯರ್ಥಿಗಳಾಗಿದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್, ನಿರಂಜನ್, ಚುನಾವಣಾ ಉಸ್ತುವಾರಿ ಹೊತ್ತಿದ್ದ ವಿ.ಸೋಮಣ್ಣ, ಸಂಸದೆ ಶೋಭಾ ಕರಂದ್ಲಾಜೆ, ಚುನಾವಣಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸಿದ ಬಿಜೆಪಿ ಮುಖಂಡರಾದ ಮಾಜಿ ಸಚಿವ ರಾಮದಾಸ್, ಉದಾಸಿ, ಮುರುಗೇಶ್ ನಿರಾಣಿ, ರೇಣುಕಾಚಾರ್ಯ, ಮಾಜಿ ಕೇಂದ್ರ ಸಚಿವ ಜಿ.ಎಂ.ಸಿದ್ದೇಶ್ವರ, ಮೇಲ್ಮನೆ ಸದಸ್ಯರಾದ ಬಿ.ಜೆ.ಪುಟ್ಟಸ್ವಾಮಿ, ಡಿ.ಎಸ್.ವೀರಯ್ಯ, ಅರವಿಂದ ಲಿಂಬಾವಳಿ, ಸಂಸದ ಪಿ.ಸಿ.ಮೋಹನ್, ತಾರಾ ಅನುರಾಧ, ಶೃತಿ, ನಂಜನಗೂಡು, ಗುಂಡ್ಲುಪೇಟೆ ಪಕ್ಷದ ಮುಖಂಡರು ಭಾಗಿಯಾಗಿದ್ದರು.

ನಾಯಕರು ಗೈರು: ವಿಧಾನಸಭೆಯ ಪ್ರತಿಪಕ್ಷದ ನಾಯಕ ಜಗದೀಶ್ ಶೆಟ್ಟರ್, ಪರಿಷತ್ ಪ್ರತಿಪಕ್ಷದ ನಾಯಕ ಈಶ್ವರಪ್ಪ, ಸಂಸದ ಪ್ರತಾಪ ಸಿಂಹ ಗೈರಾಗಿದ್ದರು.

ಪ್ರತಾಪ್ ಸಿಂಹ ಹೇಳಿದ್ದು ಏನು?
ಮಾಜಿ ಸಚಿವ ದಿವಂಗತ ಮಹದೇವ್ ಪ್ರಸಾದ್ ಅವರ ಪತ್ನಿ ಗೀತಾ ಅವರ ವಿರುದ್ಧ ಪ್ರತಾಪ್ ಸಿಂಹ,”ಗೀತಾ ಮಹಾದೇವ್ ಪ್ರಸಾದ್ ಅವರೇ ನಿಮ್ಮ ಪತಿ ಮೃತಪಟ್ಟು ಹಾಲು ತುಪ್ಪ ಬಿಡೋ ದಿನವೇ ನಿವೇ ಅಭ್ಯರ್ಥಿ ಎಂಬುದಾಗಿ ಘೋಷಿಸಿಕೊಂಡಿದ್ದೀರಿ. ನಿಮ್ಮ ಮನೆಯ ಅಭಿವೃದ್ಧಿಗೆ ಮತ ಕೇಳಬೇಡಿ” ಎಂದು ಹೇಳಿಕೆ ನೀಡಿದ್ದರು. ತನ್ನ ಹೇಳಿಕೆ ವಿವಾದವಾಗುತ್ತಿದ್ದಂತೆ ನಿಮಗೆ ನೋವಾಗಿದ್ದರೆ ವಿಷಾದ ವ್ಯಕ್ತ ಪಡಿಸುತ್ತೇನೆ, ಹೇಳಿಕೆಯನ್ನೂ ಹಿಂಪಡೆಯುತ್ತೇನೆ. ರಾಜಕಾರಣಿಗಳು ಮೃತಪಟ್ಟಾಗ ಅವರ ಮನೆಯವರನ್ನು ಚುನಾವಣೆಗೆ ನಿಲ್ಲಿಸಿ ಅನುಕಂಪದ ಆಧಾರದಲ್ಲಿ ಮತ ಪಡೆಯಲಾಗುತ್ತದೆ. ನೋವಿಗಿಂತ ಅಧಿಕಾರವೇ ಮುಖ್ಯವಾಯಿತೇ ಎಂದು ಪ್ರಶ್ನಿಸಿದ್ದೆ. ಅದರಾಚೆಗೆ ನನ್ನ ಹೇಳಿಕೆಯಲ್ಲಿ ಅರ್ಥವಿಲ್ಲ ಎಂದು ತಿಳಿಸಿದ್ದರು.

ಚುನಾವಣೆಯಲ್ಲಿ ಗೆದ್ದ ಬಳಿಕ ಪ್ರತಿಕ್ರಿಯಿಸಿದ್ದ ಗೀತಾ ಮಹಾದೇವ್ ಪ್ರಸಾದ್, ನಾನು ಗೆಲುವನ್ನು ನಿರೀಕ್ಷೆ ಮಾಡಿದ್ದೆ. ನಿರೀಕ್ಷೆಯಂತೆ ಜಯಗಳಿಸಿದ್ದೇನೆ. ಸಂಸದ ಪ್ರತಾಪ್ ಸಿಂಹ ಅವರು ಚುನಾವಣಾ ಪ್ರಚಾರದ ಸಮಯದಲ್ಲಿ ನನ್ನ ವಿರುದ್ಧ ನೀಡಿದ್ದ ಅವಹೇಳನಕಾರಿ ಹೇಳಿಕೆಯು ಸಹ ನನ್ನ ಜಯಕ್ಕೆ ಕಾರಣ. ಸಂಸದರಾಗಿ ಅವರು ಒಬ್ಬ ಮಹಿಳೆಯ ಬಗ್ಗೆ ಈ ರೀತಿಯಾಗಿ ಮಾತಾಡಿದರೆ ಯಾರೂ ಕ್ಷಮಿಸುವುದಿಲ್ಲ. ಕೇವಲ ಮಹಿಳೆಯರಷ್ಟೇ ಅಲ್ಲದೇ ಪುರಷರು ಸಹ ಇದನ್ನು ಖಂಡಿಸುತ್ತಾರೆ. ಪ್ರತಾಪ್ ಸಿಂಹ ಅವರಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳುವ ಮೂಲಕ ಸಂಸದರಿಗೆ ಟಾಂಗ್ ನೀಡಿದ್ದರು.

ಜನರು ನನ್ನ ಮೇಲೆ ನಂಬಿಕೆಯಿಟ್ಟು, ಗಲ್ಲಿಸಿದ್ದಾರೆ. ಮುಂದೆ ನಾನು ಮಹಾದೇವ ಪ್ರಸಾದ್ ಅವರ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸುತ್ತೇನೆ. ಪ್ರತಾಪ್ ಸಿಂಹ ತಮ್ಮ ಹೇಳಿಕೆಯಿಂದ ಸುಮಾರು 40 ಸಾವಿರ ಮತಗಳನ್ನು ಕಳೆದುಕೊಂಡಿದ್ದಾರೆ. ಜಯದ ಸಮಯದಲ್ಲಿ ಪ್ರತಾಪ್ ಸಿಂಹ ಅವರನ್ನು ಕ್ಷಮಿಸುತ್ತೇನೆ. ತಮ್ಮ ವಿವಾದಾತ್ಮಕ ಹೇಳಿಕೆ ನಂತರ ನನ್ನ ಮಗನಿಗೆ ಫೋನ್ ಮಾಡಿ ಕ್ಷಮೆ ಕೇಳಿದ್ದರು. ಇಂದು ನಿಮ್ಮ ಮಾಧ್ಯಮಗಳ ಮುಖಾಂತರ ಅವರನ್ನು ಕ್ಷಮಿಸಿದ್ದೇನೆ ಎಂದು ತಿಳಿಸುತ್ತೇನೆ ಎಂದು ಅವರು ಹೇಳಿದ್ದರು.

TAGGED:bjpelectiongundlupetnanjangudpratap simhaಕರ್ನಾಟಕಗುಂಡ್ಲುಪೇಟೆಚುನಾವಣೆಪ್ರತಾಪ್ ಸಿಂಹಬಿಎಸ್ ಯಡಿಯೂರಪ್ಪಬಿಜೆಪಿ
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
22 minutes ago
Shreyas Iyer 5
Cricket

ಕನ್ನಡಿಗ ಕೆಎಲ್‌ ರಾಹುಲ್‌ ರೆಕಾರ್ಡ್‌ ಆಟ ವ್ಯರ್ಥ – ಡೆಲ್ಲಿ ವಿರುದ್ಧ ಪಂಜಾಬ್‌ಗೆ 6 ವಿಕೆಟ್‌ಗಳ ಜಯ

Public TV
By Public TV
40 minutes ago
Public TV Vidhyapeeta 5
Bengaluru City

ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ – ಅದೃಷ್ಟವಂತ ವಿದ್ಯಾರ್ಥಿಗಳಿಗೆ ಬೈಸಿಕಲ್, ಲ್ಯಾಪ್‌ಟಾಪ್‌ ಗಿಫ್ಟ್‌

Public TV
By Public TV
1 hour ago
lungi ngidi Injury
Cricket

ಕ್ಯಾಚ್‌ ಹಿಡಿಯುವಾಗ ಕೆಳಗೆ ಬಿದ್ದ ಲುಂಗಿ ಎನ್‌ಗಿಡಿ ತಲೆಗೆ ತೀವ್ರ ಪೆಟ್ಟು – ಮೈದಾನಕ್ಕೆ ಬಂತು ಅಂಬುಲೆನ್ಸ್‌

Public TV
By Public TV
2 hours ago
Sara Govindu
Bengaluru City

ಚೇತನ್‌ ಒಬ್ಬ ಅರೆಹುಚ್ಚ, ನಿರುದ್ಯೋಗಿ, ಮುಠ್ಠಾಳ, ರಾಜ್ಯದಿಂದ ಗಡೀಪಾರು ಮಾಡ್ಬೇಕು – ಸಾರಾ ಗೋವಿಂದು ಕಿಡಿ

Public TV
By Public TV
2 hours ago
k.l.rahul
Cricket

IPLನಲ್ಲಿ ಇತಿಹಾಸ ಬರೆದ ಕನ್ನಡಿಗ ಕೆ.ಎಲ್.ರಾಹುಲ್‌; 150 ರನ್‌ ಗಳಿಸಿದ ಮೊದಲ ಭಾರತೀಯ – ಅಭಿಷೇಕ್‌ ದಾಖಲೆ ಉಡೀಸ್‌

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?