ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಗಳಿಗೆ ನನ್ನ ಧನ್ಯವಾದಗಳು. ಚಿತ್ರರಂಗದ ಮೇಲೆ ಅವರಿಗೆ ಪ್ರೀತಿಯಿದೆ. ಅವರು ಕೇಳಿದ್ದೆಲ್ಲಾ ಕೊಡುತ್ತಲೇ ಬಂದಿದ್ದಾರೆ ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು (Narasimhalu) ಕೃತಜ್ಞತೆ ಸಲ್ಲಿಸಿದರು.
ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್ಗಳಲ್ಲಿ ಏಕರೂಪ ಟಿಕೆಟ್ ದರ ನಿಗದಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, 2 ಬಾರಿ ಸಿಎಂ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೆವು. ಬಜೆಟ್ನಲ್ಲಿ ಅನೌನ್ಸ್ ಮಾಡಿದ್ದಾರೆ. ತುಂಬಾ ಸಂತೋಷವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಾಲಿನ ದರ 5 ರೂ. ಹೆಚ್ಚಳಕ್ಕೆ ಚಿಂತನೆ: ಭೀಮಾನಾಯ್ಕ್
Advertisement
Advertisement
1000 ರಿಂದ 1500 ರೂ. ಟಿಕೆಟ್ ದರ ಇದ್ದಾಗ ಸಾಮಾನ್ಯ ಜನ ಹೋಗಲು ಸಾಧ್ಯವಾಗುತ್ತಿರಲಿಲ್ಲ. ಸಿಂಗಲ್ ಸ್ಕ್ರೀನ್ ಹಾಗೂ ಮಲ್ಟಿಪ್ಲೆಕ್ಸ್ಗಳಲ್ಲಿ ಒಂದೇ ರೇಟ್ ಆದರೆ ಎಲ್ಲರಿಗೂ ನ್ಯಾಯ ಒದಗಿಸಿದಂತಾಗುತ್ತದೆ. ಏಕರೂಪ ಟಿಕೆಟ್ ದರ ನೆರೆ ರಾಜ್ಯಗಳಲ್ಲಿ ಈ ಮೊದಲೇ ಇತ್ತು. ನಮ್ಮ ರಾಜ್ಯದಲ್ಲಿ ಈಗ ಜಾರಿಗೆ ಬರುತ್ತಿದೆ. ಮೈಸೂರಿನಲ್ಲಿ ಫಿಲ್ಮ್ ಸಿಟಿ ಅನೌನ್ಸ್ ಮಾಡಿದ್ದಾರೆ. ಇಡೀ ಚಿತ್ರರಂಗ ಸಿಎಂಗೆ ಅಭಿನಂದನೆ ಸಲ್ಲಿಸುತ್ತದೆ ಎಂದರು. ಇದನ್ನೂ ಓದಿ: ಮೈಸೂರಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ 500 ಕೋಟಿ ಮೀಸಲು – ತವರು ಜಿಲ್ಲೆಗೆ ಸಿಎಂ ಭರ್ಜರಿ ಗಿಫ್ಟ್
Advertisement
Advertisement
ರಾಜ್ಯದಲ್ಲಿರುವ ಎಲ್ಲಾ ಮಲ್ಟಿಪ್ಲೆಕ್ಸ್ ಹಾಗೂ ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುವ ಪ್ರತಿ ಪ್ರದರ್ಶನಕ್ಕೆ ಟಿಕೆಟ್ ದರ 200 ರೂ.ಗಳಿಗೆ ಸೀಮಿತಗೊಳಿಸಲಾಗುವುದು ಎಂದು ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.