Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡದ ನಟಿಯರನ್ನ ಹಾಕೊಂಡ್ರೆ ಲಾಭ ಬರಲ್ವಾ: ನಾರಾಯಣ ಗೌಡ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕನ್ನಡದ ನಟಿಯರನ್ನ ಹಾಕೊಂಡ್ರೆ ಲಾಭ ಬರಲ್ವಾ: ನಾರಾಯಣ ಗೌಡ ಆಕ್ರೋಶ

Bengaluru City

ಕನ್ನಡದ ನಟಿಯರನ್ನ ಹಾಕೊಂಡ್ರೆ ಲಾಭ ಬರಲ್ವಾ: ನಾರಾಯಣ ಗೌಡ ಆಕ್ರೋಶ

Public TV
Last updated: May 22, 2025 9:14 pm
Public TV
Share
4 Min Read
Tamanna Bhatia 1
SHARE

– ತಮನ್ನಾ ರಾಯಭಾರಿ ನಿರ್ಧಾರ ಹಿಂಪಡೆಯದಿದ್ರೆ ತೀವ್ರ ಪ್ರತಿಭಟನೆ; ಕರವೇ ಎಚ್ಚರಿಕೆ

ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಪ್ರಾಥಮಿಕ ಗ್ರಾಹಕರು ಕರ್ನಾಟಕದ ಕನ್ನಡಿಗರಾಗಿದ್ದಾರೆ. ಕನ್ನಡ ನಟಿಯರನ್ನ ಹಾಕೊಂಡ್ರೆ ಲಾಭ ಬರಲ್ವಾ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ(Narayan Gowda) ಆಕ್ರೋಶ ಹೊರಹಾಕಿದ್ದಾರೆ.

ಪರಭಾಷಾ ನಟಿ ತಮನ್ನಾ ಭಾಟಿಯಾ(Tamanna Bhatia) ಅವರನ್ನು ಮೈಸೂರು ಸ್ಯಾಂಡಲ್ ಸೋಪ್‌ನ(Mysore Sandal Soap) ರಾಯಭಾರಿಯಾಗಿ ಮಾಡಿದ ಬಗ್ಗೆ ಮಾತನಾಡಿದರು. ಮೈಸೂರು ಸ್ಯಾಂಡಲ್ ಸೋಪ್ ಕಂಪನಿ ತನ್ನ ಬ್ರಾಂಡ್ ಅಂಬಾಸೆಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರೂ. ತೆತ್ತು ನೇಮಕ ಮಾಡಿರುವುದು ಅವಿವೇಕದ, ಅಸಂಬದ್ಧ, ಅನೈತಿಕ, ಬೇಜವಾಬ್ದಾರಿಯುತ ತೀರ್ಮಾನವಾಗಿದೆ ಕಿಡಿಕಾರಿದ್ದಾರೆ. ಇದನ್ನೂ ಓದಿ: ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮಿಲ್ಕಿ ಬ್ಯೂಟಿ ರಾಯಭಾರಿ – ಬರೋಬ್ಬರಿ 6.20 ಕೋಟಿ ಸಂಭಾವನೆ

ಇದು ಕರ್ನಾಟಕ ಸರ್ಕಾರದ ಸ್ವಾಮ್ಯದ ಕಂಪನಿ. 1916ರಲ್ಲಿ ಮೈಸೂರು ಸಂಸ್ಥಾನದ ಮಹಾರಾಜ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ್ದಾರೆ. ಈ ಕಂಪನಿಯು ಕರ್ನಾಟಕದಲ್ಲಿ(Karnataka) ಅತ್ಯಂತ ಜನಪ್ರಿಯ ಬ್ರಾಂಡ್‌ಗಳಲ್ಲಿ ಒಂದಾಗಿದೆ. ಇದರ ಪ್ರಾಥಮಿಕ ಗ್ರಾಹಕರು ಕನ್ನಡಿಗರಾಗಿದ್ದಾರೆ ಎನ್ನುವ ಕನಿಷ್ಠ ತಿಳಿವಳಿಕೆ ಈ ನೇಮಕ ಮಾಡುವಾಗ ಇರಲಿಲ್ಲವೇ? ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೌಲ್ಯವುಳ್ಳ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರೇ ಬೇಕಿತ್ತಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮೋದಿಜೀ ಪೊಳ್ಳು ಭಾಷಣ ನಿಲ್ಲಿಸಿ… ಕ್ಯಾಮೆರಾಗಳ ಮುಂದೆ ಮಾತ್ರ ನಿಮ್ಮ ರಕ್ತ ಏಕೆ ಕುದಿಯುತ್ತೆ? – ರಾಗಾ

ಈ ನೇಮಕಕ್ಕಾಗಿ ಕರ್ನಾಟಕ ಸರ್ಕಾರವು 6.20 ಕೋಟಿ ರೂ.ಗಳ ಭಾರೀ ಮೊತ್ತವನ್ನು ವ್ಯಯಿಸಿರುವುದು ಇನ್ನಷ್ಟು ಆಕ್ಷೇಪಾರ್ಹವಾಗಿದೆ. ಈ ನಿರ್ಧಾರದ ವಿರುದ್ಧ ನಮ್ಮ ತೀವ್ರ ವಿರೋಧವಿದೆ. ತಮನ್ನಾಗೆ ಸರ್ಕಾರವು 6.20 ಕೋಟಿ ರೂ. ವ್ಯಯಿಸಿರುವುದು ಸಂಪೂರ್ಣವಾಗಿ ಅನಗತ್ಯ ಮತ್ತು ಜವಾಬ್ದಾರಿಯಿಲ್ಲದ ನಿರ್ಧಾರವಾಗಿದೆ. ಈ ಹಣವನ್ನು ಕರ್ನಾಟಕದ ಜನರ ಒಳಿತಿಗಾಗಿ, ಉದಾಹರಣೆಗೆ ಶಿಕ್ಷಣ, ಆರೋಗ್ಯ, ಅಥವಾ ಉದ್ಯೋಗ ಸೃಷ್ಟಿಗೆ ಬಳಸಬಹುದಾಗಿತ್ತು. ಸರ್ಕಾರವು ಜನರ ತೆರಿಗೆ ಹಣವನ್ನು ಈ ರೀತಿ ವ್ಯರ್ಥವಾಗಿ ಖರ್ಚು ಮಾಡಿರುವುದು ಖಂಡನೀಯವಾಗಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಒಂದೇ ಕಾರ್ಯಕ್ರಮದಲ್ಲಿ ಕಾಣಿಸಕೊಂಡ ಮಾಜಿ ಅತ್ತೆ, ಸೊಸೆ – ಸಮಂತಾ ಮಾತಿಗೆ ಅಮಲಾ ಚಪ್ಪಾಳೆ

ಕರ್ನಾಟಕದಲ್ಲಿ ಅನೇಕ ಪ್ರತಿಭಾವಂತ ಮತ್ತು ಜನಪ್ರಿಯ ಕನ್ನಡ ನಟಿಯರು ಇದ್ದಾರೆ. ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದರೆ, ಕನ್ನಡಿಗರ ಮನಸ್ಸಿಗೆ ಹತ್ತಿರವಾಗುವುದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಬಹುದಾಗಿತ್ತು. ಆದರೆ ಕರ್ನಾಟಕ ಸರ್ಕಾರ ಮತ್ತು ಮೈಸೂರು ಸ್ಯಾಂಡಲ್ ಕಂಪನಿಯು ಕನ್ನಡ ನಟಿಯರನ್ನು ಕಡೆಗಣಿಸಿ ಬಾಲಿವುಡ್ ನಟಿಯನ್ನು ಆಯ್ಕೆ ಮಾಡಿರುವುದು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಿದೆ. ಕರ್ನಾಟಕದ ಸಾಂಸ್ಕೃತಿಕ ಗುರುತನ್ನು ಪ್ರತಿನಿಧಿಸುವ ಕಂಪನಿಯು ಸ್ಥಳೀಯ ಪ್ರತಿಭೆಗಳಿಗೆ ಮೊದಲ ಆದ್ಯತೆ ನೀಡಬೇಕಿತ್ತು ಎಂದು ಹೇಳಿದ್ದಾರೆ.

ಮೈಸೂರು ಸ್ಯಾಂಡಲ್‌ನ ಪ್ರಾಥಮಿಕ ಗ್ರಾಹಕರು ಕರ್ನಾಟಕದ ಕನ್ನಡಿಗರಾಗಿದ್ದಾರೆ. ಕನ್ನಡಿಗರಿಗೆ ತಮ್ಮ ಸಂಸ್ಕೃತಿ ಮತ್ತು ಭಾಷೆಯೊಂದಿಗೆ ಸಾವಯವ ಸಂಬಂಧವಿರುವ ಕನ್ನಡ ನಟಿಯರೊಂದಿಗೆ ಬ್ರಾಂಡ್ ಅನ್ನು ಬೆಳೆಸುವುದು ಸಹಜವಾಗಿ ಪರಿಣಾಮಕಾರಿಯಾಗಿರುತ್ತದೆ. ಆದರೆ ತಮನ್ನಾ ಅವರಂತಹ ಬಾಲಿವುಡ್ ನಟಿಯನ್ನು ಆಯ್ಕೆ ಮಾಡುವ ಮೂಲಕ ಕಂಪನಿಯು ಕನ್ನಡಿಗರ ಭಾವನೆಗಳಿಗೆ ಮತ್ತು ಸ್ಥಳೀಯ ಮಾರುಕಟ್ಟೆಯ ಸಂವೇದನೆಗೆ ಗೌರವ ನೀಡದಿರುವುದು ಆಕ್ಷೇಪಾರ್ಹವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೆನಿಶಾಗೆ ಕೊಲೆ ಬೆದರಿಕೆ – ಆರತಿ ಸಮಸ್ಯೆಗೆ ನಾನು ಕಾರಣ ಆಗಿದ್ರೆ ಕೋರ್ಟ್‌ ಮುಂದೆ ನಿಲ್ಲಿಸಿ ಎಂದ ಗಾಯಕಿ

ತಮನ್ನಾ ಕರ್ನಾಟಕದ ಸಂಸ್ಕೃತಿ, ಭಾಷೆ, ಅಥವಾ ಮೈಸೂರು ಸ್ಯಾಂಡಲ್‌ನ ಇತಿಹಾಸದೊಂದಿಗೆ ಯಾವುದೇ ನೇರ ಸಂಬಂಧ ಹೊಂದಿಲ್ಲ. ಇಂತಹ ಸ್ಥಿತಿಯಲ್ಲಿ ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆ ಮಾಡುವುದು ಸಂಪೂರ್ಣವಾಗಿ ಅಪ್ರಸ್ತುತವಾಗಿದೆ. ಹಿಂದಿ ಚಿತ್ರರಂಗದ ನಟಿಯರನ್ನು ಆಯ್ಕೆ ಮಾಡುವ ಮೂಲಕ ಕರ್ನಾಟಕದ ಸ್ಥಳೀಯ ಸಂಸ್ಕೃತಿಯ ಮೇಲೆ ಹಿಂದಿ ಸಂಸ್ಕೃತಿಯನ್ನು ಹೇರಲು ಪ್ರಯತ್ನಿಸುವುದು ಕರ್ನಾಟಕ ರಕ್ಷಣಾ ವೇದಿಕೆಗೆ ಸ್ವೀಕಾರಾರ್ಹವಲ್ಲ. ಮೈಸೂರು ಸ್ಯಾಂಡಲ್‌ನಂತಹ ಕರ್ನಾಟಕದ ಐತಿಹಾಸಿಕ ಬ್ರಾಂಡ್ ಕನ್ನಡಿಗರ ಗುರುತನ್ನು ಪ್ರತಿನಿಧಿಸುವ ವ್ಯಕ್ತಿಯನ್ನೇ ಆಯ್ಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: 2,200 ಕೋಟಿ ರೂ. ಭ್ರಷ್ಟಾಚಾರ ಕೇಸ್‌ – ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಕೆ

ಸರ್ಕಾರ ಕೂಡಲೇ ತಮನ್ನಾ ಅವರ ಬ್ರಾಂಡ್ ಅಂಬಾಸಿಡರ್ ನೇಮಕವನ್ನು ತಕ್ಷಣವೇ ರದ್ದುಗೊಳಿಸಬೇಕು. ಇದರ ಬ್ರಾಂಡ್ ಅಂಬಾಸಿಡರ್ ಆಗಿ ಕನ್ನಡ ನಟಿಯರನ್ನು ಆಯ್ಕೆ ಮಾಡಬೇಕು. ಕರ್ನಾಟಕ ಸರ್ಕಾರವು 6.20 ಕೋಟಿ ರೂ. ವೆಚ್ಚದ ಬಗ್ಗೆ ಸಾರ್ವಜನಿಕವಾಗಿ ಸ್ಪಷ್ಟನೆ ನೀಡಬೇಕು ಮತ್ತು ಈ ಹಣವನ್ನು ಕರ್ನಾಟಕದ ಜನರ ಒಳಿತಿಗಾಗಿ ಬಳಸಬೇಕು. ಭವಿಷ್ಯದಲ್ಲಿ ಸ್ಥಳೀಯ ಸಂಸ್ಕೃತಿ ಮತ್ತು ಭಾಷೆಗೆ ಗೌರವ ನೀಡುವಂತಹ ನಿರ್ಧಾರಗಳನ್ನು ಮಾತ್ರ ತೆಗೆದುಕೊಳ್ಳುವಂತೆ ಖಾತರಿ ನೀಡಬೇಕು ಎಂದು ಹೇಳಿದ್ದಾರೆ.

ಈ ನಿರ್ಧಾರವನ್ನು ತಕ್ಷಣವೇ ಹಿಂಪಡೆಯದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆಯು ತೀವ್ರ ಪ್ರತಿಭಟನೆಯನ್ನು ಆಯೋಜಿಸಲಿದೆ. ಕರ್ನಾಟಕ ಸರ್ಕಾರ ಮತ್ತು ಮೈಸೂರು ಸ್ಯಾಂಡಲ್ ಸೋಪ್ಸ್ ಕಂಪನಿಯು ಕನ್ನಡಿಗರ ಭಾವನೆಗಳಿಗೆ ಮನ್ನಣೆ ನೀಡಿ, ಸ್ಥಳೀಯ ಪ್ರತಿಭೆಗಳಿಗೆ ಆದ್ಯತೆ ನೀಡುವಂತೆ ಒತ್ತಾಯಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

TAGGED:bengaluruMysore Sandal SoapNarayan GowdaTamanna Bhatiaತಮನ್ನಾ ಭಾಟಿಯಾನಾರಾಯಣ ಗೌಡಬೆಂಗಳೂರುಮೈಸೂರು ಸ್ಯಾಂಡಲ್‌ ಸೋಪ್‌
Share This Article
Facebook Whatsapp Whatsapp Telegram

Cinema news

Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows

You Might Also Like

MK Stalin Vijay
Latest

Tamil Nadu Polls | ಸಿಎಂ ಸ್ಟಾಲಿನ್, ನಟ ವಿಜಯ್ ನಾಮಪತ್ರ ಸಲ್ಲಿಕೆ – ಶಕ್ತಿ ಪ್ರದರ್ಶನ

Public TV
By Public TV
18 minutes ago
KH Muniyappa 2
Bengaluru City

ಗ್ಯಾಸ್ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿ, ಪೆಟ್ರೋಲಿಯಂ ಸಚಿವರು ಮಾತಾಡಲಿ: ಮುನಿಯಪ್ಪ

Public TV
By Public TV
28 minutes ago
bus falls off bridge near badravati kagehalla
Crime

ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌ – ಮೂವರ ಕೈಕಾಲು ಮುರಿತ, ಹಲವರಿಗೆ ಗಾಯ

Public TV
By Public TV
32 minutes ago
Rupee hits another low Indian Rupee Hits Record Low Despite Robust Economic Growth
Latest

ಆರ್‌ಬಿಐ ನಿರ್ಧಾರದಿಂದ ಏರಿಕೆಯಾಗಿ ಮತ್ತೆ ಡಾಲರ್‌ ಮುಂದೆ ಪಲ್ಟಿ – ಫಸ್ಟ್‌ ಟೈಂ 95 ರೂ.ಗೆ ಕುಸಿದ ಮೌಲ್ಯ

Public TV
By Public TV
42 minutes ago
Flight Seat
Latest

ಏ.20ರಿಂದ ವಿಮಾನದ 60% ಸೀಟುಗಳ ಆಯ್ಕೆ ಫ್ರೀ ಆದೇಶ ಜಾರಿ: ಡಿಜಿಸಿಎ

Public TV
By Public TV
49 minutes ago
A young man committed suicide in Tarikere Chikkamagaluru
Chikkamagaluru

ಕೌಟುಂಬಿಕ ಕಲಹ – ಆಂಧ್ರ ಮೂಲದ ಯುವಕ ತರೀಕೆರೆಯಲ್ಲಿ ಆತ್ಮಹತ್ಯೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?