ಮಂಡ್ಯ: ನಾಮಪತ್ರ ಸಲ್ಲಿಸಲು ಬರೋವಾಗ ನನಗೆ ಜೆಡಿಎಸ್ ನವರು ಎಕ್ಕಡದಲ್ಲಿ ಹೊಡೆದರು. ಜೆಡಿಎಸ್ ಅಭ್ಯರ್ಥಿ ದೇವರಾಜು ಮುಂದಿನ ದಿನಗಳಲ್ಲಿ ಪರಿಣಾಮ ಎದುರಿಸುತ್ತಾರೆ ಎಂದು ಬಿಜೆಪಿ ಅಭ್ಯರ್ಥಿ, ಅನರ್ಹ ಶಾಸಕ ನಾರಾಯಣಗೌಡ ಗುಡುಗಿದ್ದಾರೆ.
ಇಂದು ಬಿಜೆಪಿ ಅಭ್ಯರ್ಥಿಯಾಗಿರುವ ನಾರಾಯಣಗೌಡರು ಚುನಾವಣಾ ನಾಮಪತ್ರ ಸಲ್ಲಿಸಲು ತಾಲೂಕು ಕಚೇರಿಗೆ ಆಗಮಿಸುತ್ತಿದ್ದರು. ಇತ್ತ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್, ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜು ಸಹ ಇಂದೇ ನಾಮಪತ್ರ ಸಲ್ಲಿಕೆಗೆ ತಾಲೂಕು ಕಚೇರಿಗೆ ಆಗಮಿಸಿದ್ದರು. ಮೂರು ಪಕ್ಷಗಳ ಬೆಂಬಲಿಗರು ಒಂದೆಡೆ ಸೇರಿದ್ದರಿಂದ ಘೋಷಣೆಗಳು ಜೋರಾಗಿದ್ದವು. ಈ ವೇಳೆ ಕೆಲ ಕಿಡಿಗೇಡಿಗಳು ನಾರಾಯಣಗೌಡರ ಮೇಲೆ ಚಪ್ಪಲಿ ಎಸೆದಿದ್ದಾರೆ. ಇದನ್ನೂ ಓದಿ: ಜೆಡಿಎಸ್ ಕೋಟೆ ಛಿದ್ರ ಮಾಡಲು ನಾರಾಯಣಗೌಡ ಮಾಸ್ಟರ್ ಪ್ಲಾನ್!
ಈ ಕುರಿತು ಪ್ರತಿಕ್ರಿಯಿಸಿರುವ ನಾರಾಯಣಗೌಡ, ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜು ಅವರ ಸೋದರ ತಮ್ಮ ಬೆಂಬಲಿಗರೊಂದಿಗೆ ಹಲ್ಲೆ ನಡೆಸಿದ್ದಾರೆ. ನನಗೆ ಎಕ್ಕಡದಲ್ಲಿ ಹೊಡೆಸಿ, ಜೊತೆಯಲ್ಲಿದ್ದ ಸಚಿವ ಮಾಧುಸ್ವಾಮಿ ಅವರನ್ನು ನೂಕಾಡಿದ್ದಾರೆ. ಚಪ್ಪಲಿಯಲ್ಲಿ ಹೊಡಿಸುವ ಅಧಿಕಾರ ಯಾರಿಗಿದೆ ಎಂದು ಪ್ರಶ್ನೆ ಮಾಡಿ ಮುಂದಿನ ದಿನಗಳಲ್ಲಿ ಎಲ್ಲರು ಪರಿಣಾಮ ಎದುರಿಸಲಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು. ಇದನ್ನೂ ಓದಿ: ಹ್ಯಾಟ್ರಿಕ್ ಗೆಲುವಿಗಾಗಿ ದೇವಿ ಮುಂದೆ ಬಿ ಫಾರಂ ಇಟ್ಟು ಪೂಜೆ ಸಲ್ಲಿಸಿದ ನಾರಾಯಣಗೌಡ
ನಾಮಪತ್ರ ಸಲ್ಲಿಸಿ ಹೊರ ಬಂದ ಕೂಡಲೇ ಜೆಡಿಎಸ್ ಕಾರ್ಯಕರ್ತರ ಗುಂಪು ‘ಬಾಂಬೆ ಕಳ್ಳ’ ಎಂದು ಕೂಗಲು ಆರಂಭಿಸಿದರು. ಕಾರ್ಯಕರ್ತರ ಗಲಾಟೆ ಹೆಚ್ಚಾಗುತ್ತಿದ್ದಂತೆ ಪೊಲೀಸರು ತಮ್ಮ ವಾಹನದಲ್ಲಿಯೇ ನಾರಾಯಣಗೌಡರನ್ನು ಸುರಕ್ಷಿತವಾಗಿ ಕರೆದುಕೊಂಡು ಹೋದರು. ಇದನ್ನೂ ಓದಿ: ರಾಜೀನಾಮೆ ಕೊಡೋಕೆ ಹೇಳಿದ್ದೇ ಬಿಎಸ್ವೈ- ಸ್ಫೋಟಕ ರಹಸ್ಯ ಬಿಚ್ಚಿಟ್ಟ ನಾರಾಯಣಗೌಡ
ಬಿಜೆಪಿ ಕಾರ್ ಮುಂದೆ ಕಾಂಗ್ರೆಸ್ ಪಟಾಕಿ: ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರು ಮುಖಾಮುಖಿ ಆಗುತ್ತಿದ್ದಂತೆ ಪಕ್ಷದ ಪರವಾಗಿ ಘೋಷಣೆಯ ಧ್ವನಿ ಹೆಚ್ಚಾಯ್ತು. ಇತ್ತ ಬಿಜೆಪಿ ಮೆರವಣಿಗೆ ಸಾಗುತ್ತಿದ್ದ ವಾಹನಗಳ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಹೊಡೆದಿದ್ದರಿಂದ ಗಲಾಟೆಯ ಹಂತಕ್ಕೆ ತಲುಪಿತ್ತು. ಕೂಡಲೇ ಎಚ್ಚೆತ್ತ ಪೊಲೀಸರು ಗುಂಪುಗಳನ್ನು ಚದುರಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಿದರು. ಇದನ್ನೂ ಓದಿ: ಬಿಜೆಪಿಯಲ್ಲಿ ಆಗುತ್ತಿರುವ ಕೆಲಸ ಹೆಚ್ಡಿಕೆ ಸರ್ಕಾರದಲ್ಲಿ ಆಗಿದ್ದರೆ, ನಾನು ಅಲ್ಲೆ ಇರುತ್ತಿದ್ದೆ: ನಾರಾಯಣಗೌಡ
ಬಿಜೆಪಿ ಅಭ್ಯರ್ಥಿಯಾಗಿರುವ ನಾರಾಯಣ ಗೌಡರಿಗೆ ಸಚಿವ ಮಾಧುಸ್ವಾಮಿ, ಸಿಎಂ ಪುತ್ರ ವಿಜಯೇಂದ್ರ, ಶಾಸಕ ಪ್ರೀತಂಗೌಡ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದರು. ಇತ್ತ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಅವರಿಗೆ ಕೇಂದ್ರದ ಮಾಜಿ ಸಚಿವ ಕೆ.ರೆಹಮಾನ್ ಖಾನ್, ಮಾಜಿ ಸಚಿವರಾದ ಚಲುವರಾಯಸ್ವಾಮಿ, ನರೇಂದ್ರ ಸ್ವಾಮಿ, ಪತ್ನಿ ರಮಾಮಣಿ ಸಾಥ್ ನೀಡಿದರು. ಜೆಡಿಎಸ್ ಅಭ್ಯರ್ಥಿ ದೇವರಾಜುಗೆ ಮಾಜಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ, ಜಿಪಂ ಸದಸ್ಯ ಮಂಜುನಾಥ್ ಸಾಥ್ ನೀಡಿದರು. ಇದನ್ನೂ ಓದಿ: ಅನರ್ಹ ಶಾಸಕ ನಾರಾಯಣಗೌಡರನ್ನ ಹಾಡಿ ಹೊಗಳಿದ ಬಿಎಸ್ವೈ