Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಭಿವೃದ್ದಿಗಿಂತ ಶಾಸಕರನ್ನು ಸಮಾಧಾನಪಡಿಸುವುದೇ ಸಿಎಂಗೆ ದೊಡ್ಡ ಕೆಲಸವಾಗುತ್ತೆ- ನಾರಾಯಣಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಅಭಿವೃದ್ದಿಗಿಂತ ಶಾಸಕರನ್ನು ಸಮಾಧಾನಪಡಿಸುವುದೇ ಸಿಎಂಗೆ ದೊಡ್ಡ ಕೆಲಸವಾಗುತ್ತೆ- ನಾರಾಯಣಸ್ವಾಮಿ

Karnataka

ಅಭಿವೃದ್ದಿಗಿಂತ ಶಾಸಕರನ್ನು ಸಮಾಧಾನಪಡಿಸುವುದೇ ಸಿಎಂಗೆ ದೊಡ್ಡ ಕೆಲಸವಾಗುತ್ತೆ- ನಾರಾಯಣಸ್ವಾಮಿ

Public TV
Last updated: December 16, 2019 10:53 pm
Public TV
Share
2 Min Read
narayanaswamy
SHARE

– ಶರತ್ ಬಚ್ಚೆಗೌಡ ಪಕ್ಷಕ್ಕೆ ಬಂದ್ರೆ ಸ್ವಾಗತ
– ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಲಿ

ಕೋಲಾರ: ಬಿಜೆಪಿ ಸರ್ಕಾರದಲ್ಲಿ ಸಿಎಂ ಯಡಿಯೂರಪ್ಪಗೆ ರಾಜ್ಯದ ಅಭಿವೃದ್ಧಿಗಿಂತ ತಮ್ಮ ಪಕ್ಷದ ಶಾಸಕರನ್ನು ಸಮಾದಾನ ಪಡಿಸುವುದೇ ದೊಡ್ಡ ಕೆಲಸವಾಗುತ್ತದೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

vlcsnap 2019 12 16 22h36m06s88

ಜಿಲ್ಲಾ ಪಂಚಾಯತ ಕೆಡಿಪಿ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ಸಿನಲ್ಲಿ ಅಧಿಕಾರ ಪಡೆದುಕೊಂಡವರು ಬಿಜೆಪಿಗೆ ಹೋಗಿದ್ದಾರೆ, ಹೊಸ ನೀರು ಹೋದಮೇಲೆ ಹಳೆ ನೀರಿಗೆ ಅಲ್ಲಿ ಬೆಲೆ ಇಲ್ಲ ಹಾಗಾಗಿ ಬಿಜೆಪಿಯಲ್ಲಿ ಸಚಿವ ಸಂಪುಟ ವಿಚಾರವಾಗಿ ಗೊಂದಲ ಮುಂದುವರೆಯುತ್ತದೆ. ಎಂಟಿಬಿಗೆ ಬಿಜೆಪಿಯಲ್ಲಿ ಸ್ಥಾನಮಾನ ಕೊಡಲು ಸಾಧ್ಯವೇ ಇಲ್ಲ. ಗೆದ್ದಿರುವವರಿಗೆ ಸ್ಥಾನಮಾನ ಕೊಡುವುದೇ ಕಷ್ಟವಾಗಿದೆ. ಹಳಬರು-ಹೊಸಬರನ್ನು ಒಟ್ಟಾಗಿ ಕರೆದುಕೊಂಡು ಹೋಗುವುದೇ ಸಿಎಂಗೆ ಸರ್ಕಸ್ ಆಗುತ್ತದೆ ಎಂದರು.

vlcsnap 2019 12 16 22h43m11s248 e1576516609413

ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ನೂತನ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್‍ಗೆ ಬಂದರೆ ಸ್ವಾಗತಿಸುತ್ತೇವೆ. ಸ್ವತಂತ್ರವಾಗಿ ಸ್ಪರ್ಧಿಸಿ ಗೆದ್ದಿರುವ ಶರತ್ ಏಕೆ ಕಾಂಗ್ರೆಸ್‍ಗೆ ಬರಬಾರದು ಎಂದು ಪ್ರಶದನಿಸಿದರು. ಇದೇ ವೇಳೆ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡುವಂತೆ ಹೈಕಮಾಂಡ್‍ಗೆ ಒತ್ತಾಯ ಮಾಡುತ್ತೇನೆ ಎಂದರು.

ಸಂಸದ, ಶಾಸಕರ ನಡುವೆ ವಾಗ್ವಾದ
ಕೆಡಿಪಿ ಸಭೆಯಲ್ಲಿ ಸಂಸದ ಮುನಿಸ್ವಾಮಿ ಹಾಗೂ ಮಾಲೂರು ಕಾಂಗ್ರೇಸ್ ಶಾಸಕ ಹಾಗೂ ಕೋಲಾರ ಹಾಲು ಒಕ್ಕೂಟದ ಅಧ್ಯಕ್ಷ ನಂಜೇಗೌಡ ನಡುವೆ ಏರು ಧ್ವನಿಯಲ್ಲಿ ವಾಗ್ವಾದ ನಡೆಯಿತು. ಕೆಎಂಎಫ್ ನಲ್ಲಿ ಸಾಕಷ್ಟು ಅವ್ಯವಹಾರ ನಡೆಯುತ್ತಿದೆ ಎಂದು ಸಂಸದ ಮುನಿಸ್ವಾಮಿಗೆ ಆರೋಪಿಸಿದರು. ಇದಕ್ಕೆ ಉತ್ತರಿಸುವ ವೇಳೆ ಶಾಸಕರು ಏಕವಚನದಲ್ಲಿ ಮಾತನಾಡಿ ನೀನು ಎಂದು ಸಂಭೋಧಿಸಿದರು. ಇದಕ್ಕೆ ಕೋಪಗೊಂಡ ಸಂಸದರು ನ್ಯಾಯವಾಗಿ ಮಾತನಾಡಿ ಎಂದು ಎಚ್ಚರಿಕೆ ನೀಡಿದರು. ಈ ವೇಳೆ ಸಂಸದರು ಹಾಗೂ ಶಾಸಕರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ನಂತರ ಸಭೆಯಲ್ಲಿದ್ದ ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಮತ್ತು ಸಚಿವ ನಾಗೇಶ್ ಸಮಾಧಾನ ಪಡಿಸಿದರು. ನಂತರ ಸಭೆಯಲ್ಲಿ ಒಬ್ಬರಿಗೊಬ್ಬರು ಸಮರ್ಥಿಸಿಕೊಂಡರು. ಮಧ್ಯಾಹ್ನದ ಊಟವನ್ನು ಇಬ್ಬರೂ ಜೊತೆಯಲ್ಲೆ ಸವಿದರು.

vlcsnap 2019 12 16 22h45m37s180 e1576516712901

ಉಸ್ತುವಾರಿ ಸಚಿವರ ಮೌನ
ಸಂಸದರ ಜೊತೆ ಮಾತನಾಡುತ್ತ ಕುಳಿತ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ನಾಗೇಶ್ ಬದಲಾಗಿ ಇಡೀ ಸಭೆಯನ್ನು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ನಡೆಸಿಕೊಟ್ಟರು. ಸಚಿವ ನಾಗೇಶ್ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮೂರು ತಿಂಗಳ ನಂತರ ಮೂರು ಬಾರಿ ದಿನಾಂಕ ನಿಗದಿ ಮಾಡಿ ನಂತರ ಮುಂದೂಡಿ ಕೊನೆಗೆ ಇಂದು ಸಭೆ ನಡೆಸಿದರು. ಆದರೆ ನಡೆಸಿಕೊಟ್ಟವರು ಮಾತ್ರ ನಾರಾಯಣಸ್ವಾಮಿ.

ಸಭೆಯಲ್ಲಿ ಪ್ರತಿ ವಿಷಯದ ಮೇಲೆ ಚರ್ಚೆ ಬಂದಾಗಲೂ ಅಧಿಕಾರಿಗಳನ್ನು ಪ್ರಶ್ನೆ ಮಾಡಿ ಸಚಿವರೇ ಅದೇಶ ನೀಡುತ್ತಿದ್ದರು. ಆದರೆ ಈ ಬಾರಿ ನಾರಾಯಣಸ್ವಾಮಿಯವರು ಮಾಡಿದ್ದಾರೆ.

ಈ ವೇಳೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ ಜನಪ್ರತಿನಿಧಿಗಳಿಗೆ ಸರಿಯಾಗಿ ಶಿಷ್ಟಾಚಾರ ಪಾಲನೆಯಾಗುತ್ತಿಲ್ಲ. ಕೋಲಾರ ತಾಲೂಕು ವಡಗೂರು ಗ್ರಾಮದಲ್ಲಿ ರಾಜೀವ್‍ಗಾಂಧಿ ಸೇವಾ ಕೇಂದ್ರವನ್ನು ನನ್ನ ಗಮನಕ್ಕೆ ತರದೆ ಉದ್ಘಾಟನೆ ಮಾಡಲಾಗಿದೆ ಎಂದು ಆರೋಪಿಸಿ ಶಿಷ್ಟಾಚಾರ ಉಲ್ಲಂಘನೆ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು. ಇದಕ್ಕೆ ಸಭೆಯಲ್ಲಿದ್ದ ಎಲ್ಲ ಜನಪ್ರತಿನಿಧಿಗಳು ಧ್ವನಿಗೂಡಿಸಿದರು. ಜಿಲ್ಲಾಧಿಕಾರಿಗಳು ಉತ್ತರಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

vlcsnap 2019 12 16 22h45m55s102

ಸಭೆಗೂ ನಮಗೂ ಸಂಬಂಧವೇ ಇಲ್ಲವೆಂದು ಕುಳಿತಿದ್ದ ಅಧಿಕಾರಿಗಳು, ಕೆಲವರು ನಿದ್ದೆಗೆ ಜಾರಿದರೆ, ಬಹುತೇಕರು ಮೊಬೈಲ್ ನಲ್ಲೇ ಮುಳುಗಿದ್ದರು. ಸಭೆಯಲ್ಲಿ ಜನರ ಸಮಸ್ಯೆಗಳಿಗಿಂತ ಹೆಚ್ಚಾಗಿ ಶಾಸಕರು ಮತ್ತು ಸಚಿವರು ತಮ್ಮ ಸಮಸ್ಯೆಗಳ ಬಗ್ಗೆಯೇ ಚಿಂತಿಸಿದ್ದು, ಮತ್ತೊಂದು ವಿಶೇಷವಾಗಿತ್ತು.

TAGGED:KDP meetingKolarministersMLA'sMPsofficersPublic TVಅಧಿಕಾರಿಗಳುಕೆಡಿಪಿ ಸಭೆಕೋಲಾರಪಬ್ಲಿಕ್ ಟಿವಿಶಾಸಕರುಸಚಿವರುಸಂಸದರು
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

cha
Crime

ಕಾನ್‌ಸ್ಟೆಬಲ್‌ ಪ್ರೇಯಸಿಯಿಂದ ರಾದ್ಧಾಂತ; ಪೊಲೀಸ್‌ ಮನೆಗೆ ನುಗ್ಗಿ ಆತನ ಪತ್ನಿ, ಮಗನಿಗೆ ಚಾಕುವಿನಿಂದ ಇರಿದು ಹತ್ಯೆ

Public TV
By Public TV
43 minutes ago
Siddaramaiah 3
Bengaluru City

ಸಚಿವ ಸಧಾಕರ್‌ಗೆ ಇನ್ನೂ ಪ್ರಜ್ಞೆ ಬಂದಿಲ್ಲ: ಸಿದ್ದರಾಮಯ್ಯ

Public TV
By Public TV
51 minutes ago
Supreme Court 1
Court

ನವವೃಂದಾವನ ಗಡ್ಡೆಯ ಪೂಜೆ ವಿವಾದಕ್ಕೆ ತೆರೆ ಎಳೆದ ಸುಪ್ರೀಂಕೋರ್ಟ್

Public TV
By Public TV
60 minutes ago
devendra fadnavis
Karnataka

ಮರಾಠಿಗೆ ಆದ್ಯತೆ ನೀಡ್ಬೇಕು, ಆದ್ರೆ ಭಾಷೆಯ ಹೆಸರಲ್ಲಿ ಹಿಂಸಾಚಾರ ಸಹಿಸಲ್ಲ: ದೇವೇಂದ್ರ ಫಡ್ನವೀಸ್

Public TV
By Public TV
1 hour ago
Election Commission
Latest

ಪ.ಬಂಗಾಳ ಚುನಾವಣೆ ವೇಳೆ ದುರ್ನಡತೆ – ಐವರು ಪೊಲೀಸ್ ಅಧಿಕಾರಿಗಳನ್ನ ಅಮಾನತುಗೊಳಿಸಿ ಶಿಸ್ತು ಕ್ರಮಕ್ಕೆ ನಿರ್ದೇಶಿಸಿದ EC

Public TV
By Public TV
2 hours ago
a huge tree fell in front of a moving car in aldur chikkamagaluru
Chikkamagaluru

ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ – ಪ್ರಯಾಣಿಕರು ಜಸ್ಟ್‌ ಮಿಸ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?