Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಾಕ್‍ಡೌನ್‍ನಿಂದ ಸಂಕಷ್ಟದಲ್ಲಿದ್ದ ಕೊಪ್ಪಳದ ಗ್ರಾಮಸ್ಥರ ಕೈ ಹಿಡಿದ ನರೇಗಾ ಯೋಜನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಲಾಕ್‍ಡೌನ್‍ನಿಂದ ಸಂಕಷ್ಟದಲ್ಲಿದ್ದ ಕೊಪ್ಪಳದ ಗ್ರಾಮಸ್ಥರ ಕೈ ಹಿಡಿದ ನರೇಗಾ ಯೋಜನೆ

Districts

ಲಾಕ್‍ಡೌನ್‍ನಿಂದ ಸಂಕಷ್ಟದಲ್ಲಿದ್ದ ಕೊಪ್ಪಳದ ಗ್ರಾಮಸ್ಥರ ಕೈ ಹಿಡಿದ ನರೇಗಾ ಯೋಜನೆ

Public TV
Last updated: April 27, 2020 7:36 pm
Public TV
Share
3 Min Read
kpl narega
SHARE

ಕೊಪ್ಪಳ: ಕೊರೊನಾ ಲಾಕ್‍ಡೌನ್ ಜಾರಿಯಲ್ಲಿರುವ ಸಂಕಷ್ಟದ ಸ್ಥಿತಿಯಲ್ಲಿ ಗ್ರಾಮೀಣ ಭಾಗದ ಕೂಲಿಕಾರರಿಗೆ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ, ಜಿಲ್ಲೆಯ ಪ್ರತಿ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಮತ್ತು ಕೃಷಿ, ತೋಟಗಾರಿಕೆ ಇಲಾಖೆಗಳಿಂದ ಕೂಲಿ ಆಧಾರಿತ ಕಾಮಗಾರಿಗಳನ್ನು ಗುರುತಿಸಿಸಲಾಗಿದೆ. ಅಲ್ಲದೇ ಕೋವಿಡ್-19ರ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕೂಲಿಕಾರರಿಗೆ ಕೆಲಸವನ್ನು ನೀಡಲಾಗಿದೆ ಎಂದು ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ ತಿಳಿಸಿದ್ದಾರೆ.

ಕೊಪ್ಪಳ ತಾಲೂಕಿನ ಇರಕಲ್ಲಗಡಾ, ಹುಲಿಗಿ, ಅಳವಂಡಿ, ಬೆಟಗೇರಿ, ಹಲಗೇರಿ, ಬಿಸರಳ್ಳಿ, ಗುಳದಳ್ಳಿ, ಕಲ್ತಾವರಗೇರಾ, ಚಿಕ್ಕಬೊಮ್ಮನಾಳ, ಹಿರೇಬೊಮ್ಮನಾಳ, ಗೊಂಡಬಾಳ, ಕುಷ್ಟಗಿ ತಾಲೂಕಿನ ಶಿರಗುಂಪಿ, ಬಿಜಕಲ್, ಹೂಲಗೇರಾ, ಚಳಗೇರಾ, ಹಿರೇಬನ್ನಿಗೊಳ, ತಳುವಗೇರಾ, ಹನುಮನಾಳ, ಬೆನಕನಾಳ, ಮಾಲಗಿತ್ತಿ, ನಿಲೋಗಲ್, ಜುಮಲಾಪುರ, ಕಿಲ್ಲಾರಹಟ್ಟಿ, ಮೆಣೇಧಾಳ, ಯಲಬುರ್ಗಾ ತಾಲೂಕಿನ ಮುಧೋಳ, ಬಂಡಿ, ತುಮ್ಮರಗುದ್ದಿ, ಬಳೂಟಗಿ, ಬೇವೂರು, ಗೆದಗೇರಿ, ಹಿರೇವಂಕಲಕುಂಟಾ, ಚಿಕ್ಕೊಪ್ಪಾ, ಗಂಗಾವತಿ ತಾಲೂಕಿನ ಮುಸಲಾಪುರ, ಹುಲಿಹೈದರ, ಬಸರಿಹಾಳ, ಗೌರಿಪುರ, ಚಿಕ್ಕಮಾದಿನಾಳ, ಸುಳೇಕಲ್, ಆಗೋಲಿ, ನವಲಿ ಗ್ರಾಮ ಪಂಚಾಯ್ತಿಗಳಲ್ಲಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನಾಲಾ ಅಭಿವೃದ್ಧಿ ಇನ್ನೂ ಮುಂತಾದ ಕೂಲಿ ಆಧಾರಿತ ಕಾಮಗಾರಿಗಳಲ್ಲಿ ಕೆಲಸ ಒದಗಿಸಿ ಸಕಾಲದಲ್ಲಿ ಕೂಲಿ ಹಣ ಪಾವತಿಗೆ ಕ್ರಮವಹಿಸಲಾಗಿದೆ. ಸರ್ಕಾರದ ಆದೇಶದಂತೆ 5 ಜನರಿಗಿಂತ ಹೆಚ್ಚು ಕೂಲಿಕಾರರು ಕೆಲಸ ನಿರ್ವಹಿಸದಂತೆ ನಿಗಾವಹಿಸಿ ಮತ್ತು ಪರಸ್ಪರ ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುವಂತೆ ನಿಗಾವಹಿಸಲಾಗುತ್ತಿದೆ.

kpl narega 4

ಕೃಷಿಗೆ ಪೂರಕ ನರೇಗಾ ಯೋಜನೆ :
ರೈತರು ತಮ್ಮ ಸ್ವಂತ ಜಮೀನುಗಳಲ್ಲಿ ಮುಂಗಾರು ಹಂಗಾಮಿಗೆ ಪೂರ್ವತಯಾರಿ ಮಾಡಿಕೊಳ್ಳುತ್ತಿದ್ದಾರೆ. ಅದರಂತೆ ಜಿಲ್ಲೆಯಲ್ಲಿ ನೀರಾವರಿ ಇಲ್ಲದ ಪ್ರದೇಶಗಳಲ್ಲಿ ಕೃಷಿ ಇಲಾಖೆಯಿಂದ ಕ್ಷೇತ್ರ ಬದು ಮತ್ತು ಕಂದಕ ಬದು ನಿರ್ಮಾಣ, ಕೃಷಿ ಹೊಂಡ ನಿರ್ಮಾಣ ಕಾಮಗಾರಿಗಳಲ್ಲಿ ಕೆಲಸ ನೀಡಲಾಗಿದೆ.

ನೀರಾವರಿ ಇರುವ ಪ್ರದೇಶಗಳಲ್ಲಿ ರೈತರು ತಮ್ಮ ತಮ್ಮ ಹೊಲಗಳಲ್ಲಿ ಬದು ನಿರ್ಮಾಣ, ಕೃಷಿ ಹೊಂಡ ಕಾಮಗಾರಿಗಳನ್ನು ನಿರ್ಮಾಣ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಮಳೆಗಾಲದಲ್ಲಿ ನೀರು ಸಂಗ್ರಹವಾಗಿ ಅಂತರ್ಜಲ ಹೆಚ್ಚಿಸಿಕೊಳ್ಳಲು ಮತ್ತು ಕೃಷಿ ಚಟುವಟಿಕೆಗಳಿಗೆ ಪ್ರಯೋಜನಕಾರಿಯಾಗಿವೆ.

kpl narega 2

ಸಂಕಷ್ಟದ ಜನತೆಗೆ ಪರಿಹಾರವಾದ ನರೇಗಾ:
ಕೊರೊನಾ ಸಂಕಷ್ಟದಿಂದ ಎಲ್ಲಾ ಕಡೆ ಉದ್ಯೋಗಗಳು ಸ್ಥಗಿತಗೊಂಡಿವೆ. ಉದ್ಯೋಗಕ್ಕೆಂದು ಮಹಾನಗರಗಳಿಗೆ ವಲಸೆ ಹೋದ ಅನೇಕ ಕೂಲಿಕಾರರು ತಮ್ಮ ಗ್ರಾಮಗಳಿಗೆ ಮರಳಿದ್ದಾರೆ. ಉದ್ಯೋಗವಿಲ್ಲದೆ ಕುಳಿತುಕೊಂಡಿದ್ದ ಗ್ರಾಮಸ್ಥರಿಗೆ, ಕೃಷಿ ಕಾರ್ಮಿಕರಿಗೆ, ರೈತರಿಗೆ ಮಹಾತ್ಮಗಾಂಧಿ ನರೇಗಾ ಯೋಜನೆಯಿಂದ ಸ್ವಗ್ರಾಮಗಳಲ್ಲಿ ಉದ್ಯೋಗವನ್ನು ಒದಗಿಸಲಾಗಿದೆ. ಇದರಿಂದ ಜನರು ಆರ್ಥಿಕವಾಗಿ ಕೊಂಚ ಗಟ್ಟಿಯಾಗಿದ್ದಾರೆ. ನರೇಗಾ ಯೋಜನೆಯಡಿ ಒಂದು ದಿನಕ್ಕೆ ಪ್ರಸ್ತುತ 275 ರೂಪಾಯಿಗಳನ್ನು ನೀಡಲಾಗುತ್ತಿದೆ. ಕೆಲಸಕ್ಕೆ ಬರುವರರು ತಮ್ಮದೇ ಗುದ್ದಲಿ, ಸಲಕೆ ತಂದರೆ ಹೆಚ್ಚುವರಿಯಾಗಿ 10 ರೂಪಾಯಿ ಸೇರಿ ಒಟ್ಟು 285 ರೂಪಾಯಿಗಳನ್ನು ನೀಡಲಾಗುತ್ತದೆ.

ಈಗಾಗಲೇ ಜಿಲ್ಲೆಯಲ್ಲಿ 52,655 ಮಾನವ ದಿನಗಳನ್ನು ಸೃಜಿಸಲಾಗಿದೆ. ಇನ್ನೂ ಹೆಚ್ಚಿನ ಪ್ರಗತಿ ಸಾಧಿಸುವ ಗುರಿಯನ್ನು ಹೊಂದಲಾಗಿದೆ. ಕೋವಿಡ್-19ರ ಹಿನ್ನೆಲೆಯಲ್ಲಿ ನಗರ ಪ್ರದೇಶಗಳಲ್ಲಿನ ಗ್ರಾಮೀಣ ಕೂಲಿಕಾರರು ತಮ್ಮ ಗ್ರಾಮಗಳಿಗೆ ಹಿಂದಿರುಗುತ್ತಿದ್ದು, ಅವರು ಜಾಬ್‍ಕಾರ್ಡ ಕೇಳಿದಲ್ಲಿ ತುರ್ತಾಗಿ ಜಾಬ್‍ಕಾರ್ಡ ಒದಗಿಸಿ ಕೆಲಸ ನೀಡಲಾಗಿದೆ. ಪ್ರತಿ ದಿನ ಕೂಲಿಕಾರರು ಸ್ಥಳದಲ್ಲಿ ಕೆಲಸ ಪ್ರಾರಂಭಿಸುವ ಮುನ್ನ ಕೋವಿಡ್-19ರ ಕುರಿತು ಅರಿವು ಮೂಡಿಸುವ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಗುತ್ತಿದೆ. ಕೆಲಸದ ಸ್ಥಳದಲ್ಲಿ ಕುಡಿಯುವ ನೀರು, ಕೈತೊಳೆಯಲು ನೀರು ಹಾಗೂ ಸಾಬೂನು, ನೆರಳಿನ ವ್ಯವಸ್ಥೆ, ಮಕ್ಕಳ ಪಾಲನೆಗೆ ವ್ಯವಸ್ಥೆ, ಪ್ರಥಮ ಚಿಕಿತ್ಸಾ ಸೌಲಭ್ಯ, ಸ್ಯಾನಿಟೈಜರ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

kpl narega 3

ತಾಂತ್ರಿಕ ಸಹಾಯಕರು, ಬೇರ್ ಫುಟ್ ಟೆಕ್ನಿಷಿಯನ್, ಕಾಯಕ ಬಂಧುಗಳನ್ನು ನೇಮಿಸಿ ಕೂಲಿಕಾರರಲ್ಲಿ ನೆಗಡಿ, ಕೆಮ್ಮು, ಜ್ವರ ಇತ್ಯಾದಿ ಅನಾರೋಗ್ಯ ಕಂಡುಬಂದಲ್ಲಿ ಸಮೀಪದ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಪರೀಕ್ಷೆಗೆ ಹಾಗೂ ವೈದ್ಯಕೀಯ ಚಿಕಿತ್ಸೆ ತೆಗೆದುಕೊಳ್ಳಲು ಸೂಚಿಸಲಾಗುತ್ತಿದೆ. ಆದ್ದರಿಂದ ಜಿಲ್ಲೆಯ ಗ್ರಾಮೀಣ ಭಾಗದ ಕೂಲಿಕಾರರು ಕೊರೊನಾ ವೈರಸ್ ಹರಡುವುದನ್ನು ತಡೆಯಲು ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಿದ್ದು, ಸ್ವಪ್ರೇರಿತರಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

TAGGED:Department of AgriculturekoppalalaboursLockdownnaregaPublic TVಕೂಲಿಕಾರ್ಮಿಕರುಕೃಷಿ ಇಲಾಖೆಕೊಪ್ಪಳಜಿಲ್ಲಾ ಪಂಚಾಯ್ತಿನರೇಗಾಪಬ್ಲಿಕ್ ಟಿವಿಲಾಕ್‍ಡೌನ್
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

US Air Force Jet
Latest

ಮಾತುಕತೆಗು ಮುನ್ನ ಪಾಕ್‌ನ ನೂರ್ ಖಾನ್ ವಾಯುನೆಲೆ ತಲುಪಿದ US ವಾಯುಪಡೆ ಜೆಟ್ – ಇನ್ನೂ ಬಾರದ ಇರಾನ್ ಪ್ರತಿನಿಧಿಗಳು

Public TV
By Public TV
4 minutes ago
lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
40 minutes ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
51 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
1 hour ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
1 hour ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?