Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಮೇಕೆದಾಟು ಡ್ಯಾಂ – ಕರ್ನಾಟಕಕ್ಕೆ ಆರಂಭಿಕ ಗೆಲುವು, ತಮಿಳುನಾಡಿಗೆ ಮುಖಭಂಗ

Public TV
Last updated: November 27, 2018 2:58 pm
Public TV
Share
8 Min Read
mekedatu 1
SHARE

ಬೆಂಗಳೂರು: ತಮಿಳುನಾಡು ವಿರೋಧದ ನಡುವೆ ರಾಜ್ಯದ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಆರಂಭಿಕ ಒಪ್ಪಿಗೆ ಸಿಕ್ಕಿದೆ. ಕೇಂದ್ರ ಜಲ ಸಂಪನ್ಮೂಲ ಇಲಾಖೆಯಿಂದ ಪ್ರಾಥಮಿಕ ಹಂತದ ಅನುಮತಿ ದೊರಕಿದ್ದು ಯೋಜನೆ ವಿರೋಧಿಸಿದ್ದ ತಮಿಳುನಾಡಿಗೆ ತೀವ್ರ ಹಿನ್ನಡೆಯಾಗಿದೆ. ಮೇಕೆದಾಟು ಯೋಜನೆ ಸಾಧ್ಯಸಾಧ್ಯತೆ ಸಂಬಂಧಿಸಿದಂತೆ ಪ್ರಾಥಮಿಕ ವರದಿ “ಪ್ರಿ-ಫೀಸಿಬಿಲಿಟಿ ರಿಪೋರ್ಟ್” ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶನ ನೀಡಿದೆ.

ಈ ಬಗ್ಗೆ ಕೇಂದ್ರ ಜಲ ಸಂಪನ್ಮೂಲ ಅಧಿಕಾರಿಗಳು ರಾಜ್ಯದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಯೋಜನೆಯ ಪ್ರಾಥಮಿಕ ವರದಿ ನೀಡಲು ಸೂಚನೆ ನೀಡಿದೆ. ಕಾವೇರಿ ನದಿ ನೀರು ಹಂಚಿಕೆ ವಿವಾದ ಬಳಿಕ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಅವಕಾಶ ನೀಡುವಂತೆ ಕೇಂದ್ರ ಜಲಸಂಪನ್ಮೂಲ ಇಲಾಖೆಗೆ ರಾಜ್ಯ ಸರ್ಕಾರ ಮನವಿ ಮಾಡಿಕೊಂಡಿತ್ತು. ಕರ್ನಾಟಕದಲ್ಲೇ ಅಣೆಕಟ್ಟು ನಿರ್ಮಿಸಿಕೊಳ್ಳುತ್ತಿದ್ದು, ತಮಿಳುನಾಡಿನ ಒಪ್ಪಿಗೆಯ ಅವಶ್ಯಕತೆ ಇಲ್ಲ ಎಂದಿತ್ತು.

Mekedatu project 2

ಮೇಕೆದಾಟು ಯೋಜನೆಯಿಂದ ಮಳೆಗಾಲದ ಸಂದರ್ಭದಲ್ಲಿ ಸಮುದ್ರಕ್ಕೆ ಹರಿದು ಹೋಗಬಹುದಾದ ಹೆಚ್ಚುವರಿ ನೀರನ್ನು ಸಂಗ್ರಹಿಸಿ ಇಡಬಹುದು. ಬೇಸಿಗೆ ವೇಳೆ ಕರ್ನಾಟಕ ಹಾಗೂ ತಮಿಳುನಾಡು ಈ ನೀರನ್ನು ಕುಡಿಯುವ ಉದ್ದೇಶಕ್ಕೆ ಬಳಸಿಕೊಳ್ಳಬಹುದು. ಜಲವಿದ್ಯುತ್ ಉತ್ಪಾದನೆಗೂ ಅನುಕೂಲ ಆಗಲಿದೆ ಎಂದು ಕೇಂದ್ರದ ಮುಂದೆ ಕರ್ನಾಟಕ ಪ್ರಸ್ತಾವನೆ ಸಲ್ಲಿಸಿತ್ತು. ಕರ್ನಾಟಕ ಪ್ರಸ್ತಾವನೆಯನ್ನು ಪರಿಗಣಿಸಿರುವ ಕೇಂದ್ರ ಜಲಸಂಪನ್ಮೂಲ ಇಲಾಖೆ ಯೋಜನೆಯು ಪ್ರಾಥಮಿಕ ವರದಿ ಕುರಿತು ಮಾಹಿತಿ ನೀಡುವಂತೆ ಕೋರಿದೆ. ಕೇಂದ್ರದ ಈ ನಡೆಯಿಂದ ಕಾಲುಕೆರೆದು ಜಗಳಕ್ಕೆ ಬರುತ್ತಿದ್ದ ತಮಿಳುನಾಡಿಗೆ ಮುಖಭಂಗವಾಗಿದೆ.

modi siddaramaiah bjp

ತಮಿಳುನಾಡಿಗೆ ಹಿನ್ನಡೆ:
ಸೆಪ್ಟೆಂಬರ್ ತಿಂಗಳಲ್ಲಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡುವಂತೆ ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಭೇಟಿಯಾಗಿ ಮನವಿ ಮಾಡಿದ್ದರು. ಈ ಬೆನ್ನಲ್ಲೇ ತಮಿಳುನಾಡು ಸಿಎಂ ಪಳನೀಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮೇಕೆದಾಟು ಯೋಜನೆ ಒಪ್ಪಿಗೆ ಸೂಚಿಸದಂತೆ ಒತ್ತಾಯಿಸಿದ್ದರು. ಅಲ್ಲದೇ ಮೇಕೆದಾಟು ಯೋಜನೆ ಪ್ಲಾನ್ ಸರಿ ಇಲ್ಲ ಅಣೆಕಟ್ಟು ನಿರ್ಮಾಣದಿಂದ ನದಿ ನೀರಿನ ನೈಸರ್ಗಿಕ ಹರಿವಿಗೆ ತೊಂದರೆ ಆಗಲಿದೆ. ಅಲ್ಲದೆ ಇದರಿಂದ ಪರಿಸರಕ್ಕೆ ದಕ್ಕೆಯಾಗುವ ಸಾಧ್ಯತೆ ಇದ್ದು, ಕರ್ನಾಟಕ ಮನವಿ ತಿರಸ್ಕರಿಸಬೇಕು ಎಂದು ಪತ್ರವನ್ನು ಬರೆದಿದ್ದರು.

mekedatu

ಈಗ ತಮಿಳುನಾಡು ವಿರೋಧದ ನಡುವೆಯೇ ಜಲಸಂಪನ್ಮೂಲ ಇಲಾಖೆ ವರದಿ ಕೇಳಿರುವುದು ಕರ್ನಾಟಕ ಪಾಲಿಗೆ ಆಶಾಭಾವನೆ ಮೂಡಿಸಿದೆ. ಕಾವೇರಿ, ಮಹದಾಯಿ ಬಳಿಕ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಶುಭ ಸುದ್ದಿ ಸಿಗುವ ಸಾಧ್ಯತೆ ಕಂಡುಬರುತ್ತಿದೆ. ಸದ್ಯ ಇದು ಕರ್ನಾಟಕದ ಆರಂಭಿಕ ಜಯ ಎನಿಸಿದರೂ ಪ್ರಾಥಮಿಕ ವರದಿ ಬಳಿಕ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ಹಾಗೂ ತಾಂತ್ರಿಕ ವಿಭಾಗಗಳಿಂದ ಮೇಕೆದಾಟು ಯೋಜನೆಗೆ ಒಪ್ಪಿಗೆ ಸಿಗಬೇಕಿದೆ.

ಏನಿದು ಮೇಕೆದಾಟು ಯೋಜನೆ?
ಮೇಕೆದಾಟು ಬಳಿ ಕುಡಿಯುವ ನೀರಿನ ಯೋಜನೆಗಾಗಿ ಕಾವೇರಿ ನದಿಗೆ ಅಡ್ಡಲಾಗಿ ಕಿರು ಅಣೆಕಟ್ಟು ಕಟ್ಟಲು ಕರ್ನಾಟಕ ಸರ್ಕಾರ ಮುಂದಾಗಿದೆ. ಕಾವೇರಿ ನದಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ಬಾರಿಯೂ ಕ್ಯಾತೆ ತೆಗೆಯುವ ತಮಿಳುನಾಡು ಈಗ ಮತ್ತೆ ಅಣೆಕಟ್ಟು ನಿರ್ಮಾಣ ಮಾಡುವುದನ್ನು ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದೆ. ಅಷ್ಟೇ ಅಲ್ಲದೇ ಸುಪ್ರೀಂ ಕೋರ್ಟ್‍ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿ ಈ ಯೋಜನೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿದೆ.

KRS 2

ಕರ್ನಾಟಕ ಸರ್ಕಾರ ಮೇಕೆದಾಟಿನಲ್ಲಿ ಅಣೆಕಟ್ಟು ನಿರ್ಮಿಸಲು ಹೊರಟ್ಟಿದ್ದು ಯಾಕೆ?
ಕಾವೇರಿ ನ್ಯಾಯಾಧೀಕರಣ ಐತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರತಿವರ್ಷ ಕರ್ನಾಟಕ 177 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಬೇಕೆಂದು ಆದೇಶ ನೀಡಿದೆ. ಈ ನೀರಿನ ಜೊತೆಗೆ ಹೆಚ್ಚುವರಿಯಾಗಿ ಒಂದು ಅಂದಾಜಿನ ಪ್ರಕಾರ 80, 90 ಟಿಎಂಸಿ ನೀರು ತಮಿಳುನಾಡಿಗೆ ಸೇರುತ್ತದೆ. ಹೀಗೆ ರಾಜ್ಯದಿಂದ ಹರಿದು ಹೋಗುತ್ತಿರುವ ಈ ನೀರನ್ನು ಸಂಗ್ರಹಿಸಿ ಬೆಂಗಳೂರು ನಗರಕ್ಕೆ ಪೂರೈಕೆ ಮಾಡಲು ಕರ್ನಾಟಕ ಸರ್ಕಾರ ಅಣೆಕಟ್ಟು ನಿರ್ಮಿಸಲು ಹೊರಟಿದೆ.

ತಮಿಳುನಾಡು ವಿರೋಧ ಯಾಕೆ?
ಮೇಕೆದಾಟುವಿನಲ್ಲಿ ಅಣೆಕಟ್ಟು ಕಟ್ಟಬೇಕೆಂಬ ಪ್ರಸ್ತಾಪ 1952ರಲ್ಲೇ ಚಿಗುರೊಡೆದಿತ್ತು. ಆದರೆ ಕೆಲ ಕಾರಣಗಳಿಂದ ಈ ಯೋಜನೆಯನ್ನು ಸರ್ಕಾರ ಕೈಬಿಟ್ಟಿತ್ತು. 1996ರಲ್ಲಿ ಮೇಕೆದಾಟುವಿನಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಯೋಜನೆಯನ್ನು ರಾಜ್ಯ ಸರ್ಕಾರ ರೂಪಿಸಿ ಕೇಂದ್ರ ವಿದ್ಯುತ್ ಪ್ರಾಧಿಕಾರಕ್ಕೆ ಅನುಮೋದನೆಗೆ ಕಳುಹಿಸಿಕೊಟ್ಟಿತ್ತು. ಆದರೆ ಇದೇ ಸಮಯದಲ್ಲಿ ಕಾವೇರಿ ವಿವಾದ ನ್ಯಾಯಾಧಿಕರಣ ಮುಂದೆ ಇದ್ದ ಕಾರಣ ಮೊದಲು ಈ ವಿವಾದವನ್ನು ಬಗೆಹರಿಸಿಕೊಳ್ಳಿ, ನಂತರ ಈ ವಿಚಾರವನ್ನು ಪ್ರಸ್ತಾಪ ಮಾಡಿ ಎಂದು ಹೇಳುವ ಮೂಲಕ ವಿದ್ಯುತ್ ಪ್ರಾಧಿಕಾರ ಉಪಾಯದಿಂದ ಜಾರಿಕೊಂಡಿತ್ತು. 2007ರಲ್ಲಿ ನ್ಯಾಯಾಧಿಕರಣ ಅಂತಿಮ ತೀರ್ಪು ಪ್ರಕಟಿಸಿದ ಬಳಿಕ ಮತ್ತೆ ಮೇಕೆದಾಟು ಯೋಜನೆ ಗರಿಗೆದರತೊಡಗಿತು. ಅಂತಿಮವಾಗಿ 2013ರಲ್ಲಿ ರಾಜ್ಯ ಸರ್ಕಾರ ಮೇಕೆದಾಟು ಯೋಜನೆ ನಿರ್ಮಿಸಲು ಮಹತ್ವದ ಹೆಜ್ಜೆ ಇಟ್ಟಿತು. ರಾಜ್ಯ ಸರ್ಕಾರ ಅಣೆಕಟ್ಟು ನಿರ್ಮಿಸಲು ಮುಂದಾಗುತ್ತಿದ್ದಂತೆ ಆಗಿನ ತಮಿಳುನಾಡು ಸಿಎಂ ಜಯಲಲಿತಾ ಕೇಂದ್ರದ ಮೊರೆ ಹೋಗಿ, ಸುಪ್ರೀಂನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದರು. ಈಗ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧವಾಗುತ್ತಿದ್ದು ತಮಿಳುನಾಡು ಸಿಎಂ ಪಳನಿಸ್ವಾಮಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಯೋಜನೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

03 KRS

ತಮಿಳುನಾಡು ವಾದ ಏನು?
ಕಾವೇರಿ ನ್ಯಾಯಾಧಿಕರಣದಲ್ಲಿ ನೀರು ಹಂಚಿಕೆ ವಿಚಾರಣೆ ನಡೆಯುವ ವೇಳೆ ಮೇಕೆದಾಟು ವಿಚಾರ ಪ್ರಸ್ತಾಪವಾಗಿಲ್ಲ. ಆದರೆ ಸರ್ಕಾರ ಈಗ ಯೋಜನೆ ಮುಂದಾಗಿದ್ದು ನ್ಯಾಯಮಂಡಳಿಯ ತೀರ್ಪನ್ನು ಉಲ್ಲಂಘಿಸಿದೆ. ತಮಿಳುನಾಡಿಗೆ ನೈಸರ್ಗಿಕವಾಗಿಯೇ ಮಳೆ ಮೂಲಕ ಹೆಚ್ಚುವರಿ ನೀರು ಬರುತ್ತದೆ. ಅದರೆ ಈ ಅಣೆಕಟ್ಟು ನಿರ್ಮಿಸುವ ಮೂಲಕ ಕರ್ನಾಟಕ ತಮಿಳುನಾಡಿನ ರೈತರ ಕೃಷಿಗೆ ಅಡ್ಡಗಾಲು ಹಾಕುತ್ತಿದೆ.

ಕರ್ನಾಟಕದ ವಾದ ಏನು?
ಪ್ರತಿವರ್ಷ 177.25 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡುವುದು ನಮ್ಮ ಹೊಣೆ. ಒಂದು ವೇಳೆ ನಾವು ಅಷ್ಟು ಪ್ರಮಾಣದ ನೀರನ್ನು ಬಿಡದಿದ್ದರೆ ತಮಿಳುನಾಡು ಪ್ರಶ್ನಿಸುವುದು ಸರಿ. 2018 ರಲ್ಲಿ ಭಾರೀ ಮಳೆಯಾದ ಪರಿಣಾಮ ಈಗಾಗಲೇ ಕರ್ನಾಟಕದಿಂದ 310 ಟಿಎಂಸಿಗಿಂತಲೂ ಹೆಚ್ಚಿನ ಪ್ರಮಾಣದ ನೀರು ತಮಿಳುನಾಡು ಹರಿದುಹೋಗಿದೆ. ಮೆಟ್ಟೂರಿನಲ್ಲಿ ಅಧಿಕ ನೀರಿನ ಸಂಗ್ರಹ ಸಾಮಥ್ರ್ಯ ಇಲ್ಲದೇ ಇರುವ ಕಾರಣ 100 ಟಿಎಂಸಿಗೂ ಹೆಚ್ಚು ನೀರು ಸಮುದ್ರಕ್ಕೆ ಹರಿದು ಹೋಗಿದೆ. ಮೇಕೆದಾಟಿನಲ್ಲಿ ಅಣೆಕಟ್ಟೆ ಇದ್ದಿದ್ದರೆ ಕನಿಷ್ಠ 60 ಟಿಎಂಸಿ ಹಿಡಿದಿಟ್ಟುಕೊಳ್ಳಬಹುದಾಗಿತ್ತು. ಒಂದು ಡ್ಯಾಂ ಇದ್ದಿದ್ದರೆ ತಮಿಳುನಾಡಿಗೆ ತಿಂಗಳವಾರು ಕೋಟಾದಂತೆ ನೀರು ಬಿಡುಗಡೆ ಮಾಡಲು ಕರ್ನಾಟಕಕ್ಕೂ ಅನುಕೂಲವಾಗುತ್ತಿತ್ತು. ನಾವು ಕುಡಿಯುವ ನೀರಿಗಾಗಿ ಡ್ಯಾಂ ಕಟ್ಟುತ್ತೇವೆಯೇ ಹೊರತು ವಿದ್ಯುತ್ ಉತ್ಪಾದನೆಯೇ ನಮ್ಮ ಮೂಲ ಉದ್ದೇಶ ಅಲ್ಲ. ನದಿ ನೀರಿನ ಹಂಚಿಕೆ ವಿಚಾರದಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕೆಂದು ಎಂದು ಅಂತಾರಾಷ್ಟ್ರೀಯ ಜಲ ನೀತಿಯೇ ಹೇಳಿದೆ. ಹೀಗಾಗಿ ನಾವು ಎತ್ತಿಕೊಂಡ ಮೇಕೆದಾಟು ಯೋಜನೆ ನ್ಯಾಯ ಸಮ್ಮತವಾಗಿದೆ.

KRS 3

ಕರ್ನಾಟಕಕ್ಕೆ ಈ ಅಣೆಕಟ್ಟು ಅಗತ್ಯ ಯಾಕೆ?
ಬೆಂಗಳೂರು ನಗರಕ್ಕೆ ನೀರು ಬರುವುದು ಕೆಆರ್‍ಎಸ್ ಡ್ಯಾಂನಿಂದ. ಮಳೆಗಾಲದಲ್ಲಿ ಡ್ಯಾಂ ಭರ್ತಿಯಾದರೆ ಬೆಂಗಳೂರು ಜನತೆಗೆ ನೀರು ಭಾಗ್ಯ. ಬೆಂಗಳೂರು ನಗರಕ್ಕೆ ಪ್ರತಿದಿನ 1400 ದಶಲಕ್ಷ ಲೀಟರ್ ಅಗತ್ಯವಿದೆ. ಬೇಸಿಗೆ ಸಮಯದಲ್ಲಿ ನೀರಿನ ಬೇಡಿಕೆ ಶೇ.15ರಷ್ಟು ಹೆಚ್ಚಾಗುತ್ತದೆ. ತಿಪ್ಪಗೊಂಡನಹಳ್ಳಿ ಜಲಾಶಯದಿಂದ 2012ರಲ್ಲಿ ನೀರು ಪಂಪಿಂಗ್ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಬೆಂಗಳೂರಿನ ನೀರಿನ ಬೇಡಿಕೆ ಹೆಚ್ಚಾಗುತ್ತಿದೆ. ಹೀಗಾಗಿ ಇಲ್ಲಿ ಸಂಗ್ರಹವಾದ ಡ್ಯಾಂ ನೀರನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಯ ಕುಡಿಯುವ ನೀರಿನ ಯೋಜನೆಗೆ ಬಳಸುವ ಉದ್ದೇಶ ರಾಜ್ಯ ಸರ್ಕಾರದ್ದು.

ಎಷ್ಟು ಡ್ಯಾಂ ನಿರ್ಮಾಣವಾಗಲಿದೆ?
ಆರಂಭಿಕ ಯೋಜನೆ ಪ್ರಕಾರ 4,500 ಎಕ್ರೆ ಅರಣ್ಯ ಪ್ರದೇಶ ಮುಳುಗಡೆಯಾಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಮುಳುಗಡೆಯಾಗುವ ಪ್ರದೇಶವನ್ನು ತಪ್ಪಿಸಲು 20 ಟಿಎಂಸಿ ಸಾಮಥ್ರ್ಯದ 2, 3 ಅಣೆಕಟ್ಟು ಕಟ್ಟುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದೆ. ಆದರೆ ಎಷ್ಟು ಡ್ಯಾಂ ನಿರ್ಮಾಣ ಮಾಡಬೇಕು ಎನ್ನುವುದು ಇನ್ನೂ ಅಂತಿಮವಾಗಿಲ್ಲ. ಸ್ಥಳ ಪರಿಶೀಲನೆಯಾಗಿದ್ದು, ಸಮಗ್ರ ಯೋಜನಾ ವರದಿ ಸರ್ಕಾರದ ಕೈ ಸೇರಿದ ಬಳಿಕ ಎಷ್ಟು ಡ್ಯಾಂ ನಿರ್ಮಿಸಬೇಕು ಎನ್ನುವುದು ಅಂತಿಮವಾಗಲಿದೆ.

cauvery krs

ಅಂತಿಮ ಐತೀರ್ಪು ಪ್ರಕಾರ ಯಾರಿಗೆ ಎಷ್ಟು ನೀರು?
ನ್ಯಾ. ಎನ್.ಪಿ.ಸಿಂಗ್, ನ್ಯಾ. ಸುಧೀರ್ ನಾರಿಯನ್, ನ್ಯಾ. ಎನ್.ಎಸ್. ರಾವ್ ಅವರನ್ನು ಒಳಗೊಂಡ ಕಾವೇರಿ ನ್ಯಾಯಾಧಿಕರಣ 2007ರ ಫೆಬ್ರವರಿ 2ರಂದು ಅಂತಿಮ ಐತೀರ್ಪು(ನ್ಯಾಯಾಲಯಗಳು ನೀಡುವ ಅಂತಿಮ ಆದೇಶಕ್ಕೆ ತೀರ್ಪು ಎಂದು ಕರೆದರೆ ನ್ಯಾಯಾಧಿಕರಣಗಳು ನೀಡುವ ಅಂತಿಮ ಆದೇಶಕ್ಕೆ ಐತೀರ್ಪು(ಂತಿಚಿಡಿಜ) ಎಂದು ಕರೆಯಲಾಗುತ್ತದೆ) ನೀಡಿತು. ಈ ಐತೀರ್ಪಿನ ಅನ್ವಯ ಕಾವೇರಿ ಕಣಿವೆಯಲ್ಲಿ 740 ಟಿಎಂಸಿ ನೀರಿದೆ ಎಂದು ಲೆಕ್ಕಹಾಕಲಾಯಿತು. ಕರ್ನಾಟಕಕ್ಕೆ 270 ಟಿಎಂಸಿ, ತಮಿಳುನಾಡಿಗೆ 419 ಟಿಎಂಸಿ, ಕೇರಳಕ್ಕೆ 30 ಟಿಎಂಸಿ, ಪುದುಚೇರಿಗೆ 10, ಪರಿಸರ ಸಂರಕ್ಷಣೆಗೆ 10 ಟಿಎಂಸಿ, ಸಮುದ್ರ ಸೇರುವ ನೀರು 4 ಟಿಎಂಸಿ ನೀರನ್ನು ಹಂಚಲಾಯಿತು. ಇದರ ಜೊತೆ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ಆದೇಶಿಸಿತು.

ಕಾವೇರಿಯಲ್ಲಿ ಯಾರಿಗೆ ಎಷ್ಟು ನೀರು?
ಕಾವೇರಿ ನ್ಯಾಯಾಧಿಕರಣ ನೀಡಿದ ಐತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿ 2018ರ ಫೆಬ್ರವರಿ 15 ರಂದು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿತ್ತು. ಈ ತೀರ್ಪಿನ ಅನ್ವಯ ಕರ್ನಾಟಕಕ್ಕೆ 284 ಟಿಎಂಸಿ, ತಮಿಳುನಾಡು 177.25 ಟಿಎಂಸಿ, ಕೇರಳ 30 ಟಿಎಂಸಿ, ಪುದುಚೇರಿಗೆ 10 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿದೆ.

K Palaniswami narendramodi mekedatu

ಯಾವ ತಿಂಗಳು ಎಷ್ಟು ಟಿಎಂಸಿ ನೀರು ಬಿಡಬೇಕು?
ಜೂನ್ 9.19, ಜುಲೈ 31.24, ಆಗಸ್ಟ್ 45.95, ಸೆಪ್ಟೆಂಬರ್ 36.76, ಅಕ್ಟೋಬರ್ 20.22, ನವೆಂಬರ್ 13.78, ಡಿಸೆಂಬರ್ 7.35, ಜನವರಿ 2.76 ಟಿಎಂಸಿ ಬಿಡಬೇಕು. ಫೆಬ್ರವರಿ, ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ತಲಾ 2.5 ಟಿಎಂಸಿ ನೀರನ್ನು ಕರ್ನಾಟಕ ತಮಿಳುನಾಡಿಗೆ ಬಿಡಬೇಕು.

ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ಕರ್ನಾಟಕ ನಿರ್ಮಿಸಿರುವ ಅಣೆಕಟ್ಟುಗಳು ಹಾರಂಗಿ (ಕೊಡಗು), ಕಬಿನಿ (ಮೈಸೂರು), ಹೇಮಾವತಿ (ಹಾಸನ), ಕೆಆರ್‍ಎಸ್ (ಮಂಡ್ಯ)ದಲ್ಲಿ ಅಣೆಕಟ್ಟು ನಿರ್ಮಾಣ ಮಾಡಿದೆ.

ತಮಿಳುನಾಡಿಗೆ ಕರ್ನಾಟಕದಿಂದ ನೀರು ಹರಿದಿದೆ ಎಂದು ಪತ್ತೆ ಮಾಡೋದು ಹೇಗೆ?
ತಮಿಳುನಾಡಿನ ಭಾಗದಲ್ಲಿರುವ ಬಿಳಿಗುಂಡ್ಲುವಿನಲ್ಲಿ ಎಷ್ಟು ಪ್ರಮಾಣದ ನೀರು ಹರಿದಿದೆ ಎಂದು ಪತ್ತೆ ಮಾಡಲು ಕೇಂದ್ರ ಜಲ ಆಯೋಗದ ಅಧಿಕಾರಿಗಳು ವರ್ಷವಿಡಿ ನೀರಿನ ಲೆಕ್ಕಾಚಾರ ಹಾಕುತ್ತಾರೆ. ಪ್ರತಿದಿನ ಬೆಳಗ್ಗೆ 8ರಿಂದ 10ರವರೆಗೆ ಎರಡು ಗಂಟೆಗಳ ಕಾಲ 160 ಮೀಟರ್ ಪ್ರದೇಶದ 15 ನಿರ್ದಿಷ್ಟ ಸ್ಥಳಗಳಲ್ಲಿ ಈ ಪರೀಕ್ಷೆ ನಡೆಯುತ್ತದೆ. 7 ಮಂದಿ ಸಿಬ್ಬಂದಿ ದೋಣಿ ಮೂಲಕ ಒಂದು ದಂಡೆಯಿಂದ ಮತ್ತೂಂದು ದಂಡೆಗೆ ಸಾಗಿ ತಮ್ಮ ಜೊತೆ ಇರುವ ಉಪಕರಣವನ್ನು ನೀರಿಗೆ ಬಿಡುತ್ತಾರೆ. ಈ ಮೂಲಕ ಪ್ರತಿ ಸೆಕೆಂಡ್‍ಗೆ ಎಷ್ಟು ನೀರು ಕರ್ನಾಟಕದಿಂದ ತಮಿಳುನಾಡಿಗೆ ಹೋಗುತ್ತಿದೆ ಎಂಬುದನ್ನು ಪತ್ತೆ ಮಾಡುತ್ತಾರೆ. ಈ ಸಿಬ್ಬಂದಿಯನ್ನು ಕರ್ನಾಟಕ, ತಮಿಳುನಾಡಿನನವರು ನೇರವಾಗಿ ಸಂಪರ್ಕಿಸುವಂತಿಲ್ಲ. ರಾಜ್ಯ ಸರ್ಕಾರಗಳು ಅಥವಾ ನ್ಯಾಯಾಲಯಗಳು ಕೇಳಿದರೆ ಮಾತ್ರ ಮಾಹಿತಿಯನ್ನು ನೀಡಲಾಗುತ್ತದೆ.

MEKEDATU LETTER

ಕ್ಯೂಸೆಕ್ ಮತ್ತು ಟಿಎಂಸಿ ಎಂದರೆ ಎಷ್ಟು?
ಕ್ಯೂಸೆಕ್ ಎಂಬುದು Cubic feet per Second ಹ್ರಸ್ವರೂಪ. ಪ್ರತಿ ಸೆಕೆಂಡಿಗೆ ಒಂದು ಘನ ಅಡಿ ನೀರು ಹರಿದರೆ ಅದು ಒಂದು ಕ್ಯೂಸೆಕ್ ನೀರು ಎಂದು ಕರೆಯಲ್ಪಡುತ್ತದೆ. ಒಂದು ಘನ ಅಡಿ ನೀರನ್ನು ಲೀಟರುಗಳಿಗೆ ಪರಿವರ್ತಿಸಿದರೆ ಸುಮಾರು 28.317 ಲೀಟರುಗಳಾಗುತ್ತವೆ. 11,524 ಕ್ಯೂಸೆಕ್ ನೀರು 24 ಗಂಟೆಯ ಕಾಲ ನಿರಂತರ ಹರಿದರೆ ಒಂದು ಟಿಎಂಸಿ ಎಂದು ಕರೆಯಲಾಗುತ್ತದೆ. 10 ಸಾವಿರ ಕ್ಯೂಸೆಕ್ ನೀರು 24 ಗಂಟೆ ನಿರಂತರ ಹರಿದರೆ 0.864 ಟಿಎಂಸಿ ಅಡಿ ಆಗುತ್ತದೆ. 35.87 ಅಡಿ ಅಳದಷ್ಟು ನೀರನ್ನು ಒಂದು ಚದರ ಮೈಲಿ ಪ್ರದೇಶದಲ್ಲಿ ಸಂಗ್ರಹಿಸಿದರೆ ಒಂದು ಟಿಎಂಸಿ ಅಡಿ ಆಗುತ್ತದೆ.

https://www.youtube.com/watch?v=SU08dZx8pRI

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

TAGGED:Cauvery RiverkarnatakaMekedatu damnarendra modiPublic TVtamil naduunion governmentಕರ್ನಾಟಕಕೇಂದ್ರ ಜಲ ಸಂಪನ್ಮೂಲ ಇಲಾಖೆಕೇಂದ್ರ ಸರ್ಕಾರತಮಿಳುನಾಡುಪಬ್ಲಿಕ್ ಟಿವಿಮೇಕೆದಾಟು ಆಣೆಕಟ್ಟು
Share This Article
Facebook Whatsapp Whatsapp Telegram

You Might Also Like

Mangaluru Crime
Crime

ಮಂಗಳೂರು | ಲವ್, ಸೆಕ್ಸ್, ದೋಖಾ ಆರೋಪ – ಕೇಸ್ ದಾಖಲಾಗ್ತಿದ್ದಂತೆ ಆರೋಪಿ ಯುವಕ ಎಸ್ಕೇಪ್

Public TV
By Public TV
5 hours ago
Chikkaballapura 6
Chikkaballapur

ಪೈಪ್‌ಲೈನ್‌ಗೆ ರಂಧ್ರ ಕೊರೆದು ಪೆಟ್ರೋಲ್ ಕಳ್ಳತನ ಮಾಡ್ತಿದ್ದ ಅಪ್ಪ-ಮಗ ಅಂದರ್

Public TV
By Public TV
5 hours ago
big bulletin 26 June 2025 part 1
Big Bulletin

ಬಿಗ್‌ ಬುಲೆಟಿನ್‌ 26 June 2025 ಭಾಗ-1

Public TV
By Public TV
5 hours ago
big bulletin 26 June 2025 part 2
Big Bulletin

ಬಿಗ್‌ ಬುಲೆಟಿನ್‌ 26 June 2025 ಭಾಗ-2

Public TV
By Public TV
5 hours ago
China
Latest

ಚೀನಾದಲ್ಲಿ ಜಲಪ್ರಳಯಕ್ಕೆ 6 ಮಂದಿ ಬಲಿ

Public TV
By Public TV
5 hours ago
big bulletin 26 June 2025 part 3
Big Bulletin

ಬಿಗ್‌ ಬುಲೆಟಿನ್‌ 26 June 2025 ಭಾಗ-3

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?