ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ

Public TV
2 Min Read
NARENDRA MODI AND MORRISON

ವಾಷಿಂಗ್ಟನ್: ಕ್ವಾಡ್ ರಾಷ್ಟ್ರಗಳ ನಾಯಕರ ಶೃಂಗಸಭೆ ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿ ನಡೆಯುತ್ತಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಸ್ಕಾಟ್ ಮಾರಿಸನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.

NARENDRA MODI 3

ಸಾಂಕ್ರಾಮಿಕ ನಂತರದ ಕಾಲದಲ್ಲಿ ಉಭಯ ನಾಯಕರು ನಡೆಸಿದ ಮೊದಲ ಮುಖಾಮುಖಿ ಭೇಟಿ ಇದಾಗಿತ್ತು. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸಮಗ್ರ ಕಾರ್ಯತಂತ್ರ ಪಾಲುದಾರಿಕೆಯನ್ನು ಇನ್ನಷ್ಟು ಬಲವರ್ಧನೆಗೊಳಿಸಲು 2020ರ ಜೂನ್ 4ರಂದು ಕಾರ್ಯತಂತ್ರ ಪಾಲುದಾರಿಕೆಯ ಭಾಗವಾಗಿ ನರೇಂದ್ರ ಮೋದಿ ಮತ್ತು ಮಾರಿಸನ್ ನಡುವೆ ನಾಯಕರ ವರ್ಚುವಲ್ ಶೃಂಗಸಭೆ ನಡೆದಿತ್ತು. ಇದನ್ನೂ ಓದಿ: ಮೇಕೆದಾಟು ಅಣೆಕಟ್ಟು ನಿರ್ಮಾಣ ವಿವಾದ – ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

NARENDRA MODI

ಸಭೆಯ ವೇಳೆ, ಪ್ರಧಾನಮಂತ್ರಿಗಳು ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಜಾಗತಿಕ ಪ್ರಾಮುಖ್ಯತೆಯ ಹಲವು ವಿಷಯಗಳ ಕುರಿತು ವಿಸ್ತೃತ ಮಾತುಕತೆ ನಡೆಸಿದರು. ಇತ್ತೀಚೆಗೆ ನಡೆದ ಮೊದಲ ಭಾರತ-ಆಸ್ಟ್ರೇಲಿಯಾ ವಿದೇಶಾಂಗ ಮತ್ತು ರಕ್ಷಣಾ ಸಚಿವರ 2+2 ಮಾತುಕತೆ ಸೇರಿದಂತೆ ಉಭಯ ದೇಶಗಳ ನಡುವಿನ ನಿರಂತರ ಉನ್ನತ ಮಟ್ಟದ ಸಮಾಲೋಚನೆಗಳ ಕುರಿತು ಅವರು ತೃಪ್ತಿ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಾನಮರ್ಯಾದೆ ಇಲ್ಲದ ಸರ್ಕಾರದ ವಿರುದ್ಧ ಜನರ ಧ್ವನಿಯಾಗಿ ಹೋರಾಟ: ಡಿ.ಕೆ ಶಿವಕುಮಾರ್

NARENDRA MODI 2

ಸಮಗ್ರ ಕಾರ್ಯತಂತ್ರ ಪಾಲುದಾರಿಕೆ ಅಡಿಯಲ್ಲಿ 2020ರ ಜೂನ್ ತಿಂಗಳಲ್ಲಿ ನಡೆದ ನಾಯಕರ ವರ್ಚುವಲ್ ಶೃಂಗಸಭೆಯಿಂದೀಚೆಗೆ ನಡೆದ ಪ್ರಗತಿಯನ್ನು ಪ್ರಧಾನಮಂತ್ರಿಗಳು ಪರಾಮರ್ಶಿಸಿದರು ಮತ್ತು ಇಂಡೋ-ಪೆಸಿಫಿಕ್ ಪ್ರಾಂತ್ಯವನ್ನು ಮುಕ್ತ, ಸ್ವತಂತ್ರ ಮತ್ತು ಸಮೃದ್ಧ ಹಾಗೂ ನಿಯಮಾಧಾರಿತವನ್ನಾಗಿ ಮಾಡುವ ನಿಟ್ಟಿಮಲ್ಲಿ ಮುಂದುವರಿಯಲು ಪರಸ್ಪರ ಅನುಕೂಲಕ್ಕಾಗಿ ನಿಕಟ ಸಹಕಾರ ಮುಂದುವರಿಸಲು ಸಂಕಲ್ಪ ಕೈಗೊಂಡರು. ಪ್ರಸ್ತುತ ನಡೆಯುತ್ತಿರುವ ದ್ವಿಪಕ್ಷೀಯ ಸಮಗ್ರ ಆರ್ಥಿಕ ಸಹಕಾರ ಒಪ್ಪಂದ(ಸಿಇಸಿಎ) ಮಾತುಕತೆಗಳ ಬಗ್ಗೆ ನಾಯಕರು ತೃಪ್ತಿ ವ್ಯಕ್ತಪಡಿಸಿದರು. ಆ ಹಿನ್ನೆಲೆಯಲ್ಲಿ, ಸ್ಕಾಟ್ ಮಾರಿಸನ್ ಅವರ ಭಾರತದ ವಿಶೇಷ ವ್ಯಾಪಾರ ಪ್ರತಿನಿಧಿಯಾಗಿ ಮಾಜಿ ಪ್ರಧಾನಿ ಟೋನಿ ಅಬಾಟ್ ಅವರು ಭಾರತಕ್ಕೆ ಭೇಟಿ ನೀಡುವುದನ್ನು ಸ್ವಾಗತಿಸಿದರು ಮತ್ತು ಡಿಸೆಂಬರ್ 2021ರೊಳಗೆ ಮಧ್ಯಂತರ ಒಪ್ಪಂದವನ್ನು ಪ್ರಕಟಿಸುವ ಸಾಧ್ಯತೆ ಬಗ್ಗೆ ಉಭಯ ದೇಶಗಳು ಬದ್ಧತೆಯನ್ನು ವ್ಯಕ್ತಪಡಿಸಿದವು.

NARENDRA MODI 1

ಅಂತಾರಾಷ್ಟ್ರೀಯ ಸಮುದಾಯವು ಹವಾಮಾನ ಬದಲಾವಣೆಯ ಸಮಸ್ಯೆಯನ್ನು ತುರ್ತಾಗಿ ಪರಿಹರಿಸುವ ಅಗತ್ಯವನ್ನು ಪ್ರಧಾನಮಂತ್ರಿಗಳು ಒತ್ತಿ ಹೇಳಿದರು. ಆ ನಿಟ್ಟಿನಲ್ಲಿ ಮೋದಿ ಪರಿಸರ ಸಂರಕ್ಷಣೆ ಕುರಿತು ವಿಸ್ತೃತ ಸಂವಾದದ ಅಗತ್ಯತೆಯನ್ನು ಬಲವಾಗಿ ಪ್ರತಿಪಾದಿಸಿದರು ಮತ್ತು ಉಭಯ ನಾಯಕರು ಸ್ವಚ್ಛ ತಂತ್ರಜ್ಞಾನಗಳನ್ನು ಒದಗಿಸುವ ಸಾಧ್ಯತೆಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಿದರು. ಎರಡೂ ದೇಶಗಳು ಅತ್ಯಂತ ಕ್ರಿಯಾಶೀಲ ಪ್ರಜಾಪ್ರಭುತ್ವ ರಾಷ್ಟ್ರಗಳಾಗಿದ್ದು, ಇವು ಸಾಂಕ್ರಾಮಿಕ ನಂತರದ ಜಗತ್ತಿನಲ್ಲಿ ಪೂರೈಕೆ ಸರಣಿ ಸ್ಥಿತಿಸ್ಥಾಪಕತ್ವ ವೃದ್ಧಿ ಸೇರಿದಂತೆ ಎಲ್ಲ ಸವಾಲುಗಳನ್ನು ಎದುರಿಸಲು ಇನ್ನಷ್ಟು ನಿಕಟವಾಗಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಪ್ರಧಾನಮಂತ್ರಿಗಳು ಒಪ್ಪಿದರು. ಇದನ್ನೂ ಓದಿ: ಭಾರತದ ಲಸಿಕಾಕರಣಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕಮಲಾ ಹ್ಯಾರಿಸ್

ಇಬ್ಬರೂ ನಾಯಕರು ಆಸ್ಟ್ರೇಲಿಯಾದ ಆರ್ಥಿಕತೆ ಮತ್ತು ಸಮಾಜಕ್ಕೆ ಅನಿವಾಸಿ ಭಾರತೀಯರು ನೀಡಿರುವ ಅಪಾರ ಕೊಡುಗೆಯನ್ನು ಶ್ಲಾಘಿಸಿದರು ಮತ್ತು ಜನರ ನಡುವಿನ ಸಂಬಂಧ ಹೆಚ್ಚಳದ ಮಾರ್ಗೋಪಾಯಗಳ ಬಗ್ಗೆ ಚರ್ಚೆ ನಡೆಸಿದರು. ನರೇಂದ್ರ ಮೋದಿ ಅವರು ಸ್ಕಾಟ್ ಮಾರಿಸನ್ ಅವರಿಗೆ ಶೀಘ್ರವೇ ಭಾರತ ಭೇಟಿ ಕೈಗೊಳ್ಳಬೇಕು ಎಂಬ ತಮ್ಮ ಆಹ್ವಾನ ಪುನರುಚ್ಚರಿಸಿದರು.

Share This Article
Leave a Comment

Leave a Reply

Your email address will not be published. Required fields are marked *