ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ (Mahatma Gandhi) ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ (Lal Bahadur Shastri) ಅವರ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾನುವಾರ ನಮನ ಸಲ್ಲಿಸಿದರು.
ಮಹಾತ್ಮ ಗಾಂಧಿಯವರ 153ನೇ ಜನ್ಮದಿನದ ಪ್ರಯುಕ್ತವಾಗಿ ರಾಜ್ಘಾಟ್ಗೆ ತೆರಳಿ ಮಹಾತ್ಮ ಗಾಂಧೀಜಿಗೆ ಗೌರವ ಸಲ್ಲಿಸಿ ನಂತರ ಮಾತನಾಡಿದ ಅವರು, ಈ ಗಾಂಧಿ ಜಯಂತಿಯು ಇನ್ನೂ ಹೆಚ್ಚು ವಿಶೇಷವಾಗಿದೆ. ಏಕೆಂದರೆ ಭಾರತವು ಆಜಾದಿ ಕಾ ಅಮೃತ ಮಹೋತ್ಸವವನ್ನು ಆಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಬಾಪು ಆದರ್ಶಗಳನ್ನು ಅನುಸರಿಸುವ ಮೂಲಕ ಖಾದಿ ಮತ್ತು ಕರಕುಶಲ ವಸ್ತುಗಳನ್ನು ಖರೀದಿಸಲು ನಾನು ನಿಮ್ಮನ್ನು ಒತ್ತಾಯಿಸುತ್ತೇನೆ ಎಂದರು.
Paying homage to Mahatma Gandhi on #GandhiJayanti. This Gandhi Jayanti is even more special because India is marking Azadi Ka Amrit Mahotsav. May be always live up to Bapu’s ideals. I also urge you all to purchase Khadi and handicrafts products as a tribute to Gandhi Ji. pic.twitter.com/5icVnnRwwd
— Narendra Modi (@narendramodi) October 2, 2022
ದೆಹಲಿಯ ಪ್ರಧಾನಮಂತ್ರಿ ಸಂಗ್ರಹಾಲಯದಲ್ಲಿರುವ ಲಾಲ್ಬಹದ್ದೂರ್ ಶಾಸ್ತ್ರಿ ಅವರ ಗ್ಯಾಲರಿಯ ಫೋಟೋವನ್ನು ಮೋದಿ ಹಂಚಿಕೊಂಡರು ಹಾಗೂ ಮ್ಯೂಸಿಯಂಗೆ ಭೇಟಿ ನೀಡುವಂತೆ ಜನರಿಗೆ ಮನವಿ ಮಾಡಿದರು. ಇದನ್ನೂ ಓದಿ: ಹಳ್ಳದಲ್ಲಿ ನಾಲ್ವರು ಮಹಿಳೆಯರು ಕೊಚ್ಚಿ ಹೋದ ಪ್ರಕರಣ – ಇಬ್ಬರ ಮೃತದೇಹ ಪತ್ತೆ
Today, on Shastri Ji’s Jayanti I am also sharing some glimpses from his gallery in the Pradhanmantri Sangrahalaya in Delhi, which showcases his life journey and accomplishments as PM. Do visit the Museum… pic.twitter.com/09yi9FWQSs
— Narendra Modi (@narendramodi) October 2, 2022
ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಸರಳತೆ ಮತ್ತು ನಿರ್ಣಾಯಕತೆಗಾಗಿ ಭಾರತದಾದ್ಯಂತ ಮೆಚ್ಚುಗೆ ಪಡೆದಿದ್ದಾರೆ. ನಮ್ಮ ಇತಿಹಾಸದ ಅತ್ಯಂತ ನಿರ್ಣಾಯಕ ಸಮಯದಲ್ಲಿ ಅವರ ಕಠಿಣ ನಾಯಕತ್ವವು ಯಾವಾಗಲೂ ಸ್ಮರಣೀಯವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರಾತ್ರೋರಾತ್ರಿ ಪಬ್ಗಳ ಮೇಲೆ ದಾಳಿ – ಕೇಸ್ ದಾಖಲು