Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮೋದಿ ವಿರುದ್ಧ ಪೋಸ್ಟ್: ರಮ್ಯಾರನ್ನು ಶಿಲ್ಪಾಗಣೇಶ್ ತರಾಟೆಗೆ ತೆಗೆದುಕೊಂಡಿದ್ದು ಹೀಗೆ

Public TV
Last updated: August 8, 2017 2:52 pm
Public TV
Share
3 Min Read
ramay shilpa ganesh
SHARE

ಬೆಂಗಳೂರು: ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಅವರು ಪ್ರಧಾನಿ ಮೋದಿಗೆ ಸಂಬಂಧಿಸಿದಂತೆ ಪ್ರಕಟಿಸಿದ ಎಫ್‍ಬಿ ಪೋಸ್ಟ್ ಗೆ ಬಿಜೆಪಿ ಮಹಿಳಾ ಮೋರ್ಚಾದ ಉಪಾಧ್ಯಕ್ಷೆ ಶಿಲ್ಪಾ ಗಣೇಶ್ ಅವರು ಗರಂ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.

ರಮ್ಯಾ ಅವರು ಆಗಸ್ಟ್ 5 ರಂದು ರಾಹುಲ್ ಗಾಂಧಿ ಮತ್ತು ಪ್ರಧಾನಿ ಮೋದಿ ಅವರ ಫೋಟೋವನ್ನು ಅಪ್ಲೋಡ್ ಮಾಡಿದ್ದರು. ಈ ಫೋಟೋದಲ್ಲಿ ರಾಹುಲ್ ಗಾಂಧಿ ಜನರ ಜೊತೆ ಮಾತನಾಡುತ್ತಿರುವ ಫೋಟೋಗೆ ‘ಜನರ ನಾಯಕ’ ಎಂಬುದಾಗಿ, ಮೋದಿ ಅವರು ಗುಜರಾತ್ ನೆರಯ ವೈಮಾನಿಕ ಸಮೀಕ್ಷೆಯನ್ನು ವೀಕ್ಷಿಸುತ್ತಿರುವ ಫೋಟೋಗೆ ‘ಸೀಟ್ ಬೆಲ್ಟ್ ಲೀಡರ್’ ಎನ್ನುವ ತಲೆ ಬರಹವನ್ನು ಹಾಕಿ ಪ್ರಕಟಿಸಿದ್ದರು.

ಈ ಪೋಸ್ಟಿಗೆ ಸಂಬಂಧಿಸಿದಂತೆ ಶಿಲ್ಪಾ ಗಣೇಶ್ ಅವರು, ಗುಜರಾತಿನ ತಮ್ಮದೇ ಪಕ್ಷದ ಶಾಸಕರನ್ನು ಬೆಂಗಳೂರಿನಲ್ಲಿ ಮೋಜು ಮಾಡಲು ಕಳುಹಿಸಿ ತಾವು ಭಾರಿ ಸಭ್ಯರಂತೆ ಜನರೆದುರು ಬಂದು ಮೊಸಳೆ ಕಣ್ಣೀರು ಸುರಿಸಿದರೆ ಅದನ್ನು ನಂಬಲು ಜನ ಮೂರ್ಖರಲ್ಲ. ನಿಮ್ಮ ರಾಹುಲ್ ರವರು ನಿಜವಾದ ಪ್ರವಾಹ ಸಂತ್ರಸ್ತರ ಜೊತೆಗೆ ಕುಳಿತು ಮಾತಾಡಿದ್ದಾರೆ ಎನ್ನಲು ಯಾವುದೇ ಸಾಕ್ಷಿ ಇಲ್ಲ. ನಿಮ್ಮದೇ ಮಂಡ್ಯದಲ್ಲಿ ರಾಹುಲ್ ಭೇಟಿಯಾದಾಗ ತಾವು ಸೃಷ್ಟಿಸಿದ ನಕಲಿ ರೈತರ ಕಥೆ ಇನ್ನೂ ಜನರ ಮನಸ್ಸಿನಲ್ಲಿ ಹಸಿರಾಗಿದೆ ಎಂದು ಬರೆಯುವ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.

ಶಿಲ್ಪಾ ಗಣೇಶ್ ರಮ್ಯಾರನ್ನು ತರಾಟೆಗೆ ತೆಗೆದುಕೊಂಡಿದ್ದು ಹೀಗೆ
ರಮ್ಯಾರವರೇ,
ಮೊದಲಿಗೆ ತಾವೊಬ್ಬರೇ ಬುದ್ಧಿವಂತರು ಎನ್ನುವ ತಮ್ಮ ಭ್ರಮೆಗೆ ನಮಸ್ಕಾರಗಳು. ಇನ್ನು ನೀವು ಹೋಲಿಕೆ ಮಾಡುತ್ತಿರುವ ಈ ಫೋಟೋ ವಿಚಾರಕ್ಕೆ ಬಂದರೆ ಯಾವ ಜಾಗಗಳಲ್ಲಿ ವಾಹನ ಹೋಗಲೂ ಕೂಡ ಕಷ್ಟವೋ ಅಲ್ಲಿ ವೈಮಾನಿಕ ಸಮೀಕ್ಷೆ ಮಾಡುವುದು ಅನಿವಾರ್ಯ ಎನ್ನುವುದು ಅರಿವಿರಲಿ, ಪ್ರಧಾನಿಗಳು ನಂತರದಲ್ಲಿ ಜನರೊಂದಿಗೆ ನೇರವಾಗಿ ಮಾತಾಡಿರುವುದನ್ನು ತಾವು ಮರೆತಿದ್ದರೂ ಅಲ್ಲಿನ ಜನ ಮರೆತಿಲ್ಲ.

ನಿಮ್ಮ ರಾಹುಲ್ ರವರಿಗೆ ಜನರ ಬಗ್ಗೆ ಅಷ್ಟು ಕಾಳಜಿ ಇದ್ದಿದ್ದರೆ ಅಂತಹ ಪ್ರವಾಹದ ಪರಿಸ್ಥಿತಿಯಲ್ಲಿ ಗುಜರಾತಿನ ತಮ್ಮದೇ ಪಕ್ಷದ ಶಾಸಕರನ್ನು ಬೆಂಗಳೂರಿನಲ್ಲಿ ಮೋಜು ಮಾಡಲು ಕಳುಹಿಸಿ ತಾವು ಭಾರಿ ಸಭ್ಯರಂತೆ ಜನರೆದುರು ಬಂದು ಮೊಸಳೆ ಕಣ್ಣೀರು ಸುರಿಸಿದರೆ ಅದನ್ನು ನಂಬಲು ಜನ ಮೂರ್ಖರಲ್ಲ. ನಿಮ್ಮ ರಾಹುಲ್ ರವರು ನಿಜವಾದ ಪ್ರವಾಹ ಸಂತ್ರಸ್ತರ ಜೊತೆಗೆ ಕುಳಿತು ಮಾತಾಡಿದ್ದಾರೆ ಎನ್ನಲು ಯಾವುದೇ ಸಾಕ್ಷಿ ಇಲ್ಲ. ನಿಮ್ಮದೇ ಮಂಡ್ಯದಲ್ಲಿ ರಾಹುಲ್ ಭೇಟಿಯಾದಾಗ ತಾವು ಸೃಷ್ಟಿಸಿದ ನಕಲಿ ರೈತರ ಕಥೆ ಇನ್ನೂ ಜನರ ಮನಸ್ಸಿನಲ್ಲಿ ಹಸಿರಾಗಿದೆ. ಇದರಿಂದಾಗಿ ತಾವು ಮಂಡ್ಯದ ಮಾರುಕಟ್ಟೆಯಲ್ಲಿ ಅವಮಾನ ಪಟ್ಟಿದ್ದು ತಮ್ಮ ಮಂಡ್ಯದಿಂದ ವಾಸಸ್ಥಾನ ಬದಲಾಯಿಸಿದ್ದು ಕೂಡಾ ಜನ ಮರೆತಿಲ್ಲ.

ರಾಹುಲ್ ರವರು ತಾವು ಸಂಸದರಾದ ಕ್ಷೇತ್ರದಲ್ಲೇ ಯಾವುದೇ ಅಭಿವೃದ್ಧಿ ಮಾಡದೇ ಜನರಿಂದ ಉಗಿಸಿಕೊಂಡಿದ್ದು ಜನ ಮರೆತಿಲ್ಲ. ಇನ್ನು ರಾಹುಲ್ ರವರು ಗುಜರಾತಿನ ಪ್ರವಾಹ ಸಂತ್ರಸ್ತರನ್ನು ನೋಡಲು ಹೋದಾಗ ತಮ್ಮ ಕಾರಿನ ಮೇಲೆ ಬಿಜೆಪಿಯವರು ಕಲ್ಲು ತೂರಾಟ ಮಾಡಿದರು ಎಂದು ಹೇಳಿಕೆ ನೀಡಿದ್ದು ನೋಡಿದರೆ ಇದರ ಹಿಂದೆ ನಿಮ್ಮ ಬುದ್ಧಿವಂತಿಕೆ ಎದ್ದು ಕಾಣುತ್ತದೆ, ತಾವೇ ಕಲ್ಲು ಹೊಡೆಸಿಕೊಂಡು ಬಿಜೆಪಿಯ ಮೇಲೆ ಗೂಬೆ ಕೂರಿಸುವುದು ತಿಳಿದ ವಿಚಾರವೇ ಅಲ್ಲವೇ? ಈಗಾಗಲೇ ತಾವು ಮಂಡ್ಯದಲ್ಲಿ ಇದೇ ತರ ನಾಟಕ ಮಾಡಿ ಯಶಸ್ವಿಯಾದವರು ತಾನೇ?

ಮೂರು ಬಾರಿ ಮುಖ್ಯಮಂತ್ರಿ ಆದವರು ದೇಶದ ಪ್ರಧಾನಿಯಾದವರಿಗೆ ಆಡಳಿತ ಮಾಡುವುದನ್ನು ತಾವು ಕಲಿಸಿಕೊಡಲು ಹೋಗಬೇಡಿ. ನೀವೇ ಹೇಳಿದಂತೆ ರಾಹುಲ್ ರನ್ನು ಮೋದಿಜೀ ಲೆವೆಲ್ಲಿಗೆ ಕೊಂಡೊಯ್ಯುತ್ತೇನೆ ಎಂದ ಮಾತನ್ನು ಮೋದಿಜೀ ಹೆಸರಿಗೆ ಮಣ್ಣೆರೆಚುವ ಬದಲು ನಿಮ್ಮ ನಿಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡುವ ಮೂಲಕ ಜನರ ಮನಸ್ಸನ್ನು ಗೆಲ್ಲಿರಿ. ನಿಮ್ಮ ನಾಟಕಗಳನ್ನು ಜನ ನಂಬುವ ಕಾಲ ಹೊರಟುಹೋಗಿದೆ, ಜವಾಬ್ದಾರಿಯಿಂದ ಮಾತಾಡುವುದನ್ನು ಕಲಿಯಿರಿ.
ಧನ್ಯವಾದಗಳು.

ಭಾನುವಾರ ಬಿಜೆಪಿಯ ಐಟಿ ವಿಭಾಗ ಸಾಮಾಜಿಕ ಜಾಲತಾಣ ಕಾರ್ಯಕರ್ತರ ಸಮಾವೇಶವನ್ನು ಬೆಂಗಳೂರಿನಲ್ಲಿ ಆಯೋಜಿಸಿತ್ತು. ಈ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್, ವಿಧಾನಸಭೆ ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಬೇಕು. ಮೋದಿ ಸರ್ಕಾರದ ಸಾಧನೆಯನ್ನು ಹೆಚ್ಚು ಹೆಚ್ಚು ಪ್ರಚಾರ ಮಾಡಬೇಕು. ಪಕ್ಷಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ಬರುವ ಅಪಪ್ರಚಾರಗಳಿಗೆ ಸರಿಯಾಗಿ ತಿರುಗೇಟು ನೀಡಬೇಕು ಎಂದು ಹೇಳಿದ್ದರು.

ramya post

 

shilpa ganesh 2

TAGGED:bjpcongressfacebookmodirahul gandiRamyashilpa ganeshಕಾಂಗ್ರೆಸ್ನರೇಂದ್ರ ಮೋದಿಫೇಸ್‍ಬುಕ್ರಮ್ಯಾರಾಹುಲ್ ಗಾಂಧಿಶಿಲ್ಪಾ ಗಣೇಶ್
Share This Article
Facebook Whatsapp Whatsapp Telegram

Cinema Updates

Kamal Haasan 2
ಕಮಲ್ ಹಾಸನ್ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
2 hours ago
Shivarajkumar Kamal Haasan
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
10 hours ago
darshan 1
ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
13 hours ago
RASHMIKA
ಸೀರೆಯಲ್ಲಿ ಮಿಂಚು ಬಳ್ಳಿಯಂತೆ ಕಂಗೊಳಿಸಿದ ರಶ್ಮಿಕಾ – ವಿಜಯ್‌ ಕ್ಲಿಕ್‌ ಮಾಡಿದ್ದು ಅಂದ್ರು ಫ್ಯಾನ್ಸ್‌!
14 hours ago

You Might Also Like

Naveen Kumar
Crime

ಬಿಷ್ಣೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್‌ ನವೀನ್ ಕುಮಾರ್ ಎನ್‌ಕೌಂಟರ್

Public TV
By Public TV
6 minutes ago
Omar Abdullah
Latest

ಇಬ್ಬರು ಕನ್ನಡಿಗರು ಸೇರಿ 26 ಮೃತ ಪ್ರವಾಸಿಗರ ನೆನಪಿಗೆ ಪಹಲ್ಗಾಮ್‌ನಲ್ಲಿ ಸ್ಮಾರಕ – ಒಮರ್ ಅಬ್ದುಲ್ಲಾ

Public TV
By Public TV
13 minutes ago
virat kohli shreyas iyer 2
Cricket

ಪಂಜಾಬ್‌ ಜೊತೆ ಫೈನಲ್‌ ಫೈಟ್‌ – ಆರ್‌ಸಿಬಿಗೆ ಗಾಯದ ಚಿಂತೆ

Public TV
By Public TV
32 minutes ago
Bhima River 1
Belgaum

ಭೀಮಾ ನದಿ ತೀರದಲ್ಲಿ ಪ್ರವಾಹದ ಆತಂಕ – ನದಿಗಿಳಿಯದಂತೆ ಜಿಲ್ಲಾಡಳಿತ ಸೂಚನೆ

Public TV
By Public TV
1 hour ago
Hemavati River
Districts

ಹಾಸನದಲ್ಲಿ ತಗ್ಗಿದ ಮಳೆ ಅಬ್ಬರ – ಹೇಮಾವತಿ ಒಳಹರಿವಿನಲ್ಲಿ ಇಳಿಕೆ

Public TV
By Public TV
1 hour ago
Snehamayi Krishna 2
Districts

MUDA Scam| ತನಿಖಾಧಿಕಾರಿ ಬದಲಾವಣೆಗೆ ನ್ಯಾಯಾಲಯಕ್ಕೆ ಅರ್ಜಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?