ನವದೆಹಲಿ: ಕರ್ನಾಟಕಕ್ಕೆ ಅನುದಾನ ನೀಡದಿದ್ದರೆ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಇಡಬೇಕಾಗುತ್ತದೆ ಎಂಬ ಸಂಸದ ಡಿ.ಕೆ.ಸುರೇಶ್ (D.K.Suresh) ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಕೆಂಡಾಮಂಡಲರಾಗಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಮೋದಿ, ದೇಶದಲ್ಲಿ ಬಹಿರಂಗವಾಗಿ ದೇಶ ಒಡೆಯುವ ಮಾತನಾಡುತ್ತಾರೆ. ಒಗ್ಗೂಡಿಸುವುದು ಇರಲಿ ಒಡೆಯುವುದು ಮಾತನಾಡುತ್ತಾರೆ. ಇಷ್ಟು ಒಡೆದಿರುವುದು ಸಾಕಾಗಿಲ್ವ, ಇನ್ನು ಎಷ್ಟು ಭಾಗವಾಗಿ ಒಡೆಯುತ್ತೀರಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ 400 ಸ್ಥಾನಗಳ ಗಡಿ ದಾಟುತ್ತೆ.. ಬಿಜೆಪಿಗೆ 370 ಸೀಟು ಬರುತ್ತೆ: ಮೋದಿ ಭವಿಷ್ಯ
ನೆಹರೂ ಅವರ ತಪ್ಪಿನಿಂದ ಕಾಶ್ಮೀರದ ಜನರು ಬಹುದೊಡ್ಡ ಬೆಲೆ ತೆರಬೇಕಾಯಿತು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ನಮ್ಮ 3ನೇ ಅವಧಿಯಲ್ಲಿ ಭಾರತ ವಿಶ್ವದ ಮೂರನೇ ದೊಡ್ಡ ಆರ್ಥಿಕತೆಯ ದೇಶವಾಗಲಿದೆ: ಮೋದಿ ಭರವಸೆ