ಕನ್ನಡ ಸಿನಿಮಾ ರಂಗದ ಪ್ರತಿಭಾವಂತ ನಿರ್ದೇಶಕ, ರಾಷ್ಟ್ರ ಪ್ರಶಸ್ತಿ ಪಡೆದ ಮಂಸೋರೆ ಇದೀಗ ಹೊಸ ಸಿನಿಮಾವೊಂದನ್ನು ನಿರ್ದೇಶನ ಮಾಡಿದ್ದಾರೆ. 19.20.21 ಹೆಸರಿನಲ್ಲಿ ಮೂಡಿ ಬಂದಿರುವ ಈ ಚಿತ್ರದ ಟೀಸರ್ ನಾಳೆ ಸಂಜೆ 6 ಗಂಟೆಗೆ ಲಹರಿ ಮ್ಯೂಸಿಕ್ ಯೂ ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಆಗುತ್ತಿದೆ. ಟೈಟಲ್ ನಿಂದಾಗಿಯೇ ಸಖತ್ ಕುತೂಹಲ ಮೂಡಿಸಿರುವ ಈ ಟೀಸರ್ ನಲ್ಲಿ ಹತ್ತು ಹಲವು ಚರ್ಚಿಸಬೇಕಾದ ವಿಷಯಗಳು ಇರಲಿವೆ ಎನ್ನಲಾಗುತ್ತಿದೆ.
- Advertisement 2
75ನೇ ಸ್ವಾತಂತ್ರ ದಿನೋತ್ಸವ ಸಂದರ್ಭದಲ್ಲಿ ಚಿತ್ರದ ಪೋಸ್ಟರ್ ಅನ್ನು ರಿಲೀಸ್ ಮಾಡಿದ್ದರು ನಿರ್ದೇಶಕರು. ವ್ಯಕ್ತಿಯೊಬ್ಬರ ಬಾಯಿಗೆ ಬಟ್ಟೆ ಕಟ್ಟಿ, ಬೆನ್ನಿನಲ್ಲಿ ರಕ್ತ ಸುರಿಯುವಂತಹ ಆ ಪೋಸ್ಟರ್ ಅನೇಕ ವಿಷಯಗಳನ್ನು ಹೇಳುವಂತಿತ್ತು. 2018 ರಿಂದ 2022ರ ತನಕ ಯುಎಪಿಎ ಕಾಯ್ದೆ ಅಡಿಯಲ್ಲಿ ಬಂಧನಕ್ಕೆ ಒಳಗಾದ 4690ಜನರಲ್ಲಿ ಕೇವಲ 149 ಮಂದಿ ಮಾತ್ರ ಅಪರಾಧಿಗಳು ಎಂಬ ಮಾಹಿತಿಯನ್ನೂ ಅವರು ಹಂಚಿಕೊಂಡಿದ್ದರು. ಹೀಗಾಗಿ ಇದೊಂದು ವಿಶೇಷ ಸಿನಿಮಾ ಎನ್ನುವುದು ಖಾತರಿ ಆಗಿತ್ತು.
- Advertisement 3
- Advertisement 4
ಸಿನಿಮಾದ ತಾರಾ ಬಳಗವೇ ವಿಶೇಷವಾಗಿದೆ ಖ್ಯಾತ ಗಾಯಕಿ ಎಂ.ಡಿ.ಪಲ್ಲವಿ, ಬಾಲಾಜಿ ಮನೋಹರ್, ಕೃಷ್ಣ ಹೆಬ್ಬಾಳೆ, ಸಂಪತ್ ಮೈತ್ರೇಯಾ, ಶೃಂಗ ಸೇರಿದಂತೆ ಪ್ರತಿಭಾವಂತ ಕಲಾವಿದರ ದಂಡೇ ಈ ಸಿನಿಮಾದಲ್ಲಿದೆ. ನಾತಿಚರಾಮಿ ಸಿನಿಮಾ ನಂತರ ಮತ್ತೆ ಈ ಚಿತ್ರಕ್ಕೆ ಬಿಂದು ಮಾಲಿನ ಸಂಗೀತ ನೀಡಿದ್ದಾರೆ. ನಾತಿಚರಾಮಿ ಚಿತ್ರಕ್ಕಾಗಿ ಬಿಂದು ಮಾಲಿನಿ ರಾಷ್ಟ್ರ ಪ್ರಶಸ್ತಿ ಕೂಡ ಪಡೆದಿದ್ದರು. ಇದನ್ನೂ ಓದಿ: ವಿಜಯ್ ಕಿರಗಂದೂರು ಸೇರಿದಂತೆ ಮೂವರಿಗೆ ವಿಶೇಷ ಪ್ರಶಸ್ತಿ
ನಿರ್ದೇಶಕರ ಜೊತೆಗೂಡಿ ವೀರೇಂದ್ರ ಮಲ್ಲಣ್ಣ ಚಿತ್ರಕ್ಕೆ ಚಿತ್ರಕಥೆ ಬರೆದಿದ್ದು, ರೋಣದ ಬಕ್ಕೇಶ್ ಅವರ ಹಿನ್ನೆಲೆ ಸಂಗೀತ ವಿದೆ. ಶಿವು ಕುಮಾರ್ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನದಲ್ಲಿ ಈ ಸಿನಿಮಾ ಮೂಡಿ ಬಂದಿದೆ. ದೇವರಾಜ್ ಆರ್ ನಿರ್ಮಾಪಕರು. ಈಗಾಗಲೇ ಬಹುತೇಕ ಶೂಟಿಂಗ್ ಕೂಡ ಮುಗಿದಿದ್ದು, ಬಿಡುಗಡೆಗೆ ಸಿದ್ಧವಾಗಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k