Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮಕ್ಕಳ ಭವಿಷ್ಯ ಅಲ್ಲೋಲ, ಕಲ್ಲೋಲವಾದರೆ ಅದರ ಶಾಪವನ್ನು ಹೊರುವವರು ಯಾರು?: ಸಿದ್ದರಾಮಯ್ಯ ಕಿಡಿ

Public TV
Last updated: September 3, 2021 4:26 pm
Public TV
Share
3 Min Read
SIDDARAMAIHA
SHARE

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿಯಿಂದಾಗಿ ಮಕ್ಕಳ ಭವಿಷ್ಯ ಅಲ್ಲೋಲ, ಕಲ್ಲೋಲವಾದರೆ ಅದರ ಶಾಪವನ್ನು ಹೊರುವವರು ಯಾರು ಎಂದು ಪ್ರಶ್ನಿಸಿ, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿ ಹೊರಡಿಸಿರುವ ಆದೇಶವನ್ನು ಕೂಡಲೇ ವಾಪಸ್ ಪಡೆಯುವಂತೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ashwathnaryan 4 medium

ಈ ಸಂಬಂಧ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಅವರಿಗೆ ಪತ್ರ ಬರೆದಿರುವ ಅವರು, ಹೊಸ ಶಿಕ್ಷಣ ನೀತಿ ಕುರಿತಾದ ಚರ್ಚೆಯಲ್ಲಿ ತಾವು ಭಾಗವಹಿಸುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಇಂದಿನಿಂದ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ – ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಚಾಲನೆ

education school childrens medium

ಪತ್ರದಲ್ಲಿ ಏನಿದೆ?
ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಅನುಷ್ಠಾನಗೊಳಿಸಲು ಚಾಲನೆ ನೀಡಲಾಗಿದೆಯೆಂದು ಹಾಗೂ ಈ ಕುರಿತು ಚರ್ಚಿಸಲು ದಿನಾಂಕವನ್ನು ನೀಡುವಂತೆ ತಮ್ಮ ಕಛೇರಿಯಿಂದ ಪತ್ರ ಬರೆದು ಕೋರಲಾಗಿದೆ. ಕರ್ನಾಟಕದಲ್ಲಿ ಈಗಾಗಲೇ ತರಾತುರಿಯಲ್ಲಿ ವಿದ್ಯಾರ್ಥಿಗಳು, ತಜ್ಞರು, ಪ್ರಾಧ್ಯಾಪಕರು, ಪೋಷಕರ ಜೊತೆ ಚರ್ಚಿಸದೆ, ಸಾಧಕ-ಬಾಧಕಗಳನ್ನು ಪರಿಶೀಲಿಸದೆ ಈ ಶೈಕ್ಷಣಿಕ ವರ್ಷದಿಂದಲೇ ಅನುಷ್ಠಾನ ಮಾಡುವುದಾಗಿ ಹೇಳಿ ಉದ್ಘಾಟನೆಯನ್ನೂ ಮಾಡಲಾಗಿದೆ. ಉದ್ಘಾಟನೆಯನ್ನೂ ಮುಗಿಸಿ ಚರ್ಚೆ ಮಾಡಬೇಕು ಎಂದು ಕರೆಯುವುದು ಸಂಸದೀಯವಾಗಿ ಸರಿಯಲ್ಲ.

Education 1

ಒಂದು ಶಿಕ್ಷಣ ನೀತಿಯ ಅನುಷ್ಠಾನವೆಂದರೆ ಸಣ್ಣ ಸಂಗತಿಯೆ? ತಾವೂ ಕೂಡ ಬೆವರಿನ ಸಂಸ್ಕೃತಿಯ ಹಿನ್ನೆಲೆಯ ಸಮುದಾಯದಿಂದ ಬಂದಿದ್ದೀರಿ. ರಾಷ್ಟ್ರಕವಿ ಕುವೆಂಪು ಅವರು ಶಿಕ್ಷಣ, ಅದರ ಗುಣಮಟ್ಟವನ್ನು ಸುಧಾರಣೆ, ಕಲಿಕೆಯ ಮಾಧ್ಯಮ ಹಾಗೂ ಸರ್ಕಾರದ ಜವಾಬ್ದಾರಿಗಳ ಬಗ್ಗೆ ಮಾತನಾಡಿದ್ದಾರೆ. ಶಿಕ್ಷಣದ ಕುರಿತಂತೆ ಕೆಲಸ ಮಾಡುತ್ತಿರುವವರೆಲ್ಲರೂ ಕುವೆಂಪು ಅವರ ವಿಚಾರಗಳನ್ನು ಓದಿ, ಅದರಂತೆ ನಡೆದುಕೊಳ್ಳಬೇಕಾಗಿದೆ. ಇದನ್ನೂ ಓದಿ: ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ, ಕನ್ನಡಕ್ಕೆ ಧಕ್ಕೆ ಇಲ್ಲ- ಅಶ್ವಥ್ ನಾರಾಯಣ

ಮುಂದುವರೆದ ದೇಶಗಳಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಸರ್ಕಾರಗಳೆ ನಿರ್ವಹಿಸುತ್ತವೆ. ಯಾವುದೇ ನಾಡಿನಲ್ಲಿ ಉನ್ನತ ಶಿಕ್ಷಣ ವ್ಯವಸ್ಥೆ ಸಮರ್ಪಕವಾಗಿದ್ದರೆ ಆ ನಾಡಿನ ಸಮಸ್ತ ಆರೋಗ್ಯವೂ ಸರಿಯಾಗಿರುತ್ತದೆ. ಇಂದು ಭಾರತದ ಸಮಾಜಗಳು ತೀವ್ರ ರೂಪದ ಬಿಕ್ಕಟ್ಟುಗಳನ್ನು ಎದುರಿಸುತ್ತಿವೆ. ಅದಕ್ಕೆ ಕಾರಣಗಳು ಹಲವಿವೆ. ಮೊದಲನೇಯದಾಗಿ ವಿದ್ಯಾರ್ಥಿ ಶಿಕ್ಷಕ ಪ್ರಮಾಣ ವಿಪರೀತ ಹೆಚ್ಚಾಗಿದೆ, ಅದು ಕಡಿಮೆಯಾಗಬೇಕು. ಶಿಕ್ಷಣ ಕ್ಷೇತ್ರಕ್ಕೆ ಅತಿ ಕಡಿಮೆ ಅನುದಾನ ನೀಡಲಾಗುತ್ತಿದೆ. ಈ ನೀತಿಯ ಶಿಫಾರಸ್ಸುಗಳ ಪ್ರಕಾರ ಜಿಡಿಪಿಯಲ್ಲಿ ಕನಿಷ್ಠ ಶೇ.6 ರಷ್ಟು ಮೀಸಲಿರಿಸಬೇಕು. ಇದಾಗಬೇಕೆಂದರೆ ಕರ್ನಾಟಕದಲ್ಲಿ ಕನಿಷ್ಠ 1.08 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿರಿಸಬೇಕಾಗುತ್ತದೆ.

ಹೊಸ ಶಿಕ್ಷಣ ನೀತಿಯ ಹೇರಿಕೆಯು ಹಲವು ಸಮಸ್ಯೆಗಳನ್ನು ಒಳಗೊಂಡಿದೆ ಎಂದು ಹೇಳುತ್ತಿದೆ. ಒಕ್ಕೂಟ ವ್ಯವಸ್ಥೆಯ ಮೂಲ ಸ್ಫೂರ್ತಿಯ ನಿರಾಕರಣೆ, ಖಾಸಗೀಕರಣ, ತರಗತಿಗಳನ್ನು ನಿರಾಕರಿಸಿ ಕಾಲೇಜು, ವಿಶ್ವ ವಿದ್ಯಾಲಯಗಳ ಪಾವಿತ್ರ್ಯದ ನಿರಾಕರಣೆ, ಬಡವರು, ಹಿಂದುಳಿದವರು, ದಮನಿತರ ಸಿಗಬಹುದಾದ ಸುಲಭ ಶಿಕ್ಷಣದ ನಿರಾಕರಣೆ, ಕೋಮು ಅಜೆಂಡಾಗಳನ್ನು ತಂದು ಅವೈಜ್ಞಾನಿಕತೆಯನ್ನು, ದ್ವೇಷವನ್ನು ತುಂಬಿ ಭಾರತವನ್ನು ಶಾಶ್ವತ ಅಂಧಕಾರಕ್ಕೆ ತಳ್ಳಲಾಗುತ್ತಿದೆ ಮುಂತಾದ ಗಂಭೀರ ಆರೋಪಗಳಿವೆ. ಇದನ್ನೂ ಓದಿ: ನೂತನ ಶಿಕ್ಷಣ ನೀತಿಯಲ್ಲಿ ಸಂಶಯಗಳಿಗೆ ಎಡೆಯಿಲ್ಲ: ಅಶ್ವಥ್ ನಾರಾಯಣ್

ಸರ್ಕಾರ ಈ ಎಲ್ಲದರ ಕುರಿತು ಚರ್ಚೆ ನಡೆಸಬೇಕಾಗಿತ್ತು. ಇದೇನನ್ನೂ ನೀವು ಮಾಡಿಲ್ಲ. ನನ್ನ, ನಿಮ್ಮ ಆಯಸ್ಸು, ರಾಜಕೀಯ ವೃತ್ತಿ ಎಲ್ಲವೂ ಮುಂದೆಂದೊ ಒಂದು ದಿನ ಮುಗಿಯುತ್ತದೆ. ಆದರೆ ಶಿಕ್ಷಣ ನೀತಿಯ ಹೆಸರಲ್ಲಿ ಬಲಿಪಶುಗಳಾಗುವ ಮಕ್ಕಳ ಮುಂದೆ 70-80 ವರ್ಷಗಳ ಭವಿಷ್ಯವಿದೆ. ಶಿಕ್ಷಣದ ಹಂತದಲ್ಲಿ ಅವರ ಭವಿಷ್ಯ ಅಲ್ಲೋಲ, ಕಲ್ಲೋಲವಾದರೆ ಅದರ ಶಾಪವನ್ನು ಹೊರುವವರು ಯಾರು? ಈ ನಾಡಿನ, ರೈತರ, ಪಶುಪಾಲಕರ, ಕುಶಲಕರ್ಮಿಗಳ, ಸಣ್ಣ ಪುಟ್ಟ ವ್ಯಾಪಾರಿಗಳ, ಕಾರ್ಮಿಕರ ಮನೆಗಳಿಂದ ಬಂದ ಮಕ್ಕಳು ಗುಣ ಮಟ್ಟದ ಶಿಕ್ಷಣ ಪಡೆದು ಜಾಗತಿಕ ಮಟ್ಟದ ಉದಾರ ಮಾನವತಾವಾದಿ, ವೈಜ್ಞಾನಿಕ ಶಿಕ್ಷಣ ಪಡೆಯಬಾರದೆ? ತಾವು ನಿಜವಾಗಿಯೂ ನೈಜ ಸ್ಫೂರ್ತಿಯಲ್ಲಿ ಚರ್ಚೆಮಾಡಬಯಸಿದರೆ, ಕೂಡಲೇ ಈ ಹೊಸ ಶಿಕ್ಷಣ ನೀತಿಯನ್ನು ಹಿಂದಕ್ಕೆ ಪಡೆಯಿರಿ. ಚರ್ಚೆ ನಡೆಸಿದ ಮೇಲೆ ನಿಜವಾಗಿಯೂ ಈ ನೀತಿ ಆರೋಗ್ಯಕರವೆನ್ನಿಸಿ ಅನುಷ್ಠಾನ ಸೂಕ್ತವೆನ್ನಿಸಿದರೆ, ಈ ಶತಮಾನಕ್ಕೆ ಅತ್ಯಗತ್ಯ ಎನ್ನಿಸಿದರೆ ನಾವೆ ನಿಂತು ಅನುಷ್ಠಾನ ಮಾಡಲು ಬೆಂಬಲಿಸುತ್ತೇವೆ. ಇಲ್ಲದಿದ್ದರೆ ಮಕ್ಕಳ ಭವಿಷ್ಯದ ಕುತ್ತಿಗೆ ಕೊಯ್ಯುವಂಥ ಪಾಪದ ಕೆಲಸದಲ್ಲಿ ಭಾಗಿಯಾದೆವು ಎಂಬ ಪಶ್ಚಾತ್ತಾಪವನ್ನು ಹೊರಬೇಕಾಗುತ್ತದೆ ಎಂಬುದನ್ನು ತಮಗೆ ತಿಳಿಸಬಯಸುತ್ತೇನೆ.

TAGGED:AshwathnarayankarnatakaNational Education PolicyPublic TVsiddaramaiahಕರ್ನಾಟಕಡಾ.ಅಶ್ವತ್ಥ್ ನಾರಾಯಣಪಬ್ಲಿಕ್ ಟಿವಿರಾಷ್ಟ್ರೀಯ ಶಿಕ್ಷಣ ನೀತಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post
Darshan Vijayalakshmi
ಥಾಯ್ಲೆಂಡ್‌ನಲ್ಲಿ ಮ್ಯಾಂಗೋ ಸ್ಟಿಕ್ಕಿ ರೈಸ್ ಸವಿದ ದರ್ಶನ್ ವಿಜಯಲಕ್ಷ್ಮಿ
Cinema Latest Sandalwood Top Stories
Darshan Pavithra
ದರ್ಶನ್‌-ಪವಿತ್ರಾ ಲಿವ್‌ ಇನ್‌ ರಿಲೇಷನ್‌ ಶಿಪ್‌ನಲ್ಲಿದ್ದರು: ಸರ್ಕಾರ ಪರ ವಕೀಲ
Bengaluru City Cinema Court Latest Main Post National Sandalwood
Darshan Court
ದರ್ಶನ್‌ ಜಾಮೀನು ಭವಿಷ್ಯ | ನಾವು ಹೈಕೋರ್ಟ್ ಮಾಡಿದ ತಪ್ಪು ಮಾಡಲ್ಲ, ತರಾತುರಿಯಲ್ಲಿ ಆದೇಶ ಕೊಡಲ್ಲ – ಸುಪ್ರೀಂ
Bengaluru City Cinema Court Latest Main Post National Sandalwood
Appu Cup League
ಅಪ್ಪು ಕಪ್ ಸೀಸನ್ 3; ಜರ್ಸಿ ಅನಾವರಣ
Bengaluru City Cinema Karnataka Latest Top Stories

You Might Also Like

big bulletin 24 July 2025 part 1
Big Bulletin

ಬಿಗ್‌ ಬುಲೆಟಿನ್‌ 24 July 2025 ಭಾಗ-1

Public TV
By Public TV
8 hours ago
big bulletin 24 July 2025 part 2
Big Bulletin

ಬಿಗ್‌ ಬುಲೆಟಿನ್‌ 24 July 2025 ಭಾಗ-2

Public TV
By Public TV
8 hours ago
Rishabh Pant 1
Cricket

ನೋವಿನಲ್ಲೂ ಫಿಫ್ಟಿ ಹೊಡೆದ ಪಂತ್‌ – ಏಕದಿನದಂತೆ ಬ್ಯಾಟ್‌ ಬೀಸಿದ ಇಂಗ್ಲೆಂಡ್‌

Public TV
By Public TV
8 hours ago
big bulletin 24 July 2025 part 3
Big Bulletin

ಬಿಗ್‌ ಬುಲೆಟಿನ್‌ 24 July 2025 ಭಾಗ-3

Public TV
By Public TV
8 hours ago
Hubballi Exam
Dharwad

ಹುಬ್ಬಳ್ಳಿ ಪರೀಕ್ಷಾ ಕೇಂದ್ರದಲ್ಲಿ ಯಡವಟ್ಟು – ಮಧ್ಯಾಹ್ನ 2 ಗಂಟೆಗೆ ನಿಗದಿ, ರಾತ್ರಿ 10 ಕಳೆದರೂ ಆರಂಭವಾಗದ ಪರೀಕ್ಷೆ

Public TV
By Public TV
8 hours ago
Bengaluru Govindraj nagar arrest
Bengaluru City

ನಡುರಸ್ತೆಯಲ್ಲೇ ಯುವತಿಯ ತುಟ್ಟಿ ಕಚ್ಚಿ ಎಸ್ಕೇಪ್ ಆಗಿದ್ದ ಬೀದಿ ಕಾಮುಕ ಅರೆಸ್ಟ್

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?