Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕನ್ನಡ ಭಾಷೆಗೆ ಆದ್ಯತೆ – ಬೆಲ್ಲದ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕನ್ನಡ ಭಾಷೆಗೆ ಆದ್ಯತೆ – ಬೆಲ್ಲದ್

Dharwad

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕನ್ನಡ ಭಾಷೆಗೆ ಆದ್ಯತೆ – ಬೆಲ್ಲದ್

Public TV
Last updated: November 1, 2021 3:30 pm
Public TV
Share
3 Min Read
ARAVINDH BELLAD
SHARE

-ಹಿಂದಿನ ಸರ್ಕಾರ ಶಾಲೆಗಳನ್ನು ಇಂಗ್ಲೀಷ್ ಮಾಧ್ಯಮ ಮಾಡಿತ್ತು

ಹುಬ್ಬಳ್ಳಿ: ಹಿಂದಿನ ಸರ್ಕಾರ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಮಾಡುವಂತೆ ನಿರ್ಣಯ ತಗೆದುಕೊಂಡಿತ್ತು, ಆದರೆ ನ್ಯಾಯಾಲಯ ಅದಕ್ಕೆ ತಡೆಹಿಡಿದಿತ್ತು. ಇದೀಗ ನೂತನವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬಂದಿದ್ದು, ಅದರಡಿ ಪ್ರತಿಯೊಂದು ರಾಜ್ಯದಲ್ಲಿ ಆಯಾ ಪ್ರಾಥಮಿಕ ಭಾಷೆಗೆ ಹೆಚ್ಚು ಒತ್ತು ನೀಡಲಾಗಿದೆ. ಅದರಂತೆ ನಮ್ಮ ರಾಜ್ಯದಲ್ಲಿ ಪ್ರಾಥಮಿಕ ಭಾಷೆಯಾಗಿ ಕನ್ನಡಕ್ಕೆ ಆದ್ಯತೆ ನೀಡಲಾಗಿದೆ ಎಂದು ಶಾಸಕ ಅರವಿಂದ್ ಬೆಲ್ಲದ್ ಹೇಳಿದ್ದಾರೆ.

ARAVINDH BELLAD 1

ನಗರದ ಶ್ರೀಸಿದ್ಧಾರೂಢ ಮಠದ ಆವರಣದಲ್ಲಿಂದು ಕನ್ನಡ ರಾಜ್ಯೋತ್ಸವ ಅಂಗವಾಗಿ ಶ್ರೀಭುವನೇಶ್ವರಿ ಮಾತೆಗೆ ಪೂಜೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿದ ಅವರು, ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪ್ರಾಥಮಿಕ ಶಿಕ್ಷಣ ಸಂಪೂರ್ಣವಾಗಿ ಕನ್ನಡದ ಭಾಷೆ ಹಾಗೂ ಆಯಾ ರಾಜ್ಯದ ಭಾಷೆಯಲ್ಲಿಯೇ ಆಗುವುದು. ಇದರಿಂದ ನಮ್ಮ ದೇಶದ ಸಂಸ್ಕೃತಿ ಗಟ್ಟಿಯಾಗುತ್ತದೆ. ಮೂಲ ಭಾಷೆಗೆ ಗೌರವ ನೀಡಿದಂತಾಗುತ್ತದೆ. ಕರ್ನಾಟಕ ಹಾಗೂ ಕನ್ನಡ ಭಾಷೆ ಉದಯವಾಗಲು ಹುಬ್ಬಳ್ಳಿ ಧಾರವಾಡದ ಪಾತ್ರ ದೊಡ್ಡದಿದೆ ಎಂದರು.

ARAVINDH BELLAD 3

ಕನ್ನಡ ಏಕೀಕರಣಕ್ಕಾಗಿ ಕನ್ನಡ ಭಾಷೆಗಾಗಿ ಅದರಗುಂಚಿ ಶಂಕರರಾಯರು ಹೋರಾಟ ಮಾಡಿದ್ದರು. ಎಲ್ಲ ಹೋರಾಟಗಳಿಗೆ ಮುಂಚೂಣಿಯಲ್ಲಿ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘವಿತ್ತು. ಈ ಮೊದಲು ಕರ್ನಾಟಕವು ಹೈದರಾಬಾದ್ ಕರ್ನಾಟಕ, ಮಂಗಳೂರು, ಗೋವಾ ಬಾಂಬೆ ಕರ್ನಾಟಕ ಹೀಗೆ ಹರಿದು ಹಂಚಿಹೋಗಿತ್ತು. ಇವೆಲ್ಲವೂ ಅಖಂಡವಾಗಬೇಕು, ಕನ್ನಡ ಭಾಷೆ ಮಾತನಾಡುವವರು ಒಂದೇ ಕಡೆ ಇರಬೇಕು, ಕರ್ನಾಟಕ ನಿವಾಸಿಗಳಾಗಬೇಕು ಎಂದು ಹೋರಾಟ ಮಾಡಿದವರು ಅದರಗುಂಚಿ ಶಂಕರರಾಯರು ಹಾಗೂ ಕರ್ನಾಟಕ ವಿದ್ಯಾವರ್ಧಕ ಸಂಘದ  ಹೋರಾಟಗಾರರು. ಮೈಸೂರು ಭಾಗದ ನಾಯಕರು ಅಖಂಡ ಕರ್ನಾಟಕ ಒಂದಾದರೇ ಪ್ರಾತಿನಿತ್ಯ ಹೆಚ್ಚಾಗುತ್ತದೆ ಎಂದು ಮೈಸೂರು ಕರ್ನಾಟಕ ಸೇರಿ ಒಂದಾಯಿತು. ಇದೆಲ್ಲವು ಕರ್ನಾಟಕ ಉದಯಕ್ಕೆ ಕಾರಣವಾಯಿತು. ಭಾಷೆ ಉಳಿದರೆ ಆ ಭಾಷೆಯ ಸಂಸ್ಕೃತಿ  ಉಳಿಯಲು ಸಾಧ್ಯವಾಗುತ್ತದೆ ಎಂದು ನುಡಿದರು. ಇದನ್ನೂ ಓದಿ: ಮರಣೋತ್ತರ ರಾಜ್ಯೋತ್ಸವ ನೀಡಲು ಅವಕಾಶವಿಲ್ಲ: ಸುನೀಲ್ ಕುಮಾರ್

ARAVINDH BELLAD 2

ಮುಖ್ಯ ಅತಿಥಿಯಾಗಿ ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ ಇಟ್ನಾಳ್ ಮಾತನಾಡಿ, ಕರ್ನಾಟಕ ಏಕೀಕರಣ ಸಂದರ್ಭದಲ್ಲಿ ಕನ್ನಡಪರ ಸಂಘಟನೆಗಳ ಪಾತ್ರ ದೊಡ್ಡದು, ಅದರಲ್ಲೂ ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಹಾಗೂ ಸಂಘಟಣೆಗಾರರ ಪಾತ್ರವು ಹೆಚ್ಚಿದೆ. ನಗರದಲ್ಲಿ ನಾಮಫಲಕ ಬದಲಿಸುವ ಕೆಲಸ ಕಾರ್ಯೋನ್ಮುಖವಾಗಿದ್ದು, ಈಗಾಗಲೇ 320 ನಾಮಫಲಕಗಳನ್ನು ಬದಲಾವಣೆ ಮಾಡಲಾಗಿದೆ. ಇನ್ನುಳಿದ ಫಲಕಗಳನ್ನು ಶೀಘ್ರದಲ್ಲಿ ಬದಲಾವಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ ಮಾತನಾಡಿ, ಇಂದು ರಾಜ್ಯಾದ್ಯಂತ ಎಲ್ಲ ಕಡೆ ಕನ್ನಡ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲರಿಗೂ ಕನ್ನಡದ ಬಗ್ಗೆ ಅಭಿಮಾನ ಇರಬೇಕು. ಏಕೆಂದರೆ ಕನ್ನಡ ಅಳಿವು ಉಳಿವಿಗಾಗಿ ಕನ್ನಡ ಪರ ಸಂಘಟನೆಯು ದಿನನಿತ್ಯ ಹೋರಾಟ ಮಾಡುತ್ತಿದೆ. ಕನ್ನಡಕ್ಕೆ ದಕ್ಕೆಯಾದಾಗ ಹೋರಾಟ ನಡೆಸಿ ತಪ್ಪನ್ನು ತಿದ್ದುವ ಮೂಲಕ ಕನ್ನಡಪರ ಸಂಘಟನಕಾರರು ಅಭಿಮಾನವನ್ನು ತೋರುತ್ತ ಬಂದಿದ್ದಾರೆ. ಎಲ್ಲಿಯೋ ಇರು ಹೇಗೆಯೇ ಎಂದೆಂದಿಗೂ ನೀ ಕನ್ನಡವಾಗಿರು ಎಂದು ಡಾ. ರಾಜ್‍ಕುಮಾರ್, ಡಾ. ವಿಷ್ಣುವರ್ಧನ್ ಹಾಗೂ ಇನ್ನಿತರ ಕನ್ನಡ ಚಲನಚಿತ್ರ ನಟರು ಹಾಡಿನ ಮೂಲಕ ಕನ್ನಡ ಅಭಿಮಾನ ವ್ಯಕ್ತಪಡಿಸಿ, ಜನರಿಗೆ ಅರಿವು ಮೂಡಿಸುವಂತೆ ಮಾಡಿದ್ದಾರೆ. ನಮ್ಮ ನಾಡು ನುಡಿ ಉಳಿವಿಗಾಗಿ ನಾವು ಶ್ರಮಿಸಬೇಕು ಹಾಗೂ ಕನ್ನಡಕ್ಕೆ ಮೊದಲ ಆಧ್ಯತೆಯನ್ನು ನೀಡಬೇಕು. ನಮ್ಮ ಕನ್ನಡ ನಾಡು ಸಂಸ್ಕೃತಿಯನ್ನು ವಿದೇಶದವರು ಸಹ ಬೆಳೆಸುತ್ತಿದ್ದಾರೆ. ಕನ್ನಡ ಹಾಡುಗಳನ್ನು ಹಾಡಿ ಕುಣಿದು ಕುಪ್ಪಳಿಸಿ ಅಭಿಮಾನ ತೋರಿಸುತ್ತಾರೆ. ಅದಕ್ಕಾಗಿ ನಾವು ಕನ್ನಡವನ್ನು ಉಳಿಸಿ ಬೆಳೆಸಬೇಕಾಗಿದೆ ಎಂದರು. ಇದನ್ನೂ ಓದಿ: ನಾಲ್ವರ ಬಾಳಿಗೆ ಬೆಳಕಾದ ಅಪ್ಪು

ಇದೆ ಸಂದರ್ಭದಲ್ಲಿ 2021 ನೇ ಸಾಲಿನ ಕನ್ನಡ ಭಾಷೆಯಲ್ಲಿ 125 ಕ್ಕೆ 125 ಅಂಕ ಪಡೆದ 36 ವಿಧ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ನೀಡಿ ಹಾಗೂ ಹುಬ್ಬಳ್ಳಿ ಮತ್ತು ಧಾರವಾಡ ವಿಭಾಗದಿಂದ ಪ್ರಬಂಧ ಸ್ಪರ್ಧೆಯಲ್ಲಿ ಆಯ್ಕೆಯಾದ 6 ವಿಜೇತರಿಗೆ ಸನ್ಮಾನ ಮಾಡಲಾಯಿತು. ಇದನ್ನೂ ಓದಿ: ನಮ್ಮನ್ನ ಎಂದೂ ಅವ್ರು ಕೆಲ್ಸದವರಂತೆ ನೋಡಿಲ್ಲ: ಕೇಶ ವಿನ್ಯಾಸಕಾರ ಕಾರ್ತಿಕ್ ಭಾವುಕ

ಕಾರ್ಯಕ್ರಮದಲ್ಲಿ ಮೊಷ್ಲೋದೇವಿ ಮಂದಿರದ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ದೇವಪ್ಪಜ್ಜನವರ, ಹೆಚ್ಚುವರಿ ಆಯುಕ್ತ ಎ.ಆರ್.ದೇಸಾಯಿ, ಪಾಲಿಕೆ ಪಿ.ಆರ್.ಒ ಎಸ್.ಸಿ ಬೇವೂರ ಸೇರಿದಂತೆ ಪಾಲಿಕೆ ನೂತನವಾಗಿ ಆಯ್ಕೆಯಾದ ಸರ್ವ ಸದಸ್ಯರು, ಪಾಲಿಕೆ ಅಧಿಕಾರಿಗಳು, ಕನ್ನಡಪರ ಸಂಘಟನೆಯವರು, ಪದಾಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

TAGGED:Arvind BelladhubballikannadaKannada languageKannada RajyotsavaNational Education PolicyPublic TVಅರವಿಂದ್ ಬೆಲ್ಲದ್ಕನ್ನಡಕನ್ನಡ ಭಾಷೆಕನ್ನಡ ರಾಜ್ಯೋತ್ಸವಪಬ್ಲಿಕ್ ಟಿವಿರಾಷ್ಟ್ರೀಯ ಶಿಕ್ಷಣ ನೀತಿವಿದ್ಯಾವರ್ಧಕಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World
I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories

You Might Also Like

Indore Fire Accident
Latest

ಶಾರ್ಟ್ ಸರ್ಕ್ಯೂಟ್‌ನಿಂದ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಬೆಂಕಿ – 7 ಮಂದಿ ಸಜೀವ ದಹನ

Public TV
By Public TV
4 minutes ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ತೈಲ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
21 minutes ago
KH Muniyappa 1
Bengaluru City

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ

Public TV
By Public TV
35 minutes ago
RAMALINGA REDDY
Bengaluru City

ವೈಷ್ಣೋದೇವಿ ಯಾತ್ರೆಗೂ ಸರ್ಕಾರದಿಂದ ಸಹಾಯ ಧನ: ರಾಮಲಿಂಗಾರೆಡ್ಡಿ

Public TV
By Public TV
43 minutes ago
LPG Commercial Cylinder
Bengaluru City

ರಾಜ್ಯದಲ್ಲಿ ಗ್ಯಾಸ್ ವಿತರಣೆಗೆ ಗೈಡ್‌ಲೈನ್ಸ್ ಬಿಡುಗಡೆ – ಹೋಟೆಲ್‌ಗಳಿಗೆ ಕೇವಲ 10%

Public TV
By Public TV
2 hours ago
Haveri Tractor Driver Death
Crime

ಇಟ್ಟಿಗೆ ತುಂಬಿದ ಟ್ರ‍್ಯಾಕ್ಟರ್ -‌ ಟ್ರೇಲರ್ ಮಧ್ಯೆ ಸಿಲುಕಿ ಚಾಲಕ ದುರ್ಮರಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?