ನವದೆಹಲಿ: ಕೈಗಾ ಅಣು ವಿದ್ಯುತ್ ಸ್ಥಾವರದಿಂದ ಹೆಚ್ಚುವರಿ ಉತ್ಪಾದನೆಗೆ ಅನುಮತಿ ನೀಡಿದ ಕ್ರಮಕ್ಕೆ ಉತ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ದಕ್ಷಿಣ ವಲಯ ಹಸಿರು ನ್ಯಾಯಾಧಿಕರಣ ನೋಟಿಸ್ ನೀಡಿದೆ.
ಇಂದು ವಿಚಾರಣೆ ನಡೆಸಿದ ದಕ್ಷಿಣ ವಲಯ ಹಸಿರು ನ್ಯಾಯಾಧಿಕರಣ, ಕೇಂದ್ರ ಅರಣ್ಯ, ಪರಿಸರ ಮತ್ತು ಹವಮಾನ ಬದಲಾವಣೆ ಇಲಾಖೆಗೆ ನೋಟಿಸ್ ನೀಡಿದೆ.
ಕೈಗಾದಲ್ಲಿ 14 ಸಾವಿರ ಮೆಗಾ ವ್ಯಾಟ್ ಹೆಚ್ಚುವರಿ ವಿದ್ಯುತ್ ಉತ್ಪಾದನೆಗೆ ಅನುಮತಿ ನೀಡಿದ್ದ ಕೇಂದ್ರ ಸರ್ಕಾರದ ನಡೆಯನ್ನು ಪ್ರಶ್ನಿಸಿ ಸ್ಥಳೀಯ ಗ್ರಾಮಸ್ಥರು ಅರ್ಜಿ ಸಲ್ಲಿಸಿದ್ದರು. ಪಶ್ಚಿಮ ಘಟ್ಟಗಳು ಪರಿಸ್ಥಿತಿ ಸೂಕ್ಷ್ಮ ವಲಯಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಲೆಕ್ಕಿಸದೆ ಅನುಮತಿ ನೀಡಿದೆ, ಇದು ಸರಿಯಾದ ನಿರ್ಣಯ ಅಲ್ಲ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು.
ಅರ್ಜಿದಾರರ ಪರ ವಾದ ಮಂಡಸಿದ ವಕೀಲ ದೇವದತ್ ಕಾಮತ್, ಜಾವೇದೂರ್ ರೆಹಮಾನ್, ಬಿ.ಎಸ್ ಪೈ ಅನುಮತಿಯನ್ನು ರದ್ದು ಮಾಡುವಂತೆ ಮನವಿ ಮಾಡಿದರು. ವಾದ ಆಲಿಸಿದ ದಕ್ಷಿಣ ಪೀಠ ನೋಟಿಸ್ ನೀಡಿ ಜನವರಿ 28ಕ್ಕೆ ವಿಚಾರಣೆ ಮುಂದೂಡಿದೆ.