Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನ್ಯಾಷನಲ್ ಹೆರಾಲ್ಡ್ ಕೇಸ್‌ | ರಾಹುಲ್, ಸೋನಿಯಾ ವಿರುದ್ಧದ ಆರೋಪ ಪರಿಗಣನೆ ಕುರಿತು ತೀರ್ಪು ಕಾಯ್ದಿರಿಸಿದ ದೆಹಲಿ ಕೋರ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ನ್ಯಾಷನಲ್ ಹೆರಾಲ್ಡ್ ಕೇಸ್‌ | ರಾಹುಲ್, ಸೋನಿಯಾ ವಿರುದ್ಧದ ಆರೋಪ ಪರಿಗಣನೆ ಕುರಿತು ತೀರ್ಪು ಕಾಯ್ದಿರಿಸಿದ ದೆಹಲಿ ಕೋರ್ಟ್‌

Court

ನ್ಯಾಷನಲ್ ಹೆರಾಲ್ಡ್ ಕೇಸ್‌ | ರಾಹುಲ್, ಸೋನಿಯಾ ವಿರುದ್ಧದ ಆರೋಪ ಪರಿಗಣನೆ ಕುರಿತು ತೀರ್ಪು ಕಾಯ್ದಿರಿಸಿದ ದೆಹಲಿ ಕೋರ್ಟ್‌

Public TV
Last updated: July 14, 2025 3:05 pm
Public TV
Share
3 Min Read
Sonia Gandhi And Rahul Gandhi
SHARE

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ಸೋನಿಯಾ, ರಾಹುಲ್ ಗಾಂಧಿ (Rahul Gandhi, Sonia Gandhi )ಹಾಗೂ ಉಳಿದ ಐವರ ವಿರುದ್ಧದ ಹಣ ವರ್ಗಾವಣೆ ಆರೋಪವನ್ನು ಪರಿಗಣಿಸಬೇಕೆ ಎಂಬ ಕುರಿತು ದೆಹಲಿ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ.

ಜುಲೈ 29ರಂದು ಆದೇಶ ಪ್ರಕಟಿಸುವುದಾಗಿ ರೋಸ್‌ ಅವೆನ್ಯೂ ಕೋರ್ಟ್‌ (Rouse Avenue Court) ಸಂಕೀರ್ಣದಲ್ಲಿನ ಭ್ರಷ್ಟಾಚಾರ ತಡೆ ಕಾಯ್ದೆಯಡಿ ರೂಪುಗೊಂಡಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶಾಲ್ ಗೋಗ್ನೆ ತಿಳಿಸಿದ್ದಾರೆ. ಗಾಂಧಿ ಕುಟುಂಬದವರಲ್ಲದೇ ಸುಮನ್ ದುಬೆ, ಸ್ಯಾಮ್ ಪಿತ್ರೋಡಾ, ಸುನಿಲ್‌ ಭಂಡಾರಿ ಹಾಗೂ ಯಂಗ್ ಇಂಡಿಯನ್, ಡೋಟೆಕ್ಸ್ ಮರ್ಚಂಡೈಸ್ ಕೂಡ ಜಾರಿ ನಿರ್ದೇಶನಾಲಯ ಪ್ರಕರಣದ ಆರೋಪಿಗಳನ್ನಾಗಿ ಹೆಸರಿಸಿತ್ತು.

ED enforcement directorate

ನ್ಯಾಷನಲ್‌ ಹೆರಾಲ್ಡ್‌ (National Herald) ಪತ್ರಿಕೆಯ ಒಡೆತನ ಹೊಂದಿದ್ದ ಅಸೋಸಿಯೇಟೆಡ್‌ ಜರ್ನಲ್ಸ್‌ ಲಿಮಿಟೆಡ್‌ಗೆ ಕಾಂಗ್ರೆಸ್‌ 90 ಕೋಟಿ ರೂ.ನಷ್ಟು ಸಾಲ ನೀಡಿತ್ತು. ಯಂಗ್‌ ಇಂಡಿಯನ್‌ ಸಂಸ್ಥೆ ಕಾಂಗ್ರೆಸ್‌ಗೆ ಕೇವಲ 50 ಲಕ್ಷ ಹಣ ನೀಡಿ ಎಜೆಎಲ್‌ ಕಾಂಗ್ರೆಸ್‌ಗೆ ನೀಡಬೇಕಿದ್ದ 90 ಕೋಟಿ ರೂ.ನಷ್ಟು ಹಣ ಹಿಂಪಡೆಯಬೇಕಾದ ಹಕ್ಕನ್ನು ತನ್ನದಾಗಿಸಿಕೊಂಡಿತ್ತು. ಇದನ್ನೂ ಓದಿ: ಲವ್ ಜಿಹಾದ್‌ಗೆ 1,000 ಮುಸ್ಲಿಂ ಯುವಕರನ್ನು ನೇಮಿಸಿದ್ದ ಛಂಗೂರ್ ಬಾಬಾ!

ಆ ಮೂಲಕ ಸುಮಾರು 2,000 ಕೋಟಿ ರೂ.ಗಿಂತಗೂ ಅಧಿಕ ಮಾರುಕಟ್ಟೆ ಮೌಲ್ಯದ ಆಸ್ತಿಯನ್ನು ಯಂಗ್‌ ಇಂಡಿಯನ್‌ (Young Indian) ಸಂಸ್ಥೆಯು ತನ್ನ ವಶಕ್ಕೆ ಪಡೆಯಲು ಅವ್ಯವಹಾರ ನಡೆಸಿದೆ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಷೇರುಗಳ ಮೌಲ್ಯ, ಎಜೆಎಲ್‌ನ ಸ್ಥಿರ ಆಸ್ತಿಗಳು ಮತ್ತು ಅವುಗಳಿಂದ ದೊರೆಯುವ ಬಾಡಿಗೆಯನ್ನು ಅಪರಾಧದ ಗಳಿಕೆ ಎಂದು ಇಡಿ ದೂರಿತ್ತು. ಆದ್ರೆ ಆಸ್ತಿಯನ್ನ ಬಳಸದಿದ್ದರೂ ಅಥವಾ ಅಂದಾಜಿಸದಿದ್ದರೂ ಹಣ ವರ್ಗಾವಣೆ ಆರೋಪ ಮಾಡಿರುವುದು ವಿಚಿತ್ರ ಮತ್ತು ಹಿಂದೆಂದೂ ಕೇಳರಿಯದ ಪ್ರಕರಣ ಎಂದು ಗಾಂಧಿ ಕುಟುಂಬ ವಾದಿಸಿತ್ತು.

sonia rahul gandhi

ಸಾಲಕ್ಕೆ ಬದಲಾಗಿ ಎಜೆಎಲ್‌ನ ಆಸ್ತಿಗಳನ್ನು ಕಬಳಿಸಲು ಯಂಗ್ ಇಂಡಿಯನ್‌ ಸಂಸ್ಥೆಯನ್ನು ಬಳಸಿಕೊಳ್ಳಲಾಗಿದೆ ಎಂಬ ಜಾರಿ ನಿರ್ದೇಶನಾಲಯದ ಆರೋಪಗಳನ್ನು ಕಾಂಗ್ರೆಸ್ ನಾಯಕರು ನಿರಾಕರಿಸಿದ್ದರು. ಎಜೆಎಲ್ ಕಂಪೆನಿಯನ್ನು ಸಾಲ ಮುಕ್ತಗೊಳಿಸಲು ಈ ಸಾಲ ನೀಡಲಾಗಿತ್ತು ಎಂದು ಅವರು ವಾದಿಸಿದ್ದರು. ಇದನ್ನೂ ಓದಿ: ಉತ್ತರಾಖಂಡ ಸರ್ಕಾರದಿಂದ ‘ಆಪರೇಷನ್ ಕಾಲನೇಮಿ’ ಕಾರ್ಯಾಚರಣೆ – 82 ನಕಲಿ ಬಾಬಾಗಳ ಬಂಧನ

ಸೋನಿಯಾ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್, ಸುಮನ್ ದುಬೆ, ಸ್ಯಾಮ್ ಪಿತ್ರೋಡಾ ಮತ್ತು ಗಾಂಧಿ ಕುಟುಂಬದ ನಿಯಂತ್ರಣದಲ್ಲಿರುವ – ಯಂಗ್ ಇಂಡಿಯನ್ ಲಿಮಿಟೆಡ್‌ ವಿರುದ್ಧ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಖಾಸಗಿ ದೂರು ದಾಖಲಿಸಿ ವಂಚನೆ, ಕ್ರಿಮಿನಲ್ ಪಿತೂರಿ, ಕ್ರಿಮಿನಲ್ ನಂಬಿಕೆ ದ್ರೋಹ ಹಾಗೂ ಆಸ್ತಿ ದುರುಪಯೋಗದ ಆರೋಪ ಮಾಡುವ ಮೂಲಕ ಪ್ರಕರಣ ಬಹಿರಂಗಗೊಂಡಿತ್ತು.

COURT

ಕಳೆದ ಏಪ್ರಿಲ್ 15 ರಂದು ಗಾಂಧಿ ಕುಟುಂಬ, ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಹಾಗೂ ಇತರರ ವಿರುದ್ಧ ಇಡಿ ಪ್ರಾಸಿಕ್ಯೂಷನ್ ದೂರು ದಾಖಲಿಸಿತ್ತು. ಹೆಚ್ಚುವರಿ ಸಾಲಿಸಿಟರ್ ಜನರಲ್ (ASG) ಎಸ್‌.ವಿ ರಾಜು, ವಿಶೇಷ ವಕೀಲ ಜೊಹೆಬ್ ಹೊಸೈನ್ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎನ್‌.ಕೆ ಮಟ್ಟಾ ಮತ್ತವರ ತಂಡ ಇಡಿ ಪರವಾಗಿ ವಾದ ಮಂಡಿಸಿತ್ತು. ಸೋನಿಯಾ ಗಾಂಧಿ ಅವರನ್ನ ಡಾ. ಅಭಿಷೇಕ್‌ ಮನು ಸಿಂಘ್ವಿ ಹಾಗೂ ಅವರ ಕಾನೂನು ತಂಡ ಪ್ರತಿನಿಧಿಸಿತ್ತು. ಹಿರಿಯ ವಕೀಲ ಆರ್.ಎಸ್ ಮಾ ಅವರ ತಂಡ ರಾಹುಲ್‌ ಪರವಾಗಿ ವಾದ ಮಂಡಿಸಿತ್ತು. ಇದನ್ನೂ ಓದಿ: ಸಂಜಯ್‌ ಗಾಂಧಿ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆ ಸಫಾರಿಗೆ ಪ್ಲ್ಯಾನ್‌ – ಪ್ರವಾಸಿಗರಿಗೆ ಸಿಗಲಿದೆ ಥ್ರಿಲ್ಲಿಂಗ್‌ ಅನುಭವ

ಸುಮನ್ ದುಬೆ ಪರ ವಕೀಲರಾದ ಸುಶೀಲ್ ಬಜಾಜ್, ಅಲ್ಕಾ ಚೋಹರ್, ಆಶಿಶ್ ಚೋಹರ್ ಮತ್ತು ಅಕ್ಷ್ಯ ನಾಗರಾಜನ್, ಸ್ಯಾಮ್‌ ಪಿತ್ರೋಡಾ ಪರವಾಗಿ ವಕೀಲರಾದ ಕುಬೇರ್ ಬೋಧ್, ಮನಿಕಾ ಸಿಂಗ್ ಅವಿಜಿತ್ ಮತ್ತು ಸೋಮ್ಯಾ ಧವನ್, ಯಂಗ್‌ ಇಂಡಿಯನ್‌ ಪರ ವಕೀಲರಾದ ನಕುಲ್ ಗಾಂಧಿ, ಆಕಾಶ್ ಸಿಂಗ್, ಅಮಿತ್ ಮತ್ತು ಸಂಜೀವನಿ ಅವರೊಂದಿಗೆ ಹಿರಿಯ ವಕೀಲ ಮಾಧವ್ ಖುರಾನಾ, ಡೋಟೆಕ್ಸ್ ಮರ್ಚಂಡೈಸ್ ಪರವಾಗಿ ಹಿರಿಯ ವಕೀಲ ಪ್ರಮೋದ್ ಕುಮಾರ್ ದುಬೆ ಮತ್ತವರ ತಂಡ, ಸುನಿಲ್ ಭಂಡಾರಿ ಪರ ವಕೀಲರಾದ ಸೌಜನ್ಯಾ ಶಂಕರನ್, ಸಿದ್ಧಾರ್ಥ್ ಸತಿಜಾ, ಆಕಾಶ್ ಸಚನ್ ಮತ್ತು ಅನುಕಾ ಭಚಾವತ್ ವಾದ ಮಂಡಿಸಿದ್ದರು.

TAGGED:Delhi courtED Casenational heraldRahul GandhiSonia Gandhiದೆಹಲಿ ಕೋರ್ಟ್ನ್ಯಾಷನಲ್ ಹೆರಾಲ್ಡ್ರಾಹುಲ್ ಗಾಂಧಿಸೋನಿಯಾ ಗಾಂಧಿ
Share This Article
Facebook Whatsapp Whatsapp Telegram

Cinema news

Toxic Teaser
Toxic Teaser | ಡ್ಯಾಡಿ ಈಸ್ ಹೋಮ್ – ಯಶ್ ʻಟಾಕ್ಸಿಕ್ʼ ಕಿಕ್ ಅಬ್ಬಬ್ಬಾ!
Bollywood Cinema Latest Main Post Sandalwood
yash
40ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿ ʻಮಾಸ್ಟರ್‌ಪೀಸ್‌ʼ ರಾಕಿಭಾಯ್‌
Cinema Latest Main Post Sandalwood
Thalapathy Vijay Jana Nayagan
ವಿಜಯ್‌ ಫ್ಯಾನ್ಸ್‌ಗೆ ಶಾಕ್‌; ಜ.9 ಕ್ಕೆ ‘ಜನನಾಯಗನ್‌’ ರಿಲೀಸ್‌ ಆಗಲ್ಲ
Cinema Latest Main Post South cinema
Supreme Court and Ramya
ಪುರುಷರ ಮನಸ್ಸನ್ನು ಅರ್ಥ ಮಾಡ್ಕೊಳ್ಳಕ್ಕೆ ಆಗಲ್ಲ, ಹಾಗಾದ್ರೆ ಎಲ್ಲರನ್ನೂ ಜೈಲಿಗೆ ಹಾಕ್ಬೇಕಾ? – ರಮ್ಯಾ ವಿವಾದಾತ್ಮಕ ಪೋಸ್ಟ್
Latest Sandalwood Top Stories

You Might Also Like

Zameer Ahmed Khan
Bengaluru City

161 ಮನೆ ನೆಲಸಮ ಆಗಿದೆ, 26 ಜನಕ್ಕೆ ಇವತ್ತೇ ಮನೆ ಕೊಡಬಹುದು: ಜಮೀರ್

Public TV
By Public TV
15 minutes ago
IED neutralised
Latest

ರಾಜೌರಿಯಲ್ಲಿ 4 Kg ಐಇಡಿ ನಿಷ್ಕ್ರಿಯ – ಭಯೋತ್ಪಾದಕರ ಸಂಜು ವಿಫಲ, ತಪ್ಪಿದ ಅನಾಹುತ

Public TV
By Public TV
26 minutes ago
Santosh Lad
Dharwad

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯೇ ಬಟ್ಟೆ ಹರಿದುಕೊಂಡಿದ್ದಾಳೆ: ಸಂತೋಷ್ ಲಾಡ್

Public TV
By Public TV
40 minutes ago
Traffic Police
Districts

ಸಹ ಸಿಬ್ಬಂದಿಯಿಂದ ಕಿರುಕುಳ – ಸಂಚಾರ ಪೊಲೀಸ್‌ ಠಾಣೆಯಲ್ಲೇ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ

Public TV
By Public TV
1 hour ago
Chikkaballapura Devanahalli Train Rams On Hand
Chikkaballapur

ರೈಲು ಹರಿದು ಕೈ ಕಟ್ – ಗಾಂಜಾ ಮತ್ತಿನಲ್ಲಿ ಚಿಕಿತ್ಸೆ ಬೇಡ ಅಂತ ಓಡಿದ ಭೂಪ

Public TV
By Public TV
1 hour ago
Chikkamagaluru School
Chikkamagaluru

ಮೂಡಿಗೆರೆ | ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನ ಪ್ರವಾಸ ಭಾಗ್ಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?