ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪಂಜಾಬ್ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಮುಂದೆ ಬರಲಿರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪ್ರಚಾರ ಕಾರ್ಯಗಳ ಸಂಬಂಧ ಪತ್ರ ಬರೆದಿದ್ದಾರೆ.
ಅಕ್ಟೋಬರ್ 15ರಂದೇ ಸಿಧು ಪತ್ರ ಬರೆದಿದ್ದು, ಇಂದು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ. ರಾಹುಲ್ ಗಾಂಧಿ ಮತ್ತು ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಿ ಪಂಜಾಬ್ ಕಾಂಗ್ರೆಸ್ನ ಅಧ್ಯಕ್ಷ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ಹಿಂಪಡೆದ ಸಿಧು, ಎಲ್ಲವೂ ಬಗೆಹರಿದಿದೆ ಎಂದು ಪ್ರತಿಕ್ರಿಯಿಸಿದ್ದರು. ಅದರ ಬೆನ್ನಲ್ಲೇ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವುದು ಕೂತುಹಲ ಕೆರಳಿಸಿದೆ. ಇನ್ಮುಂದೆ ತಪ್ಪು ಮಾಡಲ್ಲ, ಬಡವರಿಗೆ ನೆರವಾಗುತ್ತೇನೆ: ಆರ್ಯನ್ ಖಾನ್
— Navjot Singh Sidhu (@sherryontopp) October 17, 2021
ಪತ್ರದಲ್ಲಿ ಏನಿದೆ: ಧರ್ಮ ಅಪವಿತ್ರಗೊಳಿಸಿದ ಪ್ರಕರಣಗಳಲ್ಲಿ ನ್ಯಾಯ, ಪಂಜಾಬ್ನ ಡ್ರಗ್ಸ್ ಕಿರುಕುಳ, ಕೃಷಿ ವಿಚಾರಗಳು, ಉದ್ಯೋಗ ಅವಕಾಶಗಳು, ಮರಳು ಗಣಿಗಾರಿಕೆ ಹಾಗೂ ಹಿಂದುಳಿದ ವರ್ಗಗಳ ಉನ್ನತಿ ಕುರಿತ ಅಂಶಗಳು ಪಕ್ಷದ ಪ್ರಚಾರ ಕಾರ್ಯಸೂಚಿಯಲ್ಲಿವೆ. ಮುಂದಿನ ವರ್ಷ ಪಂಜಾಬ್ ವಿಧಾನಸಭೆಗೆ ಚುನಾವಣೆ ನಿಗದಿಯಾಗಿದ್ದು, ಹದಿಮೂರು ಅಂಶಗಳನ್ನು ಒಳಗೊಂಡ ಕಾರ್ಯಸೂಚಿಯನ್ನು ಪ್ರಸ್ತುತ ಪಡಿಸಲು ಸಭೆ ಸೇರುವ ಕುರಿತು ಸಿಧು ಸೋನಿಯಾ ಅವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಮಹಾರಾಣಿ ಧಿರಿಸಿನಲ್ಲಿ ಮೇಘನಾ ಫುಲ್ ಮಿಂಚಿಂಗ್