Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Navratri 2025 Day 6: ದೇವತೆಗಳನ್ನು ರಾಕ್ಷಸರಿಂದ ರಕ್ಷಿಸಿದ ಕಾತ್ಯಾಯಿನಿ ದೇವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | Navratri 2025 Day 6: ದೇವತೆಗಳನ್ನು ರಾಕ್ಷಸರಿಂದ ರಕ್ಷಿಸಿದ ಕಾತ್ಯಾಯಿನಿ ದೇವಿ

Latest

Navratri 2025 Day 6: ದೇವತೆಗಳನ್ನು ರಾಕ್ಷಸರಿಂದ ರಕ್ಷಿಸಿದ ಕಾತ್ಯಾಯಿನಿ ದೇವಿ

Public TV
Last updated: September 26, 2025 6:47 pm
Public TV
Share
4 Min Read
Katyayani Devi
SHARE

ನವರಾತ್ರಿಯ ಆರನೇ ದಿನವನ್ನು ಕಾತ್ಯಾಯಿನಿ ದೇವಿ (Katyayani Devi) ಎಂದು ಕರೆಯಲ್ಪಡುವ ದುರ್ಗಾ ದೇವಿಯ ಉಗ್ರ ಅವತಾರಕ್ಕೆ ಸಮರ್ಪಿಸಲಾಗಿದೆ. ಸಿಂಹದ ಮೇಲೆ ಸವಾರಿ ಮಾಡುವ, ಕಮಲದ ಹೂವು, ಖಡ್ಗ ಮತ್ತು ಶಿವನ ತ್ರಿಶೂಲ ಸೇರಿದಂತೆ ಬಹು ಆಯುಧಗಳನ್ನು ತನ್ನ ಕೈಗಳಲ್ಲಿ ಹಿಡಿದಿರುವ ಮಹಿಷಾಸುರಮರ್ಧಿನಿಯನ್ನು ಷಷ್ಠಿಯಂದು ಅಂದರೆ ನವರಾತ್ರಿ ಹಬ್ಬದ 6ನೇ ದಿನದಂದು ಪೂಜಿಸಲಾಗುತ್ತದೆ. ನವರಾತ್ರಿಯ ಆರನೇ ದಿನ ಪೂಜಿಸಲ್ಪಡುವ ಕಾತ್ಯಾಯಿನಿ ದೇವಿ, ಮಹಿಷಾಸುರನನ್ನು ಕೊಂದವಳು, ದೇವತೆಗಳನ್ನು ರಾಕ್ಷಸರ ಸೆರೆಯಿಂದ ಬಿಡಿಸಿದವಳು. ಈಕೆ ಮಹಿಷಾಸುರ ಮರ್ಧಿನಿ, ಸುಜನರಕ್ಷಕಿ. ಈ ದಿನ ತಾಯಿಯನ್ನು ಪೂಜಿಸುವವರಿಗೆ ಆಯುರಾರೋಗ್ಯ ಭಾಗ್ಯ ಸದಾ ಇರುತ್ತದೆ ಇರುತ್ತದೆ.

ಕಾತ್ಯಾಯಿನಿ ದೇವಿಯನ್ನು ಶತ್ರುಗಳಿಂದ ಮತ್ತು ತೊಂದರೆಗಳಿಂದ ಮುಕ್ತಿ ನೀಡುವವಳು ಎಂದು ಪರಿಗಣಿಸಲಾಗಿದೆ. ದೇವತೆಗಳನ್ನು ರಾಕ್ಷಸರಿಂದ ರಕ್ಷಿಸಿದ ದೇವತೆ ಈಕೆ. ಈ ತಾಯಿ ಮಹಿಷಾಸುರನನ್ನು ಕೊಂದಳು, ನಂತರ ಶುಂಭ ಮತ್ತು ನಿಶುಂಭರನ್ನೂ ಕೂಡ ಕೊಂದಳು. ಅಷ್ಟೇ ಅಲ್ಲ, ರಾಕ್ಷಸರು ಸೆರೆಯಲ್ಲಿ ಇಟ್ಟಿದ್ದ ಎಲ್ಲಾ ಒಂಬತ್ತು ಗ್ರಹಗಳು ಕೂಡ ಈಕೆಯ ಮೂಲಕ ಬಿಡುಗಡೆ ಹೊಂದಿದವು.

ಮಹರ್ಷಿ ಕಾತ್ಯಾಯನರು ದೇವಿ ಆದಿಶಕ್ತಿಗಾಗಿ ತೀವ್ರ ತಪಸ್ಸು ಮಾಡಿದರು. ಪರಿಣಾಮವಾಗಿ ಅವರು ದೇವಿಯನ್ನು ತಮ್ಮ ಮಗಳಾಗಿ ಪಡೆದರು. ದೇವಿಯು ಮಹರ್ಷಿ ಕಾತ್ಯಾಯನರ ಆಶ್ರಮದಲ್ಲಿ ಜನಿಸಿದಳು. ಕಾತ್ಯಾಯನರ ಮಗಳಾದ ಕಾರಣದಿಂದ ಅವಳನ್ನು ಕಾತ್ಯಾಯಿನಿ ಎಂದು ಕರೆಯಲಾಗುತ್ತದೆ. ದೇವಿಯು ಜನಿಸುವ ಮುನ್ನ ಮಹಿಷಾಸುರನೆಂಬ (Mahishasura) ರಾಕ್ಷಸನ ದೌರ್ಜನ್ಯವು ಲೋಕದಲ್ಲಿ ಬಹಳಷ್ಟು ಹೆಚ್ಚಾಗಿತ್ತು. ರಾಕ್ಷಸರು ಸ್ವರ್ಗ ಹಾಗೂ ಭೂಮಿಯಲ್ಲಿ ಗದ್ದಲ ಸೃಷ್ಟಿಸಿದರು. ಅಶ್ವಿನಿ ತಿಂಗಳ ಕೃಷ್ಣ ಪಕ್ಷದ ಚತುರ್ದಶಿಯಂದು ಕಾತ್ಯಾಯನ ಮುನಿ ಮನೆಯಲ್ಲಿ ತ್ರಿದೇವರ ಪ್ರಕಾಶಮಾನವಾದ ದೇವತೆ ಜನಿಸಿದಳು. ಇದರ ನಂತರ ಕಾತ್ಯಾಯನ ಋಷಿ ತಾಯಿಯನ್ನು ಮೂರು ದಿನಗಳ ಕಾಲ ಪೂಜಿಸಿದರು. ಇದರ ನಂತರ, ದಶಮಿಯ ದಿನದಂದು, ಮಹಿಷಾಸುರನನ್ನು ಕಾತ್ಯಾಯಿನಿ ಕೊಂದಳು. ಶುಂಭ ಮತ್ತು ನಿಶುಂಭರೂ ಸ್ವರ್ಗದ ಮೇಲೆ ದಾಳಿ ನಡೆಸಿ ಹಾಳುಮಾಡಿದ್ದರು. ಇಂದ್ರನ ಸಿಂಹಾಸನವನ್ನೂ ಸಹ ಕಿತ್ತುಕೊಂಡಿದ್ದರು. ಅಷ್ಟೇ ಅಲ್ಲ ನವಗ್ರಹಗಳನ್ನೂ ಒತ್ತೆಯಾಳಾಗಿರಿಸಿಕೊಂಡಿದ್ದರು. ರಾಕ್ಷಸರು ಬೆಂಕಿ ಮತ್ತು ಗಾಳಿಯ ಶಕ್ತಿಯನ್ನು ಕೂಡ ವಶಪಡಿಸಿಕೊಂಡರು. ಇದರಿಂದ ನೊಂದ ಎಲ್ಲಾ ದೇವತೆಗಳು ದೇವಿಯಿದ್ದ ಆಶ್ರಯಕ್ಕೆ ಹೋದರು ಮತ್ತು ಅವರನ್ನು ಅಸುರರ ದೌರ್ಜನ್ಯದಿಂದ ಮುಕ್ತಗೊಳಿಸುವಂತೆ ಪ್ರಾರ್ಥಿಸಿದರು. ತಾಯಿ ಈ ಅಸುರರನ್ನು ಕೊಂದು ಎಲ್ಲರನ್ನೂ ಅವರ ಭಯದಿಂದ ಮುಕ್ತಗೊಳಿಸಿದಳು.

ದುರ್ಗಾ ದೇವಿಯ ಆರನೇ ಅವತಾರವಾದ ಕಾತ್ಯಾಯಿನಿ ದೇವಿಯನ್ನು ಅಧಿದೇವತೆ, ಆಕೆಯನ್ನು ಯುದ್ಧದ ದೇವತೆ ಎಂದೂ ಕರೆಯುತ್ತಾರೆ. ತಾಯಿಯ ರೂಪವು ಚಿನ್ನದಂತೆ ಪ್ರಕಾಶಮಾನವಾಗಿದೆ ಮತ್ತು ಅತ್ಯಂತ ದೈವಿಕವಾಗಿದೆ. ತಾಯಿಗೆ ನಾಲ್ಕು ತೋಳುಗಳಿವೆ, ಆಕೆ ತನ್ನ ನಾಲ್ಕು ಕೈಗಳಲ್ಲಿ ಒಂದು ಕೈಯಲ್ಲಿ ಕಮಲದ ಹೂವನ್ನು, ಮತ್ತೊಂದರಲ್ಲಿ ಖಡ್ಗವನ್ನು ಮತ್ತು ಇನ್ನೆರೆಡು ಕೈಗಳಲ್ಲಿ ಭಕ್ತರಿಗೆ ಆಶೀರ್ವಾದವನ್ನು ಕೊಡುವ ಮುದ್ರೆಯನ್ನು ಹೊಂದಿದ್ದು, ಸಿಂಹಾಸನರೂಢಳಾಗಿದ್ದಾಳೆ. ಶಾಸ್ತ್ರಗಳ ಪ್ರಕಾರ ತಾಯಿಯನ್ನು ಸರಿಯಾಗಿ ಪೂಜಿಸಿ ಕೆಲವು ವಿಶೇಷ ಉಪಾಯಗಳನ್ನು ಮಾಡುವುದರಿಂದ ಹೆಣ್ಣು ಮಕ್ಕಳ ವಿವಾಹವು ಶೀಘ್ರದಲ್ಲೇ ಪೂರ್ಣಗೊಳ್ಳುತ್ತದೆ ಮತ್ತು ಸೂಕ್ತ ವರ ದೊರೆಯುತ್ತಾನೆ ಎನ್ನುವ ನಂಬಿಕೆಯಿದೆ.

ಕಾತ್ಯಾಯಿನಿಯು ಗುರು ಗ್ರಹವನ್ನು ಆಳುತ್ತಾಳೆ. ಗುರುಗ್ರಹದ ದೃಷ್ಟಿ ಹಾಗೂ ಪ್ರಭಾವ ಉತ್ತಮವಾಗಿದ್ದರೆ ವ್ಯಕ್ತಿ ಜೀವನದಲ್ಲಿ ಪ್ರಯೋಜನ, ಸಮೃದ್ಧಿ ಹಾಗೂ ಯಶಸ್ಸನ್ನು ಪಡೆಯುತ್ತಾನೆ ಎಂದು ಹೇಳಲಾಗುತ್ತದೆ. ಕಾತ್ಯಾಯಿನಿ ದೇವಿಯ ಆರಾಧನೆ ಮಾಡುವುದರಿಂದ ಭಕ್ತರು ಗುರು ಗ್ರಹದಿಂದ ಪಡೆಯಬಹುದಾದ ಎಲ್ಲಾ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಜನ್ಮಕುಂಡಲಿಯಲ್ಲಿ ಗುರು ದೋಷವಿದ್ದರೂ ಪರಿಹಾರವಾಗುವುದು.

ಕಾತ್ಯಾಯಿನಿ ದೇವಿ ಕಥೆ:
ದೇವಿಯ ಆರನೇ ರೂಪವಾದ ತಾಯಿ ಕಾತ್ಯಾಯಿನಿಯನ್ನು ಶ್ರೀ ರಾಮ ಮತ್ತು ಶ್ರೀ ಕೃಷ್ಣ ಇಬ್ಬರೂ ಪೂಜಿಸುತ್ತಿದ್ದರು. ಕಾತ್ಯಾಯಿನಿ ದೇವಿಯ ಕಥೆ ಭಾಗವತ, ಮಾರ್ಕಂಡೇಯ ಮತ್ತು ಸ್ಕಂದ ಪುರಾಣಗಳಲ್ಲಿ ಉಲ್ಲೇಖವಾಗಿದೆ. ದೇವಿ ದುರ್ಗೆಯ ಪರಮ ಭಕ್ತನಾದ ಮಹರ್ಷಿ ಕಾತ್ಯಾಯನ ದಂಪತಿಗೆ ಮಕ್ಕಳಿರಲಿಲ್ಲ. ಅವರು ದೇವಿಯನ್ನು ಕುರಿತು ತಪಸ್ಸು ಕೈಗೊಂಡಾಗ ಆಕೆ ಪ್ರತ್ಯಕ್ಷವಾಗಿ ತಾನು ಕಾತ್ಯಾಯನ ಮಹರ್ಷಿಯ ಮಗಳಾಗಿ ಜನಿಸುವುದಾಗಿ ಆಶೀರ್ವಾದ ಮಾಡಿದಳು ಎಂದು ಪುರಾಣದ ಕಥೆ ಹೇಳುತ್ತದೆ.

ತಾಯಿ ಕಾತ್ಯಾಯಿನಿ ದೇವಿಯ ಅವತಾರದ ಉದ್ದೇಶವು ಮಹಿಷಾಸುರನನ್ನು ಸಂಹಾರ ಮಾಡುವುದಾಗಿತ್ತು. ಋಷಿಮುನಿಗಳು ಪೂಜಿಸಿದ ನಂತರ ಅವತಾರ ಎತ್ತಿದ ತಾಯಿ ಕಾತ್ಯಾಯನಿಯು ಅಶ್ವಿನಿ ಮಾಸದ ಶುಕ್ಲ ನವಮಿ ತಿಥಿಯಲ್ಲಿ ಮಹಿಷನೊಂದಿಗೆ ಯುದ್ಧ ಮಾಡಿ ಸಂಹಾರ ಮಾಡಿದಳು. ದಶಮಿ ದಿನದಂದು ದೇವಿಯು ಜೇನುತುಪ್ಪ ತುಂಬಿದ ವೀಳ್ಯದ ಎಲೆಯನ್ನು ಸೇವಿಸಿ ನಂತರ ಮಹಿಷನನ್ನು ಕೊಂದಳು ಎಂದು ಪುರಾಣದ ಕಥೆಗಳು ಹೇಳುತ್ತವೆ. ಇದಾದ ನಂತರ ತಾಯಿಯನ್ನು ಮಹಿಷಾಸುರ ಮರ್ದಿನಿ ಎನ್ನುವ ಹೆಸರಿನಿಂದ ಕರೆಯಲಾಯಿತು.

ಧಾರ್ಮಿಕ ಪುರಾಣಗಳ ಪ್ರಕಾರ, ಕಾತ್ಯಾಯಿನಿಯು ದೇವತೆಗಳ ಸಂಯೋಜಿತ ಶಕ್ತಿಗಳಿಂದ ಪ್ರಕಟವಾದವಳು. ಸಾವಿರ ಸೂರ್ಯರು, ಮೂರು ಕಣ್ಣುಗಳು, ಕಪ್ಪು ಕೂದಲು ಮತ್ತು ಬಹು ಕೈಗಳ ಶಕ್ತಿಯೊಂದಿಗೆ, ಕಾತ್ಯಾಯಿನಿ ದೇವಿಯು ಮಹಿಷಾಸುರ ಎಂಬ ರಾಕ್ಷಸನನ್ನು ವಧಿಸಲು ಭೂಮಿಗೆ ಇಳಿದಳು.

ಹಿಂದೂ ಧರ್ಮದಲ್ಲಿ, ಮಹಿಷಾಸುರನು ಶಕ್ತಿಯುತ ಅರ್ಧ-ಮಾನವ ಅರ್ಧ-ಎಮ್ಮೆ ರಾಕ್ಷಸನಾಗಿದ್ದನು, ಅವನು ತನ್ನ ಆಕಾರವನ್ನು ಬದಲಾಯಿಸುವ ಸಾಮರ್ಥ್ಯವನ್ನು ಕೆಟ್ಟ ಕಾರ್ಯಕ್ಕಾಗಿ ಬಳಸಿದನು. ಅವನ ಕಿರುಕುಳದಿಂದ ಕೋಪಗೊಂಡ ಎಲ್ಲಾ ದೇವರುಗಳು ಕಾತ್ಯಾಯಿನಿಯನ್ನು ಸೃಷ್ಟಿಸಲು ತಮ್ಮ ಶಕ್ತಿಯನ್ನು ಒಂದುಗೂಡಿಸಿದರು ಮತ್ತು ದೇವಿ ಮತ್ತು ರಾಕ್ಷಸನ ನಡುವಿನ ಯುದ್ಧವನ್ನು ‘ಕೆಟ್ಟದರ ಮೇಲೆ ಒಳ್ಳೆಯದರ ವಿಜಯ’ ಎಂದು ಗುರುತಿಸಲಾಗಿದೆ.

ಶಿವನು ಅವಳಿಗೆ ತ್ರಿಶೂಲವನ್ನು ಕೊಟ್ಟರೆ, ಭಗವಾನ್ ವಿಷ್ಣುವು ಸುದರ್ಶನ ಚಕ್ರವನ್ನು, ಅಗ್ನಿ ದೇವನು ಬಾಣವನ್ನು, ವಾಯುದೇವನು ಬಿಲ್ಲು, ಇಂದ್ರ ದೇವನು ಒಂದು ಗುಡುಗು, ಬ್ರಹ್ಮದೇವನು ನೀರಿನ ಕಲಶದೊಂದಿಗೆ ರುದ್ರಾಕ್ಷಿಯನ್ನು ನೀಡಿದರು. ಈ ಆಯುಧಗಳ ಸಹಾಯದಿಂದ ದೇವಿ ಕಾತ್ಯಾಯಿನಿ ಮಹಿಷಾಸುರನ ವಧೆ ಮಾಡಿದಳು ಎಂದು ಪುರಾಣ ಕಥೆಗಳು ಹೇಳುತ್ತವೆ.

TAGGED:Katyayani DeviMahishasuraNavaratriಕಾತ್ಯಾಯಿನಿನವರಾತ್ರಿಪುರಾಣ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
12 minutes ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
13 minutes ago
US Secret Service agents killed man trying to unlawfully enter DonaldTrumps Mar a Lago resort in West Palm Beach Florida
Latest

ಫ್ಲೋರಿಡಾದಲ್ಲಿರುವ ಟ್ರಂಪ್‌ ರೆಸಾರ್ಟ್‌ಗೆ ನುಗ್ಗಿದ್ದ ಯವಕನ ಹತ್ಯೆ

Public TV
By Public TV
33 minutes ago
Bommai
Districts

ರಾಜ್ಯದಲ್ಲಿ ತಮಿಳುನಾಡು ಮಾದರಿ ಶಿಕ್ಷಕರ ನೇಮಕ ವ್ಯವಸ್ಥೆ ಬರಲಿ: ಬಸವರಾಜ ಬೊಮ್ಮಾಯಿ

Public TV
By Public TV
48 minutes ago
Police lathicharge on farmers Sringeri bandh on Monday
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌- ಸೋಮವಾರ ಶೃಂಗೇರಿ ಬಂದ್‌

Public TV
By Public TV
1 hour ago
Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋದ ಯುವಕ ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?