Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bagalkot

ಬಜೆಟ್‌ನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ನಿರ್ಲಕ್ಷ್ಯ – ಸಿಎಂರಿಂದ ಸಿಗುತ್ತಾ ಪರಿಹಾರ?

Public TV
Last updated: August 31, 2023 5:15 pm
Public TV
Share
2 Min Read
siddaramaiah 2 1
SHARE

ಬಾಗಲಕೋಟೆ: ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದಲ್ಲಿ ಅಧಿಕಾರದ ಗದ್ದುಗೆಗೆ ಏರಿದ ಕಾಂಗ್ರೆಸ್ (Congress) ಪಕ್ಷ, ಸದ್ಯ ಆಡಳಿತದಲ್ಲಿದೆ. ರಾಜ್ಯದ ದೊರೆಯಾಗಿ ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದಾರೆ. ಆದರೆ ಇದೇ ಕಾಂಗ್ರೆಸ್ ನಾಯಕರು ಚುನಾವಣೆ ಪೂರ್ವದಲ್ಲಿ ಜಿಲ್ಲೆಯ ಜನರಿಗೆ ಅನೇಕ ಭರವಸೆಗಳನ್ನು ನೀಡಿದ್ದರು. ಆದರೆ ಆ ಭರವಸೆಗಳು ಕೇವಲ ಮಾತಾಗಿ ಉಳಿದಿವೆ.

ಮುಳುಗಡೆ ಎನ್ನುವ ಹಣೆ ಪಟ್ಟಿ ಕಟ್ಟಿಕೊಂಡಿರುವ ವಿಜಯಪುರ-ಬಾಗಲಕೋಟೆ ಅಖಂಡ ಜಿಲ್ಲೆಗೆ ರಾಜ್ಯದ ಸಿಎಂ ಸಿದ್ದರಾಮಯ್ಯ ಇದೇ ಸೆಪ್ಟೆಂಬರ್ 2 ರಂದು ಆಲಮಟ್ಟಿ ಅಣೆಕಟ್ಟೆಗೆ ಗಂಗಾ ಪೂಜೆ ಮತ್ತು ಬಾಗಿನ ಅರ್ಪಿಸಲು ಆಗಮಿಸಲಿದ್ದಾರೆ. ಈ ನಡುವೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕೇವಲ ಗ್ಯಾರಂಟಿ ಯೋಜನೆಗೆ ಒತ್ತು ನೀಡಿ ಉತ್ತರ ಕರ್ನಾಟಕ ಜ್ವಲಂತ ಸಮಸ್ಯೆಗಳ ಪರಿಹಾರ ನೀಡದೇ ನಿರ್ಲಕ್ಷ್ಯ ವಹಿಸಿದೆ ಎಂಬ ಆರೋಪ ಜಿಲ್ಲೆಯ ಜನರಲ್ಲಿದೆ.

040819kpn74

ಬಾಗಲಕೋಟೆ ಜಿಲ್ಲೆಯ ಕೃಷ್ಣ ಮೇಲ್ದಂಡೆ (Upper Krishna Project) 3ನೇ ಹಂತದ ಭೂಸ್ವಾಧೀನ ಕಾರ್ಯ ಆಮೆ ಗತಿಯಲ್ಲಿ ಸಾಗುತ್ತಿದೆ. ಮುಳುಗಡೆ ಸಂತ್ರಸ್ತರಿಗೆ ಶಾಶ್ವಾತ ಸೂರು ಕಲ್ಪಿಸುವುದು ಹಾಗೂ ಪರಿಹಾರ ಘೋಷಣೆ ಹೀಗೆ ಸಮಸ್ಯೆಗಳ ಸರಮಾಲೆ ಜಿಲ್ಲೆಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯಗೆ ಸವಾಲಾಗಿ ಪರಿಣಮಿಸಲಿದೆ.

ನಮ್ಮ ಸರ್ಕಾರದ ಅವಧಿಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸುವುದಾಗಿ ಹೇಳಿಕೊಂಡಿದ್ದ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಘೋಷಣೆಗಳ ನೆಪ ಹೇಳಿ ಮುಳುಗಡೆ ಪ್ರದೇಶದ ಭೂಸ್ವಾಧೀನ, ಪುನರ್ ವಸತಿ, ಪುನರ್ ನಿರ್ಮಾಣಕ್ಕಾಗಿ ಬಜೆಟ್‌ನಲ್ಲಿ ಯಾವುದೇ ವಿಶೇಷ ಅನುದಾನ ಇಡದೇ, ಜಿಲ್ಲೆಯ ಜನರು ನಿರಾಸೆಗೊಳ್ಳುವಂತೆ ಮಾಡಿದೆ. ಇನ್ನು 2014-15ರಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದಾಗ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ (ಮೆಡಿಕಲ್) ಕಾಲೇಜು ಘೋಷಣೆ ಮಾಡಿದ್ದರು. ಆದರೆ ಇಂದಿಗೂ ಅದರ ಕಾರ್ಯ ಒಂದು ಸಣ್ಣ ಪ್ರಗತಿ ಕಂಡಿಲ್ಲ.

SIDDARAMAIAH

ಮೆಡಿಕಲ್ ಕಾಲೇಜಿಗೆ ಬೇಕಾದ ಭೂಮಿ ಈಗಾಗಲೇ 12 ಎಕರೆ ಜಾಗ ಕಾಯ್ದಿರಿಸಿ ಇಟ್ಟಿದ್ದರೂ ಸಹ ಕಟ್ಟಡ ಕಾರ್ಯವಾಗಲಿ ಅಥವಾ ಯಾವುದೇ ಕಾರ್ಯ ಶುರುವಾಗಿಲ್ಲ. ಬಜೆಟ್‌ನಲ್ಲಿ ಅನುದಾನ ಒದಗಿಸದೇ ನಿರ್ಲಕ್ಷ್ಯ ವಹಿಸಲಾಗಿದೆ. ಹೀಗೆ ಹಲವಾರು ಸವಾಲುಗಳು ಬರುವ ಸೆಪ್ಟೆಂಬರ್ 2ರಂದು ಜಿಲ್ಲೆಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಎದುರಾಗಲಿವೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಸಿದ್ಧ – ಸುಪ್ರೀಂ ಕೋರ್ಟ್‍ಗೆ ಕೇಂದ್ರ

ಹೀಗಿರುವಾಗಲೇ ಕೃಷ್ಣೆಯ ಬಾಗಿನ ಅರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಹಾಗೂ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿಕೆಶಿ ಅವರು ಕೃಷ್ಣಾ ಮೇಲ್ದಂಡೆ ಯೋಜನೆಯ ಅಧಿಕಾರಿಗಳ ಜೊತೆ ಜಂಟಿ ಸಭೆ ನಡೆಸಲಿದ್ದಾರೆ. ಹೀಗಾಗಿ ಈ ಎಲ್ಲ ಸವಾಲುಗಳನ್ನು ಸಿಎಂ, ಡಿಸಿಎಂ ಹೇಗೆ ಎದುರಿಸುತ್ತಾರೆ? ಮುಳುಗಡೆ ಜಿಲ್ಲೆಯ ಜನರಿಗೆ ಸಿಹಿ ಸುದ್ದಿಯನ್ನು ಕೊಡ್ತಾರಾ? ಇಲ್ಲವೇ ಕೇವಲ ಬಾಗಿನ ಅರ್ಪಣೆ ಮಾಡಿ ಹೋಗ್ತಾರಾ? ಎಂಬುದನ್ನು ಕಾಯ್ದು ನೋಡಬೇಕಿದೆ. ಇದನ್ನೂ ಓದಿ: ಮಾರ್ಗ ಮಧ್ಯೆ ಕೈಕೊಟ್ಟ ಅಂಬುಲೆನ್ಸ್ – ಆನೆ ದಾಳಿಯಿಂದ ಗಾಯಗೊಂಡಿದ್ದ ಶಾರ್ಪ್ ಶೂಟರ್ ಅರಣ್ಯ ಸಿಬ್ಬಂದಿ ಸಾವು

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:bagalkotesiddaramaiahUpper Krishna Projectಕೃಷ್ಣಾ ಮೇಲ್ದಂಡೆ ಯೋಜನೆಬಾಗಲಕೋಟೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

Dinesh Gundurao
Bengaluru City

ಇಡೀ ದೇಶದಲ್ಲಿ ಭ್ರಷ್ಟಾಚಾರ ಇದೆ, ಇಲ್ಲ ಅಂತ ಹೇಳಲು ಸಾಧ್ಯವೇ ಇಲ್ಲ: ದಿನೇಶ್ ಗುಂಡೂರಾವ್

Public TV
By Public TV
32 minutes ago
eshwar Khandre
Bidar

ಜಮೀರ್ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ – ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ: ಈಶ್ವರ್ ಖಂಡ್ರೆ

Public TV
By Public TV
59 minutes ago
PM Modi takes part in 11th International Day of Yoga celebrations in Visakhapatnam
Latest

Yoga Day 2025: ಯೋಗಾಂಧ್ರದಲ್ಲಿ ʻನಮೋʼ ಯೋಗ – 25,000 ವಿದ್ಯಾರ್ಥಿಗಳಿಂದ 108 ನಿಮಿಷ ಸೂರ್ಯ ನಮಸ್ಕಾರ

Public TV
By Public TV
2 hours ago
Yoga
Bengaluru City

ರಾಜ್ಯದಲ್ಲೂ ಅಂತಾರಾಷ್ಟ್ರೀಯ ಯೋಗ ದಿನಾಚರಣೆ – ವಿಧಾನಸೌಧದ ಎದುರು 5,000 ಮಂದಿ ಯೋಗ ಪ್ರದರ್ಶನ

Public TV
By Public TV
2 hours ago
KRS Dam 2
Districts

ಹೊಸ ದಾಖಲೆ ಬರೆದ ಕೆಆರ್‌ಎಸ್ ಡ್ಯಾಂ – 118.60 ಅಡಿ ನೀರು ಭರ್ತಿ

Public TV
By Public TV
2 hours ago
Davanagere Accident
Crime

ತಂಗಿಯ ಶವಸಂಸ್ಕಾರಕ್ಕೆ ಬರುತ್ತಿದ್ದ ಅಕ್ಕನ ದುರಂತ ಅಂತ್ಯ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?