ಅಂಜುಮನ್ ಕಾಲೇಜು ಕೊಠಡಿಗೆ ನೇಹಾ ಹೆಸರು; ಧಾರವಾಡದಲ್ಲಿ ಸೋಮವಾರ ಅರ್ಧದಿನ ವ್ಯಾಪಾರ ಬಂದ್

Public TV
1 Min Read
Anjuman

ಧಾರವಾಡ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ (Neha Hiremath) ಹತ್ಯೆ ರಾಜ್ಯಾದ್ಯಂತ ಸುದ್ದಿಯಾಗಿದೆ. ಇದರ ಬೆನ್ನಲ್ಲೇ ಧಾರವಾಡದ (Dharwad) ಅಂಜುಮನ್ ಸಂಸ್ಥೆ ಮಹತ್ವದ ನಿರ್ಣಯವೊಂದನ್ನು ತೆಗೆದುಕೊಂಡಿದೆ. ಧಾರವಾಡದ ಅಂಜುಮನ್ ಕಾಲೇಜಿನ ಒಂದು ಕೊಠಡಿಗೆ ನೇಹಾ ಹೆಸರಿಡಲು ನಿರ್ಧರಿಸಿದೆ.

ಈ ಕುರಿತು ಮಾಹಿತಿ ನೀಡಿದ ಅಂಜುಮನ್ ಸಂಸ್ಥೆ (Anjuman Institution) ಅಧ್ಯಕ್ಷ ಇಸ್ಮಾಯಿಲ್ ತಮಟಗಾರ, ನೇಹಾ ಹತ್ಯೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಒಬ್ಬ ವಿದ್ಯಾರ್ಥಿನಿಯ ಹತ್ಯೆಯಾಗಿದೆ. ಅವಳ ನೆನಪಿಗಾಗಿ ನಾವು ನಮ್ಮ ಅಂಜುಮನ್ ಕಾಲೇಜಿನ ಒಂದು ಕೊಠಡಿಗೆ ನೇಹಾ ಹಿರೇಮಠ ಅವರ ಹೆಸರಿಡಲು ತೀರ್ಮಾನಿಸಿದ್ದೇವೆ. ಅದನ್ನು ಅವರ ತಂದೆ-ತಾಯಿಯಿಂದಲೇ ಉದ್ಘಾಟನೆ ಮಾಡಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದ ಮಗಳು ಮೃತಪಟ್ಟಿದ್ದಾರೆ.. ಯಾಕೆ ನೀವು ಧ್ವನಿ ಎತ್ತುತ್ತಿಲ್ಲ: ಪ್ರಕಾಶ್ ರಾಜ್, ಚೇತನ್ ವಿರುದ್ಧ ಪ್ರಥಮ್ ಕಿಡಿ

ನಾಳೆ ಅರ್ಧದಿನ ವ್ಯಾಪಾರ ಬಂದ್:
ನೇಹಾ ಹತ್ಯೆ ಪ್ರಕರಣ ಖಂಡಿಸಿ ನಾಳೆ (ಏ.22) ಧಾರವಾಡದಲ್ಲಿ ಅಂಜುಮನ್ ಕಾಲೇಜದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೌನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಮತ್ತೊಂದೆಡೆ ಮುಸ್ಲಿಂ ವ್ಯಾಪಾರಿಗಳು ತಮ್ಮ ವ್ಯಾಪಾರ ಬಂದ್ ಮಾಡಲಿದ್ದು, ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವ್ಯಾಪಾರಿಗಳು ಸೋಮವಾರ ಅರ್ಧದಿನ ವ್ಯಾಪಾರ ವಹಿವಾಟು ಬಂದ್ ಮಾಡುವುದಾಗಿ ಘೋಷಿಸಿದ್ದಾರೆ. ಜೊತೆಗೆ ಮುಸ್ಲಿಂ ಶಿಕ್ಷಣ ಸಂಸ್ಥೆಗಳೂ ಇದಕ್ಕೆ ಸಾಥ್ ನೀಡಿವೆ ಎಂದು ಹೇಳಿದ್ದಾರೆ.

ಮುಂದುವರಿದು ಮಾತನಾಡಿದ ಇಸ್ಮಾಯಿಲ್, ನೇಹಾ ಕೊಲೆಯನ್ನು ನಾವು ಖಂಡಿಸುತ್ತೇವೆ. ನೇಹಾ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಿಗೆ ಮನವಿ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಈ ನಾಡನ್ನ ಮತಾಂಧರ ಯುದ್ಧಭೂಮಿಯಾಗಿ ಮಾಡಿದೆ: ಬಿಎಸ್‌ವೈ ಕಿಡಿ

Share This Article