ಗಣೇಶ್ ನಟನೆಯ ‘ಮುಂಗಾರು ಮಳೆ 2’ ಮೂಲಕ ಸಿನಿಮಾ ರಂಗ ಪ್ರವೇಶ ಮಾಡಿದ್ದ ಕರಾವಳಿ ಬೆಡಗಿ ನೇಹಾ ಶೆಟ್ಟಿ, ಆನಂತರ ಅವರು ಮತ್ತೆ ಕನ್ನಡ ಚಿತ್ರರಂಗದಲ್ಲಿ ಕಾಣಿಸಿಕೊಳ್ಳಲಿಲ್ಲ. ಮುಂಗಾರು ಮಳೆ 2 ಬಾಕ್ಸ್ ಆಫೀಸಿನಲ್ಲಿ ಅಷ್ಟೇನೂ ಸದ್ದು ಮಾಡಲಿಲ್ಲ ಎನ್ನುವ ಕಾರಣಕ್ಕೋ ಏನೋ, ಸ್ಯಾಂಡಲ್ ವುಡ್ ನೇಹಾ ಶೆಟ್ಟಿಗೆ ಮತ್ತೆ ಅವಕಾಶ ಕೊಡಲಿಲ್ಲ. ಹಾಗಾಗಿ ಅವರು ತೆಲುಗು ಸಿನಿಮಾ ರಂಗದತ್ತ ಮುಖ ಮಾಡಿದರು. ಇದನ್ನು ಓದಿ : ಡಾ.ವಿಷ್ಣು ಪುತ್ಥಳಿ ಅನಾವರಣಕ್ಕೆ ಹಿಜಬ್ -ಕೇಸರಿ ವಿವಾದ ಅಡ್ಡಿ
ತೆಲುಗಿನ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ನಿರ್ದೇಶನದ ‘ಮೆಹಬೂಬು’ ಚಿತ್ರದ ಮೂಲಕ ತೆಲುಗು ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದರು. ಈ ಸಿನಿಮಾ ತಕ್ಕಮಟ್ಟಿಗೆ ಹಿಟ್ ಆಯಿತು ಮತ್ತು ಪುರಿ ಜಗನ್ನಾಥ್ ಪರಿಚಯಿಸಿದ ನಟಿ ಅನ್ನುವ ಕಾರಣಕ್ಕೆ ಅಲ್ಲಿ ಅವರಿಗೆ ಅವಕಾಶ ಸಿಕ್ಕವು. ಹಾಗಾಗಿ ಒಂದರ ಮೇಲೊಂದು ಅವರು ಸಿನಿಮಾ ಮಾಡುತ್ತಲೇ ಹೋದರು. ಇದನ್ನೂ ಓದಿ : ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ನಡೆಸಲು ಖಡಕ್ ಸುತ್ತೋಲೆ
ಮೊನ್ನೆಯಷ್ಟೇ ನೇಹಾ ಶೆಟ್ಟಿ ನಟನೆಯ ‘ಡಿಜೆ ಟಿಲ್ಲು’ ಚಿತ್ರ ಬಿಡುಗಡೆ ಆಗಿದೆ. ಈ ಸಿನಿಮಾ ಭಾರೀ ಸದ್ದು ಕೂಡ ಮಾಡಿತು. ಅಲ್ಲಿಂದ ಅವರಿಗೆ ಅದೃಷ್ಟ ಖುಲಾಯಿಸಿದೆ. ಹಾಗಾಗಿ ಅವರನ್ನು ಮತ್ತೆ ಕನ್ನಡಕ್ಕ ತರುವ ಪ್ರಯತ್ನ ನಡೆದಿದೆ. ಇದನ್ನೂ ಓದಿ : ಸಿಎಂ ಜಗನ್ ಆದೇಶಕ್ಕೆ ನಿಟ್ಟುಸಿರಿಟ್ಟ ತೆಲುಗು ಚಿತ್ರರಂಗ
ಸದ್ಯ ನೇಹಾ ಶೆಟ್ಟಿ ಕನ್ನಡದತ್ತ ಮತ್ತೆ ಮುಖ ಮಾಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ನಟನೆಯ ‘ಯದುವೀರ’ ಚಿತ್ರಕ್ಕೆ ಇವರನ್ನೇ ನಾಯಕಿಯನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ ಎಂಬ ಸುದ್ದಿಯಿದೆ. ಚಿತ್ರತಂಡ ಅಧಿಕೃತವಾಗಿ ಹೇಳಿಕೊಳ್ಳದೇ ಇದ್ದರೂ, ಚಿತ್ರತಂಡದ ಸದಸ್ಯರ ಮಾಹಿತಿಯ ಪ್ರಕಾರ, ಭಾರೀ ಮೊತ್ತದ ಸಂಭಾವನೆಯನ್ನೇ ನೀಡಿ ನೇಹಾ ಅವರನ್ನು ಕರೆತರಲಾಗುತ್ತಿದೆಯಂತೆ. ಇದನ್ನೂ ಓದಿ : ರಕ್ತದಾನ ಮಾಡಿದ ಹೃತಿಕ್ ರೋಷನ್
ಮೊನ್ನೆಯಷ್ಟೇ ಯದುವೀರ ಸಿನಿಮಾದ ಟೈಟಲ್ ಲಾಂಚ್ ಆಗಿದೆ. ಫಸ್ಟ್ ಲುಕ್ ಕೂಡ ಬಿಡುಗಡೆ ಮಾಡಿತ್ತು ಚಿತ್ರತಂಡ. ಸಿನಿಮಾದ ಚಿತ್ರೀಕರಣಕ್ಕೂ ಸಿದ್ಧತೆ ಮಾಡಿಕೊಂಡಿದೆ. ಕೆಲವೇ ದಿನಗಳಲ್ಲಿ ನಾಯಕಿಯ ಬಗ್ಗೆ ಚಿತ್ರತಂಡವೇ ಮಾಹಿತಿ ಕೊಡಬಹುದು.