ಕರ್ತವ್ಯನಿರತ ಬಸ್ ನಿರ್ವಾಹಕ ಆತ್ಮಹತ್ಯೆಗೆ ಶರಣು

Public TV
1 Min Read
NEKSRTC copy

ರಾಯಚೂರು: ಕರ್ತವ್ಯ ನಿರತ ಸಾರಿಗೆ ಬಸ್ ಕಂಡಕ್ಟರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಲಿಂಗಸಗೂರಿನ ಲಕ್ಷ್ಮಿ ಗುಡಿ ಹಳ್ಳದ ಬಳಿ ನಡೆದಿದೆ. ಈರಣ್ಣ(32) ಆತ್ಮಹತ್ಯೆಗೆ ಶರಣಾದ ಎನ್.ಇ.ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿ.

ಲಿಂಗಸುಗೂರು ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿ ನಿರ್ವಾಹಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈರಣ್ಣ ಡ್ರೈವರ್ ಕಂ ಕಂಡಕ್ಟರ್ ಆಗಿ ಕೆಲಸಕ್ಕೆ ಸೇರಿದ್ದ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ಡಿಪೋಕ್ಕೆ ಸೇರಿದ್ದ ಬಸ್ ನಿರ್ವಾಹಕನಾಗಿ ಸೇವೆ ಸಲ್ಲಿಸುತ್ತಿದ್ದರು. ಯಲಬುರ್ಗಾದಿಂದ ಕಲಬುರಗಿ ಮಾರ್ಗ ಹೋಗುವ ಬಸ್ ನಲ್ಲಿ ಕರ್ತವ್ಯದಲ್ಲಿದ್ದ ಈರಣ್ಣ ಲಿಂಗಸುಗೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಡ್ರೈವರ್ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ನಿನ್ನೆಯಷ್ಟೇ ಬಸ್ ನಲ್ಲಿ ಪ್ರಯಾಣಿಕನೋರ್ವ ಟಿಕೆಟ್ ತೆಗೆದುಕೊಳ್ಳದ ಕಾರಣ ತಪಾಸಣಾ ಅಧಿಕಾರಿಯಿಂದ ಈರಣ್ಣನ ವಿರುದ್ಧ ಪ್ರಕರಣ ದಾಖಲಾಗಿತ್ತು. ಆದ್ರೆ ಈರಣ್ಣ ಆತ್ಮಹತ್ಯೆಗೆ ಕಾರಣ ತಿಳಿದಿಲ್ಲ. ಲಿಂಗಸಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತನ ಕುಟುಂಬದವರು ಬಂದ ಮೇಲೆ ಪ್ರಕರಣ ದಾಖಲಾಗಲಿದೆ.

Share This Article
Leave a Comment

Leave a Reply

Your email address will not be published. Required fields are marked *