ನೆಲಮಂಗಲ: 5 ವರ್ಷ ಸ್ವತಂತ್ರ ಸರ್ಕಾರ ಬಂದರೆ ದೇಶ ನೋಡುವಂತ ಕ್ರಾಂತಿಕಾರಿ ಬದಲಾವಣೆಯಾಗಲಿದೆ ಎಂದು ನೆಲಮಂಗಲದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕೆಂಗಲ್ ಗ್ರಾಮದಲ್ಲಿ ಶ್ರೀ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ಹಾಗೂ ಶ್ರೀ ಕೃಷ್ಣರುಕ್ಮಿಣಿ ಅಮ್ಮನವರ ದೇವಾಲಯ ಉದ್ಘಾಟನೆ ವೇಳೆ ಮಾತನಾಡಿದ್ದಾರೆ. ಈ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದಿದ್ರು ಹಳ್ಳಿಗಳಲ್ಲಿ ಉತ್ತಮವಾದ ವಾತಾವರಣ ಕಾಣ್ತಾ ಇಲ್ಲ, ಸಮ್ಮಿಶ್ರ ಸರ್ಕಾರದಲ್ಲಿ ಕೆಲಸ ಮಾಡಲು ಆಗಲಿಲ್ಲ, ನನಗೆ 5 ವರ್ಷದ ಸರ್ಕಾರ ಬೇಕಿದೆ ಎಂದಿದ್ದಾರೆ. ಇದನ್ನೂ ಓದಿ: ಕಾಬೂಲ್ನಲ್ಲಿ ಕನ್ನಡಿಗರು ಸೇರಿ 450 ಭಾರತೀಯರ ಒದ್ದಾಟ – ಯಾವುದೇ ಕ್ಷಣದಲ್ಲಿ ಏರ್ಲಿಫ್ಟ್ ಸಾಧ್ಯತೆ
ನಾನು ಈ ರಾಜಕಾರಣಕ್ಕೆ ಬಂದಿದ್ದೆ ಆಕಸ್ಮಿಕ ಅದರಲ್ಲೂ ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದು, ಆಶ್ಚರ್ಯ ರೀತಿಯಲ್ಲಿ ಆಗಿದ್ದಾಗಿದೆ. ನಾನು ಎಂದು ಈ ನಾಡಿನ ಜನತೆಗೆ ಮೋಸ ಮಾಡಿಲ್ಲ. ಎರಡು ಬಾರಿ ಮುಖ್ಯಮಂತ್ರಿ ಅದಾಗ್ಲೂ ಕೂಡ ಮೋಸ ಮಾಡಿಲ್ಲ, ಈ ನಾಡಿನ ಭವಿಷ್ಯಕ್ಕಾಗಿ ನನ್ನದೇ ಕಲ್ಪನೆ ಇದೆ. ಜನರ ಆರ್ಶಿವಾದದಿಂದ 5 ವರ್ಷ ಸ್ವತಂತ್ರ ಸರ್ಕಾರ ಬಂದರೆ ದೇಶ ನೋಡುವಂತ ಕ್ರಾಂತಿಕಾರಿ ಬದಲಾವಣೆ ತರುವುದು ನನ್ನ ಗುರಿಯಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್ರಿಂದ ಕೊಡಗಿನ ಅಂಕಿತಾ ಸುರೇಶ್ಗೆ 10 ಲಕ್ಷ ರೂ. ಪುರಸ್ಕಾರ
ಶ್ರೀ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ಹಾಗೂ ಶ್ರೀ ಕೃಷ್ಣರುಕ್ಮಿಣಿ ಅಮ್ಮನವರ ದೇವಾಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ಕಾರ್ಯಕ್ರಮದಲ್ಲಿ ನೆಲಮಂಗಲ ಶಾಸಕ ಶ್ರೀನಿವಾಸ ಮೂರ್ತಿ, ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.