ನೆಲಮಂಗಲ: ಸಾಮಾಜಿಕ ಕೆಲಸಗಳಲ್ಲಿ ಸದಾ ಮುಂದಿರುವ ನೆಲಮಂಗಲ ತಾಲೂಕು ಪಂಚಾಯತಿಯ ಸ್ಥಾಯಿ ಸಮಿತಿಯ ಅಧ್ಯಕ್ಷ ಬಿ.ರಂಗನಾಥ್ ಅವರಿಗೆ ಗ್ಲೋಬಲ್ ಪೀಸ್ ಯೂನಿವರ್ಸಿಟಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಗ್ಲೋಬಲ್ ಕೌನ್ಸಿಲ್ ಫಾರ್ ಪ್ರೋಫೆಶನಲ್ ಎಜುಕೇಶನ್ ಮಿಷನ್ ವತಿಯಿಂದ ರಂಗನಾಥ್ ಅವರ ಸಾಮಾಜಿಕ ಕಳಕಳಿಯನ್ನು ಗುರುತಿಸಿ ಈ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ನೀಡಲಾಗಿದೆ. ಬಿ.ರಂಗನಾಥ್ ಅವರು ಹಲವು ವರ್ಷಗಳಿಂದ ಸಾಮಾಜಿಕ ಸೇವೆಗಳಾದ ದೀನದಲಿತರ ಉದ್ದಾರ, ಸಾಮಾಜಿಕ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.
ಈ ವೇಳೆ ಪಬ್ಲಿಕ್ ಡಿಜಿಟಲ್ ವಾಹಿನಿಯೊಂದಿಗೆ ಮಾತನಾಡಿದ ಅವರು, ಗೌರವ ಡಾಕ್ಟರೇಟ್ ಬಂದಿರುವುದು ಸಂತೋಷವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಮಾಜಿಕ ಕಾರ್ಯಗಳಲ್ಲಿ ನೆರವಾಗುವ ಉದ್ದೇಶವನ್ನು ಹೊಂದಿದ್ದೇವೆ. ಈ ಪ್ರಶಸ್ತಿ ಲಭಿಸಿರುವುದು ನನ್ನ ಸಾಧನೆಗಿಂತ, ಸಾಮಾಜಿಕ ಜೀವನದಲ್ಲಿ ಅಳಿಲು ಸೇವೆ ಗುರುತಿಸಿರುವುದು ಬಹಳ ಸಂತೋಷವಾಗಿದೆ. ತಾಲೂಕು ಪಂಚಾಯಿತಿಯಲ್ಲಿ ಹಲವಾರು ಕಾರ್ಯ ಮಾಡಿದ್ದೇನೆ. ಈಗ ಪ್ರಶಸ್ತಿ ಬಂದ ಇನ್ನಷ್ಟೂ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದು ರಂಗನಾಥ್ ಹೇಳಿದ್ದಾರೆ.