ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎರಡು ಸಾರಿಗೆ ಬಸ್ಗಳ ಸಂಚಾರಕ್ಕಿಂದು ಯಕ್ಕುಂಡಿ ಗ್ರಾಮದಲ್ಲಿ ಚಾಲನೆ ನೀಡಲಾಯಿತು.
ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಂಗರಿಸಲಾಗಿದ್ದ ಎರಡು ಬಸ್ಗಳ ಸಂಚಾರಕ್ಕೆ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಮಲ್ಲು ದಳವಾಯಿ ಮತ್ತು ಬ್ಲಾಕ್ ಕಾಂಗ್ರೆಸ್ ಈರಗೊಂಡ ಬಿರಾದಾರ ಚಾಲನೆ ನೀಡಿದರು. ಈ ಬಸ್ಗಳು ವಿಜಯಪುರ ನಗರದಿಂದ ಚಿಕ್ಕಲಕಿ ಕ್ರಾಸ್ವರೆಗೆ ಸಂಚರಿಸಲಿವೆ.ಇದನ್ನೂ ಓದಿ: 4.8 ಕೋಟಿ ಪತ್ತೆ ಕೇಸ್ – ಸುಧಾಕರ್ಗೆ ಹೈಕೋರ್ಟ್ನಿಂದ ಬಿಗ್ ರಿಲೀಫ್, FIR ರದ್ದು
ಈ ಸಂದರ್ಭದಲ್ಲಿ ಮಲ್ಲು ದಳವಾಯಿ ಅವರು ಮಾತನಾಡಿ, ಸಚಿವ ಎಂ.ಬಿ. ಪಾಟೀಲ್ ಅವರ ಸೂಚನೆಯಂತೆ ಎರಡು ನೂತನ ಬಸ್ಗಳ ಸೇವೆ ಪ್ರಾರಂಭವಾಗಿದೆ. ಇದರಿಂದ ಈ ಮಾರ್ಗದಲ್ಲಿ ಬರುವ ಚಿಕ್ಕಲಕಿ ಕ್ರಾಸ್, ಅರ್ಜುಣಗಿ, ಯಕ್ಕುಂಡಿ, ಬಬಲೇಶ್ವರ, ಸಾರವಾಡ, ವಿಜಯಪುರ ಹಾಗೂ ಸುತ್ತಮುತ್ತಲಿನ ವಿದ್ಯಾರ್ಥಿಗಳು, ರೈತರು, ಕಾರ್ಮಿಕರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಸಚಿವರಿಗೆ ಹಾಗೂ ಸಾರಿಗೆ ಇಲಾಖೆಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಲಾಲಸಾಬ ಜಮಾದಾರ, ಗ್ರಾ.ಪಂ ಅಧ್ಯಕ್ಷ ರಫೀಕ ಸೋನಾರ, ಸದಸ್ಯರಾದ ಗುರು ಜೈನಾಪೂರ, ಸಿದರಾಯ ಬಿರಾದಾರ, ಬಸು ಕಾಲಿಬಾಗ, ಗೌಡಪ್ಪ ಬಿರಾದಾರ, ಮುಖಂಡರಾದ ಬಾಬುಗೌಡ ಪಾಟೀಲ, ಚನ್ನಪ್ಪ ಕೊಪ್ಪದ, ಶೇಖಪ್ಪ ಕೊಪ್ಪದ, ಪ್ರಭುಗೌಡ ಪಾಟೀಲ, ಅಶ್ಪಾಕ ಜಾಗೀರದಾರ, ಜುಬ್ರಾಯಿಲ್ ಮೊಕಾಲೆ, ರವಿ ಕಾಂಬಳೆ, ನಾಗರಾಜ ಕುಲಕರ್ಣಿ, ಮುದಕನಗೌಡ ಪಾಟೀಲ, ಗುರುಬಸಪ್ಪ ತೆವರಟ್ಟಿ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಕ ನಾರಾಯಣಪ್ಪ ಕುರುಬರ, ಡಿಟಿಓ ಎಂ.ಎಸ್.ಹಿರೇಮಠ, ಡಿಪೋ-1ರ ಮ್ಯಾನೇಜರ್ ಎಸ್.ಎ.ಬಿರಾದಾರ, ಎ.ಟಿ.ಎಂ ಜೆ.ಕೆ.ಹುಗ್ಗೇನವರ ಸೇರಿದಂತೆ ಯಕ್ಕುಂಡಿ, ಹೊಕ್ಕುಂಡಿ, ಕಾತ್ರಾಳ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮುಖಂಡರು ಉಪಸ್ಥಿತರಿದ್ದರು.ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಿಗೆ 125 ಕೋಟಿ ಅನುದಾನ