Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಅರುಣ್ ಜೇಟ್ಲಿ ಪಿಂಚಣಿ ಹಣ ಬಡ ನೌಕರರಿಗೆ – ಪತ್ನಿಯಿಂದ ಮಹತ್ವದ ನಿರ್ಧಾರ

Public TV
Last updated: October 1, 2019 11:39 am
Public TV
Share
3 Min Read
arun jetly wife
SHARE

ನವದೆಹಲಿ: ಮಾಜಿ ಹಣಕಾಸು ಸಚಿವರಾದ ದಿವಂಗತ ಅರುಣ್ ಜೇಟ್ಲಿ ಅವರಿಗೆ ಬರುವ ಪಿಂಚಣಿ ಹಣವನ್ನು ಬಡ ನೌಕರರಿಗೆ ನೀಡಿ ಎಂದು ಅವರ ಪತ್ನಿ ಉಪರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ.

ಈ ವಿಚಾರವಾಗಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುಗೆ ಪತ್ರ ಬರೆದಿರುವ ಅರುಣ್ ಜೇಟ್ಲಿ ಅವರ ಪತ್ನಿ ಸಂಗೀತಾ ಜೇಟ್ಲಿ ಅವರು, ನನ್ನ ಪತಿಗೆ ಬರಬೇಕಾದ ಪಿಂಚಣಿ ಹಣವನ್ನು ರಾಜ್ಯ ಸಭೆಯ ನಾಲ್ಕನೇ ದರ್ಜೆಯ ನೌಕರಿಗೆ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

Arun Jaitley

ನನ್ನ ಪತಿ ಸುಮಾರು ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ ಸಂಸ್ಥೆಯ ಅತ್ಯಂತ ನಿರ್ಗತಿಕ ಬಡ ನೌಕರರಿಗೆ ಅವರ ಪಿಂಚಣಿ ಹಣವನ್ನು ನೀಡಬೇಕು ಎಂದು ನಾನು ವಿನಮ್ರ ವಿನಂತಿ ಮಾಡುತ್ತೇನೆ. ಅರುಣ್ ಜೇಟ್ಲಿ ಅವರು ಅಸೆಯೂ ಕೂಡ ಇದೇ ಆಗಿತ್ತು ಎಂದು ಸಂಗೀತಾ ಜೇಟ್ಲಿ ಅವರು ಪತ್ರ ಬರೆದಿದ್ದಾರೆ. ಇದರ ಜೊತೆಗೆ ಈ ಪತ್ರದ ಪ್ರತಿಯೊಂದನ್ನು ಪ್ರಧಾನಿ ಮೋದಿ ಅವರಿಗೂ ಕಳುಹಿಸಲಾಗಿದೆ.

ಎಷ್ಟು ಪಿಂಚಣಿ ಬರುತಿತ್ತು?
ಸಂಸತ್ತಿನ ಸದಸ್ಯರ ಸಂಬಳ ಮತ್ತು ಭತ್ಯೆ ಕಾಯ್ದೆಯ ಪ್ರಕಾರ ಮಾಜಿ ಸಂಸದರಿಗೆ ಕನಿಷ್ಠ ಪಿಂಚಣಿ ತಿಂಗಳಿಗೆ 20,000 ರೂ. ಮತ್ತು ಪ್ರತಿ ವರ್ಷಕ್ಕೆ ತಿಂಗಳಿಗೆ 1,500 ರೂ.ಗಳ ಹೆಚ್ಚುವರಿ ಪಿಂಚಣಿ ಬರುತ್ತದೆ. ಅರುಣ್ ಜೇಟ್ಲಿ ಅವರು 1999 ರಿಂದ ರಾಜ್ಯಸಭೆಯ ಸದಸ್ಯರಾಗಿದ್ದರಿಂದ ಅವರಿಗೆ ತಿಂಗಳಿಗೆ 22,500 ರೂ. ಪಿಂಚಣಿ ಬರುತಿತ್ತು. ಹೀಗಾಗಿ ಎರಡನ್ನೂ ಕೂಡಿಸಿದರೆ ಹತ್ತಿರ ಹತ್ತಿರ 50 ಸಾವಿರ ರೂ. ಹಣ ಪಿಂಚಣಿಯಾಗಿ ಬರುತಿತ್ತು.

ಸಂಸದರು ಮತಪಟ್ಟರೆ ಪಿಂಚಣಿಯ ಅರ್ಧ ಹಣ ಸಂಗಾತಿ ಅಥವಾ ಕುಟುಂಬದ ಸದಸ್ಯರಿಗೆ ನೀಡಲಾಗುತ್ತದೆ. ಹೀಗಾಗಿ ಅರುಣ್ ಜೇಟ್ಲಿಯ ಕುಟುಂಬಕ್ಕೆ ತಿಂಗಳಿಗೆ ಅಂದಾಜು 25 ಸಾವಿರ ರೂ. ಅಥವಾ ವರ್ಷಕ್ಕೆ 3 ಲಕ್ಷ ರೂ. ಪಿಂಚಣಿ ಬರುತಿತ್ತು.

ARUN JAITLEY 2
ವೃತಿಪರ ವಕೀಲರಾಗಿದ್ದ ಅರುಣ್ ಜೇಟ್ಲಿ ಅವರು, ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟಿನಲ್ಲಿ ವಾದಮಾಡಿದ್ದಾರೆ. ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಅವರು, ಹಣಕಾಸು ಸೇರಿದಂತೆ ಕೇಂದ್ರದ ಪ್ರಮುಖ ಖಾತೆಯನ್ನು ನಿರ್ವಹಿಸಿದ್ದರು. ಸಂಸತ್ತಿನ ಮೇಲ್ಮನೆ ಮತ್ತು ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿ ಕೆಲಸ ಮಾಡಿದ್ದರು. ಅನಾರೋಗ್ಯದ ಕಾರಣದಿಂದ ಈ ಸಲ ಸಂಪುಟಕ್ಕೆ ಸೇರಿಸಿಕೊಳ್ಳದಂತೆ ಜೇಟ್ಲಿ ಅವರು ಸಂಪುಟ ರಚನೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದರು.

ಎರಡನೇ ಬಾರಿ ಮೋದಿ ಅಧಿಕಾರಕ್ಕೆ ಏರುತ್ತಿದ್ದಂತೆ ಅರುಣ್ ಜೇಟ್ಲಿ ಅವರು ಜೂನ್ ಮೊದಲ ವಾರದಲ್ಲಿ ಸರ್ಕಾರಿ ನಿವಾಸ ತೆರವುಗೊಳಿಸಿ, ದಕ್ಷಿಣ ದೆಹಲಿಯಲ್ಲಿನ ಸ್ವಂತ ಮನೆಗೆ ತೆರಳಿರುವ ಕ್ರಮ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿತ್ತು. ಸರ್ಕಾರಿ ಬಂಗಲೆ ತೆರವುಗೊಳಿಸಿದ್ದಲ್ಲದೆ ತಮಗೆ ನೀಡಲಾಗಿದ್ದ ಸರಕಾರಿ ಕಾರನ್ನೂ ಮರಳಿಸಿ ಭದ್ರತಾ ಸಿಬ್ಬಂದಿಯನ್ನೂ ಕಡಿತ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು.

ಅಧಿಕೃತ ನಿವಾಸಕ್ಕೆ ತರಿಸಲಾಗುತ್ತಿದ್ದ 25 ದಿನಪತ್ರಿಕೆಗಳನ್ನು ನಿಲ್ಲಿಸುವಂತೆ ಹಾಗೂ ನೀರು, ವಿದ್ಯುತ್ ಬಿಲ್ ಸೇರಿದಂತೆ ಎಲ್ಲ ಬಿಲ್‍ಗಳನ್ನೂ ಚುಕ್ತಾ ಮಾಡುವಂತೆ ತಮ್ಮ ಖಾಸಗಿ ಸಿಬ್ಬಂದಿಗೆ ಸೂಚನೆ ನೀಡಿದ್ದರು.

arun jaitley

ಸುಪ್ರೀಂ ಕೋರ್ಟ್ ನಿರ್ದೇಶನದ ಪ್ರಕಾರ, ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ 30 ದಿನಗಳ ಒಳಗೆ ಮಾಜಿ ಸಚಿವರು ಸರಕಾರಿ ಬಂಗಲೆ ತೆರವುಗೊಳಿಸಬೇಕು. ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿದ್ದ ಜೇಟ್ಲಿಯವರು, ಮೂರು ವಾರ ಕಾಲವಕಾಶ ಇದ್ದರೂ ಸರ್ಕಾರಿ ಬಂಗಲೆಯಿಂದ ಹೊರ ನಡೆದಿದ್ದರು. ಅವರ ಈ ನಡೆಯನ್ನು ಬಿಜೆಪಿಯ ಹಿರಿಯ ನಾಯಕರು ಹಾಗೂ ವಕೀಲರು ಶ್ಲಾಘಿಸಿದ್ದರು.

ವಿತ್ತ ಮಾಂತ್ರಿಕ ಎಂದೇ ಹೆಸರಾಗಿದ್ದ ಅರುಣ್ ಜೇಟ್ಲಿ ಅವರು ಆಗಸ್ಟ್ 24 ರಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ನಲ್ಲಿ ಮಧ್ಯಾಹ್ನ 12 ಗಂಟೆ 7 ನಿಮಿಷಕ್ಕೆ ಮೃತಪಟ್ಟಿದ್ದರು. ಕೆಲವು ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಅರುಣ್ ಜೇಟ್ಲಿ ಮೇ 23ರಂದು ಏಮ್ಸ್ ನಿಂದ ಡಿಸ್ಚಾರ್ಜ್ ಆಗಿದ್ದರು. ಆರೋಗ್ಯದಲ್ಲಿ ಮತ್ತೆ ಏರುಪೇರು ಕಂಡ ಬಂದ ಹಿನ್ನೆಲೆಯಲ್ಲಿ ಆಗಸ್ಟ್ 9 ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಾಗಿದ್ದರು.

TAGGED:Arun JaitleyletterNew DelhiPensionPoor EmployeesPublic TVWifeಅರುಣ್ ಜೇಟ್ಲಿನವದೆಹಲಿಪತ್ನಿಪತ್ರಪಬ್ಲಿಕ್ ಟಿವಿಪಿಂಚಣಿಬಡ ನೌಕರರು
Share This Article
Facebook Whatsapp Whatsapp Telegram

Cinema Updates

ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
6 hours ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ ಪಡುಕೋಣೆ
9 hours ago
Kamal Hassan Surya 2
ನಟ ಸೂರ್ಯ ಜೊತೆಗೆ ಬಿಗ್‌ ಬಜೆಟ್‌ ಸಿನಿಮಾಗೆ ಕಮಲ್‌ ಪ್ಲ್ಯಾನ್‌
12 hours ago
Nandamuri Balakrishna
ಬಾಲಯ್ಯ ಜನ್ಮದಿನಕ್ಕೆ `ಅಖಂಡ-2′ ಟೀಸರ್ ರಿಲೀಸ್ – ಮಾಸ್ ಅವತಾರದಲ್ಲಿ ಅಬ್ಬರಿಸಿದ ನಂದಮೂರಿ ಬಾಲಕೃಷ್ಣ
12 hours ago

You Might Also Like

Meghalaya Honeymoon
Latest

ಹನಿಮೂನ್ ಮರ್ಡರ್ | ಪತಿ ಹತ್ಯೆಗೆ 20 ಲಕ್ಷ ನೀಡುವುದಾಗಿ ಆಫರ್ ನೀಡಿದ್ದ ಹಂತಕಿ

Public TV
By Public TV
1 hour ago
Madhu Bangarappa
Bagalkot

ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿ ಫೇಶಿಯಲ್ ಅಟೆಂಡೆನ್ಸ್ : ಮಧು ಬಂಗಾರಪ್ಪ

Public TV
By Public TV
2 hours ago
01 6
Big Bulletin

ಬಿಗ್‌ ಬುಲೆಟಿನ್‌ 10 June 2025 ಭಾಗ-1

Public TV
By Public TV
2 hours ago
02 7
Big Bulletin

ಬಿಗ್‌ ಬುಲೆಟಿನ್‌ 10 June 2025 ಭಾಗ-2

Public TV
By Public TV
2 hours ago
03 6
Big Bulletin

ಬಿಗ್‌ ಬುಲೆಟಿನ್‌ 10 June 2025 ಭಾಗ-3

Public TV
By Public TV
2 hours ago
Nandi Hills 2
Chikkaballapur

ನಂದಿಬೆಟ್ಟಕ್ಕೆ ಮೂರು ದಿನಗಳ ಕಾಲ ಪ್ರವಾಸಿಗರಿಗೆ ನಿರ್ಬಂಧ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?