ನವದೆಹಲಿ: ಪಾದರಾಯಣಪುರ ಘಟನೆಯ ಹಿಂದೆ ಶಾಸಕ ಜಮೀರ್ ಅಹ್ಮದ್ ಕೈವಾಡವಿದೆ. ಇದೊಂದು ಪೂರ್ವ ನಿಯೋಜಿತ ಘಟನೆ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಆರೋಪಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಸ್ಥಾನ ಎನ್ನುವುದು ಜವಾಬ್ದಾರಿಯುತ ಸ್ಥಾನ, ಆ ಸ್ಥಾನದಲ್ಲಿ ಕುಳಿತು ತಪ್ಪಿತಸ್ಥರ ಪರ ಮಾತನಾಡುವುದು ಗಮನಿಸಿದರೇ ಇದರಲ್ಲಿ ಜಮೀರ್ ಅಹ್ಮದ್ ಪಾತ್ರ ಸ್ಪಷ್ಟವಾಗಿದೆ. ಜಮೀರ್ ಕಾರಣದಿಂದಲೇ ಆ ಕ್ಷೇತ್ರದ ಪರಿಸ್ಥಿತಿ ಹೀಗಾಗಿದೆ. ಘಟನೆಯನ್ನು ಸಮರ್ಥಿಸಿಕೊಳ್ಳುವುದು ನೋಡಿದರೇ ಇದು ಅವರ ಆಂತರಿಕ ಭಾವನೆಗಳನ್ನು ಪ್ರತಿಬಿಂಬಿಸುತ್ತಿದೆ ಇದನ್ನು ಸುಮ್ಮನೆ ಬಿಟ್ಟರೆ ಕೊರೊನಾಗಿಂತ ವೇಗವಾಗಿ ಹರಡಲಿದೆ ಎಂದು ಹರಿಹಾಯ್ದರು.
- Advertisement 2
- Advertisement 3
ಆಶಾ ಕಾರ್ಯಕರ್ತೆರ ಮೇಲೆ ದಾಳಿ ಆದಾಗಲೇ ಕಠಿಣ ಕ್ರಮ ತೆಗೆದುಕೊಳ್ಳಬೇಕಿತ್ತು. ಅದನ್ನು ಲಘುವಾಗಿ ಪರಿಗಣಿಸಿದಕ್ಕಾಗಿ ಈ ಘಟನೆ ನಡೆದಿದೆ. ಇದೊಂದು ಪೂರ್ವ ನಿಯೋಜಿತ ಕೃತ್ಯ. ಇದರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ರಾಜ್ಯ ಗೃಹ ಸಚಿವರು ಕಠೋರ ನಿರ್ಧಾರಗಳಿಗೆ ಸೂಚನೆ ನೀಡಿದ್ದಾರೆ. ಇದು ಉತ್ತಮ ಬೆಳವಣಿಗೆ ಎಂದು ಶ್ಲಾಘಿಸಿದರು.
- Advertisement 4
ಪ್ರತಿಕೂಲ ವಾತಾವರಣ ಸೃಷ್ಟಿಸುವ ಜಮೀರ್ ಅಹ್ಮದ್ ಶಾಸಕ ಸ್ಥಾನದಲ್ಲಿ ಮುಂದುವರಿಯಲು ಯಾವುದೇ ಅರ್ಹತೆ ಇಲ್ಲ. ಗೌರವದ ಗಂಧ ಗಾಳಿ ಗೊತ್ತಿದ್ದರೆ ರಾಜೀನಾಮೆ ಕೇಳಬಹುದಿತ್ತು. ರಾಜಕೀಯ ಅವಕಾಶಕಕ್ಕಿರುವ ಜನರಿಗೆ ಏನೂ ಹೇಳಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.