Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಕಷ್ಟದಲ್ಲಿರುವ ದೇಶವಾಸಿಗಳಿಗೆ ವಿಶೇಷ ಪ್ಯಾಕೇಜ್ – ಮೋದಿ ನಡೆಗೆ ಸೋನಿಯಾ, ರಾಹುಲ್ ಬೆಂಬಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಂಕಷ್ಟದಲ್ಲಿರುವ ದೇಶವಾಸಿಗಳಿಗೆ ವಿಶೇಷ ಪ್ಯಾಕೇಜ್ – ಮೋದಿ ನಡೆಗೆ ಸೋನಿಯಾ, ರಾಹುಲ್ ಬೆಂಬಲ

Latest

ಸಂಕಷ್ಟದಲ್ಲಿರುವ ದೇಶವಾಸಿಗಳಿಗೆ ವಿಶೇಷ ಪ್ಯಾಕೇಜ್ – ಮೋದಿ ನಡೆಗೆ ಸೋನಿಯಾ, ರಾಹುಲ್ ಬೆಂಬಲ

Public TV
Last updated: March 26, 2020 7:42 pm
Public TV
Share
3 Min Read
MODI RAHUL SONIA
SHARE

ನವದೆಹಲಿ: ಕೊರೊನಾ ವೈರಸ್‍ನಿಂದ ದೇಶದಲ್ಲಿ ಆಗುತ್ತಿರುವ ಪರಿಣಾಮವನ್ನು ತಡೆಗಟ್ಟಿ ಜನರಿಗೆ ನೆರವಾಗಲು ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ಅನ್ನು ಘೋಷಣೆ ಮಾಡಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಈ ನಡೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಅವರು ಪುತ್ರ ರಾಹುಲ್ ಗಾಂಧಿಯವರು ಮೆಚ್ಚುಗೆ ಸೂಚಿಸಿದ್ದಾರೆ.

ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ 21 ದಿನಗಳ ಕಾಲ ಲಾಕ್‍ಡೌನ್ ಘೋಷಿಸಿದ್ದಾರೆ. ಇದು ಜನರ ಜೀವನ ಮತ್ತು ಆರ್ಥಿಕ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ. ಹೀಗಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಕೊರೊನಾ ವೈರಸ್ ಬಿಕ್ಕಟ್ಟಿನಿಂದ ಹೊರಬರಲು 1.70 ಲಕ್ಷ ಕೋಟಿ ರೂ. ಪರಿಹಾರದ ಪ್ಯಾಕೇಜ್ ಘೋಷಿಸಿದ್ದಾರೆ.

The Govt announcement today of a financial assistance package, is the first step in the right direction. India owes a debt to its farmers, daily wage earners, labourers, women & the elderly who are bearing the brunt of the ongoing lockdown.#Corona

— Rahul Gandhi (@RahulGandhi) March 26, 2020

ಕೇಂದ್ರ ಸರ್ಕಾರದ ಈ ತೀರ್ಮಾನವನ್ನು ಮೆಚ್ಚಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಕೊರೊನಾದಿಂದ ಆತಂಕಕೊಳಗಾದ ಜನರಿಗೆ ಹಣಕಾಸಿನ ನೆರವು ಪ್ಯಾಕೇಜ್ ಅನ್ನು ಇಂದು ಸರ್ಕಾರದ ಪ್ರಕಟಣೆ ಮಾಡುವ ಮೂಲಕ ಸರಿಯಾದ ದಿಕ್ಕಿನಲ್ಲಿ ಮೊದಲ ಹೆಜ್ಜೆ ಇಟ್ಟಿದೆ. ಈ ಲಾಕ್‍ಡೌನ್‍ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರೈತರು, ದೈನಂದಿನ ಕೂಲಿ ಮಾಡುವವರು, ಕಾರ್ಮಿಕರು, ಮಹಿಳೆಯರು ಮತ್ತು ವೃದ್ಧರಿಗೆ ಭಾರತ ಸರ್ಕಾರವು ಸಾಲ ನೀಡಬೇಕಿದೆ ಎಂದು ಬರೆದುಕೊಂಡಿದ್ದಾರೆ.

Congress stands with the government and the people of India in this fight against the Coronavirus pandemic. pic.twitter.com/NaM7gJl0A8

— Congress (@INCIndia) March 26, 2020

ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರಿಗೆ ಪತ್ರವೊಂದನ್ನು ಬರೆದಿದ್ದ ಸೋನಿಯಾ ಗಾಂಧಿ ಅವರು, ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾಗಿ, ಕೊರೊನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ತೆಗೆದುಕೊಳ್ಳುವ ಪ್ರತಿಯೊಂದು ಹೆಜ್ಜೆಯನ್ನೂ ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ ಮತ್ತು ಸಹಕರಿಸುತ್ತೇವೆ ಎಂದು ಹೇಳಲು ಬಯಸುತ್ತೇನೆ ಎಂದು ತಿಳಿಸಿದ್ದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ನಿರ್ಮಲಾ ಸೀತಾರಾಮನ್ ಅವರು, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅಕ್ಕಿ ಯೋಜನೆ ಅಡಿ ಈಗಾಗಲೇ 5 ಕೆಜಿ ಅಕ್ಕಿ/ ಗೋಧಿ ನೀಡಲಾಗುತ್ತಿದೆ. ಇದರ ಜೊತೆ ಹೆಚ್ಚುವರಿಯಾಗಿ ಮೂರು ತಿಂಗಳ ಕಾಲ ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತದೆ. ವಲಸೆ ಕಾರ್ಮಿಕರು, ನಗರ ಮತ್ತು ಗ್ರಾಮೀಣ ಬಡವವರಿಗೆ, ತಕ್ಷಣದ ಸಹಾಯದ ಅಗತ್ಯವಿರುವ ಬಡವರಿಗೆ ಪ್ಯಾಕೇಜ್ ಸಿದ್ಧವಾಗಿದೆ. ಯಾರೂ ಹಸಿವಿನಿಂದ ಬಳಲಬಾರದು ಎನ್ನುವುದು ನಮ್ಮ ಸರ್ಕಾರ ಉದ್ದೇಶ. ಹೀಗಾಗಿ 1.7 ಲಕ್ಷ ಕೋಟಿ ರೂ. ಮೌಲ್ಯದ ಪ್ಯಾಕೇಜ್ ಘೋಷಣೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದರು.

Nirmala Sitharaman 1

8.69 ಕೋಟಿ ರೂ. ರೈತರ ಖಾತೆಗೆ ಈ ಕೂಡಲೇ ಏಪ್ರಿಲ್ ತಿಂಗಳ 2 ಸಾವಿರ ರೂ. ಹಣವನ್ನು ಹಾಕಲಾಗುವುದು. ನರೇಗಾ ಯೋಜನೆ ಅಡಿ ಕೆಲಸ ಮಾಡುವ ಪ್ರತಿ ಕಾರ್ಮಿಕರಿಗೆ 2 ಸಾವಿರ ರೂ. ಹೆಚ್ಚುವರಿಯಾಗಿ ನೀಡಲಾಗುವುದು ಎಂದರು.

ಕೇಂದ್ರದ ವಿಶೇಷ ಪ್ಯಾಕೇಜ್‍ನ ಮುಖ್ಯಾಂಶಗಳು
1. ಕೊರೊನಾ ವೈರಸ್ ಸೊಂಕಿತರಿಗೆ ಚಿಕಿತ್ಸೆ ನೀಡುತ್ತಿರುವವರು, ಸೋಂಕಿನ ಅಪಾಯ ಇರುವವರಿಗೆ ಆರೋಗ್ಯ ವಿಮೆ. ಆರೋಗ್ಯ ಕಾರ್ಯಕರ್ತರಿಗೆ 50 ಲಕ್ಷ ವಿಮೆ.
2. ವಿಧವೆಯರು, ಹಿರಿಯ ನಾಗರಿಕರು, ದಿವ್ಯಾಂಗರು ಅಂಗವಿಕರಿಗೆ ಒಂದು ಬಾರಿಯ ಪರಿಹಾರ ಮೊತ್ತ 1,000 ರೂ. ಸಿಗಲಿದೆ. ಎರಡು ಕಂತುಗಳಲ್ಲಿ ಹಣ ಬಿಡುಗಡೆಯಾಗಲಿದ್ದು, ಸುಮಾರು 3 ಕೋಟಿ ಜನರಿಗೆ ಇದರಿಂದ ಅನುಕೂಲ.
3. 3 ತಿಂಗಳ ಕಾಲ ಮಹಿಳಾ ಜನ ಧನ್ ಖಾತೆಗೆ 500 ರೂ. ಹಾಕಲಾಗುವುದು. ಉಜ್ವಲ ಯೋಜನೆ ಅಡಿಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸಂಪರ್ಕ ಪಡೆದಿರುವ ಮಹಿಳೆಯರಿಗೆ 3 ತಿಂಗಳ ವರೆಗೂ ಮೂರು ಅನಿಲ ಸಿಲಿಂಡರ್ಗಳು ಉಚಿತ ವಿತರಣೆ. ಈ ನಿರ್ಧಾರದಿಂದ 8 ಕೋಟಿ ಮಹಿಳೆಯರು ಲಾಭ.
4. ಮುಂದಿನ ತಿಂಗಳ ಸಂಸ್ಥೆಗಳು ಮತ್ತು ಉದ್ಯೋಗಿಗಳ ಇಪಿಎಫ್ ಮೊತ್ತವನ್ನು ಸರ್ಕಾರವೇ ತುಂಬಲಿದೆ. 100 ಉದ್ಯೋಗಿಗಳು ಇರುವ ಸಂಸ್ಥೆ ಹಾಗೂ ತಿಂಗಳಿಗೆ 15,000 ರೂ.ವರೆಗೂ ವೇತನ ಪಡೆಯುತ್ತಿರುವ ಉದ್ಯೋಗಿಗಳಿರುವ ಸಂಸ್ಥೆಗಳಿಗೆ ಇದರ ಲಾಭ ಸಿಗಲಿದೆ.
5. ಇಪಿಎಫ್ ಯೋಜನೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಮೂಲಕ ಮರು ಪಾವತಿ ಮಾಡದಿರದ ವ್ಯವಸ್ಥೆಯಡಿ ಶೇ.75ರಷ್ಟು ಇಪಿಎಫ್ ಮುಂಗಡ ಮೊತ್ತ ಪಡೆಯಲು ಅವಕಾಶ ಸಿಗುತ್ತದೆ. ಕಾರ್ಮಿಕರು 3 ತಿಂಗಳ ಸಂಬಳ ಅಥವಾ ಶೇ.75ರಷ್ಟು ಮುಂಗಡ ಮೊತ್ತ;, ಇದರಲ್ಲಿ ಯಾವುದು ಕಡಿಮೆಯೋ ಅದನ್ನು ಪಡೆಯಬಹುದಾಗಿದೆ. ಇದರಿಂದ ಇಪಿಎಫ್ ನೋಂದಾಯಿಸಿರುವ ಸುಮಾರು 4.8 ಕೋಟಿ ಉದ್ಯೋಗಿಗಳಿಗೆ ಅನುಕೂಲವಾಗಲಿದೆ.

TAGGED:CoronamodiNew DelhiPublic TVRahul GandhiSonia GandhiSpecial Packageಕೊರೊನಾನವದೆಹಲಿಪಬ್ಲಿಕ್ ಟಿವಿಮೋದಿರಾಹುಲ್ ಗಾಂಧಿವಿಶೇಷ ಪ್ಯಾಕೇಜ್ಸೋನಿಯಾ ಗಾಂಧಿ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

DK Shivakumar 1 1
Bengaluru City

ನಾಯಕತ್ವ ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ: ಡಿಕೆಶಿ

Public TV
By Public TV
2 minutes ago
US AWACS aircraft
Latest

ಇರಾನ್ ದಾಳಿಯಲ್ಲಿ ಅಮೆರಿಕದ ನೆಲೆಗಳಿಗೆ ಭಾರಿ ಹಾನಿ – ದುರಸ್ತಿಗೆ ಬೇಕು ಶತಕೋಟಿ ಡಾಲರ್‌

Public TV
By Public TV
38 minutes ago
firing on lawyers house in belgaum
Belgaum

ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ಗುಂಡಿನ ದಾಳಿ – ಮಗಳು ಓದುತ್ತಿದ್ದ ಮೊದಲ ಮಹಡಿಯೇ ಟಾರ್ಗೆಟ್‌

Public TV
By Public TV
1 hour ago
mann ki baat
Dharwad

56gw ದಾಟಿದ ಭಾರತದ ಪವನಶಕ್ತಿ ಉತ್ಪಾದನೆ ಸಾಮರ್ಥ್ಯಕ್ಕೆ ಮೋದಿ ಶ್ಲಾಘನೆ: ಜೋಶಿ

Public TV
By Public TV
1 hour ago
nobody told me its a dangerous profession jokes Donald Trump after WHCD event shooting Hilton Hotel
Latest

ಅಧ್ಯಕ್ಷ ಹುದ್ದೆ ಇಷ್ಟು ಅಪಾಯಕಾರಿ ಎಂದು ತಿಳಿದಿರಲಿಲ್ಲ: ಗುಂಡಿನ ದಾಳಿಯ ನಂತರ ಟ್ರಂಪ್ ವ್ಯಂಗ್ಯ

Public TV
By Public TV
2 hours ago
White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?