Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರದ ಸಭೆ, ಸಮಾರಂಭಗಳಲ್ಲಿ ಜನಪ್ರತಿನಿಧಿಗಳ ಆಹ್ವಾನಕ್ಕೆ ಹೊಸ ಮಾರ್ಗಸೂಚಿ – ಶಿಷ್ಟಾಚಾರ ಪಾಲನೆಗೆ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರದ ಸಭೆ, ಸಮಾರಂಭಗಳಲ್ಲಿ ಜನಪ್ರತಿನಿಧಿಗಳ ಆಹ್ವಾನಕ್ಕೆ ಹೊಸ ಮಾರ್ಗಸೂಚಿ – ಶಿಷ್ಟಾಚಾರ ಪಾಲನೆಗೆ ಸೂಚನೆ

Bengaluru City

ಸರ್ಕಾರದ ಸಭೆ, ಸಮಾರಂಭಗಳಲ್ಲಿ ಜನಪ್ರತಿನಿಧಿಗಳ ಆಹ್ವಾನಕ್ಕೆ ಹೊಸ ಮಾರ್ಗಸೂಚಿ – ಶಿಷ್ಟಾಚಾರ ಪಾಲನೆಗೆ ಸೂಚನೆ

Public TV
Last updated: October 17, 2025 10:03 am
Public TV
Share
5 Min Read
Vidhana Soudha
SHARE

ಬೆಂಗಳೂರು: ಇನ್ಮುಂದೆ ಸರ್ಕಾರದ ಸಭೆ, ಸಮಾರಂಭಗಳಲ್ಲಿ (Government Programs) ಜನಪ್ರತಿನಿಧಿಗಳ ಆಹ್ವಾನಕ್ಕೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟ ಮಾಡಿದೆ. 2019ರ ಸುತ್ತೋಲೆಯಲ್ಲಿನ ಮಾರ್ಗಸೂಚಿಗಳನ್ನ (New Guidelines) ಮಾರ್ಪಾಡು ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ರಾಜ್ಯ ಮಟ್ಟದ ಕಾರ್ಯಕ್ರಮ, ಜಿಲ್ಲೆ ಹಾಗೂ ತಾಲೂಕು ಮಟ್ಟದ ಕಾರ್ಯಕ್ರಮ, ರಾಜ್ಯದಲ್ಲಿ ನಡೆಯೋ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳಿಗೆ ಹೊಸ ಮಾರ್ಗಸೂಚಿ ಅನ್ವಯವಾಗಲಿದೆ. ಅದರ ಅನ್ವಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಡ್ಡಾಯವಾಗಿ ಶಿಷ್ಟಾಚಾರ ಪಾಲನೆ ಮಾಡಬೇಕಾಗಿ ಸೂಚಿಸಿದೆ. ಮಾರ್ಗಸೂಚಿಯಲ್ಲಿ ಏನಿದೆ ಅನ್ನೋದನ್ನ ಮುಂದೆ ನೋಡೋಣ…

Siddaramaiah 15

ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಮಾರ್ಗಸೂಚಿ
> ಸಿಎಂ, ಡಿಸಿಎಂ, ಸಂಬಂಧ ಪಟ್ಟ ಇಲಾಖೆ ಸಚಿವರು, ಇಲಾಖಾ ಸಚಿವರು ಸೂಚಿಸುವ ಯಾವುದೇ ಗಣ್ಯರು ಕಾರ್ಯಕ್ರಮ ಉದ್ಘಾಟನೆ ಮಾಡಬಹುದು.
> ಸಿಎಂ, ಡಿಸಿಎಂ ಕಾರ್ಯಕ್ರಮ ಉದ್ಘಾಟನೆ ಮಾಡಿದ್ರೆ ಸಂಬಂಧ ಪಟ್ಟ ಇಲಾಖೆ ಸಚಿವರು ಅಧ್ಯಕ್ಷತೆ ವಹಿಸುತ್ತಾರೆ.
> ಇಲಾಖಾ ಸಚಿವರು ಕಾರ್ಯಕ್ರಮ ಉದ್ಘಾಟನೆ ಮಾಡಿದ್ರೆ ಸ್ಥಳೀಯ ಶಾಸಕರು ಅಧ್ಯಕ್ಷತೆ ವಹಿಸುವುದು.
> ಇತರೆ ಗಣ್ಯರು ಕಾರ್ಯಕ್ರಮ ಉದ್ಘಾಟನೆ ಮಾಡಿದ್ರೆ ಯಾರು ಅಧ್ಯಕ್ಷತೆವಹಿಸಬೇಕು ಅಂತ ಇಲಾಖೆ ಸಚಿವರು ನಿರ್ಧಾರ ಮಾಡುತ್ತಾರೆ.
> ಕಾರ್ಯಕ್ರಮದಲ್ಲಿ ಆಹ್ವಾನ ಪತ್ರಿಕೆ ಮತ್ತು ವೇದಿಕೆ ಮೇಲೆ ಆಸೀನರಾಗು ಗಣ್ಯರ ಹೆಸರು 9 ಸಂಖ್ಯೆ ಮೀರದಂತೆ ಹಾಗೂ ಅನಿವಾರ್ಯ ಸಮಯದಲ್ಲಿ 13 ಸಂಖ್ಯೆ ಮೀರದಂತೆ ಆಯ್ಕೆ ಮಾಡುವುದು. ಸ್ಥಳೀಯ ಶಾಸಕರ ಹೆಸರು ಕಡ್ಡಾಯ ಸೇರಿಸುವುದು.
> ವಿಧಾನಸೌಧ, ವಿಕಾಸಸೌಧದಲ್ಲಿ ನಡೆಯೊ ಕಾರ್ಯಕ್ರಮದಲ್ಲಿ ಇಲಾಖೆ ಸಚಿವರು ಸಭಾಪತಿ, ಸಭಾಧ್ಯಕ್ಷರ ಸಹಮತಿ ಪಡೆದು ಯಾರು ವೇದಿಕೆ ಆಸೀನರಾಗೋ ಗಣ್ಯರ ಅಯ್ಕೆ ಮಾಡುವುದು.

ಇಲಾಖೆಗಳು ಆಯೋಜಿಸುವ ಜಿಲ್ಲಾ ಮಟ್ಟದ ಕಾರ್ಯಕ್ರಮಗಳು
> ಸಿಎಂ, ಡಿಸಿಎಂ, ಸಂಬಂಧ ಪಟ್ಟ ಇಲಾಖೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಇಲಾಖಾ ಸಚಿವರು ಸೂಚಿಸುವ ಯಾವುದೇ ಗಣ್ಯರು ಕಾರ್ಯಕ್ರಮ ಉದ್ಘಾಟನೆ ಮಾಡಬಹುದು.
> ಸಿಎಂ, ಡಿಸಿಎಂ ಕಾರ್ಯಕ್ರಮ ಉದ್ಘಾಟನೆ ಮಾಡಿದ್ರೆ ಸಂಬಂಧಪಟ್ಟ ಇಲಾಖೆ ಸಚಿವರು ಅಧ್ಯಕ್ಷತೆವಹಿಸುತ್ತಾರೆ.
> ಇಲಾಖಾ ಸಚಿವರು ಕಾರ್ಯಕ್ರಮ ಉದ್ಘಾಟನೆ ಮಾಡಿದ್ರೆ ಜಿಲ್ಲಾ ಉಸ್ತುವಾರಿ ಸಚಿವರು ಅಧ್ಯಕ್ಷತೆವಹಿಸುವುದು.
> ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟನೆ ಸ್ಥಳೀಯ ಶಾಸಕರು ಅಧ್ಯಕ್ಷತೆವಹಿಸುವುದು.
> ಇತರೆ ಗಣ್ಯರು ಕಾರ್ಯಕ್ರಮ ಉದ್ಘಾಟನೆ ಮಾಡಿದ್ರೆ ಯಾರು ಅಧ್ಯಕ್ಷತೆವಹಿಸಬೇಕು ಅಂತ ಇಲಾಖೆ ಸಚಿವರು ನಿರ್ಧಾರ ಮಾಡುತ್ತಾರೆ.
> ಕಾರ್ಯಕ್ರಮದಲ್ಲಿ ಆಹ್ವಾನ ಪತ್ರಿಕೆ ಮತ್ತು ವೇದಿಕೆ ಮೇಲೆ ಆಸೀನರಾಗುವ ಗಣ್ಯರ ಹೆಸರು 9 ಸಂಖ್ಯೆ ಮೀರದಂತೆ ಹಾಗೂ ಅನಿವಾರ್ಯ ಸಮಯದಲ್ಲಿ 13 ಸಂಖ್ಯೆ ಮೀರದಂತೆ ಆಯ್ಕೆ ಮಾಡುವುದು. ಸ್ಥಳೀಯ ಶಾಸಕರ ಹೆಸರು ಕಡ್ಡಾಯ ಸೇರಿಸುವುದು.

ಜಿಲ್ಲಾಡಳಿತ ಆಯೋಜಿಸುವ ಜಿಲ್ಲಾಮಟ್ಟದ ಕಾರ್ಯಕ್ರಮಗಳು
> ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಇತರೆ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಅನುಮೋದಿಸುವ ಇತರೆ ಗಣ್ಯರು ಉದ್ಘಾಟನೆ ಮಾಡ್ತಾರೆ.
> ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟನೆ ಮಾಡಿದರೆ ಸ್ಥಳೀಯ ಶಾಸಕರು ಅಧ್ಯಕ್ಷತೆವಹಿಸಬೇಕು.
> ಜಿಲ್ಲೆಯ ಇತರೆ ಸಚಿವರು ಉದ್ಘಾಟನೆ ಮಾಡಿದರೆ ಶಾಸಕರು ಅಧ್ಯಕ್ಷತೆ ವಹಿಸಬೇಕು.
> ಇತರೇ ಗಣ್ಯರು ಉದ್ಘಾಟನೆ ಮಾಡಿದರೆ ಯಾರು ಅಧ್ಯಕ್ಷತೆ ವಹಿಸಬೇಕು ಅಂತ ಜಿಲ್ಲಾ ಉಸ್ತುವಾರಿ ‌ಸಚಿವರು ನಿರ್ಧಾರ ಮಾಡುತ್ತಾರೆ.
> ಕಾರ್ಯಕ್ರಮದಲ್ಲಿ ಆಹ್ವಾನ ಪತ್ರಿಕೆ ಮತ್ತು ವೇದಿಕೆ ಮೇಲೆ ಆಸೀನರಾಗು ಗಣ್ಯರ ಹೆಸರು 9 ಸಂಖ್ಯೆ ಮೀರದಂತೆ ಹಾಗೂ ಅನಿವಾರ್ಯ ಸಮಯದಲ್ಲಿ 13 ಸಂಖ್ಯೆ ಮೀರದಂತೆ ಆಯ್ಕೆ ಮಾಡುವುದು. ಸ್ಥಳೀಯ ಶಾಸಕರ ಹೆಸರು ಕಡ್ಡಾಯ ಸೇರಿಸುವುದು.

ರಾಜ್ಯದಲ್ಲಿ ಆಯೋಜನೆ ಮಾಡುವ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳು
> ರಾಜ್ಯಪಾಲರು, ಸಿಎಂ, ಡಿಸಿಎಂ ಕೇಂದ್ರ ಕ್ಯಾಬಿನೆಟ್ ಸಚಿವರು, ಇಲಾಖೆ ಸಚಿವರು, ಅಥವಾ ಸಿಎಂ ಸೂಚಿಸುವ ಗಣ್ಯರು ಕಾರ್ಯಕ್ರಮ ಉದ್ಘಾಟನೆ ಮಾಡುತ್ತಾರೆ.

ಅಧ್ಯಕ್ಷತೆ
> ರಾಜ್ಯಪಾಲರು ಕಾರ್ಯಕ್ರಮ ಉದ್ಘಾಟನೆ ಮಾಡಿದ್ರೆ ಸಿಎಂ, ಕೇಂದ್ರ ಸಚಿವರು, ಡಿಸಿಎಂ ಅಧ್ಯಕ್ಷತೆ
> ಸಿಎಂ ,ಡಿಸಿಎಂ, ಕೇಂದ್ರ ಸಚಿವರು ಉದ್ಘಾಟನೆ ಮಾಡಿದ್ರೆ ಇಲಾಖೆ ಸಚಿವರು ಅಧ್ಯಕ್ಷತೆ
> ಇಲಾಖೆ ಸಚಿವರು ಉದ್ಘಾಟನೆ ಮಾಡಿದ್ರೆ ಸ್ಥಳೀಯ ಶಾಸಕರು ಅಧ್ಯಕ್ಷತೆ
> ಗಣ್ಯರು ಉದ್ಘಾಟನೆ ಮಾಡಿದರೆ ಯಾರು ಅಧ್ಯಕ್ಷತೆ ಅಂತ ಸಿಎಂರಿಂದ ನಿರ್ಧಾರ
> ಕಾರ್ಯಕ್ರಮದಲ್ಲಿ ಆಹ್ವಾನ ಪತ್ರಿಕೆ ಮತ್ತು ವೇದಿಕೆ ಮೇಲೆ ಆಸೀನರಾಗುವ ಗಣ್ಯರ ಹೆಸರು 9 ಸಂಖ್ಯೆ ಮೀರದಂತೆ ಹಾಗೂ ಅನಿವಾರ್ಯ ಸಮಯದಲ್ಲಿ 13 ಸಂಖ್ಯೆ ಮೀರದಂತೆ ಆಯ್ಕೆ ಮಾಡುವುದು. ಸ್ಥಳೀಯ ಶಾಸಕರು, ಸಂಸದರು ಹೆಸರು ಕಡ್ಡಾಯ ಸೇರಿಸುವುದು. ವಿಧಾನಸೌಧ, ವಿಕಾಸಸೌಧದಲ್ಲಿ ಕಾರ್ಯಕ್ರಮ ನಡೆದರೆ ಸಭಾಪತಿ, ಸಭಾಧ್ಯಕ್ಷರ ಸಹಮತಿ ಪಡೆದು ಅತಿಥಿಗಳ ಆಹ್ವಾನ ಮಾಡುವುದು.

ರಾಜ್ಯದ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನುಸರಿಸಬೇಕಾದ ಗಣ್ಯರ ಜೇಷ್ಠತಾ ಪಟ್ಟಿ
1. ರಾಜ್ಯಪಾಲರು
2. ಮುಖ್ಯಮಂತ್ರಿಗಳು
3. ಕೇಂದ್ರ ಸಚಿವ ಸಂಪುಟ ದರ್ಜೆಯ ಸಚಿವರು
4. ಉಪಮುಖ್ಯಮಂತ್ರಿಗಳು
5. ಕೇಂದ್ರ ರಾಜ್ಯ ಸಚಿವರು
6. ಸಭಾಪತಿಗಳು, ಕರ್ನಾಟಕ ವಿಧಾನ ಪರಿಷತ್ತು
7. ಸಭಾಧ್ಯಕ್ಷರು, ಕರ್ನಾಟಕ ವಿಧಾನ ಸಭೆ
8. ರಾಜ್ಯ ಸಚಿವ ಸಂಪುಟ ದರ್ಜೆಯ ಸಚಿವರುಗಳು
9. ವಿರೋಧ ಪಕ್ಷದ ನಾಯಕರುಗಳು, ವಿಧಾನ ಸಭೆ ಮತ್ತು ವಿಧಾನ ಪರಿಷತ್ತು
10. ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಧೀಶರು
11. ಅಡ್ವಕೇಟ್ ಜನರಲ್
12. ಉಪ ಸಭಾಪತಿಗಳು, ಕರ್ನಾಟಕ ವಿಧಾನ ಪರಿಷತ್ತು
13. ಉಪ ಸಭಾಧ್ಯಕ್ಷರು, ಕರ್ನಾಟಕ ವಿಧಾನ ಸಭೆ
14. ಸರ್ಕಾರಿ ಮುಖ್ಯ ಸಚೇತಕರು, ವಿಧಾನ ಸಭೆ ಮತ್ತು ವಿಧಾನ ಪರಿಷತ್ತು.
15. ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಹೊಂದಿರುವ ಗಣ್ಯರು
16. ಸಂಸದರು, ಲೋಕಸಭೆ
17. ಸಂಸದರು, ರಾಜ್ಯಸಭೆ
18. ರಾಜ್ಯ ಸಚಿವರ ದರ್ಜೆಯ ಸ್ಥಾನಮಾನ ಹೊಂದಿರುವ ಗಣ್ಯರು
19. ವಿಧಾನ ಸಭೆಯ ಶಾಸಕರುಗಳು
20. ವಿಧಾನ ಪರಿಷತ್ತಿನ ಶಾಸಕರುಗಳು
21. ಮಂಡಳಿಗಳು, ನಿಗಮಗಳು, ಆಯೋಗಗಳು, ನಗರ ಸ್ಥಳೀಯ ಸಂಸ್ಥೆಗಳು, ಪಂಚಾಯತ್ ರಾಜ್ ಸಂಸ್ಥೆಗಳು, ಪ್ರಾಧಿಕಾರಗಳ ಅಕಾಡೆಮಿಗಳು ಮತ್ತು ಇನ್ನಿತರೇ ಸರ್ಕಾರಿ ಅಂಗ ಸಂಸ್ಥೆ ಅಧ್ಯಕ್ಷರುಗಳು, ಸದಸ್ಯರು

22. (i) ಇಲಾಖೆ ಮಟ್ಟದ ಕಾರ್ಯಕ್ರಮಗಳಾಗಿದ್ದಲ್ಲಿ ಮುಖ್ಯ ಕಾರ್ಯದರ್ಶಿಗಳು, ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯದರ್ಶಿಗಳು.
(ii) ಜಿಲ್ಲಾ ಮಟ್ಟದ ಕಾರ್ಯಕ್ರಮಗಳಾಗಿದ್ದಲ್ಲಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಪಂ ಸಿಇಓಗಳು, ಎಸ್ಪಿ ಮತ್ತು ಇಲಾಖಾ ಮುಖ್ಯಸ್ಥರು.

23. ಸ್ವಾತಂತ್ರ ಹೋರಾಟಗಾರರು, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಇತರೆ ಪ್ರಶಸ್ತಿ ಪುರಸ್ಕೃತರು, ಕಲಾವಿದರು ಪರಿಣಿತರು, ಶಿಕ್ಷಣ ತಜ್ಞರು, ಬುದ್ಧಿಜೀವಿಗಳು, ಲೇಖಕರು, ವಿಜ್ಞಾನಿಗಳು, ಕ್ರೀಡಾಪಟುಗಳು, ರೈತ ಪ್ರತಿನಿಧಿಗಳು, ಸಮಾಜಸೇವಕರು, ಹಿರಿಯ ನ್ಯಾಯವಾದಿಗಳು.

TAGGED:bengaluruGovernment ProgramsKarnataka Governmentsiddaramaiahಕರ್ನಾಟಕ ಸರ್ಕಾರಬೆಂಗಳೂರುಸರ್ಕಾರಿ ಕಾರ್ಯಕ್ರಮಗಳುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
5 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
6 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
6 hours ago
OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
7 hours ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
7 hours ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?