ಕನ್ನಡ ಸಿನಿಮಾ ರಂಗದ ಹೆಸರಾಂತ ನಟ ಶರಣ್, ಇಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರ ಹೊಸ ಸಿನಿಮಾವೊಂದು ಘೋಷಣೆ ಆಗಿದ್ದು, ಈ ಸಿನಿಮಾವನ್ನು ‘ಪುಕ್ಸಟ್ಟೆ ಲೈಫ್’ ಚಿತ್ರ ಖ್ಯಾತಿಯ ನಿರ್ದೇಶಕ ಅರವಿಂದ್ ಕುಪ್ಳಿಕರ್ ನಿರ್ದೇಶನ ಮಾಡಲಿದ್ದಾರೆ. ನಿರ್ದೇಶಕರ ಎರಡನೇ ಸಿನಿಮಾ ಇದಾಗಿದ್ದು, ಮೊದಲ ಸಿನಿಮಾದಲ್ಲೇ ಇವರಿಗೆ ಚಂದನವನ ಫಿಲ್ಮ್ಸ್ ಕ್ರಿಟಿಕ್ಸ್ ಅಕಾಡೆಮಿ ಅತ್ಯುತ್ತಮ ಸಿನಿಮಾ ಪ್ರಶಸ್ತಿ ದೊರೆತಿತ್ತು.
ತಮ್ಮ ಹೊಸ ಸಿನಿಮಾದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಫೋಸ್ಟ್ ಮಾಡಿರುವ ಅರವಿಂದ್, ‘ಒಂದು ಕತೆಯ ಜೊತೆ ಒಂದು, ಒಂದೂವರೆ ವರ್ಷದಿಂದ ನಮ್ಮ ಪಯಣ. ಸಾಕಷ್ಟು ಅಡೆ ತಡೆಗಳು. ನಲಿವು ನೋವುಗಳು ಏನೇ ಇದ್ದರೂ ನಮಗೆ ಧೈರ್ಯ ತುಂಬಿ ಜೊತೆ ನಿಂತವರು ಶರಣ್ ಮತ್ತು ತರುಣ್. ನಮ್ಮ ತಂಡದ ಮುಂದಿನ ಚಿತ್ರ ನಾಯಕ ನಟರಾದ ಶರಣ್ ಅವರ ಜೊತೆ. ಅದೇ ನಂಬಿಕೆ, ಭಯ, ದುಗುಡದಿಂದಲೇ ನಿಮ್ಮನ್ನು ತಲುಪುವ ಪ್ರಯತ್ನ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಾಜಿ ಪತಿ ಫ್ಯಾಮಿಲಿ ಜೊತೆ ಸಮಂತಾ ಒಡನಾಟ, ವೈರಲಾಯ್ತು ಪೋಸ್ಟ್
ಅರವಿಂದ್ ಕುಪ್ಳಿಕರ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದರೆ, ಬಿ.ಬಸವರಾಜ ಮತ್ತು ಶ್ರೀಧರ್ ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಲಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಚಿತ್ರಕ್ಕಿದ್ದು, ಅದ್ವೈತ ಗುರುಮೂರ್ತಿ ಅವರ ಸಿನಿಮಾಟೋಗ್ರಫಿ ಹಾಗೂ ಕೆ.ಎಂ. ಪ್ರಕಾಶ್ ಅವರ ಸಂಕಲನ ಚಿತ್ರಕ್ಕೆ ಇರಲಿದೆ. ಮುಂದಿನ ದಿನಗಳಲ್ಲಿ ಹಲವಾರು ವಿಷಯಗಳನ್ನು ಹಂಚಿಕೊಳ್ಳಲಿದ್ದಾರಂತೆ ಅರವಿಂದ್.
ರಂಗಭೂಮಿ, ಕಿರುತೆರೆ ಮತ್ತು ಸಿನಿಮಾ ಕ್ಷೇತ್ರದಲ್ಲಿ ಅಪಾರವಾಗಿ ಕೆಲಸ ಮಾಡಿದವರು ಅರವಿಂದ್. ಸಂಚಾರಿ ವಿಜಯ್ ನಟನೆಯ ಪುಕ್ಸಟ್ಟೆ ಲೈಫ್ ಅವರ ಚೊಚ್ಚಲು ಸಿನಿಮಾವಾಗಿದ್ದರೂ, ಪ್ರಕಾಶ್ ರೈ, ಬಿ.ಸುರೇಶ್ ಸೇರಿದಂತೆ ಹಲವು ನಿರ್ದೇಶಕರ ಬಳಿ ಕೆಲಸ ಮಾಡಿದ್ದಾರೆ. ರಂಗಭೂಮಿ ಮತ್ತು ಕಿರುತೆರೆಯಲ್ಲಿ ನಟರಾಗಿಯೂ ಅರವಿಂದ್ ಗುರುತಿಸಿಕೊಂಡಿದ್ದಾರೆ. ಎರಡನೇ ಸಿನಿಮಾದ ಮೂಲಕ ಮತ್ತೆ ಪ್ರೇಕ್ಷಕರ ಎದುರು ನಿಂತಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k