ಜನವರಿ 24, ನಾಯಕ ಅಜಯ್ ರಾವ್ (Ajay Rao) ಅವರ ಹುಟ್ಟುಹಬ್ಬ (Birthday). ಈ ಸಂದರ್ಭದಲ್ಲಿ ಅವರು ನಾಯಕನಾಗಿ ನಟಿಸಲಿರುವ ನೂತನ ಚಿತ್ರದ ಘೋಷಣೆಯಾಗಿದೆ. ಹೆಚ್ ಪಿ ಆರ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಹರೀಶ್ ದೇವಿತಂದ್ರೆ ನಿರ್ಮಿಸುತ್ತಿರುವ ಈ ಚೊಚ್ಚಲ ಚಿತ್ರವನ್ನು ಮಳೆ ಚಿತ್ರದ ಖ್ಯಾತಿಯ ಶಿವತೇಜಸ್ (Shivtejas) ನಿರ್ದೇಶಿಸುತ್ತಿದ್ದಾರೆ.
ಈ ಹಿಂದೆ ನಾನು ನಿರ್ದೇಶಿಸಿದ ಧೈರ್ಯಂ ಚಿತ್ರದಲ್ಲಿ ಅಜಯ್ ರಾವ್ ನಾಯಕನಾಗಿ ನಟಿಸಿದ್ದರು ಹಾಗೂ ‘ದಿಲ್ ಪಸಂದ್’ ಚಿತ್ರದಲ್ಲಿ ಅತಿಥಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈಗ ನಮ್ಮಿಬ್ಬರ ಕಾಂಬಿನೇಶನ್ ನಲ್ಲಿ ಹೊಸ ಚಿತ್ರವೊಂದು ಸದ್ಯದಲ್ಲೇ ಆರಂಭವಾಗಲಿದೆ. ಚಿತ್ರದ ಶೀರ್ಷಿಕೆ ಹಾಗೂ ಇತರ ಮಾಹಿತಿಯನ್ನು ಸದ್ಯದಲ್ಲೇ ನೀಡುವುದಾಗಿ ನಿರ್ದೇಶಕ ಶಿವತೇಜಸ್ ತಿಳಿಸಿದ್ದಾರೆ.
ಅಜಯ್ ರಾವ್ ಹುಟ್ಟುಹಬ್ಬದ ದಿನದಂದು ಅವರ ಅಭಿಮಾನಿಗಳಿಗೆ ಕೊಟ್ಟ ವಿಶೇಷ ಗಿಫ್ಟ್ ಇದಾಗಿದ್ದು, ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡಲಿದೆಯಂತೆ ಚಿತ್ರತಂಡ.