ನವದೆಹಲಿ: ರಾಜ್ಯಸಭಾ ಸದಸ್ಯರಾಗಿ ನೂತನವಾಗಿ ನಾಮನಿರ್ದೇಶನಗೊಂಡ “ಒಲಿಂಪಿಕ್ಸ್ ರಾಣಿ” ಪಿ.ಟಿ. ಉಷಾ ಇಂದು ನವದೆಹಲಿಯ ಸಂಸತ್ ಭವನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಸಂಸತ್ ಭವನದ ಕೇಂದ್ರ ಸಚಿವರ ಕಚೇರಿಯಲ್ಲಿ ನಡೆದ ಈ ಸೌಜನ್ಯದ ಭೇಟಿ ವೇಳೆ ಪಿ.ಟಿ. ಉಷಾ ಅವರು ಕೇಂದ್ರ ಸಚಿವರಿಗೆ ಧನ್ಯವಾದ ಅರ್ಪಿಸಿದರು. ಈ ವೇಳೆ ಪ್ರಹ್ಲಾದ್ ಜೋಶಿಯವರು ಪಿ.ಟಿ. ಉಷಾ ಅವರನ್ನು ಅಭಿನಂದಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಸಾವಿರ ಗಡಿದಾಟಿದ ಕೊರೊನಾ – ಬೆಂಗ್ಳೂರಲ್ಲಿ 1,013 ಕೇಸ್, 1,104 ಮಂದಿ ಡಿಸ್ಚಾರ್ಜ್
ಪಿ.ಟಿ. ಉಷಾ ಅವರು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ನ್ಯಾಯ ಸಲ್ಲಿಸುವ ನಿಟ್ಟಿನಲ್ಲಿ ತಮ್ಮ ಕರ್ತವ್ಯಗಳನ್ನು ಹೃದಯಪೂರ್ವಕವಾಗಿ ಹಾಗೂ ಅಷ್ಟೇ ಸರಾಗವಾಗಿ ನೆರವೇರಿಸಲಿದ್ದಾರೆ ಎಂದು ಪ್ರಹ್ಲಾದ್ ಜೋಶಿಯವರು ಆಶಾಭಾವ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಳೆ ಮೈಸೂರು ಜೀವನಾಡಿ KRS ಭರ್ತಿ- ನಾಳೆ ಸಿಎಂ ಬಾಗಿನ ಅರ್ಪಣೆ