Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Explainer

PublicTV Explainer: ಕರಗುತ್ತಿವೆ ಹಿಮಸರೋವರಗಳು – ಭಾರತ, ಪಾಕಿಸ್ತಾನದ ಜನರಿಗೆ ಕಾದಿದೆ ಪ್ರವಾಹದ ಅಪಾಯ!

Public TV
Last updated: February 26, 2023 10:15 am
Public TV
Share
3 Min Read
glacial lakes 1
SHARE

ಜಾಗತಿಕ ತಾಪಮಾನ ಈ ಜಗತ್ತಿಗೆ ಅಂಟಿರೋ ಬಹುದೊಡ್ಡ ಪಿಡುಗು. ವಿಶ್ವಕ್ಕೆ ಕಂಟಕ ಪ್ರಾಯವಾಗಿರುವ ಇದನ್ನು ನಿರ್ವಹಿಸಲು ಎಲ್ಲಾ ರಾಷ್ಟ್ರಗಳು ಕೈಜೋಡಿಸಿವೆ. ಜಾಗತಿಕ ತಾಪಮಾನ ನಿರ್ವಹಿಸುವ ವಿಚಾರವಾಗಿ ಜಾಗತಿಕ ಮಟ್ಟದಲ್ಲಿ ಸಭೆ-ಸಮಾರಂಭಗಳು ನಡೆಯುತ್ತಲೇ ಇವೆ. ವಿಶ್ವ ನಾಯಕರು ಪಾಲ್ಗೊಂಡು ಗಂಭೀರ ಚರ್ಚೆಗಳನ್ನು ನಡೆಸುತ್ತಲೇ ಇದ್ದಾರೆ. ಆದರೆ ಈ ಗಂಡಾಂತರಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ. ಹೀಗಿರುವಾಗಲೇ ಪ್ರಾಕೃತಿಕ ವಿಕೋಪಗಳು ಒಂದಲ್ಲಾ ಒಂದು ರೀತಿ ಅನೇಕ ರಾಷ್ಟ್ರಗಳನ್ನು ಕಾಡುತ್ತಲೇ ಇವೆ.

ಜಾಗತಿಕ ತಾಪಮಾನ ಪರಿಣಾಮ ಕುರಿತು ಹೊಸ ಅಧ್ಯಯನವೊಂದು ಬಹಿರಂಗಪಡಿಸಿರುವ ವರದಿಯು ಭಾರತ, ಪಾಕಿಸ್ತಾನ ರಾಷ್ಟ್ರಗಳಿಗೆ ಭೀತಿ ಹುಟ್ಟಿಸಿದೆ. ಈ ಅಧ್ಯಯನದ ಪ್ರಕಾರ, ಹಿಮಗಳು ಕರಗುತ್ತಿರುವುದರಿಂದ ಭಾರತ, ಪಾಕಿಸ್ತಾನ ಸೇರಿದಂತೆ 4 ರಾಷ್ಟ್ರಗಳಲ್ಲಿ 15 ಮಿಲಿಯನ್‌ಗೂ (1.5 ಕೋಟಿ) ಅಧಿಕ ಜನರು ಅಪಾಯಕ್ಕೆ ಸಿಲುಕುವ ಸಾಧ್ಯತೆಯಿದೆ.

glacial lakes 2

ಹೌದು, ಬ್ರಿಟನ್ ನ್ಯೂಕ್ಯಾಸಲ್ ವಿಶ್ವವಿದ್ಯಾನಿಲಯದ ವಿಜ್ಞಾನಿಗಳ ನೇತೃತ್ವದ ಅಂತಾರಾಷ್ಟ್ರೀಯ ತಂಡವು ಈ ಕುರಿತು ಅಧ್ಯಯನ ನಡೆಸಿದೆ. ಗ್ಲೇಶಿಯಲ್ ಲೇಕ್ (Glacial Lakes) ಔಟ್‌ಬರ್ಸ್ಟ್ ಫ್ಲಡ್‌ಗಳಿಂದ (GLOFs) ಹೆಚ್ಚಿನ ಅಪಾಯ ಉಂಟಾಗಲಿದೆ. ಹಿಮಾಲಯದಲ್ಲಿ 1 ಸಾವಿರಕ್ಕೂ ಅಧಿಕ ಹಿಮ ಸರೋವರಗಳು ಕರಗುತ್ತಿವೆ. ಇದರ ಪರಿಣಾಮವಾಗಿ ಭಾರತ (India), ಚೀನಾ (China), ಪಾಕಿಸ್ತಾನ (Pakistan), ಪೇರು ರಾಷ್ಟ್ರಗಳಲ್ಲಿ ಭೀಕರ ಪ್ರವಾಹ ಉಂಟಾಗಲಿದೆ.

ಹಿಮ ಸರೋವರದ ಪ್ರವಾಹವು ಜನರ ಭೀತಿಗೆ ಕಾರಣವಾಗಿದೆ. ಈ ಗ್ಲೇಶಿಯಲ್ ಸರೋವರದಲ್ಲಿ ಹಿಮ ಕರಗಿದಂತೆ ಅವು ತಗ್ಗು ಪ್ರದೇಶಗಳಲ್ಲಿ ಪ್ರವಾಹವನ್ನು ಉಂಟು ಮಾಡುತ್ತವೆ. ಇದನ್ನು ‘ಹಿಮ ಸರೋವರದ ದಿಢೀರ್ ಪ್ರವಾಹ’ ಎಂದು ಕರೆಯಲಾಗುತ್ತದೆ. ಹವಾಮಾನ ಬದಲಾವಣೆಯಿಂದಾಗಿ ಅಪಾಯವು ಬಹುಪಟ್ಟು ಹೆಚ್ಚಾಗಿದೆ ಎಂದು ಅಧ್ಯಯನವು ತಿಳಿಸಿದೆ.

glacial lakes 3

ಪ್ರವಾಹ ಉಂಟಾಗುವುದು ಹೇಗೆ?: ಭೂಮಿಯ ಹವಾಮಾನವು ಹೆಚ್ಚು ಬಿಸಿಯಾಗುತ್ತಿರುವ ಕಾರಣದಿಂದ ಹಿಮಗಳು ಕರಗಿ ನೀರಾಗಿ ಸಂಗ್ರಹಗೊಳ್ಳುತ್ತಿದೆ. ಇದರಿಂದ ಸರೋವರಗಳು ಉಂಟಾಗುತ್ತವೆ. ಈ ಸರೋವರಗಳು ಇದ್ದಕ್ಕಿದ್ದಂತೆ ಒಡೆದು ವೇಗವಾಗಿ ಹರಿದು ಪ್ರವಾಹವನ್ನು ಉಂಟುಮಾಡಬಹುದು. ಅದು ಮೂಲಜಾಗದಿಂದ ಹೆಚ್ಚಿನ ದೂರದವರೆಗೆ ಹರಡಬಹುದು. ಇದು ಕೆಲವು ಸಂದರ್ಭಗಳಲ್ಲಿ 120 ಕಿಮೀಗಿಂತ ಹೆಚ್ಚು ದೂರಕ್ಕೂ ಹರಿಯಬಹುದು. ಪ್ರವಾಹಗಳು ಹೆಚ್ಚು ವಿನಾಶಕಾರಿಯಾಗಬಹುದು. ಆಸ್ತಿ, ಮೂಲಸೌಕರ್ಯ ಮತ್ತು ಕೃಷಿ ಭೂಮಿಯನ್ನು ಹಾನಿಗೊಳಿಸಬಹುದು. ಜೊತೆಗೆ ಜೀವಹಾನಿಯೂ ಆಗಬಹುದು.

ಅಧ್ಯಯನ ಹೇಳೋದೇನು?: ಜಿಎಲ್‌ಓಎಫ್‌ಗಳಿಂದ ಹೆಚ್ಚು ಅಪಾಯದಲ್ಲಿರುವ ಪ್ರದೇಶಗಳನ್ನು ಗುರುತಿಸಲು ಸಂಶೋಧಕರು, ಹಿಮನದಿಯ ಸರೋವರಗಳ ವಿವಿಧ ಸ್ಥಳಗಳ ಕುರಿತು ಉಪಗ್ರಹದ ಮೂಲಕ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಹಿಮನದಿ ಸರೋವರದಿಂದ 50 ಕಿ.ಮೀ ಮತ್ತು ಅದು ಹುಟ್ಟುವ ಒಂದು ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವ ಜನರ ಬದುಕಿನ ಮೇಲೆ ಪರಿಣಾಮ ಬೀರಬಹುದು.

glacial lakes

ಭಾರತಕ್ಕೆ ಕಾದಿದ್ಯಾ ಅಪಾಯ?: ಅಧ್ಯಯನದ ಪ್ರಕಾರ, ಭಾರತದಲ್ಲಿನ 3 ಮಿಲಿಯನ್ ಜನರು ಅಂದರೆ ಸುಮಾರು 30 ಲಕ್ಷ ಮಂದಿ ಹಿಮ ಸರೋವರಗಳಿಂದ ಉಂಟಾಗುವ ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆ ಇದೆ. ಇದು ವಿಶ್ವದಲ್ಲೇ ಅತಿ ಹೆಚ್ಚು ಎಂದು ಪರಿಗಣಿತವಾಗಿದೆ. ಇನ್ನೂ ಪಾಕಿಸ್ತಾನದಲ್ಲಿ 2 ಮಿಲಿಯನ್ ಜನರು ಪ್ರವಾಹದ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಅಂದಾಜಿಸಿದೆ.

ಗ್ಲೇಶಿಯಲ್ ಸರೋವರದ 50 ಕಿ.ಮೀ ವ್ಯಾಪ್ತಿಯಲ್ಲಿ 15 ಮಿಲಿಯನ್ ಜನರು ವಾಸಿಸುತ್ತಿದ್ದಾರೆ. ಕಿರ್ಗಿಸ್ತಾನ್‌ನಿಂದ ಚೀನಾದವರೆಗೆ ಟಿಬೆಟ್‌ನ್ನು ಆವರಿಸಿರುವ ಹೈಮೌಂಟೇನ್ ಏಷ್ಯಾ, ಅತ್ಯಧಿಕ ಗ್ಲೇಶಿಯಲ್ ಲೇಕ್ ಔಟ್‌ಬರ್ಸ್ಟ್ ಫ್ಲಡ್ ಅಪಾಯ ಸಂಭವಿಸುವ ವಲಯವಾಗಿದೆ. ಇಲ್ಲಿ 9.3 ಮಿಲಿಯನ್ ಜನರು ಅಪಾಯದಲ್ಲಿದ್ದಾರೆ ಎಂದು ಸಂಶೋಧನೆಗಳು ಹೇಳಿವೆ. ಇದನ್ನೂ ಓದಿ: PublicTV Explainer: ಕ್ಷಣ ಕಾಲ ನಿಂತು ವಿರುದ್ಧ ದಿಕ್ಕಿನಲ್ಲಿ ತಿರುಗುತ್ತಾ ಭೂಮಿ? – ಭೂಗರ್ಭದ ರಹಸ್ಯ ಬಿಚ್ಚಿಟ್ಟ ವಿಜ್ಞಾನಿಗಳು

ಚಮೋಲಿ ಪ್ರವಾಹ ಕರಾಳತೆ: ಫೆ. 2021ರಲ್ಲಿ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಉಂಟಾಗಿದ್ದ ಹಠಾತ್ ಪ್ರವಾಹದಿಂದ ಸುಮಾರು 80 ಜನರು ಮೃತಪಟ್ಟಿದ್ದರು. ಈ ಪ್ರವಾಹದಲ್ಲಿ ಅನೇಕರು ಕಾಣೆಯಾದರು. ಹವಾಮಾನ ಬದಲಾವಣೆಯ ಪರಿಣಾಮವಾಗಿ 1990ರಿಂದ ಗ್ಲೇಶಿಯಲ್ ಸರೋವರಗಳ ಸಂಖ್ಯೆಯು ವೇಗವಾಗಿ ಬೆಳೆಯುತ್ತಿದೆ. ಅದೇ ಸಂದರ್ಭದಲ್ಲಿ ಈ ಜಲಾನಯನ ಪ್ರದೇಶಗಳಲ್ಲಿ ವಾಸಿಸುವ ಜನರ ಸಂಖ್ಯೆಯೂ ಗಮನಾರ್ಹವಾಗಿ ಹೆಚ್ಚಾಗಿದೆ.

glacial lakes 4

GLOFs ಅಪಾಯ ನಿಯಂತ್ರಿಸಬಹುದೇ?: GLOFs ಅಪಾಯವನ್ನು ಕಡಿಮೆ ಮಾಡುವುದು ತುಂಬಾ ಕಷ್ಟ. ಯಾವುದೇ ಪರಿಹಾರವು ಕಾರ್ಯನಿರ್ವಹಿಸುವುದಿಲ್ಲ. ಹವಾಮಾನ ಬದಲಾವಣೆಯನ್ನು ಮಿತಿಗೊಳಿಸಬೇಕಷ್ಟೆ. ತಾಪಮಾನವು ಯಾವಾಗಲೂ 1.5 ಡಿಗ್ರಿ ಸೆಲ್ಸಿಯಸ್ ಒಳಗೇ ಇರುವಂತೆ ನೋಡಿಕೊಳ್ಳಬೇಕು. ಇದು ಹಿಮ ಸರೋವರಗಳ ಬೆಳವಣಿಗೆಯನ್ನು ನಿಧಾನಗೊಳಿಸಲು ಸಹಾಯ ಮಾಡುತ್ತದೆ. ಇದನ್ನೂ ಓದಿ: Public TV Explainer: ಭಾರತದಲ್ಲಿ ಲ್ಯಾಬ್‌ನಲ್ಲೇ ತಯಾರಾಗುತ್ತಾ ವಜ್ರ? – ಕೃತಕ ವಜ್ರ ಹೇಗೆ ತಯಾರಿಸ್ತಾರೆ ಗೊತ್ತಾ?

TAGGED:glacial lakesindiapakistanಪಾಕಿಸ್ತಾನಭಾರತಹಿಮಸರೋವರ
Share This Article
Facebook Whatsapp Whatsapp Telegram
1 Comment

Leave a Reply

Your email address will not be published. Required fields are marked *

Cinema News

Shoba Karandlaje
ವಿಷ್ಣು ಸಮಾಧಿ ಸ್ಥಳವನ್ನು ಕಲಾಗ್ರಾಮವನ್ನಾಗಿ ಮಾಡಿ – ಸಿಎಂಗೆ ಶೋಭಾ ಕರಂದ್ಲಾಜೆ ಪತ್ರ
Bengaluru City Cinema Karnataka Latest Sandalwood States Top Stories
upendra1
ವಿಷ್ಣು ಸರ್‌ ನನ್ನಂಥ ಅಭಿಮಾನಿಗಳ ಹೃದಯದಲ್ಲಿ ಎಂದೆಂದಿಗೂ ಶಾಶ್ವತ – ನಟ ಉಪೇಂದ್ರ
Cinema Latest Sandalwood Top Stories
the devil first single
‘ಇದ್ರೆ ನೆಮ್ಮದಿಯಾಗ್ ಇರ್ಬೇಕು’ ಎಂದ ದರ್ಶನ್!
Cinema Latest Sandalwood Top Stories
Dhruva Sarja 1
ಧ್ರುವ ಸರ್ಜಾ ಮಕ್ಕಳ ರಕ್ಷಾಬಂಧನ ಆಚರಣೆ
Cinema Latest Sandalwood
Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood

You Might Also Like

Priyank Kharge 1
Latest

ಪ್ರಿಯಾಂಕ್ ಖರ್ಗೆ V/s ಆರ್‌.ಅಶೋಕ್‌ ಮಧ್ಯೆ ಟ್ವೀಟ್ ವಾರ್‌ – ವೈಯಕ್ತಿಕ ಮಟ್ಟಕ್ಕೆ ತಿರುಗಿದ ಫೈಟ್‌

Public TV
By Public TV
2 hours ago
Basanagouda Patil Yatnal
Districts

ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ: ಯತ್ನಾಳ್‌ ಘೋಷಣೆ

Public TV
By Public TV
3 hours ago
Public TV VidyaMandira
Bengaluru City

ವ್ಹೀಲ್‌ಚೇರ್‌ನಲ್ಲಿ ಪಬ್ಲಿಕ್‌ ಟಿವಿ ʻವಿದ್ಯಾಮಂದಿರʼಕ್ಕೆ ಬಂದು ಮಾಹಿತಿ ಪಡೆದ ವಿದ್ಯಾರ್ಥಿ

Public TV
By Public TV
4 hours ago
Kalaburagi 1
Bagalkot

ಕಾರು-ಬಸ್ ನಡ್ವೆ ಭೀಕರ ಅಪಘಾತ; ತಂದೆ-ಮಗ ಸ್ಥಳದಲ್ಲೇ ಸಾವು

Public TV
By Public TV
5 hours ago
Shivamogga Fire Accident
Crime

ಶಿವಮೊಗ್ಗ | ಆಟೋ ಕಾಂಪ್ಲೆಕ್ಸ್‌ನಲ್ಲಿ ಅಗ್ನಿ ಅವಘಡ – 2 ಕಾರು ಭಸ್ಮ

Public TV
By Public TV
5 hours ago
Rajnath Singh
Latest

ʻಎಲ್ಲರ ಬಾಸ್‌ ನಾವೇʼ ಅನ್ನೋರು ಭಾರತದ ಬೆಳವಣಿಗೆ ಸಹಿಸುತ್ತಿಲ್ಲ – ಟ್ರಂಪ್‌ಗೆ ರಾಜನಾಥ್‌ ಸಿಂಗ್‌ ಗುದ್ದು

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?