Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟ ಸುದೀಪ್ ವಿರುದ್ಧದ ವಂಚನೆ ಆರೋಪಕ್ಕೆ ಟ್ವಿಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಟ ಸುದೀಪ್ ವಿರುದ್ಧದ ವಂಚನೆ ಆರೋಪಕ್ಕೆ ಟ್ವಿಸ್ಟ್

Bengaluru City

ನಟ ಸುದೀಪ್ ವಿರುದ್ಧದ ವಂಚನೆ ಆರೋಪಕ್ಕೆ ಟ್ವಿಸ್ಟ್

Public TV
Last updated: August 2, 2018 10:41 pm
Public TV
Share
3 Min Read
kiccha sudeep 1
SHARE

ಬೆಂಗಳೂರು: ನಟ ಸುದೀಪ್ ವಿರುದ್ಧದ ವಂಚನೆ ಆರೋಪಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕಾಫಿ ತೋಟದ ಮಾಲೀಕ ದೀಪಕ್ ಮಯೂರ್ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ವಾರಸ್ದಾರ ಧಾರಾವಾಹಿ ಕಾರ್ಯಕಾರಿ ನಿರ್ಮಾಪಕ ಮಹೇಶ್ ಪ್ರತ್ಯಾರೋಪ ಮಾಡಿದ್ದಾರೆ.

ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಮಹೇಶ್, ಈ ಮೊದಲು ನನಗೆ ಅನ್ಯಾಯವಾಗಿದೆ ಎಂದು ದೀಪಕ್ ಚಿಕ್ಕಮಗಳೂರು ಎಸ್‍ಪಿ ಬಳಿ ಹೋಗಿದ್ದರು. ಅಲ್ಲಿ ನನಗೆ 88 ರಿಂದ 90 ಲಕ್ಷ ರೂ. ಆಗಿದೆ ಅಂತಾ ಆರೋಪಿಸಿದರು. ಆದರೆ ಎಸ್‍ಪಿ ತೋಟದ ಬೆಲೆಯೇ ಅಷ್ಟಿಲ್ಲ. ಹಾಗಾಗಿ ನೀವು ನ್ಯಾಯಾಲಯದ ಮೊರೆ ಹೋದರೆ ಒಳ್ಳೆಯದು ಎಂದು ಸಲಹೆ ನೀಡಿ ಕಳುಹಿಸಿದರು. ಎಸ್‍ಪಿ ಸಲಹೆಯಂತೆ ದೀಪಕ್ ಕೋರ್ಟ್ ಮೊರೆ ಹೋಗಿದ್ದರು. ಕೋರ್ಟ್ ಆರೋಪಗಳಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸಲ್ಲಿಸುವಂತೆ ಆದೇಶಿಸಿತ್ತು. ನಾವು ಅಲ್ಲಿಯೂ ನ್ಯಾಯಾಲಯಕ್ಕೆ ನಮ್ಮ ಬಳಿಯ ದಾಖಲೆಗಳನ್ನು ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.

suddep 2

ಏನಿದು ವಿವಾದ?:
ಕೆಲ ಸಮಯಗಳ ಹಿಂದೆ ಖಾಸಗಿ ವಾಹಿನಿಯಲ್ಲಿ ನಟ ಕಿಚ್ಚ ಸುದೀಪ್ ಅವರ ಕಿಚ್ಚ ಕ್ರಿಯೇಷನ್ ನಿರ್ಮಾಣದ ಅಡಿಯಲ್ಲಿ ವಾರಸ್ದಾರ ಧಾರಾವಾಹಿ ಪ್ರಸಾರವಾಗುತ್ತಿತ್ತು. ಈಗ ಈ ಧಾರಾವಾಹಿ ಪ್ರಸಾರ ನಿಂತಿದ್ದು, ಇದರ ಚಿತ್ರೀಕರಣಕ್ಕಾಗಿ ಚಿಕ್ಕಮಗಳೂರಿನ ದೀಪಕ್ ಮಯೂರ್ ಪಟೇಲ್ ಎಂಬುವವರ ಮನೆ ಮತ್ತು ಕಾಫಿ ತೋಟವನ್ನು ಬಾಡಿಗೆಗೆ ತಂಡ ಪಡೆದಿತ್ತು.

ಧಾರಾವಾಹಿ ಸಂದರ್ಭದಲ್ಲಿ ಕಾಫಿ ತೋಟಕ್ಕೆ ಸಾಕಷ್ಟು ಹಾನಿಯಾಗಿದೆ. ಹಾನಿಯಾದ ಹಿನ್ನೆಲೆಯಲ್ಲಿ ಒಟ್ಟು 1.50 ಕೋಟಿ ರೂ. ನಷ್ಟವಾಗಿದ್ದು ಈ ಹಣವನ್ನು ನೀಡಬೇಕೆಂದು ನಿರ್ಮಾಣ ತಂಡಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬೇಡಿಕೆಯನ್ನು ಸುದೀಪ್ ಕ್ರಿಯೇಶನ್ಸ್ ತಿರಸ್ಕರಿಸಿದ ಹಿನ್ನೆಲೆಯಲ್ಲಿ ದೀಪಕ್ ಮಯೂರ್ ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ದೂರು ನೀಡಿದ್ದಾರೆ.

home 2

ಮಹೇಶ್ ಹೇಳೋದು ಏನು?
ವಾರಸ್ದಾರ ಧಾರಾವಾಹಿಯ ಚಿತ್ರೀಕರಣ ವೇಳೆ ನಮ್ಮೆಲ್ಲ ಕಲಾವಿದರಿಗೂ ಹೋಟೆಲ್‍ನಲ್ಲಿ ಉಳಿದುಕೊಳ್ಳುವ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಆದ್ರೆ ದೀಪಕ್, ನಿಮ್ಮ ತಂಡಕ್ಕೆ ವಸತಿ ವ್ಯವಸ್ಥೆಯನ್ನು ನಾನು ಕಲ್ಪಿಸಿಕೊಡುತ್ತೇನೆ. ಹೋಟೆಲ್‍ಗೆ ನೀಡುವ ಹಣವನ್ನೇ ನನಗೆ ನೀಡಿ ಅಂತಾ ಮನವಿ ಮಾಡಿಕೊಂಡಿದ್ದರು. ನಮ್ಮನ್ನು ನಂಬಿ ಹೋಮ್ ಸ್ಟೇ ಮಾಡಬೇಡಿ. ಇಲ್ಲಿ ನಾವು ಹೆಚ್ಚು ದಿನ ಇರಲ್ಲ ಎಂದು ಹೇಳಿದರೂ ನೀವು ಹೋದ ಮೇಲೆ ನಾನು ಅದನ್ನೇ ಹೋಮ್ ಸ್ಟೇ ಮಾಡಿಕೊಂಡು ಜೀವನ ಸಾಗಿಸುತ್ತೇನೆ ಎಂದು ತಿಳಿಸಿ ನಮ್ಮೆಲ್ಲರಿಗೂ ವಸತಿ ವ್ಯವಸ್ಥೆ ಮಾಡಿಕೊಟ್ಟಿದ್ದರು.

ನಾವು ಮನೆಯಲ್ಲಿ ಮಾತ್ರ ಶೂಟಿಂಗ್ ಮಾಡಿದ್ದು, ಅದಕ್ಕೆ ಸಂಬಂಧಪಟ್ಟಂತೆ ಬಾಡಿಗೆಯನ್ನು ಕೊಟ್ಟಿದ್ದೇವೆ. 70 ಸಾವಿರ ಬಾಡಿಗೆ ಮಾತ್ರ ಬಾಕಿ ಉಳಿದುಕೊಂಡಿತ್ತು. ಬಾಡಿಗೆ ನೀಡಿಲ್ಲ ಎಂದು ಆರೋಪಿಸಿ ಚಿತ್ರೀಕರಣಕ್ಕಾಗಿ ತಂದಿದ್ದ ಉಪಕರಣಗಳನ್ನು ಅವರ ಬಳಿಯೇ ಇಟ್ಟುಕೊಂಡಿದ್ದಾರೆ. ನಾವು ಬಾಡಿಗೆ ಹಣ 70 ಸಾವಿರ ಕೊಡಲು ಸಿದ್ಧರಿದ್ದು, ನಮ್ಮ 7 ಲಕ್ಷ ಮೌಲ್ಯದ ಉಪಕರಣಗಳನ್ನು ಕೊಡಿ ಎಂದರು ಕೊಡುತ್ತಿಲ್ಲ

mahesh

ಸದ್ಯ ದೀಪಕ್ ಧಾರಾವಾಹಿ ತಂಡ ತೋಟದಲ್ಲಿ ಮನೆ ಕಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ. ಸದ್ಯ ದೀಪಕ್ ಅವರಿಗೆ ಹಣ ಬೇಕಾಗಿದ್ದು, ಶೂಟಿಂಗ್ ಮುಗಿಸಿ ಬಂದಾಗಿನಿಂದ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಾವು ತೋಟದಲ್ಲಿ ಯಾವುದೇ ಮನೆಯನ್ನು ಕಟ್ಟಿಲ್ಲ. ನಾವು ಬಾಡಿಗೆಯ 70 ಸಾವಿರ ಕೊಡಲು ಹೋದಾಗ ತೋಟ ಹಾಳು ಮಾಡಿದ್ದಕ್ಕೆ 1 ಕೋಟಿ 50 ಲಕ್ಷ ರೂ. ಡಿಮ್ಯಾಂಡ್ ಮಾಡುತ್ತಿದ್ದಾರೆ. ಈ ವಿಚಾರ ಸುದೀಪ್ ಅವರ ಗಮನಕ್ಕೆ ಬಂದಿತ್ತು. ಆದರೆ ದೀಪಕ್ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂಬುವುದು ಸುದೀಪ್ ಅವರಿಗೆ ಎಂದು ತಿಳಿದಿತ್ತು. ಈ ವಿಚಾರದಲ್ಲಿ ಸುದೀಪ್ ಅವರ ತಪ್ಪಿಲ್ಲ.

ದೀಪಕ್ ವಿರುದ್ಧ ದೂರು ನೀಡಲು ನಮ್ಮ ಬಳಿಯೂ ದಾಖಲೆಗಳಿವೆ. ಚಿತ್ರೀಕರಣ ಆರಂಭಿಸಿದ ದಿನದಿಂದ ಕೊನೆಯ ದಿನವರೆಗೂ ಎಲ್ಲ ಹಣದ ವ್ಯವಹಾರಗಳನ್ನು ಬ್ಯಾಂಕ್ ಮುಖಾಂತರವೇ ನಡೆಸಲಾಗಿದೆ. ದೀಪಕ್ ಸಹೋದರ ಮತ್ತು ತಂದೆ ಯಾವುದೇ ಆರೋಪಗಳನ್ನು ಮಾಡುತ್ತಿಲ್ಲ. ನಾವು ಯಾವುದೇ ಮೋಸ ಮಾಡಿಲ್ಲ. ಫಿಲ್ಮ್ ಚೇಂಬರ್‍ಗೆ ದೂರು ನೀಡುವುದಕ್ಕೆ ನಮ್ಮ ಅಭ್ಯಂತರವಿಲ್ಲ ಎಂದು ಮಹೇಶ್ ಪ್ರತಿಕ್ರಿಯಿಸಿದ್ದಾರೆ.

TAGGED:BangalorecheatingmaheshmoneyPublic TVserialsudeepಧಾರಾವಾಹಿಪಬ್ಲಿಕ್ ಟಿವಿಬೆಂಗಳೂರುಮಹೇಶ್ಮೋಸಸುದೀಪ್ಹಣ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

02 21
Big Bulletin

ಬಿಗ್‌ ಬುಲೆಟಿನ್‌ 27 April 2026 ಭಾಗ-2

Public TV
By Public TV
11 seconds ago
03 19
Big Bulletin

ಬಿಗ್‌ ಬುಲೆಟಿನ್‌ 27 April 2026 ಭಾಗ-3

Public TV
By Public TV
1 minute ago
RCB 1
Cricket

ಬೆಂಗಳೂರು ಹೊಡೆತಕ್ಕೆ ಮಕಾಡೆ ಮಲಗಿದ ಡೆಲ್ಲಿ – ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ 

Public TV
By Public TV
4 minutes ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮಾ – ಚಪ್ಪಲಿ, ಬಾಟೆಲ್ ತೂರಾಟ, ಕರೆಂಟ್ ಕಟ್

Public TV
By Public TV
32 minutes ago
ramanath rai team mangaluru
Dakshina Kannada

ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಂದ್‌: ನಾಳೆ ಬೃಹತ್‌ ಜನಾಂದೋಲನ ನಡಿಗೆ

Public TV
By Public TV
2 hours ago
pm modi 5
Latest

ಭಯದಲ್ಲಿ ಬದುಕಿದ್ದು ಸಾಕು.. ನಮಗಿನ್ನು ನಂಬಿಕೆ ಬೇಕು: ಬಂಗಾಳ ಜನತೆಗೆ ಮೋದಿ ಪತ್ರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?