Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಯ್‌ 2023.. ಹೊಸ ವರ್ಷ ನಿನಗೆ ಸುಸ್ವಾಗತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಹಾಯ್‌ 2023.. ಹೊಸ ವರ್ಷ ನಿನಗೆ ಸುಸ್ವಾಗತ

Karnataka

ಹಾಯ್‌ 2023.. ಹೊಸ ವರ್ಷ ನಿನಗೆ ಸುಸ್ವಾಗತ

Public TV
Last updated: January 1, 2023 12:28 am
Public TV
Share
3 Min Read
new year 2023 1
SHARE

ಹೋಯ್ತು ಹಳೆ ವರ್ಷ.. ಬಂತು ಹೊಸ ವರ್ಷ.. ಬನ್ನಿ ಎಂಜಾಯ್‌ ಮಾಡೋಣ. ʼನಿನ್ನೆ ನಿನ್ನೆಗೆ.. ನಾಳೆ ನಾಳೆಗೆ.. ಇಂದು ನಮ್ಮದೇ, ಚಿಂತೆ ಏತಕೆ..ʼ ಎಂಬ ಹಾಡು ಎಷ್ಟು ಸೊಗಸಾಗಿದೆ ಅಲ್ವಾ. ಸವಿನೆನಪುಗಳು ಮನದ ಚಿತ್ರಪಟ ಸೇರಲಿ. ಕಹಿ ನೆನಪುಗಳು ಹಳೆ ಕ್ಯಾಲೆಂಡರ್‌ನಂತೆ ಕಸದ ಬುಟ್ಟಿಗೆ ಹೋಗಲಿ. ಹೊಸ ಹುರುಪು, ಭರವಸೆ, ಆಸೆ, ಗುರಿಗಳೊಂದಿಗೆ ಹೆಜ್ಜೆ ಇಡೋಣ ಅಂತಾ ಸಂಕಲ್ಪ ಮಾಡುವ ಸಮಯವಿದು.

ಹೊಸ ವರ್ಷವನ್ನು (New Year 2023) ಖುಷಿ, ಸಂಭ್ರಮಾಚರಣೆ ಮೂಲಕ ಸ್ವಾಗತಿಸುವುದು ಸಾಮಾನ್ಯ. 2022ಕ್ಕೆ ಗುಡ್‌ಬೈ.. 2023 ಹಾಯ್‌ ಹಾಯ್‌ ಹೇಳೋದಕ್ಕೊಂದು ಜೋಶ್‌ ಅಂತು ಇದ್ದೇ ಇರುತ್ತೆ. ನ್ಯೂ ಇಯರ್‌ ಅನ್ನು ಆರಂಭದ ದಿನ ಎಲ್ಲರೂ ಖುಷಿಯಿಂದ ಬರಮಾಡಿಕೊಳ್ಳುತ್ತಾರೆ. ಮನೆ ಹಾಗೂ ಸುತ್ತಮುತ್ತಲ ವಾತಾವರಣ ಕಲರ್‌ಫುಲ್‌ ಆಗಿರುತ್ತೆ. ಕುಟುಂಬದವರು, ನೆರೆಹೊರೆಯವರಿಗೆ ಸಿಹಿ ಹಂಚಿ ಸಂಭ್ರಮಿಸುವುದು, ಪ್ರೀತಿ ಪಾತ್ರರಿಗೆ ಶುಭ ಸಂದೇಶ ಕಳುಹಿಸುವುದು, ಕ್ಲಬ್‌-ಪಬ್‌ನಲ್ಲಿ ಕುಣಿದು ಕುಪ್ಪಳಿಸುವುದು, ಬಿಯರ್‌ ಚಿಯರ್ಸ್‌ ಹೇಳುವುದು, ಇಷ್ಟದ ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು.. ಎಲ್ಲ ಕೂಡ ಪ್ರತಿ ವರ್ಷದಂತೆಯೇ. ಆದರೆ ವರ್ಷ ವರ್ಷ ಅದಕ್ಕೊಂದು ಹೊಸ ರೂಪ ಇರುತ್ತೆ. ಪ್ರವಾಸಿ ತಾಣಗಳು ಬದಲಾಗಿರುತ್ತವೆ, ಕೆಲವರಿಗೆ ಸ್ನೇಹಿತರು ಹಾಗೂ ಸಂಭ್ರಮದ ತಾಣಗಳಲ್ಲಿ ಚೇಂಜ್‌ ಆಗಿರುತ್ತೆ. ಇದನ್ನೂ ಓದಿ: ಹೊಸ ವರ್ಷಕ್ಕೆ ಬಿಂದಾಸ್‌ ವೆಲ್‌ಕಮ್‌ – ಎಲ್ಲೆಲ್ಲೂ ಸಂಭ್ರಮ, ಸಡಗರ

new year

ಒಂದೆಡೆ ನಮ್ಮಲ್ಲೇ ಚಿಂತನ-ಮಂಥನ ಕೂಡ ನಡೆಯುತ್ತೆ. ಹೊಸ ವರ್ಷದ ಹೊಸ್ತಿಲಲ್ಲಿ ಕುಳಿತು ನಾವು ಗಂಭೀರವಾಗಿ ಯೋಚಿಸುತ್ತೇವೆ. ವರ್ಷಗಳು ಎಷ್ಟು ಬೇಗ ಉರುಳುತ್ತಿವೆ? ಹೊಸ ವರ್ಷವನ್ನಂತು ಸಂಭ್ರಮದಿಂದಲೇ ಸ್ವಾಗತಿಸುತ್ತೇವೆ. ಆದರೆ ವರ್ಷಗಳು ಬದಲಾದಂತೆ ನಾವು ಕೂಡ ಬದಲಾಗಿದ್ದೀವಾ? ಹಿಂದೆ ಅಂದುಕೊಂಡಿದ್ದನ್ನು ಸಾಧಿಸಿದ್ದೀವಾ? ಇಟ್ಟಿದ್ದ ಗುರಿ ಮುಟ್ಟಿದ್ದೀವಾ ಎಂಬ ಪ್ರಶ್ನೆಗಳು ಎದುರಾಗುತ್ತವೆ. ಅದಕ್ಕೆ ಉತ್ತರವೂ ಸಿಕ್ಕಿರುತ್ತದೆ. ಒಂದು ವೇಳೆ ನಾವು ಅಂದುಕೊಂಡಿದ್ದು, ಇಟ್ಟಿದ್ದ ಗುರಿಯನ್ನು ಸಾಧಿಸಿಲ್ಲ ಎಂದಾದರೆ ಈ ಬಾರಿ ಅದು ಸಾಧ್ಯವಾಗಬೇಕು ಎಂಬ ಸಂಕಲ್ಪ ತೊಡಬೇಕು.

ಸಮುದ್ರದ ಅಲೆಯಂತೆ ಮನುಷ್ಯನ ಬದುಕಿನಲ್ಲೂ ಏರಿಳಿತ ಇರುತ್ತದೆ. ರುಚಿಯಂತೆ ಸಿಹಿ-ಕಹಿಯೂ ಇರುತ್ತದೆ. ಆದರೆ ಕಠಿಣ ಪರಿಶ್ರಮ, ಇಚ್ಛಾಶಕ್ತಿ ಮಾತ್ರ ನಾವು ಸಾಧನೆ ಶಿಖರವೇರಲು ಸಾಧ್ಯ ಎಂಬ ಭಾವನೆ ಬರಬೇಕು. ಆ ಸಂಕಲ್ಪದೊಂದಿಗೆ ಹೊಸ ವರ್ಷವನ್ನು ಎಲ್ಲರೂ ಸ್ವಾಗತಿಸಿದರೆ ಅದಕ್ಕೊಂದು ಅರ್ಥ, ಸಾರ್ಥಕತೆ ಇರುತ್ತೆ. ಹಿಂದಿನ ನನ್ನ ಸೋಲಿಗೆ ಕಾರಣವೇನು? ಯಶಸ್ಸಿಗೆ ಇನ್ನೆಷ್ಟು ಪರಿಶ್ರಮ ಹಾಕಬೇಕು ಅಂತಾ ನಮ್ಮನ್ನು ನಾವೇ ವಿಮರ್ಶೆಗೆ ಒಡ್ಡಿಕೊಳ್ಳುತ್ತಾ ಮುಂದೆ ಸಾಗುವುದು ಬುದ್ಧಿವಂತರ ಲಕ್ಷಣ. ಇದನ್ನೂ ಓದಿ: ಹೊಸ ವರ್ಷವನ್ನು ಯಾವ ದೇಶ ಮೊದಲು ಆಚರಿಸುತ್ತೆ ಗೊತ್ತಾ?

new year 2023.

ಒಂದು ವರ್ಷದಲ್ಲಿ ಏನೆಲ್ಲಾ ಘಟಿಸಿ ಹೋಯಿತು? ಇಷ್ಟದವರನ್ನು ಕಳೆದುಕೊಂಡೆವು, ಅಂದುಕೊಂಡಿದ್ದು ಆಗಲಿಲ್ಲ ಎಂಬ ಚಿಂತೆ ಕೆಲವರಲ್ಲಿ ಬರಬಹುದು. ಅಬ್ಬಾ.. ಈ ವರ್ಷವನ್ನು ನಾನೆಂದೂ ಮರೆಯಲ್ಲ. ಗುರಿ ತಲುಪಿದೆ. ಇಷ್ಟಪಟ್ಟವರು ಸಿಕ್ಕರು. ಹೊಸ ವರ್ಷವೂ ಹೀಗೆ ಇರಲಿ ಅಂತಾ ಥ್ರಿಲ್‌ ಆಗುವವರೂ ಇರಬಹುದು. ಇಲ್ಲಿ ವ್ಯಕ್ತಿಗಳು, ಸನ್ನಿವೇಶಗಳು ಬೇರೆಯಾಗಿರಬಹುದು. ಆದರೆ ಈ ಎರಡೂ ಒಂದೇ ವರ್ಷ ಆಗಿದ್ದಲ್ಲವೇ. ಕಾಲಚಕ್ರ ಉರುತ್ತಿರುತ್ತದೆ. ಸೋತವರು ಮುಂದೆ ಗೆಲ್ಲಬಹುದು. ಗೆದ್ದವರು ಮತ್ತೆ ಸೋಲಬಹುದು. ಗೆದ್ದಾಗ ಹಿಗ್ಗದೇ, ಸೋತಾಗ ಕುಗ್ಗದೇ ಹೊಸತನಕ್ಕೆ ತುಡಿಯುವುದೇ ಜೀವನ ಅಲ್ಲವೇ?

ಹೊಸ ವರ್ಷಕ್ಕೆ ಕ್ಯಾಲೆಂಡರ್‌ ಬದಲಾಯಿಸಿದ್ದು ಆಯ್ತು. ಈಗ ಸಂಭ್ರಮಿಸುವ, ಕುಣಿದು ಕುಪ್ಪಳಿಸುವ ಘಳಿಗೆ. ಎಲ್ಲರೂ ಸಂಭ್ರಮಿಸೋಣ. ಆದರೆ ಮಾರಕ ಕೊರೊನಾ ವೈರಸ್‌ ಬಗ್ಗೆ ಜಾಗೃತರಾಗಿರೋಣ. ಮನುಕುಲವನ್ನು 2 ವರ್ಷ ಕೋವಿಡ್‌ ಕಾಡಿದ್ದು ಹೇಗೆ ಎಂಬುದು ಎಲ್ಲರಿಗೂ ಗೊತ್ತು. ವೈರಸ್‌ ಬಗ್ಗೆ ಎಚ್ಚರಿಕೆಯಿಂದಿದ್ದು, ಸಂಭ್ರಮಾಚರಣೆ ಮಾಡುವುದು ಒಳಿತು. ಹೊಸ ವರ್ಷದಲ್ಲಿ ಹೊಸ ತುಡಿತವಿರಲಿ. ಪಾಸಿಟಿವ್‌ ಆಲೋಚನೆಗಳಿರಲಿ. ಯಶಸ್ಸು ಕಡೆಗೆ ದಿಟ್ಟ ನಿಲುವಿರಲಿ. ಎಲ್ಲರೊಟ್ಟಿಗೆ ಪ್ರೀತಿ-ವಿಶ್ವಾಸದಿಂದ ಸಾಗುವ ಭಾವನೆ ಇರಲಿ. ಧರ್ಮ, ಭಾಷೆ ಭೇದವನ್ನು ಮರೆತು ಎಲ್ಲರೂ ಒಟ್ಟಾಗಿ ಹೊಸ ವರ್ಷವನ್ನು ಸ್ವಾಗತಿಸೋಣ. ಇದನ್ನೂ ಓದಿ: ಹೊಸವರ್ಷ ಸಂಭ್ರಮಾಚರಣೆಗೆ ರಂಗೇರಿದ ಬೆಂಗಳೂರು

Live Tv
[brid partner=56869869 player=32851 video=960834 autoplay=true]

TAGGED:2023bengalurukarnatakaNew YearNew Year 2023ನ್ಯೂ ಇಯರ್ಬೆಂಗಳೂರುಹೊಸ ವರ್ಷ
Share This Article
Facebook Whatsapp Whatsapp Telegram

Cinema news

Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories

You Might Also Like

shivamogga murder
Crime

ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Public TV
By Public TV
27 minutes ago
MP RENUKACHARYA
Bengaluru City

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ

Public TV
By Public TV
41 minutes ago
shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
1 hour ago
Pawan Hans
Crime

ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Public TV
By Public TV
2 hours ago
AI Image
Crime

ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Public TV
By Public TV
2 hours ago
SpiceJet
Latest

ಎಂಜಿನ್ ವೈಫಲ್ಯದಿಂದಾಗಿ ಲೇಹ್‌ಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ ದೆಹಲಿಗೆ ವಾಪಸ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?