Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕನ್ನಡ ಮಾತು ಕೇಳಿ ಇಂಗ್ಲಿಷ್‌ನಲ್ಲಿ ಉತ್ತರ ಕೊಟ್ಟ ರಚಿನ್‌ – ಬೆಂಗ್ಳೂರು ವಿಲ್ಸನ್‌ ಗಾರ್ಡನ್‌ ನೆನಪು ಹಂಚಿಕೊಂಡ ರವೀಂದ್ರ

Public TV
Last updated: October 6, 2023 3:54 pm
Public TV
Share
4 Min Read
Rachin Ravindra
SHARE

ಅಹಮದಾಬಾದ್: ಏಕದಿನ ವಿಶ್ವಕಪ್ (Cricket World Cup) ಟೂರ್ನಿಯ ಚೊಚ್ಚಲ ಪಂದ್ಯದಲ್ಲೇ ಆಂಗ್ಲರ ವಿರುದ್ಧ ಶತಕ ಸಿಡಿಸಿ ಕಿವೀಸ್ ಪಡೆಗೆ ಗೆಲುವು ತಂದುಕೊಟ್ಟ ರಚಿನ್ ರವೀಂದ್ರ (Rachin Ravindra) ನಿನ್ನೆಯಿಂದಲೂ ಜಾಲತಾಣದಲ್ಲಿ ಸುದ್ದಿಯಲ್ಲಿದ್ದಾರೆ. ರಚಿನ್‌ ಬಗ್ಗೆ ಅನೇಕ ಕುತೂಹಲಕಾರಿ ಸಂಗತಿಗಳು ಹರಿದಾಡುತ್ತಿವೆ. ಇದೀಗ ರಚಿನ್‌ ರವೀಂದ್ರ ಅವರೊಂದಿಗೆ ಕನ್ನಡದಲ್ಲಿ ಮಾಡಿರುವ ಸಂದರ್ಶನದ ವೀಡಿಯೋ ತುಣುಕು ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಬೆಂಗಳೂರಿಗೂ ತಮಗೂ ಇರುವ ನಂಟಿನ ಬಗ್ಗೆ ನ್ಯೂಜಿಲೆಂಡ್ ಕ್ರಿಕೆಟರ್ ರಚಿನ್ ರವೀಂದ್ರ ಹೇಳಿದ್ದು ಹೀಗೆ ????❤️#CricketWorldCup #WorldCupOnStar #CWC23 #RachinRavindra pic.twitter.com/BISdlnw8VN

— Star Sports Kannada (@StarSportsKan) October 6, 2023

ಇಂಗ್ಲೆಂಡ್‌ (England) ವಿರುದ್ಧ ಗೆಲುವು ಸಾಧಿಸಿದ ಬಳಿಕ ವಿಶೇಷ ಸಂದರ್ಶನವೊಂದರಲ್ಲಿ ಮಾತನಾಡಿದ ರಚಿನ್‌ ನಿರೂಪಕರು ಕನ್ನಡದಲ್ಲೇ ಕೇಳುವ ಪ್ರಶ್ನೆಗಳನ್ನು ಸ್ಪಷ್ಟವಾಗಿ ಅರ್ಥಮಾಡಿಕೊಂಡು ಇಂಗ್ಲಿಷ್‌ನಲ್ಲೇ ಉತ್ತರ ಕೊಟ್ಟಿದ್ದಾರೆ. ಈ ಮೂಲಕ ಕನ್ನಡ ಭಾಷೆ ಮೇಲಿನ ಪ್ರೀತಿಯನ್ನು ಅಭಿವ್ಯಕ್ತಪಡಿಸಿದ್ದಾರೆ. ಇದಕ್ಕೆ ಅಭಿಮಾನಿಗಳು ಭೇಷ್‌ ಎಂದಿದ್ದಾರೆ. ಇದನ್ನೂ ಓದಿ: World Cup 2023: ಚೊಚ್ಚಲ ಪಂದ್ಯದಲ್ಲೇ ಸೇಡು ತೀರಿಸಿಕೊಂಡ ಕಿವೀಸ್‌; ಇಂಗ್ಲೆಂಡ್‌ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ

ನಿರೂಪಕರು ಮೊದಲು ನಿಮ್ಗೆ ರಿಪ್ಲೇ ಮಾಡೋದಕ್ಕೆ ಕಷ್ಟ ಆಗುತ್ತೆ ಅಂತಾ ನಾವು ಕನ್ನಡದಲ್ಲಿ ಪ್ರಶ್ನೆ ಕೇಳುತ್ತೇವೆ ನಡೆಯುತ್ತಲ್ಲಾ? ಎನ್ನುತ್ತಿದ್ದಂತೆ ಹೋ, ತುಂಬಾ ಸಂತೋಷ ಎಂದು ಹೇಳಿದ ರಚಿನ್‌, ಬಳಿಕ ಕನ್ನಡದಲ್ಲಿ ಕೇಳಿದ ಪ್ರತಿಯೊಂದು ಪ್ರಶ್ನೆಯನ್ನು ಸುಲಭವಾಗಿ ಅರ್ಥಮಾಡಿಕೊಂಡು ಇಂಗ್ಲಿಷ್‌ನಲ್ಲಿ ಉತ್ತರ ಕೊಟ್ಟಿದ್ದಾರೆ. ಇದನ್ನೂ ಓದಿ: World Cup 2023: ಚೊಚ್ಚಲ ಪಂದ್ಯದಲ್ಲೇ ಮೋದಿ ಕ್ರಿಕೆಟ್‌ ಅಂಗಳದಲ್ಲಿ ಇತಿಹಾಸ ಬರೆದ ಇಂಗ್ಲೆಂಡ್‌

Rachin Ravidra

ಕನ್ನಡದಲ್ಲಿ ಕೇಳುವ ನಿರೂಪಕರ ಪ್ರಶ್ನೆಗಳಿಗೆ ಸಂತೋಷದಿಂದಲೇ ಉತ್ತರಿಸಿದ ರಚಿನ್‌, ಶತಕ ಸಿಡಿಸುವುದು ಒಬ್ಬ ಕ್ರಿಕೆಟ್ ಆಟಗಾರನಿಗೆ ತುಂಬಾ ವಿಶಿಷ್ಟವಾಗಿರುತ್ತದೆ. ಆದರೆ ಭಾರತದ ಮೈದಾನದಲ್ಲಿ ಇಂತಹ ದೊಡ್ಡ ಇನಿಂಗ್ಸ್ ಆಡಿರುವುದು ನಿಜಕ್ಕೂ ಆಹ್ಲಾದಾಕರವಾಗಿದೆ. ಇಂತಹ ದೊಡ್ಡ ಮೈದಾನದಲ್ಲಿ ಆಡುವುದು ನಿಜಕ್ಕೂ ಮರೆಯಲಾಗದ ಕ್ಷಣವಾಗಿದೆ. ಇದು ಮೊದಲ ಪಂದ್ಯವಾದ್ದರಿಂದ ಆಶಾದಾಯಕವಾಗಿಯೇ ಮುಂದುವರಿಯಬಹುದು ಎಂದು ಹೇಳಿದ್ದಾರೆ.

ಈ ಸೋಲಿನಿಂದ ಇಂಗ್ಲೆಂಡ್‌ ತಂಡವನ್ನು ಟೂರ್ನಿಯಿಂದ ಸೋಲಿಸಬಹುದು ಎಂದು ನಾನು ಹೇಳುವುದಿಲ್ಲ. ಇಂಗ್ಲೆಂಡ್‌ ಕೂಡ ಒಂದು ಅದ್ಭುತ ಕ್ರಿಕೆಟ್‌ ತಂಡ. ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಇನ್ನೂ ಮುಂದೆ ಸಾಗುತ್ತಾರೆ ಅಂತ ನನಗನ್ನಿಸುತ್ತದೆ. ಕೆಲವೊಮ್ಮೆ ದಿನ ನಿಮ್ಮದಾಗಿರುತ್ತದೆ, ಕೆಲವೊಮ್ಮೆ ಆಗಿರೋದಿಲ್ಲ ಅಷ್ಟೇ. ಆದ್ರೆ ಖಂಡಿತವಾಗಿಯೂ ಇಂಗ್ಲೆಂಡ್‌ ಚಾಂಪಿಯನ್‌ ಟೀಂ ಎಂದು ನಂಬುತ್ತೇನೆ ಎಂದು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಆಂಗ್ಲರ ವಿರುದ್ಧ ಶತಕ ಸಿಡಿಸಿ ಮೆರೆದಾಡಿದ ಬೆಂಗ್ಳೂರು ಮೂಲದ ರಚಿನ್‌ ರವೀಂದ್ರ ಯಾರು ಗೊತ್ತಾ?

Rachin Ravidra

ಇದೇ ವೇಳೆ ಬೆಂಗಳೂರಿಗಿರುವ ನಂಟಿನ ಬಗ್ಗೆ ಮಾತನಾಡಿದ ರಚಿನ್‌, ನಾನು ಬೆಂಗಳೂರಿಗೆ ಹಿಂದಿರುಗುತ್ತಿರುವುದು ಆಹ್ಲಾದಕರವೆನಿಸಿದೆ. ಬೆಂಗಳೂರಿನಲ್ಲಿ ನನ್ನ ಕುಟುಂಬದೊಂದಿಗಿನ ನೆನಪುಗಳಿವೆ. ನನ್ನ ಅಜ್ಜ ಮತ್ತು ಅಜ್ಜಿಯನ್ನು ವಿಲ್ಸನ್‌ ಗಾರ್ಡನ್‌ನಲ್ಲಿ ನೋಡಿದ ನೆನಪು ಈಗಲೂ ನೆನಪಾಗುತ್ತೆ. ನನ್ನ ತಾಯಿ ಸಂಬಂಧಿಕರು ಇಸ್ರೋ ಬಡಾವಣೆಯಲ್ಲಿದ್ದಾರೆ. ನನಗೆ ಸಾಧ್ಯವಾದಾಗಲೆಲ್ಲಾ ಅವರನ್ನು ಭೇಟಿ ಮಾಡಲು ಪ್ರಯತ್ನಿಸುತ್ತೇನೆ. ಅದು ನನಗೆ ತುಂಬಾ ಸಂತೋಷ ನೀಡುತ್ತದೆ. ಮುಂದೆ ಪಾಕಿಸ್ತಾನದ ವಿರುದ್ಧ ಬೆಂಗಳೂರಿನಲ್ಲಿ ಆಡುವಾಗಲು ಅಭಿಮಾನಿಗಳಿಂದ ಸಾಕಷ್ಟು ಬೆಂಬಲ ಸಿಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.

ಅಲ್ಲದೇ ನಮ್ಮದು ದೊಡ್ಡ ಪರಿವಾರ, ನನ್ನ ಇಡೀ ಕುಟುಂಬಕ್ಕೆ ಎಷ್ಟು ಟಿಕೆಟ್‌ಗಳನ್ನು ಪಡೆಯಲು ಸಾಧ್ಯವಾಗುತ್ತದೆ, ಅಷ್ಟು ಪಡೆಯಲು ನಾನು ಪ್ರಯತ್ನಿಸುತ್ತೇನೆ. ಆದ್ರೆ ಕುಟುಂಬದಿಂದ ಎಷ್ಟು ಜನ ಬರುತ್ತಾರೆ ಅನ್ನೋದು ಖಚಿತವಿಲ್ಲ. ಒಟ್ಟಿನಲ್ಲಿ ಅವರೆಲ್ಲರಿಗೂ ನಾನು ಕೃತಜ್ಞನನಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: Asian Games 2023- ಗ್ರೀಕೊ ರೋಮನ್ ಕುಸ್ತಿಯಲ್ಲಿ ಭಾರತಕ್ಕೆ 13 ವರ್ಷಗಳ ಬಳಿಕ ಪದಕ

ರಚಿನ್‌ ರವೀಂದ್ರ ಯಾರು?
23 ವರ್ಷದ ರಚಿನ್ ರವೀಂದ್ರ ಅವರು ನ್ಯೂಜಿಲೆಂಡ್‌ನ ವೆಲ್ಲಿಂಗ್ಟನ್‌ನಲ್ಲಿ ಜನಿಸಿದ್ದರೂ ಅವರ ಅಪ್ಪ-ಅಮ್ಮ ಮೂಲತಃ ಬೆಂಗಳೂರಿನವರು. ತಂದೆ ರವಿ ಕೃಷ್ಣಮೂರ್ತಿ ಹಾಗೂ ತಾಯಿ ದೀಪಾ ಕೃಷ್ಣಮೂರ್ತಿ ಅವರು ಸಾಫ್ಟ್ವೇರ್ ಎಂಜಿನೀಯರ್‌ಗಳಾಗಿದ್ದು, ಉದ್ಯೋಗ ಅರಸಿ 1990ರ ದಶಕದಲ್ಲಿ ಬೆಂಗಳೂರಿನಿಂದ ನ್ಯೂಜಿಲೆಂಡ್‌ಗೆ ತೆರಳಿದ್ದರು. ರಚಿನ್ ರವೀಂದ್ರ ಅವರ ತಂದೆ, ಸಾಫ್ಟ್ವೇರ್ ಎಂಜಿನೀಯರ್ ಆಗಿದ್ದರೂ ಅಪ್ಪಟ ಕ್ರಿಕೆಟ್ ಅಭಿಮಾನಿ. ಅದರಲ್ಲೂ ರವಿ ಕೃಷ್ಣಮೂರ್ತಿ ಅವರು ಭಾರತೀಯ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡೂಲ್ಕರ್ ಹಾಗೂ ರಾಹುಲ್ ದ್ರಾವಿಡ್ ಅವರ ಪಕ್ಕಾ ಫ್ಯಾನ್. ಈ ಕಾರಣದಿಂದಾಗಿ ರಾಹುಲ್ ದ್ರಾವಿಡ್ ಹೆಸರಿನಿಂದ ʻರʼ ಮತ್ತು ಸಚಿನ್ ತೆಂಡೂಲ್ಕರ್ ಹೆಸರಿನಿಂದ ʻಚಿನ್ʼ ಅಕ್ಷರಗಳನ್ನು ತೆಗೆದುಕೊಂಡು ತಮ್ಮ ಪುತ್ರನಿಗೆ ರಚಿನ್ ಎಂದು ಹೆಸರಿಟ್ಟಿದ್ದರು.

ರಚಿನ್ ರವೀಂದ್ರ ಅವರು ನ್ಯೂಜಿಲೆಂಡ್ ಪರ ಅಂಡರ್-19 ವಿಶ್ವಕಪ್ ಟೂರ್ನಿಯಲ್ಲಿ ಆಡಿದ್ದಾರೆ. 2016 ಮತ್ತು 2018ರಲ್ಲಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಅವರು ನ್ಯೂಜಿಲೆಂಡ್ ದೇಶಿ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ ಅಲ್ಲಿ ಗಮನಾರ್ಹ ಪ್ರದರ್ಶನ ತೋರಿದ್ದರು. ಇದರ ಫಲವಾಗಿ 2021ರಲ್ಲಿ ಭಾರತದ ವಿರುದ್ಧ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಮೊದಲ ಬಾರಿ ಆಯ್ಕೆಯಾಗಿದ್ದರು. ನಂತರ ಇದೇ ವರ್ಷದಲ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:bengaluruICC World Cupnew zealandRachin RavindraRahul Dravidsachin tendulkarಐಸಿಸಿನ್ಯೂಜಿಲೆಂಡ್ಬೆಂಗಳೂರುರಚಿನ್‌ ರವೀಂದ್ರಸಚಿನ್ ತೆಂಡೂಲ್ಕರ್
Share This Article
Facebook Whatsapp Whatsapp Telegram

Cinema News

Devil Movie
ಡೆವಿಲ್ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್
Cinema Latest Sandalwood Top Stories
Darshan 9
ದರ್ಶನ್ ಜೈಲಲ್ಲಿ – `ಇದ್ರೆ ನೆಮ್ದಿಯಾಗ್ ಇರ್ಬೇಕ್’ ಸಾಂಗ್ ರಿಲೀಸ್
Cinema Latest Main Post Sandalwood
Nandagokula Serial
ನಂದ-ಗೋಕುಲದಲ್ಲಿ ಧಾರಾವಾಹಿಯಲ್ಲಿ ಹೊಸ ಪ್ರಯತ್ನ
Cinema Latest Top Stories TV Shows
Dhurandhar Movie
ರಣ್ವೀರ್ ಸಿಂಗ್ ಸಿನಿಮಾ ಸೆಟ್ಟಲ್ಲಿ ನೂರಕ್ಕೂ ಹೆಚ್ಚು ತಂತ್ರಜ್ಞರಿಗೆ ಫುಡ್ ಪಾಯ್ಸನ್!
Bollywood Cinema Latest Top Stories
Kantara 1 1
ಕಾಂತಾರ-1 ಕಹಳೆ.. 100 ಕೋಟಿಗೆ ಆಂಧ್ರದ ವಿತರಣೆ ಹಕ್ಕು ಸೇಲ್
Cinema Latest Sandalwood South cinema Top Stories

You Might Also Like

Arunachala Pradesh Fire Accident
Crime

ವಸತಿ ಶಾಲೆಯಲ್ಲಿ ಅಗ್ನಿ ಅವಘಡ – ಓರ್ವ ವಿದ್ಯಾರ್ಥಿ ಸಜೀವ ದಹನ, ಮೂವರಿಗೆ ಗಾಯ

Public TV
By Public TV
1 minute ago
Cameron Green
Cricket

ಸ್ಫೋಟಕ ಶತಕ ಸಿಡಿಸಿ ಗ್ರೀನ್‌ ವಿಶೇಷ ಸಾಧನೆ – 19 ವರ್ಷಗಳ ಬಳಿಕ ಆಸೀಸ್‌ 2ನೇ ಗರಿಷ್ಠ ಮೊತ್ತ

Public TV
By Public TV
13 minutes ago
karwar 3 arrested
Latest

ಮಗಳ ಅಶ್ಲೀಲ ವೀಡಿಯೋ ಹೊರಬಿಡುವ ಬೆದರಿಕೆ; 20 ಲಕ್ಷಕ್ಕೆ ಬೇಡಿಕೆಯಿಟ್ಟ ಮೂವರು ಯುವಕರ ಬಂಧನ

Public TV
By Public TV
22 minutes ago
Dowry Murder Accused Shot At Hours After Womans Father Demanded Encounter 1
Crime

ಪತ್ನಿಗೆ ಬೆಂಕಿ ಹಚ್ಚಿ ಕೊಂದವನ ಕಾಲಿಗೆ ಗುಂಡೇಟು – ನನಗ್ಯಾವ ಪಶ್ಚಾತ್ತಾಪ ಇಲ್ಲ ಎಂದ ಪಾಪಿ!

Public TV
By Public TV
29 minutes ago
N S Bosaraju
Districts

ವೀರೇಂದ್ರ ಪಪ್ಪಿ ಇರಲಿ, ಯಾರೇ ಇರಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತೆ: ಬೋಸರಾಜು

Public TV
By Public TV
50 minutes ago
Devotees 2
Belgaum

`ಪರಮಾತ್ಮ ಬರ್ತಾನೆ ಜೀವ ಒಯ್ಯುತ್ತಾನೆ’ – ದೇವರನ್ನ ನೋಡಲು ದೇಹ ತ್ಯಾಗಕ್ಕೆ ನಿರ್ಧರಿಸಿದ್ದ 21 ಭಕ್ತರು!

Public TV
By Public TV
59 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?