ತುಮಕೂರು: ಕೌಟುಂಬಿಕ ಕಲಹಕ್ಕೆ ಬೇಸತ್ತು ನವದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕೆಂಪಸಾಗರ ಗ್ರಾಮದಲ್ಲಿ ನಡೆದಿದೆ. ಇದನ್ನೂ ಓದಿ: ರಾಜ್ಯದಲ್ಲಿ ಇಂದು 247 ಕೊರೊನಾ ಕೇಸ್, 1 ಸಾವು
ಪತ್ನಿ ವರಲಕ್ಷ್ಮೀ(23) ಪತಿ ಮುನಿಸ್ವಾಮಿ (30) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಇವರಿಗೆ ಆರು ತಿಂಗಳ ಹಿಂದಷ್ಟೆ ಮದುವೆಯಾಗಿತ್ತು. ವರಲಕ್ಷ್ಮಿ ಅವರು ಸಂಬಂಧಿಕ ಮುನಿಸ್ವಾಮಿಯನ್ನೇ ಮದುವೆಯಾಗಿದ್ದರು. ಇದೀಗ ಅವರು ಕೌಟುಂಬಿಕ ಕಲಹದಿಂದ ಬೇಸತ್ತು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇತ್ತ ಪತ್ನಿಯ ಆತ್ಮಹತ್ಯೆ ವಿಷಯ ತಿಳಿದ ಮುನಿಸ್ವಾಮಿಯೂ ಹೊಲದಲ್ಲಿದ್ದ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: ಭೀಕರ ಅಪಘಾತ- ಒಂದೇ ಕುಟುಂಬದ ಮೂವರ ದುರ್ಮರಣ, ಮಹಿಳೆ ಸ್ಥಿತಿ ಗಂಭೀರ