ಮದ್ವೆಯಾದ 20 ದಿನದಲ್ಲೇ ಮನೆ ಬಿಟ್ಟು ಬಂದು ವಿಷ ಕುಡಿದ ನವವಿವಾಹಿತ!

Public TV
1 Min Read
MND SUICIDE ATTEMT

ಮಂಡ್ಯ: ಕೇವಲ 20 ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ವ್ಯಕ್ತಿಯೊಬ್ಬ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ವಿಶ್ವೇಶ್ವರಯ್ಯ ಪಾರ್ಕ್ ಬಳಿ ನಡೆದಿದೆ.

ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮದ ಪ್ರಕಾಶ್(33) ವಿಷ ಸೇವಿಸಿ ಅಸ್ವಸ್ಥಗೊಂಡಿರುವ ಯುವಕ. ಈತನಿಗೆ 20 ದಿನದ ಹಿಂದೆ ಮದುವೆಯಾಗಿತ್ತು. ಮದುವೆ ನಂತರ ಮೇ 21 ರಿಂದ ಮನೆಯಿಂದ ನಾಪತ್ತೆಯಾಗಿದ್ದನು.

ನಾಪತ್ತೆಯಾದ ಬಗ್ಗೆ ಮೇ 24 ರಂದು ಬೆಳಕವಾಡಿ ಪೊಲೀಸ್ ಠಾಣೆಗೆ ಪ್ರಕಾಶ್ ಸಂಬಂಧಿಕರು ದೂರು ನೀಡಿದ್ದರು. ಆದರೆ ಇಂದು ಮಂಡ್ಯದ ವಿಶ್ವೇಶ್ವರಯ್ಯ ಪಾರ್ಕ್ ವಿಷ ಸೇವಿಸಿದ್ದಾನೆ. ವಿಷ ಸೇವಿಸಿ ಅಸ್ವಸ್ಥನಾಗಿ ನರಳಾಡುತ್ತಿದ್ದ ಪ್ರಕಾಶ್ ನನ್ನು ಸಾರ್ವಜನಿಕರು ಗಮನಿಸಿದ್ದು, ಕೂಡಲೇ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಪ್ರಕಾಶ್ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಸಂಬಂಧ ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಆತ್ಮಹತ್ಯೆ ಯತ್ನಕ್ಕೆ ಇನ್ನು ನಿಖರ ಕಾರಣ ತಿಳಿದು ಬಂದಿಲ್ಲ.

Share This Article
Leave a Comment

Leave a Reply

Your email address will not be published. Required fields are marked *