ಒಲ್ಲದ ವಿವಾಹ – ವಿಷ ಸೇವಿಸಿ ನವ ವಿವಾಹಿತೆ ಆತ್ಮಹತ್ಯೆ

Public TV
1 Min Read
mangaluru

ಮಂಗಳೂರು: ಇಷ್ಟವಿಲ್ಲದ ವಿವಾಹ ಮಾಡಿದ್ದಕ್ಕೆ ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಅಂಬ್ಲಮೊಗರಿನಲ್ಲಿ ನಡೆದಿದೆ.

mangaluru

ರಶ್ಮಿ (24) ಆತ್ಮಹತ್ಯೆಗೆ ಶರಣಾದ ನವ ವಿವಾಹಿತೆ. 15 ದಿನಗಳ ಹಿಂದೆ ರಶ್ಮಿ ಗಂಜಮಠ ಮೂಲದ ದುಬೈಯಲ್ಲಿ ಇಂಜಿನಿಯರ್ ಆಗಿರುವ ಸಂದೀಪ್ ಅವರನ್ನು ವಿವಾಹವಾಗಿದ್ದರು. ಆದರೆ ಸೆಪ್ಟೆಂಬರ್ 3 ರಂದು ಕೋಡಿಕಲ್‍ನ ತನ್ನ ಅಕ್ಕನ ಮನೆಗೆ ಬಂದಿದ್ದ ರಶ್ಮಿ ಇಲಿ ಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥಗೊಂಡಿದ್ದರು. ಇದನ್ನೂ ಓದಿ: ಸಿಇಟಿ ರ್‍ಯಾಂಕ್ ರದ್ದು- ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ

ನಂತರ ಗಂಭೀರ ಸ್ಥಿತಿಯಲ್ಲಿದ್ದ ರಶ್ಮಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ, ರಶ್ಮಿ ಮೃತಪಟ್ಟಿದ್ದಾರೆ. ಸದ್ಯ ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುಂದೂಡಲಾಗಿದ್ದ ಜನೋತ್ಸವ ಕಾರ್ಯಕ್ರಮ ಇದೇ 8 ರಂದು ನಡೆಯಲಿದೆ: ವೇಣುಗೋಪಾಲ್

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *