ಹಾಸನ: ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ (Marriage) ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ (Hassan) ಜಿಲ್ಲೆಯ ಸಕಲೇಶಪುರ ತಾಲೂಕಿನ ಬಂದಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಂದಿತಾ (23) ಮೃತಪಟ್ಟ ಗೃಹಿಣಿ. ತಾಲ್ಲೂಕಿನ ಬೆಳಗೋಡು ಹೋಬಳಿಯ ಕೂಡನಹಳ್ಳಿ ಗ್ರಾಮದ ಸೋಮಶೇಖರ್ ಜೊತೆ ಎರಡು ತಿಂಗಳ ಹಿಂದೆಯಷ್ಟೇ ನಂದಿತಾಳನ್ನ ಅದ್ಧೂರಿಯಾಗಿ ಮದುವೆ ಮಾಡಿಕೊಡಲಾಗಿತ್ತು. ಆದ್ರೆ ನಂದಿತಾ ಶನಿವಾರ ತನ್ನ ತವರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದನ್ನೂ ಓದಿ: ನಿಮ್ಮ ಧ್ವನಿ, ನೋಟ ನನಗಿಷ್ಟ: ಟೈಗರ್ ಶ್ರಾಫ್ ಎಂಬ ಮನ್ಮಥನಿಗೆ ಹೂಬಾಣ ಬಿಟ್ಟ ದಿಶಾ
ಸುದ್ದಿ ತಿಳಿದ ಕೂಡಲೇ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ. ಮೃತ ದೇಹವನ್ನ ಪಟ್ಟಣದ ಸರ್ಕಾರಿ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: ಪಿಎಸ್ಐ ಹಗರಣ ನ್ಯಾಯಾಂಗ ತನಿಖೆ ಕಾಂಗ್ರೆಸ್ನ ದ್ವೇಷದ ರಾಜಕಾರಣ: ಬೊಮ್ಮಾಯಿ
Web Stories