ಅನುಮಾನಾಸ್ಪದ ರೀತಿಯಲ್ಲಿ ನವವಿವಾಹಿತೆ ಸಾವು – ಮುಗಿಲು ಮುಟ್ಟಿದ ಆಕ್ರಂದನ

Public TV
1 Min Read
Chikkabalapur Women

ಚಿಕ್ಕಬಳ್ಳಾಪುರ: ಮನೆಯಲ್ಲೇ ಅನುಮಾನಾಸ್ಪದ ರೀತಿಯಲ್ಲಿ ನವವಿವಾಹಿತೆ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ನಗರದ (Chikkaballapur City) ಕಾರ್ಖಾನೆ ಪೇಟೆಯಲ್ಲಿ ನಡೆದಿದೆ.

ನವ ವಿವಾಹಿತೆ ತೇಜಸ್ವಿನಿ (20) ಮೃತಪಟ್ಟ ಗೃಹಿಣಿ. ಮನೆಯ ಕೊಠಡಿಯೊಂದರಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸಾವಿಗೆ ಪತಿ ಲೋಹಿತ್‌ ನಿಂದ ವರದಕ್ಷಿಣೆ (Dowry) ಕಿರುಕುಳವೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಟೈಟಾನಿಕ್ ಹಡಗಿನ ಅವಶೇಷ ನೋಡಲು ತೆರಳಿದ್ದ ವಿಶ್ವದ ಐವರು ಶ್ರೀಮಂತರ ದಾರುಣ ಸಾವು

Chikkabalapur Women Death 2

ಘಟನಾ ಸ್ಥಳದಲ್ಲಿ ಮೃತ ತೇಜಸ್ವಿನಿ ತಂದೆ ಮಂಜುನಾಥ್ ಆಕ್ರಂದನ ಮುಗಿಲುಮುಟ್ಟಿದೆ. ಮಗಳನ್ನು ನೆನೆದು ತಂದೆ ಗೋಳಾಡುತ್ತಿದ್ದಾರೆ. ಘಟನಾ ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಿಪಿಐ ರಾಜು ಹಾಗೂ ತಹಶೀಲ್ದಾರ್ ಗಣಪತಿ ಶಾಸ್ತ್ರೀ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಲಕ್ಷ, ಕೋಟಿ ಆದಾಯವಿದ್ದರೂ ಟ್ಯಾಕ್ಸ್ ಕಟ್ಟದ ಯೂಟ್ಯೂಬರ್ಸ್ – ಕೇರಳದ ಹಲವೆಡೆ ಐಟಿ ದಾಳಿ

FSAL ತಂಡದ ಸಿಬ್ಬಂದಿ ಸಹ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಡ ಲೋಹಿತ್ ಹಾಗೂ ಅವರ ಅಣ್ಣ ಗೋಪಿ ಚಿಕ್ಕಬಳ್ಳಾಪುರ ನಗರದಲ್ಲಿ ಚಂದ್ರು ಮಿಲ್ಟ್ರಿ ಹೋಟೆಲ್‌ ಮಾಲೀಕರಾಗಿದ್ದಾರೆ. ತೇಜಸ್ವಿನಿ ತಂದೆ ಮಂಜುನಾಥ್, ಲೋಹಿತ್ ಹಾಗೂ ಅವರ ಅಣ್ಣ ಗೋಪಿನಾಥ್ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಿದ್ದಾರೆ.

Chikkabalapur Women Death

ಸದ್ಯ ಪತಿ ಲೋಹಿತ್‌ನನ್ನ ಚಿಕ್ಕಬಳ್ಳಾಪುರ ನಗರ ಪೊಲೀಸರು (Chikkaballapur City Police) ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Share This Article