ನವದೆಹಲಿ: ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕ ಸೇರಿದಂತೆ ಕೇರಳ, ಪುದುಚೇರಿ, ಗೋವಾ ರಾಜ್ಯಗಳಲ್ಲಿ ಮಳೆಯ ಆರ್ಭಟ ಜೋರಾಗಲಿದ್ದು, ಜೂನ್ 13ರ ವರೆಗೂ ಹಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ವಸ್ತ್ರಾಪಹರಣ ದೃಶ್ಯಕ್ಕೆ ದ್ರೌಪದಿ ಬದಲು ಸೀತಾದೇವಿ ಹೆಸರು ಹೇಳಿದ ರಣದೀಪ್ ಸುರ್ಜೆವಾಲಾ: ವೀಡಿಯೋ ವೈರಲ್
ಜೂನ್ 9 ರಿಂದ 13ರ ವರೆಗೆ ಈಶಾನ್ಯ ರಾಜ್ಯಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಲ್ಲಿದ್ದು, ಜೂನ್ 10 ರಿಂದ 13ರ ವರೆಗೆ ಗೋವಾದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.